Homeಮುಖಪುಟಹೊಂಬಾಳೆ - 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು - ನಳಿನಿ ಕೋಲಾರ

ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಹಕ್ಕು ಪತ್ರಕ್ಕಾಗಿ, ಸಾಗುವಳಿ ಚೀಟಗಾಗಿ, ಖಾತೆ ಬದಲಾವಣೆಗಾಗಿ ಅಂಗಲಾಚುತ್ತಿರುವವರು, ಅಲ್ಲದೆ ಪಹಣಿಯಲ್ಲಿ ಬೆಳೆ ನಮೂದಾತಿಯಿಲ್ಲದೆ ಒದ್ದಾಡುತ್ತಿರುವ ನೂರಾರು ರೈತರನ್ನು ನಾವು ನೋಡಬಹುದು.

- Advertisement -
- Advertisement -
  • ನಳಿನಿ ಕೋಲಾರ. ಯುವ ರೈತ ಹೋರಾಟಗಾರ್ತಿ.

ಅನಾದಿ ಕಾಲದಿಂದಲು ಇಂದಿನ ಕಾಲದವರೆಗೂ ಕಂದಾಯ ಇಲಾಖೆಯು ರೈತನ ಜುಟ್ಟನ್ನು ಬಿಗಿಯಾಗಿ ಹಿಡಿದು ಕುಳಿತಿದೆ ಎಂದರೆ ತಪ್ಪಾಗಲಾರದು. ಈ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಖಂಡಿಸಿ ಹತಾಶರಾಗಿ ಏನು ಮಾಡಲಾಗದ ಅಸಹಾಯಕರಾಗಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನಾವು ನೋಡಬಹುದು. ರಾಮನಗರದ ರೈತನೊಬ್ಬ ಕಂದಾಯ ಇಲಾಖೆಯಿಂದ ತನ್ನ ಕೆಲಸ ಮಾಡಿಸಿಕೊಳ್ಳಲು ಸಾಧ್ಯವಾಗದೆ ಬೇಸತ್ತು, 7-3-2013 ರಂದು ತಾಲ್ಲೂಕು ಕಛೇರಿಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಘಟನೆ ನಡೆದು 7 ವರ್ಷಗಳ ಕಳೆದರೂ ಕಂದಾಯ ಇಲಾಖೆಯ ಪರಿಸ್ಥಿತಿಯಲ್ಲಿ ಏನಾದರೂ ಬದಲಾವಣೆ ಬಂದಿದೆಯೇ? ಇಲ್ಲ ಇನ್ನು ಲೋಪಗಳು ಹೆಚ್ಚಾಗುತ್ತಲೇ ಇವೆ.

ಇದು ಕೇವಲ ಒಬ್ಬ ಗಂಗಯ್ಯನ ವಿಷಯ ಮಾತ್ರವಲ್ಲ. ಅವರ ಹಾಗೆ ಸುಮಾರಷ್ಟು ರೈತರು ಈ ವ್ಯವಸ್ಥೆಯನ್ನು ಸರಿಪಡಿಸಲು ಪ್ರಾಣತ್ಯಾಗ ಮಾಡಿದ್ದಾರೆ. ಆದರೂ ಈ ಸಮಾಜವನ್ನು ಸರಿಪಡಿಸಲು ಆಗಿಲ್ಲ. ಪ್ರಾಣತ್ಯಾಗಕ್ಕೆ ಬೆದರದ ಪಂಚೇಂದ್ರಿಯಗಳಿಲ್ಲದ ದಪ್ಪ ಚರ್ಮದ ಈ ವ್ಯವಸ್ಥೆ ಮತ್ತೆ ಯಾವ ತ್ಯಾಗದಿಂದ ಸರಿಪಡಿಸಲು ಸಾಧ್ಯ?

ಸರ್ಕಾರದ ಕಾನೂನು ಮತ್ತು ಕಂದಾಯ ಇಲಾಖೆಯ ನಡುವೆ ರೈತರು ದಿನದಿಂದ ದಿನಕ್ಕೆ ನಲುಗುತ್ತಿದ್ದಾರೆ. ಉದಾಹರಣೆಗೆ ಭೂರಹಿತರಿಗೆ ಭೂಮಿಸಿಗಲೆಂದು ಜಾರಿಮಾಡಿದ ನಮೂನೆ 53,57 ವರ್ಷಗಳೇ ಕಳೆದರೂ ಇದುವರೆಗೂ ಕಾರ್ಯಗತವಾಗಿಲ್ಲ. ಅರ್ಜಿ ಸಲ್ಲಿಸಿದ ನಂತರ ರೈತರು ಕಛೇರಿಯಿಂದ ಕಛೇರಿಗೆ ಅಲೆದು ಅಲೆದು ಅವನ ಚಪ್ಪಲಿ ಸವೆಯುತ್ತದೆಯೇ ಹೊರೆತು ಕೆಲಸ ಮಾತ್ರ ಆಗಿರುವುದಿಲ್ಲ. ಇದಕ್ಕಾಗಿ ಸಂಬಂದಪಟ್ಟ ಆಧಿಕಾರಿಗಳನ್ನು ಕೇಳಿದರೆ ನಮಗೆ ಯಾವುದೇ ಆದೇಶ ಬಂದಿಲ್ಲ ಅಥವಾ ಶಾಸಕರಿಂದ ಲೆಟರ್ ಬೇಕು ಎಂಬಂತೆ ಇನ್ನಿತರ ಸಬೂಬುಗಳನ್ನು ಹೇಳುತ್ತಾರೆ. ಈ ಹಿಂದೆ ನಮೂನೆ 50ರಲ್ಲಿ ಜಮೀನು ಮಂಜೂರಾಗಿರುವ ರೈತರು ಸಾಗುವಳಿ ಚೀಟಿ ಪಡೆಯಲು ಇನ್ನಿಲ್ಲದ ಕಷ್ಟ ಎದುರಿಸುತ್ತಿದ್ದಾರೆ.

ಕಂದಾಯ ಇಲಾಖೆ ಮತ್ತು ಸರ್ವೆ ಇಲಾಖೆ ಇವೆರಡೂ ರೈತರಿಗೆ ಎರಡು ಜೊಡೆತ್ತುಗಳಿದ್ದ ಹಾಗೆ. ಆದರೆ ಒಬ್ಬ ರೈತ ತನ್ನ ಜಮೀನನ್ನು ಸರ್ವೆ ಮಾಡಿಸಬೇಕಾದರೆ ಸರ್ಕಾರಿ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಿದ ನಂತರ ಕನಿಷ್ಠ 6 ತಿಂಗಳಿನಿಂದ ಒಂದು ವರ್ಷವಾದರೂ ಕಾಯಬೇಕಾಗುತ್ತದೆ. ಜೊತೆಗೆ ಸಣ್ಣ ಪುಟ್ಟ ತೊಂದರೆಗಳೇನಾದರೂ ಇದ್ದು ತಿದ್ದುಪಡಿಗಳಿದ್ದರೆ ಆ ರೈತನ ಕಥೆ ಮುಗಿದೇ ಹೋಯಿತು. ಸುಮಾರು 2-3 ವರ್ಷಗಳಾದರೂ ಸರ್ವೆ ಇಲಾಖೆಯಿಂದ ಕಂದಾಯ ಇಲಾಖೆಗೆ ಅಲೆದು ಅಲೆದು ಸುಸ್ತಾಗಿ ಕೈಬಿಟ್ಟ ಪ್ರಕರಣಗಳಿಗೆ ಲೆಕ್ಕವಿಲ್ಲ. ಇನ್ನೂ ಬಡ ರೈತನ ಪಾಡಂತೂ ಕೇಳುವುದೇ ಬೇಡ. ಈ ರೈತರ ಜಮೀನು ಸರ್ವೆ ಮಾಡಿಸುವುದು ಕನಸಾಗಿಯೇ ಉಳಿದಿರುತ್ತದೆ.

ಭೂಗಳ್ಳರ ಮನೆ ಬಾಗಿಲಿಗೆ ಸೇವೆ

ಇಂದು ಅಧಿಕಾರಿಗಳು, ಉಳ್ಳವರು, ಜನಪ್ರತಿನಿಧಿಗಳು, ಅವರ ಹಿಂಬಾಲಕರು ಮತ್ತು ಭೂಗಳ್ಳರ ದಾಖಲೆಗಳು ಅಕ್ರಮವಾಗಿದ್ದರೂ ಸಹ ರಾತ್ರೊ ರಾತ್ರಿ ಸಿದ್ದವಾಗುತ್ತವೆ. ಅವರಿಗೆ ಯಾವುದೇ ಕಾನೂನು ನಿಯಮಗಳು ಅಡ್ಡಿಯಾಗುವುದಿಲ್ಲ. ಇದು ಇಂದಿನ ಕಂದಾಯ ಮತ್ತು ಸರ್ವೆ ಇಲಾಖೆಯ ಪರಿಸ್ಥಿತಿ. ಇನ್ನೂ ಮುಂದುವರೆದು ನೋಡುವುದಾದರೆ ಸರ್ಕಾರದಿಂದ ಬರುವ ಪರಿಹಾರಗಳು ಬಂದರೆ ಅದನ್ನು ರೈತನ ಖಾತೆಗೆ ಜಮಾ ಮಾಡಲು ಇಲಾಖೆಯಲ್ಲಿ ರೈತರ ಮಾಹಿತಿಯೇ ಇರುವುದಿಲ್ಲ. 1947 ಕ್ಕಿಂತ ಹಿಂದಿನಿಂದಲೂ ರೈತರಾಗಿದ್ದರೂ ಸಹ ರೈತರ ಮಾಹಿತಿ ಮಾತ್ರ ಕಂದಾಯ ಇಲಾಖೆಯಲ್ಲಿರುವುದಿಲ್ಲ. ಬೆಳೆ ದರ್ಶಕ್ ಆಪ್‌ನಲ್ಲಿ ಪ್ರತಿ ರೈತನ ವಿವರ, ಬೆಳೆ, ಸರ್ವೆ ನಂಬರ್ ಸಮೇತ Upload ಮಾಡುವುದು ಕಡ್ಡಾಯ. ಆದರೆ ಅಧಿಕಾರಿಗಳು ಸ್ಥಳಪರಿಶೀಲನೆ ಮಾಡಿ ನಿಖರ ದಾಖಲೆಳನ್ನು ನೀಡುವುದರ ಬದಲು ಮನಬಂದಂತೆ ಮಾಹಿತಿಗಳನ್ನು Upload ಮಾಡಿರುತ್ತಾರೆ.

ಸರ್ಕಾರ ಯಾವುದಾದರೂ ಯೋಜನೆ ಜಾರಿ ಮಾಡಿದರೆ ಆಗ ಇಲಾಖೆ ರೈತರಿಂದ ಅರ್ಜಿ ಕರೆಯುತ್ತದೆ. ಕೊರೊನಾ ಸಂದರ್ಭದಲ್ಲಿಯೂ ಹೂಬೆಳೆ, ತರಕಾರಿಗಳಿಗೆ ಪರಿಹಾರ ಘೋಷಣೆ ಮಾಡಿದಾಗ ನಮ್ಮ ಕಣ್ಣು ಮುಂದೆಯೇ ರೈತರು ಅರ್ಜಿ ಫಾರಂ ಹಿಡಿದು ಕಛೇರಿ ಮುಂದೆ ದಿನಗಟ್ಟಲೆ ನಿಂತು ಕಾದಿರುವುದನ್ನು ನೊಡಿದ್ದೇವೆ. ಇದಕ್ಕೆಲ್ಲಾ ಕಾರಣ ಕಂದಾಯ ಇಲಾಖೆ ಸಮರ್ಪಕ ಬೆಳೆ ಸಮೀಕ್ಷೆ ಮಾಡದೇ ಇರುವುದು. ಇದರಿಂದ ಕಟ್ಟಕಡೆಯ ರೈತನಿಗೆ ಪರಿಹಾರ ಸಿಗುವುದಿಲ್ಲ.

ಹಿಂದಿನ ಕಂದಾಯ ಇಲಾಖೆಗೂ ಈಗಿನ ಕಂದಾಯ ಇಲಾಖೆಗೂ ಬಹಳ ವ್ಯತ್ಯಾಸ ಕಂಡುಬರುತ್ತದೆ. ಹೇಗೆಂದರೆ ಹಿಂದಿನ ನಮ್ಮ ತಾತಂದಿರ ಕಾಲದಲ್ಲಿ ಅಧಿಕಾರಿಗಳು ಸ್ವಲ್ಪ ಮಟ್ಟಿಗಾದರೂ ರೈತರ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ಈಗಿನ ಕಂದಾಯ ಇಲಾಖೆ ಶ್ರೀಮಂತರು, ಉಳ್ಳವರ ಪರವಾಗಿ ಮಾತ್ರ ಕೆಲಸ ಮಾಡುತ್ತಿದೆ. ಬಡ ರೈತರು ಪ್ರತಿದಿನವೂ ಕಛೇರಿಗಳಿಗೆ ಅಲೆದು ಅಲೆದು ಸುಸ್ತಾದರೂ ಅವರ ಮಕ್ಕಳ ಕಾಲಕ್ಕೂ ಸಹ ಕೆಲಸವಾಗಿರುವುದಿಲ್ಲ.

ರಾಜ್ಯದ ಯಾವುದೇ ತಾಲ್ಲೂಕು ಕಛೇರಿ ಬಾಗಿಲಿಗೆ ಹೋಗಿ ನಿಂತರೆ ಸಾಕು, ಹಲವು ತರಹದ ಕತೆಗಳು ಕಣ್ಣಿಗೆ ರಾಚುತ್ತವೆ. ಹಕ್ಕು ಪತ್ರಕ್ಕಾಗಿ, ಸಾಗುವಳಿ ಚೀಟಗಾಗಿ, ಖಾತೆ ಬದಲಾವಣೆಗಾಗಿ ಅಂಗಲಾಚುತ್ತಿರುವವರು, ಅಲ್ಲದೆ ಪಹಣಿಯಲ್ಲಿ ಬೆಳೆ ನಮೂದಾತಿಯಿಲ್ಲದೆ ಒದ್ದಾಡುತ್ತಿರುವ ನೂರಾರು ರೈತರನ್ನು ನಾವು ನೋಡಬಹುದು.

ಹೌದು ಪಹಣಿಯಲ್ಲಿ ಬೆಳೆಯಿಲ್ಲ ಎಂಬುದು ರೈತನ ಪಾಲಿನ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಹರಸಹಾಸ ಪಡಬೇಕಾಗಿದೆ.
ಕಂದಾಯ ಇಲಾಖೆಯಂತೆ ಈಗಿನ ಸರ್ಕಾರಗಳು ಸಹ ದಪ್ಪ ಚರ್ಮದವು. ಕಂದಾಯ ಇಲಾಖೆಯ ತಪ್ಪುಗಳನ್ನು ಪತ್ರಿಕೆಗಳ ಮುಖಾಂತರ ಸರ್ಕಾರದ ಗಮನಕ್ಕೆ ತಂದರೆ ಸಂಬಂಧಪಟ್ಟ ಸರ್ಕಾರಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಅನ್ನುವ ರೀತಿಯಲ್ಲಿ ವರ್ತಿಸುತ್ತಿವೆ.

ಹಳ್ಳಿಯ ಗ್ರಾಮ ಸಹಾಯಕರಿಂದ ಹಿಡಿದು ಜಿಲ್ಲಾಧಿಕಾರಿಗಳನ್ನು ಕಾಣಲು ದಲ್ಲಾಳಿಗಳ ಮೂಲಕ ಹೋದರೆ ಮಾತ್ರ ಕಾಣಬಹುದು ಪರಿಸ್ಥಿತಿ ಇಂದು ಎಲ್ಲಾ ಜಿಲ್ಲೆಗಳಲ್ಲಿ ನಿರ್ಮಾಣವಾಗಿದೆ. ಪ್ರತಿ ಕೆಲಸಕ್ಕೂ ಮಧ್ಯವರ್ತಿಗಳ ಕಾಟವಿದೆ. ಕೆಲವು ಕಛೇರಿಗಳಂತೂ ದಲ್ಲಾಳಿಗಳೇ ಅಧಿಕಾರಿಗಳಾಗಿರುತ್ತಾರೆ. ಅಧಿಕಾರಿ ಸಹಿ ಮಾಡುವುದು ಬಿಟ್ಟರೆ ಉಳಿದ ಎಲ್ಲವನ್ನು ದಲ್ಲಾಳಿಗಳೇ ಮಾಡುತ್ತಿದ್ದಾರೆ. ದಲ್ಲಾಳಿಗಳು ಹೇಳಿದ ಹಾಗೆ ಅಧಿಕಾರಿಗಳು ಕೇಳುವ ಪರಿಸ್ಥಿತಿ ಇದೆ. ಇವರ ಕಮಿಷನ್ ಕೊಡಲಾಗದೆ ರೈತರು ಕಂಗಾಲಾಗಿದ್ದಾರೆ.

ಈಗ ಕಂದಾಯ ಇಲಾಖೆಯ ಈ ಸರ್ವಾಧಿಕಾರವನ್ನು ಕೊನೆಗಾಣಿಸಬೇಕಾಗಿದೆ. ಇದಕ್ಕಾಗಿ ರೈತರು ಒಗ್ಗಟ್ಟಾಗಬೇಕಿದೆ. ಇಲ್ಲದಿದ್ದಲ್ಲಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳುವುದು ಖಚಿತ. ಸರ್ಕಾರಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ದೊಡ್ಡ ಹೋರಾಟದ ಅನಿವಾರ್ಯತೆ ಇದೆ.


ಇದನ್ನೂ ಓದಿ: ಹೊಂಬಾಳೆ-1: ದೇಶದ ಅನ್ನದ ಬಟ್ಟಲನ್ನೇ ಮಾರಲು ಹೊರಟರೆ ಕೊನೆಗೆ ಏನು ಉಳಿದೀತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತನನ್ನ ಮಾತಿಗಷ್ಟೆ ದೇಶದ ಬೆನ್ನೆಲುಬು ಎನ್ನುತ್ತಾರೆ ಅದರೆ ಅವನ ಎಲುಬುಗಳನ್ನೆ ಮುರಿದು ಹಾಕುತ್ತಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...