Homeಮುಖಪುಟಹೊಂಬಾಳೆ - 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು - ನಳಿನಿ ಕೋಲಾರ

ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಹಕ್ಕು ಪತ್ರಕ್ಕಾಗಿ, ಸಾಗುವಳಿ ಚೀಟಗಾಗಿ, ಖಾತೆ ಬದಲಾವಣೆಗಾಗಿ ಅಂಗಲಾಚುತ್ತಿರುವವರು, ಅಲ್ಲದೆ ಪಹಣಿಯಲ್ಲಿ ಬೆಳೆ ನಮೂದಾತಿಯಿಲ್ಲದೆ ಒದ್ದಾಡುತ್ತಿರುವ ನೂರಾರು ರೈತರನ್ನು ನಾವು ನೋಡಬಹುದು.

- Advertisement -
- Advertisement -
  • ನಳಿನಿ ಕೋಲಾರ. ಯುವ ರೈತ ಹೋರಾಟಗಾರ್ತಿ.

ಅನಾದಿ ಕಾಲದಿಂದಲು ಇಂದಿನ ಕಾಲದವರೆಗೂ ಕಂದಾಯ ಇಲಾಖೆಯು ರೈತನ ಜುಟ್ಟನ್ನು ಬಿಗಿಯಾಗಿ ಹಿಡಿದು ಕುಳಿತಿದೆ ಎಂದರೆ ತಪ್ಪಾಗಲಾರದು. ಈ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಖಂಡಿಸಿ ಹತಾಶರಾಗಿ ಏನು ಮಾಡಲಾಗದ ಅಸಹಾಯಕರಾಗಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನಾವು ನೋಡಬಹುದು. ರಾಮನಗರದ ರೈತನೊಬ್ಬ ಕಂದಾಯ ಇಲಾಖೆಯಿಂದ ತನ್ನ ಕೆಲಸ ಮಾಡಿಸಿಕೊಳ್ಳಲು ಸಾಧ್ಯವಾಗದೆ ಬೇಸತ್ತು, 7-3-2013 ರಂದು ತಾಲ್ಲೂಕು ಕಛೇರಿಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಘಟನೆ ನಡೆದು 7 ವರ್ಷಗಳ ಕಳೆದರೂ ಕಂದಾಯ ಇಲಾಖೆಯ ಪರಿಸ್ಥಿತಿಯಲ್ಲಿ ಏನಾದರೂ ಬದಲಾವಣೆ ಬಂದಿದೆಯೇ? ಇಲ್ಲ ಇನ್ನು ಲೋಪಗಳು ಹೆಚ್ಚಾಗುತ್ತಲೇ ಇವೆ.

ಇದು ಕೇವಲ ಒಬ್ಬ ಗಂಗಯ್ಯನ ವಿಷಯ ಮಾತ್ರವಲ್ಲ. ಅವರ ಹಾಗೆ ಸುಮಾರಷ್ಟು ರೈತರು ಈ ವ್ಯವಸ್ಥೆಯನ್ನು ಸರಿಪಡಿಸಲು ಪ್ರಾಣತ್ಯಾಗ ಮಾಡಿದ್ದಾರೆ. ಆದರೂ ಈ ಸಮಾಜವನ್ನು ಸರಿಪಡಿಸಲು ಆಗಿಲ್ಲ. ಪ್ರಾಣತ್ಯಾಗಕ್ಕೆ ಬೆದರದ ಪಂಚೇಂದ್ರಿಯಗಳಿಲ್ಲದ ದಪ್ಪ ಚರ್ಮದ ಈ ವ್ಯವಸ್ಥೆ ಮತ್ತೆ ಯಾವ ತ್ಯಾಗದಿಂದ ಸರಿಪಡಿಸಲು ಸಾಧ್ಯ?

ಸರ್ಕಾರದ ಕಾನೂನು ಮತ್ತು ಕಂದಾಯ ಇಲಾಖೆಯ ನಡುವೆ ರೈತರು ದಿನದಿಂದ ದಿನಕ್ಕೆ ನಲುಗುತ್ತಿದ್ದಾರೆ. ಉದಾಹರಣೆಗೆ ಭೂರಹಿತರಿಗೆ ಭೂಮಿಸಿಗಲೆಂದು ಜಾರಿಮಾಡಿದ ನಮೂನೆ 53,57 ವರ್ಷಗಳೇ ಕಳೆದರೂ ಇದುವರೆಗೂ ಕಾರ್ಯಗತವಾಗಿಲ್ಲ. ಅರ್ಜಿ ಸಲ್ಲಿಸಿದ ನಂತರ ರೈತರು ಕಛೇರಿಯಿಂದ ಕಛೇರಿಗೆ ಅಲೆದು ಅಲೆದು ಅವನ ಚಪ್ಪಲಿ ಸವೆಯುತ್ತದೆಯೇ ಹೊರೆತು ಕೆಲಸ ಮಾತ್ರ ಆಗಿರುವುದಿಲ್ಲ. ಇದಕ್ಕಾಗಿ ಸಂಬಂದಪಟ್ಟ ಆಧಿಕಾರಿಗಳನ್ನು ಕೇಳಿದರೆ ನಮಗೆ ಯಾವುದೇ ಆದೇಶ ಬಂದಿಲ್ಲ ಅಥವಾ ಶಾಸಕರಿಂದ ಲೆಟರ್ ಬೇಕು ಎಂಬಂತೆ ಇನ್ನಿತರ ಸಬೂಬುಗಳನ್ನು ಹೇಳುತ್ತಾರೆ. ಈ ಹಿಂದೆ ನಮೂನೆ 50ರಲ್ಲಿ ಜಮೀನು ಮಂಜೂರಾಗಿರುವ ರೈತರು ಸಾಗುವಳಿ ಚೀಟಿ ಪಡೆಯಲು ಇನ್ನಿಲ್ಲದ ಕಷ್ಟ ಎದುರಿಸುತ್ತಿದ್ದಾರೆ.

ಕಂದಾಯ ಇಲಾಖೆ ಮತ್ತು ಸರ್ವೆ ಇಲಾಖೆ ಇವೆರಡೂ ರೈತರಿಗೆ ಎರಡು ಜೊಡೆತ್ತುಗಳಿದ್ದ ಹಾಗೆ. ಆದರೆ ಒಬ್ಬ ರೈತ ತನ್ನ ಜಮೀನನ್ನು ಸರ್ವೆ ಮಾಡಿಸಬೇಕಾದರೆ ಸರ್ಕಾರಿ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಿದ ನಂತರ ಕನಿಷ್ಠ 6 ತಿಂಗಳಿನಿಂದ ಒಂದು ವರ್ಷವಾದರೂ ಕಾಯಬೇಕಾಗುತ್ತದೆ. ಜೊತೆಗೆ ಸಣ್ಣ ಪುಟ್ಟ ತೊಂದರೆಗಳೇನಾದರೂ ಇದ್ದು ತಿದ್ದುಪಡಿಗಳಿದ್ದರೆ ಆ ರೈತನ ಕಥೆ ಮುಗಿದೇ ಹೋಯಿತು. ಸುಮಾರು 2-3 ವರ್ಷಗಳಾದರೂ ಸರ್ವೆ ಇಲಾಖೆಯಿಂದ ಕಂದಾಯ ಇಲಾಖೆಗೆ ಅಲೆದು ಅಲೆದು ಸುಸ್ತಾಗಿ ಕೈಬಿಟ್ಟ ಪ್ರಕರಣಗಳಿಗೆ ಲೆಕ್ಕವಿಲ್ಲ. ಇನ್ನೂ ಬಡ ರೈತನ ಪಾಡಂತೂ ಕೇಳುವುದೇ ಬೇಡ. ಈ ರೈತರ ಜಮೀನು ಸರ್ವೆ ಮಾಡಿಸುವುದು ಕನಸಾಗಿಯೇ ಉಳಿದಿರುತ್ತದೆ.

ಭೂಗಳ್ಳರ ಮನೆ ಬಾಗಿಲಿಗೆ ಸೇವೆ

ಇಂದು ಅಧಿಕಾರಿಗಳು, ಉಳ್ಳವರು, ಜನಪ್ರತಿನಿಧಿಗಳು, ಅವರ ಹಿಂಬಾಲಕರು ಮತ್ತು ಭೂಗಳ್ಳರ ದಾಖಲೆಗಳು ಅಕ್ರಮವಾಗಿದ್ದರೂ ಸಹ ರಾತ್ರೊ ರಾತ್ರಿ ಸಿದ್ದವಾಗುತ್ತವೆ. ಅವರಿಗೆ ಯಾವುದೇ ಕಾನೂನು ನಿಯಮಗಳು ಅಡ್ಡಿಯಾಗುವುದಿಲ್ಲ. ಇದು ಇಂದಿನ ಕಂದಾಯ ಮತ್ತು ಸರ್ವೆ ಇಲಾಖೆಯ ಪರಿಸ್ಥಿತಿ. ಇನ್ನೂ ಮುಂದುವರೆದು ನೋಡುವುದಾದರೆ ಸರ್ಕಾರದಿಂದ ಬರುವ ಪರಿಹಾರಗಳು ಬಂದರೆ ಅದನ್ನು ರೈತನ ಖಾತೆಗೆ ಜಮಾ ಮಾಡಲು ಇಲಾಖೆಯಲ್ಲಿ ರೈತರ ಮಾಹಿತಿಯೇ ಇರುವುದಿಲ್ಲ. 1947 ಕ್ಕಿಂತ ಹಿಂದಿನಿಂದಲೂ ರೈತರಾಗಿದ್ದರೂ ಸಹ ರೈತರ ಮಾಹಿತಿ ಮಾತ್ರ ಕಂದಾಯ ಇಲಾಖೆಯಲ್ಲಿರುವುದಿಲ್ಲ. ಬೆಳೆ ದರ್ಶಕ್ ಆಪ್‌ನಲ್ಲಿ ಪ್ರತಿ ರೈತನ ವಿವರ, ಬೆಳೆ, ಸರ್ವೆ ನಂಬರ್ ಸಮೇತ Upload ಮಾಡುವುದು ಕಡ್ಡಾಯ. ಆದರೆ ಅಧಿಕಾರಿಗಳು ಸ್ಥಳಪರಿಶೀಲನೆ ಮಾಡಿ ನಿಖರ ದಾಖಲೆಳನ್ನು ನೀಡುವುದರ ಬದಲು ಮನಬಂದಂತೆ ಮಾಹಿತಿಗಳನ್ನು Upload ಮಾಡಿರುತ್ತಾರೆ.

ಸರ್ಕಾರ ಯಾವುದಾದರೂ ಯೋಜನೆ ಜಾರಿ ಮಾಡಿದರೆ ಆಗ ಇಲಾಖೆ ರೈತರಿಂದ ಅರ್ಜಿ ಕರೆಯುತ್ತದೆ. ಕೊರೊನಾ ಸಂದರ್ಭದಲ್ಲಿಯೂ ಹೂಬೆಳೆ, ತರಕಾರಿಗಳಿಗೆ ಪರಿಹಾರ ಘೋಷಣೆ ಮಾಡಿದಾಗ ನಮ್ಮ ಕಣ್ಣು ಮುಂದೆಯೇ ರೈತರು ಅರ್ಜಿ ಫಾರಂ ಹಿಡಿದು ಕಛೇರಿ ಮುಂದೆ ದಿನಗಟ್ಟಲೆ ನಿಂತು ಕಾದಿರುವುದನ್ನು ನೊಡಿದ್ದೇವೆ. ಇದಕ್ಕೆಲ್ಲಾ ಕಾರಣ ಕಂದಾಯ ಇಲಾಖೆ ಸಮರ್ಪಕ ಬೆಳೆ ಸಮೀಕ್ಷೆ ಮಾಡದೇ ಇರುವುದು. ಇದರಿಂದ ಕಟ್ಟಕಡೆಯ ರೈತನಿಗೆ ಪರಿಹಾರ ಸಿಗುವುದಿಲ್ಲ.

ಹಿಂದಿನ ಕಂದಾಯ ಇಲಾಖೆಗೂ ಈಗಿನ ಕಂದಾಯ ಇಲಾಖೆಗೂ ಬಹಳ ವ್ಯತ್ಯಾಸ ಕಂಡುಬರುತ್ತದೆ. ಹೇಗೆಂದರೆ ಹಿಂದಿನ ನಮ್ಮ ತಾತಂದಿರ ಕಾಲದಲ್ಲಿ ಅಧಿಕಾರಿಗಳು ಸ್ವಲ್ಪ ಮಟ್ಟಿಗಾದರೂ ರೈತರ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ಈಗಿನ ಕಂದಾಯ ಇಲಾಖೆ ಶ್ರೀಮಂತರು, ಉಳ್ಳವರ ಪರವಾಗಿ ಮಾತ್ರ ಕೆಲಸ ಮಾಡುತ್ತಿದೆ. ಬಡ ರೈತರು ಪ್ರತಿದಿನವೂ ಕಛೇರಿಗಳಿಗೆ ಅಲೆದು ಅಲೆದು ಸುಸ್ತಾದರೂ ಅವರ ಮಕ್ಕಳ ಕಾಲಕ್ಕೂ ಸಹ ಕೆಲಸವಾಗಿರುವುದಿಲ್ಲ.

ರಾಜ್ಯದ ಯಾವುದೇ ತಾಲ್ಲೂಕು ಕಛೇರಿ ಬಾಗಿಲಿಗೆ ಹೋಗಿ ನಿಂತರೆ ಸಾಕು, ಹಲವು ತರಹದ ಕತೆಗಳು ಕಣ್ಣಿಗೆ ರಾಚುತ್ತವೆ. ಹಕ್ಕು ಪತ್ರಕ್ಕಾಗಿ, ಸಾಗುವಳಿ ಚೀಟಗಾಗಿ, ಖಾತೆ ಬದಲಾವಣೆಗಾಗಿ ಅಂಗಲಾಚುತ್ತಿರುವವರು, ಅಲ್ಲದೆ ಪಹಣಿಯಲ್ಲಿ ಬೆಳೆ ನಮೂದಾತಿಯಿಲ್ಲದೆ ಒದ್ದಾಡುತ್ತಿರುವ ನೂರಾರು ರೈತರನ್ನು ನಾವು ನೋಡಬಹುದು.

ಹೌದು ಪಹಣಿಯಲ್ಲಿ ಬೆಳೆಯಿಲ್ಲ ಎಂಬುದು ರೈತನ ಪಾಲಿನ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಹರಸಹಾಸ ಪಡಬೇಕಾಗಿದೆ.
ಕಂದಾಯ ಇಲಾಖೆಯಂತೆ ಈಗಿನ ಸರ್ಕಾರಗಳು ಸಹ ದಪ್ಪ ಚರ್ಮದವು. ಕಂದಾಯ ಇಲಾಖೆಯ ತಪ್ಪುಗಳನ್ನು ಪತ್ರಿಕೆಗಳ ಮುಖಾಂತರ ಸರ್ಕಾರದ ಗಮನಕ್ಕೆ ತಂದರೆ ಸಂಬಂಧಪಟ್ಟ ಸರ್ಕಾರಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಅನ್ನುವ ರೀತಿಯಲ್ಲಿ ವರ್ತಿಸುತ್ತಿವೆ.

ಹಳ್ಳಿಯ ಗ್ರಾಮ ಸಹಾಯಕರಿಂದ ಹಿಡಿದು ಜಿಲ್ಲಾಧಿಕಾರಿಗಳನ್ನು ಕಾಣಲು ದಲ್ಲಾಳಿಗಳ ಮೂಲಕ ಹೋದರೆ ಮಾತ್ರ ಕಾಣಬಹುದು ಪರಿಸ್ಥಿತಿ ಇಂದು ಎಲ್ಲಾ ಜಿಲ್ಲೆಗಳಲ್ಲಿ ನಿರ್ಮಾಣವಾಗಿದೆ. ಪ್ರತಿ ಕೆಲಸಕ್ಕೂ ಮಧ್ಯವರ್ತಿಗಳ ಕಾಟವಿದೆ. ಕೆಲವು ಕಛೇರಿಗಳಂತೂ ದಲ್ಲಾಳಿಗಳೇ ಅಧಿಕಾರಿಗಳಾಗಿರುತ್ತಾರೆ. ಅಧಿಕಾರಿ ಸಹಿ ಮಾಡುವುದು ಬಿಟ್ಟರೆ ಉಳಿದ ಎಲ್ಲವನ್ನು ದಲ್ಲಾಳಿಗಳೇ ಮಾಡುತ್ತಿದ್ದಾರೆ. ದಲ್ಲಾಳಿಗಳು ಹೇಳಿದ ಹಾಗೆ ಅಧಿಕಾರಿಗಳು ಕೇಳುವ ಪರಿಸ್ಥಿತಿ ಇದೆ. ಇವರ ಕಮಿಷನ್ ಕೊಡಲಾಗದೆ ರೈತರು ಕಂಗಾಲಾಗಿದ್ದಾರೆ.

ಈಗ ಕಂದಾಯ ಇಲಾಖೆಯ ಈ ಸರ್ವಾಧಿಕಾರವನ್ನು ಕೊನೆಗಾಣಿಸಬೇಕಾಗಿದೆ. ಇದಕ್ಕಾಗಿ ರೈತರು ಒಗ್ಗಟ್ಟಾಗಬೇಕಿದೆ. ಇಲ್ಲದಿದ್ದಲ್ಲಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳುವುದು ಖಚಿತ. ಸರ್ಕಾರಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ದೊಡ್ಡ ಹೋರಾಟದ ಅನಿವಾರ್ಯತೆ ಇದೆ.


ಇದನ್ನೂ ಓದಿ: ಹೊಂಬಾಳೆ-1: ದೇಶದ ಅನ್ನದ ಬಟ್ಟಲನ್ನೇ ಮಾರಲು ಹೊರಟರೆ ಕೊನೆಗೆ ಏನು ಉಳಿದೀತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತನನ್ನ ಮಾತಿಗಷ್ಟೆ ದೇಶದ ಬೆನ್ನೆಲುಬು ಎನ್ನುತ್ತಾರೆ ಅದರೆ ಅವನ ಎಲುಬುಗಳನ್ನೆ ಮುರಿದು ಹಾಕುತ್ತಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...