Homeಕರ್ನಾಟಕಏಕರೂಪಿ ರಾಷ್ಟ್ರೀಯತೆಯ ಅಪಾಯಗಳನ್ನು ಎಚ್ಚರಿಸಿದ ಕರ್ನಾಟಕದ ತುಳುನಾಡಿನ ವೈವಿಧ್ಯತೆ

ಏಕರೂಪಿ ರಾಷ್ಟ್ರೀಯತೆಯ ಅಪಾಯಗಳನ್ನು ಎಚ್ಚರಿಸಿದ ಕರ್ನಾಟಕದ ತುಳುನಾಡಿನ ವೈವಿಧ್ಯತೆ

- Advertisement -
- Advertisement -

ದಕ್ಷಿಣ ಕನ್ನಡದವನು ಎಂದು ಪರಿಚಯಿಕೊಳ್ಳುವಾಗ ಎರಡು ರೀತಿಗಳಲ್ಲಿ ಗುರುತಿಸುತ್ತಾರೆ. ಒಂದು ಬುದ್ಧಿಶಾಲಿ ಜಿಲ್ಲೆಯವನೆಂದು ಮತ್ತೊಂದು ಕೋಮುವಾದದ ತವರಿನವನೆಂದು. ಬುದ್ಧಿವಂತರ ಜಿಲ್ಲೆ ಎಂದು ಕರೆಸಿಕೊಂಡಿದ್ದು ವರ್ಷಕ್ಕೊಮ್ಮೆ ಬರುತ್ತಿದ್ದ ಶಾಲಾ ಕಾಲೇಜುಗಳು ಪರೀಕ್ಷಾ ಫಲಿತಾಂಶದ ಕಾರಣಕ್ಕೆ ಮಾತ್ರ ಅಲ್ಲ, ಬದಲಿಗೆ ಈ ಪ್ರದೇಶದ ಜನತೆಯ ಶಿಕ್ಷಣ, ರಾಜಕಾರಣ, ಉದ್ಯಮ, ಬ್ಯಾಂಕಿಂಗ್, ಸಾಹಿತ್ಯ, ವಿದ್ವತ್ ಮೊದಲಾದ ವಲಯಗಳಲ್ಲಿ ಮಾಡಿದ ಸಾಧನೆಗಳಿಂದ. ಇಂದು ಕೋಮುವಾದಿಗಳಾಗಿ ಹೊಸ ಸಮುದಾಯಗಳು ರೂಪುಗೊಳ್ಳುವ ಪ್ರಕ್ರಿಯೆಯಲ್ಲಿ ಬುದ್ಧಿವಂತರಾಗಿ ಉಳಿದಿಲ್ಲ ಎಂಬುದನ್ನೂ ಸ್ಪಷ್ಟವಾಗಿ ಗುರುತಿಸಬಹುದಾಗಿದೆ!

ನನ್ನ ಬಾಲ್ಯದಿಂದಲೇ ’ಹಿಂದುತ್ವ’ದ ವಾತಾವರಣದಲ್ಲಿ ಬೆಳೆದ ಕಾರಣ, ನಾನು ಬರೆಯಬಲ್ಲ ಹಂತಕ್ಕೆ ಬಂದಾಗ ನನ್ನ ಜೊತೆಗಿನ ಎಲ್ಲಾ ಹುಡುಗರ ಹಾಗೆಯೇ ಪೂರ್ಣಪ್ರಮಾಣದ ಹಿಂದುತ್ವವಾದಿಯಾಗಿ ರೂಪುಗೊಂಡಿದ್ದೆ. ಆರ್.ಎಸ್.ಎಸ್ ಶಾಖೆಗಳಿಗೆ ಹೋಗುತ್ತಿದ್ದೆ. ಆದರೆ ನನ್ನ ಓರಗೆಯ ಇತರ ಹುಡುಗರಿಗೂ ನನಗೂ ಇದ್ದ ವ್ಯತ್ಯಾಸ ಎಂದರೆ ನಾನು ಆರ್.ಎಸ್.ಎಸ್ ಮತ್ತು ರಾಷ್ಟ್ರೋತ್ಥಾನದ ಸಾಹಿತ್ಯಗಳನ್ನು ಓದಿದೆ. ಇದು ಸಂಘ ಪರಿವಾರ ಪ್ರಣೀತ ಹಿಂದುತ್ವ ಮತ್ತು ಹಿಂದೂ ಧರ್ಮಕ್ಕೆ ಇರುವ ವ್ಯತ್ಯಾಸಗಳ ಬಗ್ಗೆ ಯೋಚಿಸಲು ಕಾರಣವಾಗಿ ಚಿಂತನೆಗೆ ಹಚ್ಚಿತು.

ಭಾರತೀಯ ಸಂಸ್ಕೃತಿಯನ್ನು ಹಿಂದುತ್ವದ ನೆಲೆಯಿಂದ ಅರ್ಥಮಾಡಿಕೊಳ್ಳಲು ಪ್ರಯತ್ನಿಸುವಾಗ ಎಡವುತ್ತಿದ್ದೆ. ಯಾಕೆಂದರೆ ಹಿಂದುತ್ವ ಯಾವುದನ್ನು ಹಿಂದುತ್ವ ’ಭಾರತ’ ಎಂದು ವ್ಯಾಖ್ಯಾನಿಸುತ್ತದೆಯೋ ಅದು ಅಸ್ತಿತ್ವದಲ್ಲಿಯೇ ಇಲ್ಲ. ಹಿಂದುತ್ವದ ಸಮಸ್ಯೆ ಇರುವುದು ಭಾರತವನ್ನು ಒಂದು ಸೀಮಿತ ಚೌಕಟ್ಟಿನಲ್ಲಿ ಇಟ್ಟು ನೋಡುವುದು!

ಭಾರತ ಒಂದು ಬಹು ಸಾಂಸ್ಕೃತಿಕ ರಾಷ್ಟ್ರ. ಹಿಂದುತ್ವ ಎಂಬ ಒಂದು ಸೈದ್ಧಾಂತಿಕ ಆವರಣದ ಒಳಗಡೆ ಅದನ್ನು ಅರ್ಥೈಸಿಕೊಳ್ಳಲು ಸಾಧ್ಯವಿಲ್ಲ. ಇದು ಸಂಸ್ಕೃತಿಯ ಬಗ್ಗೆ ಹೆಚ್ಚೆಚ್ಚು ಓದಲು ತೊಡಗುವಾಗ ಗಟ್ಟಿಗೊಳ್ಳುತ್ತಲೇಹೋಯಿತು. ಇದರ ಸುತ್ತ ನನ್ನ ಸಾಂಸ್ಕೃತಿಕ ಮತ್ತು ರಾಜಕೀಯ ಯೋಚನೆಗಳನ್ನು ಕಟ್ಟಲುತೊಡಗಿದೆ.

ರಾಷ್ಟ್ರೀಯತೆಯ ಬಗ್ಗೆ ಪ್ರಪಂಚದಾದ್ಯಂತ ಚರ್ಚೆಗಳು ನಡೆದಿವೆ. ಇದಕ್ಕಿರುವ ಭಿನ್ನಭಿನ್ನ ವ್ಯಾಖ್ಯಾನಗಳನ್ನು ಚರ್ಚಿಸಲಾಗುತ್ತಿದೆ. ಏಕದೇಶ, ಏಕಭಾಷೆ, ಏಕಧರ್ಮ – ಇವೇ ರಾಷ್ಟ್ರೀಯತೆಗೆ ಇರುವ ಸಾಮಾನ್ಯ ವ್ಯಾಖ್ಯಾನ. ಹಿಂದುತ್ವದ ಪ್ರತಿಪಾದಿಸುವುದು ಕೂಡ ಇದೇ ರಾಷ್ಟ್ರೀಯತೆಯನ್ನು. ಆರ್.ಎಸ್.ಎಸ್‌ನ ಎರಡನೇ ಸರಸಂಚಾಲಕ ಮಾಧವ ಸದಾಶಿವ ಗೋಳ್ವಾಕರ್ ಅವರ ಪ್ರಕಾರ ದೇಶವನ್ನು ರೂಪಿಸುವ ಐದು ಏಕತೆಗಳು ಎಂದರೆ ದೇಶ, ಜನಾಂಗ, ಧರ್ಮ, ಭಾಷೆ ಮತ್ತು ಸಂಸ್ಕೃತಿ. ಅವರೇ ಹೇಳುವಂತೆ ಇವೆಲ್ಲಾ ಅಂಶಗಳೂ ಧರ್ಮಕೇಂದ್ರಿತ. ಯಾಕೆಂದರೆ ಧರ್ಮವೇ ಇವೆಲ್ಲವನ್ನೂ ರೂಪಿಸುತ್ತದೆ!

ಹಾಗಿದ್ದರೆ ಯಾವ ಸಂಸ್ಕೃತಿಯ ಮೂಲಕ ದೇಶವನ್ನು ಮತ್ತು ಹಿಂದೂ ಧರ್ಮವನ್ನು ನಿರ್ಧರಿಸಬೇಕು? ವೈದಿಕ ಸಾಹಿತ್ಯವೇ ಇವೆಲ್ಲವನ್ನೂ ನಿರ್ಧರಿಸುತ್ತದೆ ಎಂದರೆ ನನ್ನ ಊರಿನ ದೈವ ಪಾತ್ರಿ ಒಬ್ಬ ಹಾಡುವ ಪಾಡ್ದನಕ್ಕೆ ಈ ದೇಶದಲ್ಲಿ ಬೆಲೆ ಇಲ್ಲವೇ? ಅಖಿಲ ಭಾರತ ಮಟ್ಟದಲ್ಲಿ ದೈವಾರಾಧನೆ, ಯಕ್ಷಗಾನಕ್ಕೆ ಇರುವ ಸ್ಥಾನ ಏನು? ಕೇವಲ ದೇವರನ್ನೇ ನಂಬುವುದು ದೇಶದ ಸಂಸ್ಕೃತಿ ಎಂದರೆ ದೇವರ ಅಸ್ತಿತ್ವವನ್ನು ಅಲ್ಲಗಳೆದು ಭಾರತೀಯ ತಾತ್ವಿಕ ಪರಂಪರೆಯಲ್ಲಿ ಅತ್ಯುನ್ನತ ಸ್ಥಾನ ಪಡೆದಿರುವ ಲೋಕಾಯತ, ನಾಸ್ತಿಕ, ಚಾರ್ವಾಕ ಮೊದಲಾದವರು ಭಾರತೀಯರೆಲ್ಲವೆ? ವೇದಗಳನ್ನು ತಿರಸ್ಕರಿಸಿ, ಜಾತಿವ್ಯವಸ್ಥೆಯನ್ನು, ವರ್ಣವ್ಯವಸ್ಥೆಯನ್ನು ಕಟುವಾಗಿ ಟೀಕಿಸಿದ ನಾಥ, ಕಾಳಾಮುಖ, ಸಾಂಖ್ಯ, ಬೌದ್ಧ, ಶರಣ ಮೊದಲಾದ ಪಂಥಗಳು ಭಾರತದಲ್ಲವೇ? ಸಾವಿರಾರು ಭಾಷೆಗಳು ಮತ್ತು ಅವುಗಳ ಸುತ್ತ ಬೆಳೆದಿರುವ ಸಂಸ್ಕೃತಿಗಳು ಭಾರತಕ್ಕೆ ಬೇಡವೇ?

ಹಿಂದುತ್ವವನ್ನು ಪ್ರಶ್ನಿಸಿ ಅದರ ಕೋಮುವಾದಿ ರಾಷ್ಟ್ರೀಯತೆಗೆ ಉತ್ತರ ನೀಡಲು ನಮ್ಮ ಮುಂದೆ ಇರುವದು, ಈ ದೇಶ ಸಾವಿರಾರು ವರ್ಷಗಳಿಂದ ಬೆಳೆಸಿಕೊಂಡು ಬಂದಿರುವ ಬಹುಮುಖಿ ಸಂಸ್ಕೃತಿ. ಇದಕ್ಕೆ ನಾನು ಹುಟ್ಟಿ ಬೆಳೆದ ದಕ್ಷಿಣ ಕನ್ನಡದಲ್ಲಿಯೇ ನೂರಾರು ಉದಾಹರಣೆಗಳಿವೆ.

ಇವುಗಳನ್ನು ತಿರುಗಿ ನೋಡಿದಾಗ, ನನಗೆ ಏಕರೂಪಿ ಸಂಸ್ಕೃತಿಯನ್ನು ಪ್ರಚಾರ ಮಾಡುವ ಹಿಂದುತ್ವದಿಂದ ಬಹುತ್ವದ ಬೇರುಗಳಿಗೆ ದೊಡ್ಡ ಹೊಡೆತ ಬೀಳುತ್ತದೆ ಎಂಬ ಭಯ ಗೋಚರಿಸುತ್ತದೆ. ತುಳುನಾಡಿನ ಸಂಸ್ಕೃತಿ ಒಡೆಯುವುದನ್ನು ಕಲಿಸಿಲ್ಲ. ಹಕ್ಕುಗಳಿಗೆ ಹೋರಾಡುವ ಕೋಟಿ ಚೆನ್ನಯರು, ಸ್ತ್ರೀಮತವನ್ನು ಉದ್ಧರಿಸಲು ತನ್ನ ಪತಿಯನ್ನು ತಿರಸ್ಕರಿಸುವ ಅಕ್ಕೆರಸು ಸಿರಿ, ತನ್ನ ಅರಸನನ್ನು ರಕ್ಷಿಸಲು ಪ್ರಾಣ ನೀಡುವ ಮಾಮ್ಮಾಲಿ ಬ್ಯಾರಿ, ಬಪ್ಪನಾಡಿನ ದುರ್ಗಾಪರಮೇಶ್ವರಿ, ಒಲಿದ ಬಪ್ಪ ಬ್ಯಾರಿ ಮೊದಲಾದ ಜಾನಪದ ನಾಯಕರು ಈ ನೆಲದ ಸಂಸ್ಕೃತಿಯನ್ನು ಕಟ್ಟಿದ್ದಾರೆ.

ಬೊಬ್ಬರ್ಯ ಎಂಬ ಮುಸಲ್ಮಾನ ಬ್ಯಾರಿಯೊಬ್ಬ ಮೀನುಗಾರರ ದೈವವಾಗುವುದು ಜಾನಪದದಿಂದ ಹೊರತು ರಾಜಕೀಯ ಪ್ರೇರಿತ ಮತೀಯತೆಯಿಂದಲ್ಲ. ಹಿಂದುತ್ವ ಹಿಂದೂ ಧರ್ಮವನ್ನು ಸುಧಾರಿಸುವ ಬದಲು ಒಂದು ಕರ್ಮಠ ಮತಧರ್ಮವನ್ನಾಗಿ ಮಾರ್ಪಾಡು ಮಾಡುವಾಗ ನಾವು ಬಹುತ್ವದ ಬಗ್ಗೆ ಹೆಚ್ಚುಹೆಚ್ಚು ಮಾತನಾಡಬೇಕಾಗಿದೆ. ಹಿಂದುತ್ವದಲ್ಲಿ ಬೊಬ್ಬರ್ಯ ದೈವದ ಕಥೆಯನ್ನು ಮಹಾಭಾರತದ ಬಬ್ರುವಾಹನನ ಕಥೆಯೊಂದಿಗೆ ಜೋಡಿಸಿ ತಿರುಚಲು ಯತ್ನಿಸಿದರೆ ಸಾಮಾನ್ಯನೊಬ್ಬ ಹಾಡುವ ಪಾಡ್ದನದಲ್ಲಿ ಅವನು ಒಬ್ಬ ಮುಸಲ್ಮಾನ!

ಹಿಂದುತ್ವದಲ್ಲಿ ಬಹುತ್ವಕ್ಕೆ ಅವಕಾಶ ಇಲ್ಲ. ತುಳುವಿನ ಸಬಲೀಕರಣದ ಬಗ್ಗೆ ಅದು ಮಾತನಾಡಿದರೂ ಅದಕ್ಕೆ ಬೇಕಾದ ಪಠ್ಯವನ್ನು ರೂಪಿಸುವಾಗ ಕೋಮುವಾದವನ್ನು ತರಲಾಗುತ್ತದೆ. ಹೀಗಾಗಿ ತುಳುವಿನ ಬಗೆಗಿನ ವಿದ್ವತ್‌ಪೂರ್ಣ ಚರ್ಚೆ ಕಳೆದ ಎರಡು ದಶಕಗಳಿಂದ ತೀರ ಕಡಿಮೆಯಾಗಿದೆ.

ನಮಗೆ ಬೇಕಾದದ್ದು ನಮ್ಮ ಹಿರಿಯರು ನೀಡಿದ ಎಲ್ಲರನ್ನೂ ಒಳಗೊಳ್ಳುವ ತುಳು ಸಂಸ್ಕೃತಿ. ಇದು ಕೇವಲ ತುಳುವಿನ ವಿಚಾರದಲ್ಲಿ ಮಾತ್ರವಲ್ಲ ಇಡೀ ದೇಶದ ವಿಚಾರದಲ್ಲೂ ಮುಖ್ಯವಾಗುತ್ತದೆ! ನನ್ನ ಮನೆಯ ಸಂಸ್ಕೃತಿಯ ಮೂಲಕ ನನ್ನ ದೇಶವನ್ನು ವ್ಯಾಖ್ಯಾನಿಸಲು ಸಾಧ್ಯವಾದರೆ ಅದೇ ನಿಜವಾದ ದೇಶಪ್ರೇಮ. ಹಾಗಾದಾಗ ಮಾತ್ರ ಭಾರತ ನಮ್ಮ ಒಳಗೆ ಗಟ್ಟಿಯಾಗಿ ನೆಲೆಯೂರಲು ಸಾಧ್ಯ.

ಕೋಮುವಾದದಿಂದ ಅಧಃಪತನಕ್ಕೆ ಹೋಗುತ್ತಿರುವ ಭಾರತವನ್ನು ಉಳಿಸುವ ಜವಾಬ್ದಾರಿ ಕನ್ನಡಿಗರಾದ ನಮ್ಮ ಮೇಲಿದೆ. ಕವಿರಾಜ ಮಾರ್ಗಕಾರ ಹೇಳುವ “ಕನ್ನಡಂಗಳ” ವೈವಿಧ್ಯತೆಯ ಜೊತೆಗೆ ತುಳು, ಕೊರಗ, ಕೊಡವ ಮೊದಲಾದ ಕರ್ನಾಟಕದ ಭಾಷೆಗಳು ತಮ್ಮ ಅಸ್ತಿತ್ವದ ಬಗ್ಗೆ ದನಿ ಎತ್ತಿವೆ. ಈ ಸಂಸ್ಕೃತಿಗಳು ಕನ್ನಡನಾಡನ್ನು ಬೆಳೆಸಿವೆ. ಕನ್ನಡದ ದನಿಗಳು ತುಳುವಿನವೂ, ಕೊಡವ ಭಾಷೆಯದ್ದೂ, ಅಳಿವಿನಂಚಿನಲ್ಲಿ ಇರುವ ಕೊರಗರದ್ದೂ ಆಗಬೇಕು! ಈ ಪ್ರಜ್ಞೆ ಇಡೀ ಕರ್ನಾಟಕವನ್ನು ವ್ಯಾಪಿಸಬೇಕು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ನಾಡನ್ನು ಕಟ್ಟಿದ ಈ ಬಹುಮುಖಿ ನೆಲೆಗಳ ಉಳಿವಿನ ಬಗ್ಗೆ ದನಿ ಎತ್ತುವ ಮೂಲಕ ಪತನಮುಖಿ ಭಾರತದ ಚೈತನ್ಯವನ್ನು ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ.

ಚರಣ್ ಐವರ್ನಾಡು

ಚರಣ್ ಐವರ್ನಾಡು
ಯುವ ಬರಹಗಾರ, ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದವರು. ಇತಿಹಾಸ, ಜಾನಪದ, ರಾಜಕೀಯ ಮತ್ತು ಸಬಾಲ್ಟ್ರನ್ ಅಧ್ಯಯನಗಳು ಇವರ ಬರವಣಿಗೆಯ ಕ್ಷೇತ್ರಗಳು.


ಇದನ್ನೂ ಓದಿ: ಭಾಷಾ ರಾಜಕಾರಣ ಮತ್ತು ತುಳು ರಾಜ್ಯದ ಬೇಡಿಕೆ: ಪ್ರೊ. ಪುರುಷೋತ್ತಮ ಬಿಳಿಮಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...