Homeಮುಖಪುಟಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?: ಅಮಿತ್ ಶಾ ಹೇಳಿಕೆ ನಿತೀಶ್ ಕುಮಾರ್‌ ಟಾಂಗ್

’ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು’ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

- Advertisement -
- Advertisement -

“ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಟಾಂಗ್ ನೀಡಿರುವ ಮಿತ್ರ ಪಕ್ಷದ ಮುಖ್ಯಮಂತ್ರಿ ನಿತೀಶ್ ಕುಮಾರ್‌, ’ಇತಿಹಾಸವನ್ನು ಯಾರಾದರೂ ಹೇಗೆ ಬದಲಾಯಿಸಬಹುದು?’ ಎಂದು ಪ್ರಶ್ನಿಸಿದ್ದಾರೆ.

ಪಾಟ್ನಾದಲ್ಲಿ ಮಾಧ್ಯಮದವರು ಅಮಿತ್ ಶಾ ಅವರ ಹೇಳಿಕೆಗೆ ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌, “ನೀವು ಇತಿಹಾಸವನ್ನು ಬದಲಾಯಿಸುತ್ತೀರಾ? ಅದನ್ನು ಹೇಗೆ ಬದಲಾಯಿಸಬಹುದು ಎಂದು ನನಗೆ ಅರ್ಥವಾಗುತ್ತಿಲ್ಲ. ಇತಿಹಾಸವು ಇತಿಹಾಸವಾಗಿದೆ” ಎಂದಿದ್ದಾರೆ.

ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿರುವ ಅವರು, ’ಭಾಷೆ ವಿಷಯ ಬೇರೆ. ಆದರೆ, ನೀವು ಮೂಲಭೂತ ಇತಿಹಾಸವನ್ನು ಬದಲಾಯಿಸಲು ಸಾಧ್ಯವಿಲ್ಲ’ ಎಂದಿದ್ದಾರೆ. ಇತಿಹಾಸದ ಪುಸ್ತಕಗಳಲ್ಲಿ ಮೊಘಲರಿಗೆ ಅಸಮಾನವಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದರು.

ಇದನ್ನೂ ಓದಿ: ‘ಸ್ವಚ್ಛ ಭಾರತ ಅಭಿಯಾನ’ದ ನಡುವೆಯೂ, ವಿಶ್ವದ ಅತ್ಯಂತ ಕೆಟ್ಟ ಪರಿಸರ ಆರೋಗ್ಯ ಹೊಂದಿರುವ ದೇಶವಾಗಿ ಭಾರತ!

ಭಾರತದ ಹೆಚ್ಚಿನ ಇತಿಹಾಸಕಾರರು ಪಾಂಡ್ಯರು ಮತ್ತು ಚೋಳರಂತಹ ಅನೇಕ ಸಾಮ್ರಾಜ್ಯಗಳ ವೈಭವದ ಆಡಳಿತಗಳನ್ನು ನಿರ್ಲಕ್ಷಿಸಿ ಮೊಘಲರ ಇತಿಹಾಸವನ್ನು ಮಾತ್ರ ದಾಖಲಿಸಲು ಪ್ರಾಮುಖ್ಯತೆ ನೀಡಿದ್ದಾರೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಶುಕ್ರವಾರ (ಜೂನ್.10) ಆರೋಪಿಸಿ, “ಈಗ ನಾವು ಸ್ವತಂತ್ರರಾಗಿರುವುದರಿಂದ, ಇತಿಹಾಸ ಬರೆಯುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದ್ದರು.

“ನಾನು ಇತಿಹಾಸಕಾರರಿಗೆ ಹೇಳಲು ಬಯಸುವುದೇನೆಂದರೆ, ನಾವು ಅನೇಕ ಸಾಮ್ರಾಜ್ಯಗಳನ್ನು ಹೊಂದಿದ್ದೆವು. ಆದರೆ ಇತಿಹಾಸಕಾರರು ಮೊಘಲರ ಮೇಲೆ ಮಾತ್ರ ಕೇಂದ್ರೀಕರಿಸಿದ್ದಾರೆ ಮತ್ತು ಅವರ ಬಗ್ಗೆ ಹೆಚ್ಚಾಗಿ ಬರೆದಿದ್ದಾರೆ. ಪಾಂಡ್ಯ ಸಾಮ್ರಾಜ್ಯವು 800 ವರ್ಷಗಳ ಕಾಲ ಆಳಿತು. ಅಹೋಮ್ ಸಾಮ್ರಾಜ್ಯವು ಅಸ್ಸಾಂ ಅನ್ನು 650 ವರ್ಷಗಳ ಕಾಲ ಆಳಿತು. ಅಹೋಮರು ಭಕ್ತಿಯಾರ್ ಖಿಲ್ಜಿ, ಔರಂಗಜೇಬ್ ಅವರನ್ನು ಸೋಲಿಸಿ ಅಸ್ಸಾಂನ ಸಾರ್ವಭೌಮತ್ವವನ್ನು ಉಳಿಸಿಕೊಂಡಿದ್ದರು. ಪಲ್ಲವ ಸಾಮ್ರಾಜ್ಯವು 600 ವರ್ಷಗಳ ಕಾಲ ಆಳಿತು. ಚೋಳರು 600 ವರ್ಷಗಳ ಕಾಲ ಆಳಿದರು”

“ಮೌರ್ಯರು ಇಡೀ ದೇಶವನ್ನು – ಅಫ್ಘಾನಿಸ್ತಾನದಿಂದ ಲಂಕಾದವರೆಗೆ 550 ವರ್ಷಗಳ ಕಾಲ ಆಳಿದರು. ಸಾತವಾಹನರು 500 ವರ್ಷಗಳ ಕಾಲ ಆಳಿದರು. ಗುಪ್ತರು 400 ವರ್ಷಗಳ ಕಾಲ ಆಳಿದರು ಮತ್ತು ಗುಪ್ತ ಚಕ್ರವರ್ತಿ ಸಮುದ್ರ ಗುಪ್ತನು ಮೊದಲ ಬಾರಿಗೆ ಅಖಂಡ ಭಾರತವನ್ನು ಒಟ್ಟುಗೂಡಿಸಿ ಇಡೀ ದೇಶದೊಂದಿಗೆ ಸಾಮ್ರಾಜ್ಯವನ್ನು ಸ್ಥಾಪಿಸಿದನು. ಆದರೆ ಅವರ ಬಗ್ಗೆ ಯಾವುದೇ ಉಲ್ಲೇಖವಿರುವ ಪುಸ್ತಕ ಇಲ್ಲ. ನಾವೀಗ ಸ್ವತಂತ್ರರಾಗಿದ್ದು, ಸತ್ಯವನ್ನು ಬರೆಯುವುದನ್ನು ಯಾರೂ ತಡೆಯಲಾರರು. ನಮ್ಮ ಇತಿಹಾಸವನ್ನು ನಾವೇ ಬರೆಯಬಹುದು” ಎಂದು ಹೇಳಿದ್ದರು.

ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಇತ್ತೀಚೆಗೆ ರಾಜ್ಯದಲ್ಲಿ ಮತಾಂತರ ವಿರೋಧಿ ಕಾನೂಣಿನ ಅಗತ್ಯವಿಲ್ಲ ಎಂದು ಹೇಳಿ ಬಿಜೆಪಿಗೆ ತಿರುಗೇಟು ನೀಡಿದ್ದರು.


ಇದನ್ನೂ ಓದಿ: ನಾವೀಗ ಸ್ವತಂತ್ರರಾಗಿದ್ದು, ನಮ್ಮ ಇತಿಹಾಸ ಬರೆಯುವ ಸಮಯ ಬಂದಿದೆ: ಅಮಿತ್ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...