Homeಕರ್ನಾಟಕಏಕರೂಪಿ ರಾಷ್ಟ್ರೀಯತೆಯ ಅಪಾಯಗಳನ್ನು ಎಚ್ಚರಿಸಿದ ಕರ್ನಾಟಕದ ತುಳುನಾಡಿನ ವೈವಿಧ್ಯತೆ

ಏಕರೂಪಿ ರಾಷ್ಟ್ರೀಯತೆಯ ಅಪಾಯಗಳನ್ನು ಎಚ್ಚರಿಸಿದ ಕರ್ನಾಟಕದ ತುಳುನಾಡಿನ ವೈವಿಧ್ಯತೆ

- Advertisement -
- Advertisement -

ದಕ್ಷಿಣ ಕನ್ನಡದವನು ಎಂದು ಪರಿಚಯಿಕೊಳ್ಳುವಾಗ ಎರಡು ರೀತಿಗಳಲ್ಲಿ ಗುರುತಿಸುತ್ತಾರೆ. ಒಂದು ಬುದ್ಧಿಶಾಲಿ ಜಿಲ್ಲೆಯವನೆಂದು ಮತ್ತೊಂದು ಕೋಮುವಾದದ ತವರಿನವನೆಂದು. ಬುದ್ಧಿವಂತರ ಜಿಲ್ಲೆ ಎಂದು ಕರೆಸಿಕೊಂಡಿದ್ದು ವರ್ಷಕ್ಕೊಮ್ಮೆ ಬರುತ್ತಿದ್ದ ಶಾಲಾ ಕಾಲೇಜುಗಳು ಪರೀಕ್ಷಾ ಫಲಿತಾಂಶದ ಕಾರಣಕ್ಕೆ ಮಾತ್ರ ಅಲ್ಲ, ಬದಲಿಗೆ ಈ ಪ್ರದೇಶದ ಜನತೆಯ ಶಿಕ್ಷಣ, ರಾಜಕಾರಣ, ಉದ್ಯಮ, ಬ್ಯಾಂಕಿಂಗ್, ಸಾಹಿತ್ಯ, ವಿದ್ವತ್ ಮೊದಲಾದ ವಲಯಗಳಲ್ಲಿ ಮಾಡಿದ ಸಾಧನೆಗಳಿಂದ. ಇಂದು ಕೋಮುವಾದಿಗಳಾಗಿ ಹೊಸ ಸಮುದಾಯಗಳು ರೂಪುಗೊಳ್ಳುವ ಪ್ರಕ್ರಿಯೆಯಲ್ಲಿ ಬುದ್ಧಿವಂತರಾಗಿ ಉಳಿದಿಲ್ಲ ಎಂಬುದನ್ನೂ ಸ್ಪಷ್ಟವಾಗಿ ಗುರುತಿಸಬಹುದಾಗಿದೆ!

ನನ್ನ ಬಾಲ್ಯದಿಂದಲೇ ’ಹಿಂದುತ್ವ’ದ ವಾತಾವರಣದಲ್ಲಿ ಬೆಳೆದ ಕಾರಣ, ನಾನು ಬರೆಯಬಲ್ಲ ಹಂತಕ್ಕೆ ಬಂದಾಗ ನನ್ನ ಜೊತೆಗಿನ ಎಲ್ಲಾ ಹುಡುಗರ ಹಾಗೆಯೇ ಪೂರ್ಣಪ್ರಮಾಣದ ಹಿಂದುತ್ವವಾದಿಯಾಗಿ ರೂಪುಗೊಂಡಿದ್ದೆ. ಆರ್.ಎಸ್.ಎಸ್ ಶಾಖೆಗಳಿಗೆ ಹೋಗುತ್ತಿದ್ದೆ. ಆದರೆ ನನ್ನ ಓರಗೆಯ ಇತರ ಹುಡುಗರಿಗೂ ನನಗೂ ಇದ್ದ ವ್ಯತ್ಯಾಸ ಎಂದರೆ ನಾನು ಆರ್.ಎಸ್.ಎಸ್ ಮತ್ತು ರಾಷ್ಟ್ರೋತ್ಥಾನದ ಸಾಹಿತ್ಯಗಳನ್ನು ಓದಿದೆ. ಇದು ಸಂಘ ಪರಿವಾರ ಪ್ರಣೀತ ಹಿಂದುತ್ವ ಮತ್ತು ಹಿಂದೂ ಧರ್ಮಕ್ಕೆ ಇರುವ ವ್ಯತ್ಯಾಸಗಳ ಬಗ್ಗೆ ಯೋಚಿಸಲು ಕಾರಣವಾಗಿ ಚಿಂತನೆಗೆ ಹಚ್ಚಿತು.

ಭಾರತೀಯ ಸಂಸ್ಕೃತಿಯನ್ನು ಹಿಂದುತ್ವದ ನೆಲೆಯಿಂದ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವಾಗ ಎಡವುತ್ತಿದ್ದೆ. ಯಾಕೆಂದರೆ ಹಿಂದುತ್ವ ಯಾವುದನ್ನು ಹಿಂದುತ್ವ ’ಭಾರತ’ ಎಂದು ವ್ಯಾಖ್ಯಾನಿಸುತ್ತದೆಯೋ ಅದು ಅಸ್ತಿತ್ವದಲ್ಲಿಯೇ ಇಲ್ಲ. ಹಿಂದುತ್ವದ ಸಮಸ್ಯೆ ಇರುವುದು ಭಾರತವನ್ನು ಒಂದು ಸೀಮಿತ ಚೌಕಟ್ಟಿನಲ್ಲಿ ಇಟ್ಟು ನೋಡುವುದು!

ಭಾರತ ಒಂದು ಬಹು ಸಾಂಸ್ಕೃತಿಕ ರಾಷ್ಟ್ರ. ಹಿಂದುತ್ವ ಎಂಬ ಒಂದು ಸೈದ್ಧಾಂತಿಕ ಆವರಣದ ಒಳಗಡೆ ಅದನ್ನು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಇದು ಸಂಸ್ಕೃತಿಯ ಬಗ್ಗೆ ಹೆಚ್ಚೆಚ್ಚು ಓದಲು ತೊಡಗುವಾಗ ಗಟ್ಟಿಗೊಳ್ಳುತ್ತಲೇಹೋಯಿತು. ಇದರ ಸುತ್ತ ನನ್ನ ಸಾಂಸ್ಕೃತಿಕ ಮತ್ತು ರಾಜಕೀಯ ಯೋಚನೆಗಳನ್ನು ಕಟ್ಟಲುತೊಡಗಿದೆ.

ರಾಷ್ಟ್ರೀಯತೆಯ ಬಗ್ಗೆ ಪ್ರಪಂಚದಾದ್ಯಂತ ಚರ್ಚೆಗಳು ನಡೆದಿವೆ. ಇದಕ್ಕಿರುವ ಭಿನ್ನಭಿನ್ನ ವ್ಯಾಖ್ಯಾನಗಳನ್ನು ಚರ್ಚಿಸಲಾಗುತ್ತಿದೆ. ಏಕದೇಶ, ಏಕಭಾಷೆ, ಏಕಧರ್ಮ – ಇವೇ ರಾಷ್ಟ್ರೀಯತೆಗೆ ಇರುವ ಸಾಮಾನ್ಯ ವ್ಯಾಖ್ಯಾನ. ಹಿಂದುತ್ವದ ಪ್ರತಿಪಾದಿಸುವುದು ಕೂಡ ಇದೇ ರಾಷ್ಟ್ರೀಯತೆಯನ್ನು. ಆರ್.ಎಸ್.ಎಸ್‌ನ ಎರಡನೇ ಸರಸಂಚಾಲಕ ಮಾಧವ ಸದಾಶಿವ ಗೋಳ್ವಾಕರ್ ಅವರ ಪ್ರಕಾರ ದೇಶವನ್ನು ರೂಪಿಸುವ ಐದು ಏಕತೆಗಳು ಎಂದರೆ ದೇಶ, ಜನಾಂಗ, ಧರ್ಮ, ಭಾಷೆ ಮತ್ತು ಸಂಸ್ಕೃತಿ. ಅವರೇ ಹೇಳುವಂತೆ ಇವೆಲ್ಲಾ ಅಂಶಗಳೂ ಧರ್ಮಕೇಂದ್ರಿತ. ಯಾಕೆಂದರೆ ಧರ್ಮವೇ ಇವೆಲ್ಲವನ್ನೂ ರೂಪಿಸುತ್ತದೆ!

ಹಾಗಿದ್ದರೆ ಯಾವ ಸಂಸ್ಕೃತಿಯ ಮೂಲಕ ದೇಶವನ್ನು ಮತ್ತು ಹಿಂದೂ ಧರ್ಮವನ್ನು ನಿರ್ಧರಿಸಬೇಕು? ವೈದಿಕ ಸಾಹಿತ್ಯವೇ ಇವೆಲ್ಲವನ್ನೂ ನಿರ್ಧರಿಸುತ್ತದೆ ಎಂದರೆ ನನ್ನ ಊರಿನ ದೈವ ಪಾತ್ರಿ ಒಬ್ಬ ಹಾಡುವ ಪಾಡ್ದನಕ್ಕೆ ಈ ದೇಶದಲ್ಲಿ ಬೆಲೆ ಇಲ್ಲವೇ? ಅಖಿಲ ಭಾರತ ಮಟ್ಟದಲ್ಲಿ ದೈವಾರಾಧನೆ, ಯಕ್ಷಗಾನಕ್ಕೆ ಇರುವ ಸ್ಥಾನ ಏನು? ಕೇವಲ ದೇವರನ್ನೇ ನಂಬುವುದು ದೇಶದ ಸಂಸ್ಕೃತಿ ಎಂದರೆ ದೇವರ ಅಸ್ತಿತ್ವವನ್ನು ಅಲ್ಲಗಳೆದು ಭಾರತೀಯ ತಾತ್ವಿಕ ಪರಂಪರೆಯಲ್ಲಿ ಅತ್ಯುನ್ನತ ಸ್ಥಾನ ಪಡೆದಿರುವ ಲೋಕಾಯತ, ನಾಸ್ತಿಕ, ಚಾರ್ವಾಕ ಮೊದಲಾದವರು ಭಾರತೀಯರೆಲ್ಲವೆ? ವೇದಗಳನ್ನು ತಿರಸ್ಕರಿಸಿ, ಜಾತಿವ್ಯವಸ್ಥೆಯನ್ನು, ವರ್ಣವ್ಯವಸ್ಥೆಯನ್ನು ಕಟುವಾಗಿ ಟೀಕಿಸಿದ ನಾಥ, ಕಾಳಾಮುಖ, ಸಾಂಖ್ಯ, ಬೌದ್ಧ, ಶರಣ ಮೊದಲಾದ ಪಂಥಗಳು ಭಾರತದಲ್ಲವೇ? ಸಾವಿರಾರು ಭಾಷೆಗಳು ಮತ್ತು ಅವುಗಳ ಸುತ್ತ ಬೆಳೆದಿರುವ ಸಂಸ್ಕೃತಿಗಳು ಭಾರತಕ್ಕೆ ಬೇಡವೇ?

ಹಿಂದುತ್ವವನ್ನು ಪ್ರಶ್ನಿಸಿ ಅದರ ಕೋಮುವಾದಿ ರಾಷ್ಟ್ರೀಯತೆಗೆ ಉತ್ತರ ನೀಡಲು ನಮ್ಮ ಮುಂದೆ ಇರುವದು, ಈ ದೇಶ ಸಾವಿರಾರು ವರ್ಷಗಳಿಂದ ಬೆಳೆಸಿಕೊಂಡು ಬಂದಿರುವ ಬಹುಮುಖಿ ಸಂಸ್ಕೃತಿ. ಇದಕ್ಕೆ ನಾನು ಹುಟ್ಟಿ ಬೆಳೆದ ದಕ್ಷಿಣ ಕನ್ನಡದಲ್ಲಿಯೇ ನೂರಾರು ಉದಾಹರಣೆಗಳಿವೆ.

ಇವುಗಳನ್ನು ತಿರುಗಿ ನೋಡಿದಾಗ, ನನಗೆ ಏಕರೂಪಿ ಸಂಸ್ಕೃತಿಯನ್ನು ಪ್ರಚಾರ ಮಾಡುವ ಹಿಂದುತ್ವದಿಂದ ಬಹುತ್ವದ ಬೇರುಗಳಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂಬ ಭಯ ಗೋಚರಿಸುತ್ತದೆ. ತುಳುನಾಡಿನ ಸಂಸ್ಕೃತಿ ಒಡೆಯುವುದನ್ನು ಕಲಿಸಿಲ್ಲ. ಹಕ್ಕುಗಳಿಗೆ ಹೋರಾಡುವ ಕೋಟಿ ಚೆನ್ನಯರು, ಸ್ತ್ರೀಮತವನ್ನು ಉದ್ಧರಿಸಲು ತನ್ನ ಪತಿಯನ್ನು ತಿರಸ್ಕರಿಸುವ ಅಕ್ಕೆರಸು ಸಿರಿ, ತನ್ನ ಅರಸನನ್ನು ರಕ್ಷಿಸಲು ಪ್ರಾಣ ನೀಡುವ ಮಾಮ್ಮಾಲಿ ಬ್ಯಾರಿ, ಬಪ್ಪನಾಡಿನ ದುರ್ಗಾಪರಮೇಶ್ವರಿ, ಒಲಿದ ಬಪ್ಪ ಬ್ಯಾರಿ ಮೊದಲಾದ ಜಾನಪದ ನಾಯಕರು ಈ ನೆಲದ ಸಂಸ್ಕೃತಿಯನ್ನು ಕಟ್ಟಿದ್ದಾರೆ.

ಬೊಬ್ಬರ್ಯ ಎಂಬ ಮುಸಲ್ಮಾನ ಬ್ಯಾರಿಯೊಬ್ಬ ಮೀನುಗಾರರ ದೈವವಾಗುವುದು ಜಾನಪದದಿಂದ ಹೊರತು ರಾಜಕೀಯ ಪ್ರೇರಿತ ಮತೀಯತೆಯಿಂದಲ್ಲ. ಹಿಂದುತ್ವ ಹಿಂದೂ ಧರ್ಮವನ್ನು ಸುಧಾರಿಸುವ ಬದಲು ಒಂದು ಕರ್ಮಠ ಮತಧರ್ಮವನ್ನಾಗಿ ಮಾರ್ಪಾಡು ಮಾಡುವಾಗ ನಾವು ಬಹುತ್ವದ ಬಗ್ಗೆ ಹೆಚ್ಚುಹೆಚ್ಚು ಮಾತನಾಡಬೇಕಾಗಿದೆ. ಹಿಂದುತ್ವದಲ್ಲಿ ಬೊಬ್ಬರ್ಯ ದೈವದ ಕಥೆಯನ್ನು ಮಹಾಭಾರತದ ಬಬ್ರುವಾಹನನ ಕಥೆಯೊಂದಿಗೆ ಜೋಡಿಸಿ ತಿರುಚಲು ಯತ್ನಿಸಿದರೆ ಸಾಮಾನ್ಯನೊಬ್ಬ ಹಾಡುವ ಪಾಡ್ದನದಲ್ಲಿ ಅವನು ಒಬ್ಬ ಮುಸಲ್ಮಾನ!

ಹಿಂದುತ್ವದಲ್ಲಿ ಬಹುತ್ವಕ್ಕೆ ಅವಕಾಶ ಇಲ್ಲ. ತುಳುವಿನ ಸಬಲೀಕರಣದ ಬಗ್ಗೆ ಅದು ಮಾತನಾಡಿದರೂ ಅದಕ್ಕೆ ಬೇಕಾದ ಪಠ್ಯವನ್ನು ರೂಪಿಸುವಾಗ ಕೋಮುವಾದವನ್ನು ತರಲಾಗುತ್ತದೆ. ಹೀಗಾಗಿ ತುಳುವಿನ ಬಗೆಗಿನ ವಿದ್ವತ್‌ಪೂರ್ಣ ಚರ್ಚೆ ಕಳೆದ ಎರಡು ದಶಕಗಳಿಂದ ತೀರ ಕಡಿಮೆಯಾಗಿದೆ.

ನಮಗೆ ಬೇಕಾದದ್ದು ನಮ್ಮ ಹಿರಿಯರು ನೀಡಿದ ಎಲ್ಲರನ್ನೂ ಒಳಗೊಳ್ಳುವ ತುಳು ಸಂಸ್ಕೃತಿ. ಇದು ಕೇವಲ ತುಳುವಿನ ವಿಚಾರದಲ್ಲಿ ಮಾತ್ರವಲ್ಲ ಇಡೀ ದೇಶದ ವಿಚಾರದಲ್ಲೂ ಮುಖ್ಯವಾಗುತ್ತದೆ! ನನ್ನ ಮನೆಯ ಸಂಸ್ಕೃತಿಯ ಮೂಲಕ ನನ್ನ ದೇಶವನ್ನು ವ್ಯಾಖ್ಯಾನಿಸಲು ಸಾಧ್ಯವಾದರೆ ಅದೇ ನಿಜವಾದ ದೇಶಪ್ರೇಮ. ಹಾಗಾದಾಗ ಮಾತ್ರ ಭಾರತ ನಮ್ಮ ಒಳಗೆ ಗಟ್ಟಿಯಾಗಿ ನೆಲೆಯೂರಲು ಸಾಧ್ಯ.

ಕೋಮುವಾದದಿಂದ ಅಧಃಪತನಕ್ಕೆ ಹೋಗುತ್ತಿರುವ ಭಾರತವನ್ನು ಉಳಿಸುವ ಜವಾಬ್ದಾರಿ ಕನ್ನಡಿಗರಾದ ನಮ್ಮ ಮೇಲಿದೆ. ಕವಿರಾಜ ಮಾರ್ಗಕಾರ ಹೇಳುವ “ಕನ್ನಡಂಗಳ” ವೈವಿಧ್ಯತೆಯ ಜೊತೆಗೆ ತುಳು, ಕೊರಗ, ಕೊಡವ ಮೊದಲಾದ ಕರ್ನಾಟಕದ ಭಾಷೆಗಳು ತಮ್ಮ ಅಸ್ತಿತ್ವದ ಬಗ್ಗೆ ದನಿ ಎತ್ತಿವೆ. ಈ ಸಂಸ್ಕೃತಿಗಳು ಕನ್ನಡನಾಡನ್ನು ಬೆಳೆಸಿವೆ. ಕನ್ನಡದ ದನಿಗಳು ತುಳುವಿನವೂ, ಕೊಡವ ಭಾಷೆಯದ್ದೂ, ಅಳಿವಿನಂಚಿನಲ್ಲಿ ಇರುವ ಕೊರಗರದ್ದೂ ಆಗಬೇಕು! ಈ ಪ್ರಜ್ಞೆ ಇಡೀ ಕರ್ನಾಟಕವನ್ನು ವ್ಯಾಪಿಸಬೇಕು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ನಾಡನ್ನು ಕಟ್ಟಿದ ಈ ಬಹುಮುಖಿ ನೆಲೆಗಳ ಉಳಿವಿನ ಬಗ್ಗೆ ದನಿ ಎತ್ತುವ ಮೂಲಕ ಪತನಮುಖಿ ಭಾರತದ ಚೈತನ್ಯವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ.

ಚರಣ್ ಐವರ್ನಾಡು

ಚರಣ್ ಐವರ್ನಾಡು
ಯುವ ಬರಹಗಾರ, ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರು. ಇತಿಹಾಸ, ಜಾನಪದ, ರಾಜಕೀಯ ಮತ್ತು ಸಬಾಲ್ಟ್ರನ್ ಅಧ್ಯಯನಗಳು ಇವರ ಬರವಣಿಗೆಯ ಕ್ಷೇತ್ರಗಳು.


ಇದನ್ನೂ ಓದಿ: ಭಾಷಾ ರಾಜಕಾರಣ ಮತ್ತು ತುಳು ರಾಜ್ಯದ ಬೇಡಿಕೆ: ಪ್ರೊ. ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...