Homeಮುಖಪುಟಹೊಂಬಾಳೆ - 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು - ನಳಿನಿ ಕೋಲಾರ

ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಹಕ್ಕು ಪತ್ರಕ್ಕಾಗಿ, ಸಾಗುವಳಿ ಚೀಟಗಾಗಿ, ಖಾತೆ ಬದಲಾವಣೆಗಾಗಿ ಅಂಗಲಾಚುತ್ತಿರುವವರು, ಅಲ್ಲದೆ ಪಹಣಿಯಲ್ಲಿ ಬೆಳೆ ನಮೂದಾತಿಯಿಲ್ಲದೆ ಒದ್ದಾಡುತ್ತಿರುವ ನೂರಾರು ರೈತರನ್ನು ನಾವು ನೋಡಬಹುದು.

- Advertisement -
- Advertisement -
  • ನಳಿನಿ ಕೋಲಾರ. ಯುವ ರೈತ ಹೋರಾಟಗಾರ್ತಿ.

ಅನಾದಿ ಕಾಲದಿಂದಲು ಇಂದಿನ ಕಾಲದವರೆಗೂ ಕಂದಾಯ ಇಲಾಖೆಯು ರೈತನ ಜುಟ್ಟನ್ನು ಬಿಗಿಯಾಗಿ ಹಿಡಿದು ಕುಳಿತಿದೆ ಎಂದರೆ ತಪ್ಪಾಗಲಾರದು. ಈ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಖಂಡಿಸಿ ಹತಾಶರಾಗಿ ಏನು ಮಾಡಲಾಗದ ಅಸಹಾಯಕರಾಗಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನಾವು ನೋಡಬಹುದು. ರಾಮನಗರದ ರೈತನೊಬ್ಬ ಕಂದಾಯ ಇಲಾಖೆಯಿಂದ ತನ್ನ ಕೆಲಸ ಮಾಡಿಸಿಕೊಳ್ಳಲು ಸಾಧ್ಯವಾಗದೆ ಬೇಸತ್ತು, 7-3-2013 ರಂದು ತಾಲ್ಲೂಕು ಕಛೇರಿಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಘಟನೆ ನಡೆದು 7 ವರ್ಷಗಳ ಕಳೆದರೂ ಕಂದಾಯ ಇಲಾಖೆಯ ಪರಿಸ್ಥಿತಿಯಲ್ಲಿ ಏನಾದರೂ ಬದಲಾವಣೆ ಬಂದಿದೆಯೇ? ಇಲ್ಲ ಇನ್ನು ಲೋಪಗಳು ಹೆಚ್ಚಾಗುತ್ತಲೇ ಇವೆ.

ಇದು ಕೇವಲ ಒಬ್ಬ ಗಂಗಯ್ಯನ ವಿಷಯ ಮಾತ್ರವಲ್ಲ. ಅವರ ಹಾಗೆ ಸುಮಾರಷ್ಟು ರೈತರು ಈ ವ್ಯವಸ್ಥೆಯನ್ನು ಸರಿಪಡಿಸಲು ಪ್ರಾಣತ್ಯಾಗ ಮಾಡಿದ್ದಾರೆ. ಆದರೂ ಈ ಸಮಾಜವನ್ನು ಸರಿಪಡಿಸಲು ಆಗಿಲ್ಲ. ಪ್ರಾಣತ್ಯಾಗಕ್ಕೆ ಬೆದರದ ಪಂಚೇಂದ್ರಿಯಗಳಿಲ್ಲದ ದಪ್ಪ ಚರ್ಮದ ಈ ವ್ಯವಸ್ಥೆ ಮತ್ತೆ ಯಾವ ತ್ಯಾಗದಿಂದ ಸರಿಪಡಿಸಲು ಸಾಧ್ಯ?

ಸರ್ಕಾರದ ಕಾನೂನು ಮತ್ತು ಕಂದಾಯ ಇಲಾಖೆಯ ನಡುವೆ ರೈತರು ದಿನದಿಂದ ದಿನಕ್ಕೆ ನಲುಗುತ್ತಿದ್ದಾರೆ. ಉದಾಹರಣೆಗೆ ಭೂರಹಿತರಿಗೆ ಭೂಮಿಸಿಗಲೆಂದು ಜಾರಿಮಾಡಿದ ನಮೂನೆ 53,57 ವರ್ಷಗಳೇ ಕಳೆದರೂ ಇದುವರೆಗೂ ಕಾರ್ಯಗತವಾಗಿಲ್ಲ. ಅರ್ಜಿ ಸಲ್ಲಿಸಿದ ನಂತರ ರೈತರು ಕಛೇರಿಯಿಂದ ಕಛೇರಿಗೆ ಅಲೆದು ಅಲೆದು ಅವನ ಚಪ್ಪಲಿ ಸವೆಯುತ್ತದೆಯೇ ಹೊರೆತು ಕೆಲಸ ಮಾತ್ರ ಆಗಿರುವುದಿಲ್ಲ. ಇದಕ್ಕಾಗಿ ಸಂಬಂದಪಟ್ಟ ಆಧಿಕಾರಿಗಳನ್ನು ಕೇಳಿದರೆ ನಮಗೆ ಯಾವುದೇ ಆದೇಶ ಬಂದಿಲ್ಲ ಅಥವಾ ಶಾಸಕರಿಂದ ಲೆಟರ್ ಬೇಕು ಎಂಬಂತೆ ಇನ್ನಿತರ ಸಬೂಬುಗಳನ್ನು ಹೇಳುತ್ತಾರೆ. ಈ ಹಿಂದೆ ನಮೂನೆ 50ರಲ್ಲಿ ಜಮೀನು ಮಂಜೂರಾಗಿರುವ ರೈತರು ಸಾಗುವಳಿ ಚೀಟಿ ಪಡೆಯಲು ಇನ್ನಿಲ್ಲದ ಕಷ್ಟ ಎದುರಿಸುತ್ತಿದ್ದಾರೆ.

ಕಂದಾಯ ಇಲಾಖೆ ಮತ್ತು ಸರ್ವೆ ಇಲಾಖೆ ಇವೆರಡೂ ರೈತರಿಗೆ ಎರಡು ಜೊಡೆತ್ತುಗಳಿದ್ದ ಹಾಗೆ. ಆದರೆ ಒಬ್ಬ ರೈತ ತನ್ನ ಜಮೀನನ್ನು ಸರ್ವೆ ಮಾಡಿಸಬೇಕಾದರೆ ಸರ್ಕಾರಿ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಿದ ನಂತರ ಕನಿಷ್ಠ 6 ತಿಂಗಳಿನಿಂದ ಒಂದು ವರ್ಷವಾದರೂ ಕಾಯಬೇಕಾಗುತ್ತದೆ. ಜೊತೆಗೆ ಸಣ್ಣ ಪುಟ್ಟ ತೊಂದರೆಗಳೇನಾದರೂ ಇದ್ದು ತಿದ್ದುಪಡಿಗಳಿದ್ದರೆ ಆ ರೈತನ ಕಥೆ ಮುಗಿದೇ ಹೋಯಿತು. ಸುಮಾರು 2-3 ವರ್ಷಗಳಾದರೂ ಸರ್ವೆ ಇಲಾಖೆಯಿಂದ ಕಂದಾಯ ಇಲಾಖೆಗೆ ಅಲೆದು ಅಲೆದು ಸುಸ್ತಾಗಿ ಕೈಬಿಟ್ಟ ಪ್ರಕರಣಗಳಿಗೆ ಲೆಕ್ಕವಿಲ್ಲ. ಇನ್ನೂ ಬಡ ರೈತನ ಪಾಡಂತೂ ಕೇಳುವುದೇ ಬೇಡ. ಈ ರೈತರ ಜಮೀನು ಸರ್ವೆ ಮಾಡಿಸುವುದು ಕನಸಾಗಿಯೇ ಉಳಿದಿರುತ್ತದೆ.

ಭೂಗಳ್ಳರ ಮನೆ ಬಾಗಿಲಿಗೆ ಸೇವೆ

ಇಂದು ಅಧಿಕಾರಿಗಳು, ಉಳ್ಳವರು, ಜನಪ್ರತಿನಿಧಿಗಳು, ಅವರ ಹಿಂಬಾಲಕರು ಮತ್ತು ಭೂಗಳ್ಳರ ದಾಖಲೆಗಳು ಅಕ್ರಮವಾಗಿದ್ದರೂ ಸಹ ರಾತ್ರೊ ರಾತ್ರಿ ಸಿದ್ದವಾಗುತ್ತವೆ. ಅವರಿಗೆ ಯಾವುದೇ ಕಾನೂನು ನಿಯಮಗಳು ಅಡ್ಡಿಯಾಗುವುದಿಲ್ಲ. ಇದು ಇಂದಿನ ಕಂದಾಯ ಮತ್ತು ಸರ್ವೆ ಇಲಾಖೆಯ ಪರಿಸ್ಥಿತಿ. ಇನ್ನೂ ಮುಂದುವರೆದು ನೋಡುವುದಾದರೆ ಸರ್ಕಾರದಿಂದ ಬರುವ ಪರಿಹಾರಗಳು ಬಂದರೆ ಅದನ್ನು ರೈತನ ಖಾತೆಗೆ ಜಮಾ ಮಾಡಲು ಇಲಾಖೆಯಲ್ಲಿ ರೈತರ ಮಾಹಿತಿಯೇ ಇರುವುದಿಲ್ಲ. 1947 ಕ್ಕಿಂತ ಹಿಂದಿನಿಂದಲೂ ರೈತರಾಗಿದ್ದರೂ ಸಹ ರೈತರ ಮಾಹಿತಿ ಮಾತ್ರ ಕಂದಾಯ ಇಲಾಖೆಯಲ್ಲಿರುವುದಿಲ್ಲ. ಬೆಳೆ ದರ್ಶಕ್ ಆಪ್‌ನಲ್ಲಿ ಪ್ರತಿ ರೈತನ ವಿವರ, ಬೆಳೆ, ಸರ್ವೆ ನಂಬರ್ ಸಮೇತ Upload ಮಾಡುವುದು ಕಡ್ಡಾಯ. ಆದರೆ ಅಧಿಕಾರಿಗಳು ಸ್ಥಳಪರಿಶೀಲನೆ ಮಾಡಿ ನಿಖರ ದಾಖಲೆಳನ್ನು ನೀಡುವುದರ ಬದಲು ಮನಬಂದಂತೆ ಮಾಹಿತಿಗಳನ್ನು Upload ಮಾಡಿರುತ್ತಾರೆ.

ಸರ್ಕಾರ ಯಾವುದಾದರೂ ಯೋಜನೆ ಜಾರಿ ಮಾಡಿದರೆ ಆಗ ಇಲಾಖೆ ರೈತರಿಂದ ಅರ್ಜಿ ಕರೆಯುತ್ತದೆ. ಕೊರೊನಾ ಸಂದರ್ಭದಲ್ಲಿಯೂ ಹೂಬೆಳೆ, ತರಕಾರಿಗಳಿಗೆ ಪರಿಹಾರ ಘೋಷಣೆ ಮಾಡಿದಾಗ ನಮ್ಮ ಕಣ್ಣು ಮುಂದೆಯೇ ರೈತರು ಅರ್ಜಿ ಫಾರಂ ಹಿಡಿದು ಕಛೇರಿ ಮುಂದೆ ದಿನಗಟ್ಟಲೆ ನಿಂತು ಕಾದಿರುವುದನ್ನು ನೊಡಿದ್ದೇವೆ. ಇದಕ್ಕೆಲ್ಲಾ ಕಾರಣ ಕಂದಾಯ ಇಲಾಖೆ ಸಮರ್ಪಕ ಬೆಳೆ ಸಮೀಕ್ಷೆ ಮಾಡದೇ ಇರುವುದು. ಇದರಿಂದ ಕಟ್ಟಕಡೆಯ ರೈತನಿಗೆ ಪರಿಹಾರ ಸಿಗುವುದಿಲ್ಲ.

ಹಿಂದಿನ ಕಂದಾಯ ಇಲಾಖೆಗೂ ಈಗಿನ ಕಂದಾಯ ಇಲಾಖೆಗೂ ಬಹಳ ವ್ಯತ್ಯಾಸ ಕಂಡುಬರುತ್ತದೆ. ಹೇಗೆಂದರೆ ಹಿಂದಿನ ನಮ್ಮ ತಾತಂದಿರ ಕಾಲದಲ್ಲಿ ಅಧಿಕಾರಿಗಳು ಸ್ವಲ್ಪ ಮಟ್ಟಿಗಾದರೂ ರೈತರ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ಈಗಿನ ಕಂದಾಯ ಇಲಾಖೆ ಶ್ರೀಮಂತರು, ಉಳ್ಳವರ ಪರವಾಗಿ ಮಾತ್ರ ಕೆಲಸ ಮಾಡುತ್ತಿದೆ. ಬಡ ರೈತರು ಪ್ರತಿದಿನವೂ ಕಛೇರಿಗಳಿಗೆ ಅಲೆದು ಅಲೆದು ಸುಸ್ತಾದರೂ ಅವರ ಮಕ್ಕಳ ಕಾಲಕ್ಕೂ ಸಹ ಕೆಲಸವಾಗಿರುವುದಿಲ್ಲ.

ರಾಜ್ಯದ ಯಾವುದೇ ತಾಲ್ಲೂಕು ಕಛೇರಿ ಬಾಗಿಲಿಗೆ ಹೋಗಿ ನಿಂತರೆ ಸಾಕು, ಹಲವು ತರಹದ ಕತೆಗಳು ಕಣ್ಣಿಗೆ ರಾಚುತ್ತವೆ. ಹಕ್ಕು ಪತ್ರಕ್ಕಾಗಿ, ಸಾಗುವಳಿ ಚೀಟಗಾಗಿ, ಖಾತೆ ಬದಲಾವಣೆಗಾಗಿ ಅಂಗಲಾಚುತ್ತಿರುವವರು, ಅಲ್ಲದೆ ಪಹಣಿಯಲ್ಲಿ ಬೆಳೆ ನಮೂದಾತಿಯಿಲ್ಲದೆ ಒದ್ದಾಡುತ್ತಿರುವ ನೂರಾರು ರೈತರನ್ನು ನಾವು ನೋಡಬಹುದು.

ಹೌದು ಪಹಣಿಯಲ್ಲಿ ಬೆಳೆಯಿಲ್ಲ ಎಂಬುದು ರೈತನ ಪಾಲಿನ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಹರಸಹಾಸ ಪಡಬೇಕಾಗಿದೆ.
ಕಂದಾಯ ಇಲಾಖೆಯಂತೆ ಈಗಿನ ಸರ್ಕಾರಗಳು ಸಹ ದಪ್ಪ ಚರ್ಮದವು. ಕಂದಾಯ ಇಲಾಖೆಯ ತಪ್ಪುಗಳನ್ನು ಪತ್ರಿಕೆಗಳ ಮುಖಾಂತರ ಸರ್ಕಾರದ ಗಮನಕ್ಕೆ ತಂದರೆ ಸಂಬಂಧಪಟ್ಟ ಸರ್ಕಾರಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಅನ್ನುವ ರೀತಿಯಲ್ಲಿ ವರ್ತಿಸುತ್ತಿವೆ.

ಹಳ್ಳಿಯ ಗ್ರಾಮ ಸಹಾಯಕರಿಂದ ಹಿಡಿದು ಜಿಲ್ಲಾಧಿಕಾರಿಗಳನ್ನು ಕಾಣಲು ದಲ್ಲಾಳಿಗಳ ಮೂಲಕ ಹೋದರೆ ಮಾತ್ರ ಕಾಣಬಹುದು ಪರಿಸ್ಥಿತಿ ಇಂದು ಎಲ್ಲಾ ಜಿಲ್ಲೆಗಳಲ್ಲಿ ನಿರ್ಮಾಣವಾಗಿದೆ. ಪ್ರತಿ ಕೆಲಸಕ್ಕೂ ಮಧ್ಯವರ್ತಿಗಳ ಕಾಟವಿದೆ. ಕೆಲವು ಕಛೇರಿಗಳಂತೂ ದಲ್ಲಾಳಿಗಳೇ ಅಧಿಕಾರಿಗಳಾಗಿರುತ್ತಾರೆ. ಅಧಿಕಾರಿ ಸಹಿ ಮಾಡುವುದು ಬಿಟ್ಟರೆ ಉಳಿದ ಎಲ್ಲವನ್ನು ದಲ್ಲಾಳಿಗಳೇ ಮಾಡುತ್ತಿದ್ದಾರೆ. ದಲ್ಲಾಳಿಗಳು ಹೇಳಿದ ಹಾಗೆ ಅಧಿಕಾರಿಗಳು ಕೇಳುವ ಪರಿಸ್ಥಿತಿ ಇದೆ. ಇವರ ಕಮಿಷನ್ ಕೊಡಲಾಗದೆ ರೈತರು ಕಂಗಾಲಾಗಿದ್ದಾರೆ.

ಈಗ ಕಂದಾಯ ಇಲಾಖೆಯ ಈ ಸರ್ವಾಧಿಕಾರವನ್ನು ಕೊನೆಗಾಣಿಸಬೇಕಾಗಿದೆ. ಇದಕ್ಕಾಗಿ ರೈತರು ಒಗ್ಗಟ್ಟಾಗಬೇಕಿದೆ. ಇಲ್ಲದಿದ್ದಲ್ಲಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳುವುದು ಖಚಿತ. ಸರ್ಕಾರಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ದೊಡ್ಡ ಹೋರಾಟದ ಅನಿವಾರ್ಯತೆ ಇದೆ.


ಇದನ್ನೂ ಓದಿ: ಹೊಂಬಾಳೆ-1: ದೇಶದ ಅನ್ನದ ಬಟ್ಟಲನ್ನೇ ಮಾರಲು ಹೊರಟರೆ ಕೊನೆಗೆ ಏನು ಉಳಿದೀತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತನನ್ನ ಮಾತಿಗಷ್ಟೆ ದೇಶದ ಬೆನ್ನೆಲುಬು ಎನ್ನುತ್ತಾರೆ ಅದರೆ ಅವನ ಎಲುಬುಗಳನ್ನೆ ಮುರಿದು ಹಾಕುತ್ತಿದ್ದಾರೆ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...