Homeಮುಖಪುಟಹೊಂಬಾಳೆ - 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು - ನಳಿನಿ ಕೋಲಾರ

ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಹಕ್ಕು ಪತ್ರಕ್ಕಾಗಿ, ಸಾಗುವಳಿ ಚೀಟಗಾಗಿ, ಖಾತೆ ಬದಲಾವಣೆಗಾಗಿ ಅಂಗಲಾಚುತ್ತಿರುವವರು, ಅಲ್ಲದೆ ಪಹಣಿಯಲ್ಲಿ ಬೆಳೆ ನಮೂದಾತಿಯಿಲ್ಲದೆ ಒದ್ದಾಡುತ್ತಿರುವ ನೂರಾರು ರೈತರನ್ನು ನಾವು ನೋಡಬಹುದು.

- Advertisement -
- Advertisement -
  • ನಳಿನಿ ಕೋಲಾರ. ಯುವ ರೈತ ಹೋರಾಟಗಾರ್ತಿ.

ಅನಾದಿ ಕಾಲದಿಂದಲು ಇಂದಿನ ಕಾಲದವರೆಗೂ ಕಂದಾಯ ಇಲಾಖೆಯು ರೈತನ ಜುಟ್ಟನ್ನು ಬಿಗಿಯಾಗಿ ಹಿಡಿದು ಕುಳಿತಿದೆ ಎಂದರೆ ತಪ್ಪಾಗಲಾರದು. ಈ ವ್ಯವಸ್ಥೆಯಲ್ಲಿರುವ ಲೋಪಗಳನ್ನು ಖಂಡಿಸಿ ಹತಾಶರಾಗಿ ಏನು ಮಾಡಲಾಗದ ಅಸಹಾಯಕರಾಗಿ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನಾವು ನೋಡಬಹುದು. ರಾಮನಗರದ ರೈತನೊಬ್ಬ ಕಂದಾಯ ಇಲಾಖೆಯಿಂದ ತನ್ನ ಕೆಲಸ ಮಾಡಿಸಿಕೊಳ್ಳಲು ಸಾಧ್ಯವಾಗದೆ ಬೇಸತ್ತು, 7-3-2013 ರಂದು ತಾಲ್ಲೂಕು ಕಛೇರಿಯ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಈ ಘಟನೆ ನಡೆದು 7 ವರ್ಷಗಳ ಕಳೆದರೂ ಕಂದಾಯ ಇಲಾಖೆಯ ಪರಿಸ್ಥಿತಿಯಲ್ಲಿ ಏನಾದರೂ ಬದಲಾವಣೆ ಬಂದಿದೆಯೇ? ಇಲ್ಲ ಇನ್ನು ಲೋಪಗಳು ಹೆಚ್ಚಾಗುತ್ತಲೇ ಇವೆ.

ಇದು ಕೇವಲ ಒಬ್ಬ ಗಂಗಯ್ಯನ ವಿಷಯ ಮಾತ್ರವಲ್ಲ. ಅವರ ಹಾಗೆ ಸುಮಾರಷ್ಟು ರೈತರು ಈ ವ್ಯವಸ್ಥೆಯನ್ನು ಸರಿಪಡಿಸಲು ಪ್ರಾಣತ್ಯಾಗ ಮಾಡಿದ್ದಾರೆ. ಆದರೂ ಈ ಸಮಾಜವನ್ನು ಸರಿಪಡಿಸಲು ಆಗಿಲ್ಲ. ಪ್ರಾಣತ್ಯಾಗಕ್ಕೆ ಬೆದರದ ಪಂಚೇಂದ್ರಿಯಗಳಿಲ್ಲದ ದಪ್ಪ ಚರ್ಮದ ಈ ವ್ಯವಸ್ಥೆ ಮತ್ತೆ ಯಾವ ತ್ಯಾಗದಿಂದ ಸರಿಪಡಿಸಲು ಸಾಧ್ಯ?

ಸರ್ಕಾರದ ಕಾನೂನು ಮತ್ತು ಕಂದಾಯ ಇಲಾಖೆಯ ನಡುವೆ ರೈತರು ದಿನದಿಂದ ದಿನಕ್ಕೆ ನಲುಗುತ್ತಿದ್ದಾರೆ. ಉದಾಹರಣೆಗೆ ಭೂರಹಿತರಿಗೆ ಭೂಮಿಸಿಗಲೆಂದು ಜಾರಿಮಾಡಿದ ನಮೂನೆ 53,57 ವರ್ಷಗಳೇ ಕಳೆದರೂ ಇದುವರೆಗೂ ಕಾರ್ಯಗತವಾಗಿಲ್ಲ. ಅರ್ಜಿ ಸಲ್ಲಿಸಿದ ನಂತರ ರೈತರು ಕಛೇರಿಯಿಂದ ಕಛೇರಿಗೆ ಅಲೆದು ಅಲೆದು ಅವನ ಚಪ್ಪಲಿ ಸವೆಯುತ್ತದೆಯೇ ಹೊರೆತು ಕೆಲಸ ಮಾತ್ರ ಆಗಿರುವುದಿಲ್ಲ. ಇದಕ್ಕಾಗಿ ಸಂಬಂದಪಟ್ಟ ಆಧಿಕಾರಿಗಳನ್ನು ಕೇಳಿದರೆ ನಮಗೆ ಯಾವುದೇ ಆದೇಶ ಬಂದಿಲ್ಲ ಅಥವಾ ಶಾಸಕರಿಂದ ಲೆಟರ್ ಬೇಕು ಎಂಬಂತೆ ಇನ್ನಿತರ ಸಬೂಬುಗಳನ್ನು ಹೇಳುತ್ತಾರೆ. ಈ ಹಿಂದೆ ನಮೂನೆ 50ರಲ್ಲಿ ಜಮೀನು ಮಂಜೂರಾಗಿರುವ ರೈತರು ಸಾಗುವಳಿ ಚೀಟಿ ಪಡೆಯಲು ಇನ್ನಿಲ್ಲದ ಕಷ್ಟ ಎದುರಿಸುತ್ತಿದ್ದಾರೆ.

ಕಂದಾಯ ಇಲಾಖೆ ಮತ್ತು ಸರ್ವೆ ಇಲಾಖೆ ಇವೆರಡೂ ರೈತರಿಗೆ ಎರಡು ಜೊಡೆತ್ತುಗಳಿದ್ದ ಹಾಗೆ. ಆದರೆ ಒಬ್ಬ ರೈತ ತನ್ನ ಜಮೀನನ್ನು ಸರ್ವೆ ಮಾಡಿಸಬೇಕಾದರೆ ಸರ್ಕಾರಿ ಶುಲ್ಕ ಪಾವತಿಸಿ, ಅರ್ಜಿ ಸಲ್ಲಿಸಿದ ನಂತರ ಕನಿಷ್ಠ 6 ತಿಂಗಳಿನಿಂದ ಒಂದು ವರ್ಷವಾದರೂ ಕಾಯಬೇಕಾಗುತ್ತದೆ. ಜೊತೆಗೆ ಸಣ್ಣ ಪುಟ್ಟ ತೊಂದರೆಗಳೇನಾದರೂ ಇದ್ದು ತಿದ್ದುಪಡಿಗಳಿದ್ದರೆ ಆ ರೈತನ ಕಥೆ ಮುಗಿದೇ ಹೋಯಿತು. ಸುಮಾರು 2-3 ವರ್ಷಗಳಾದರೂ ಸರ್ವೆ ಇಲಾಖೆಯಿಂದ ಕಂದಾಯ ಇಲಾಖೆಗೆ ಅಲೆದು ಅಲೆದು ಸುಸ್ತಾಗಿ ಕೈಬಿಟ್ಟ ಪ್ರಕರಣಗಳಿಗೆ ಲೆಕ್ಕವಿಲ್ಲ. ಇನ್ನೂ ಬಡ ರೈತನ ಪಾಡಂತೂ ಕೇಳುವುದೇ ಬೇಡ. ಈ ರೈತರ ಜಮೀನು ಸರ್ವೆ ಮಾಡಿಸುವುದು ಕನಸಾಗಿಯೇ ಉಳಿದಿರುತ್ತದೆ.

ಭೂಗಳ್ಳರ ಮನೆ ಬಾಗಿಲಿಗೆ ಸೇವೆ

ಇಂದು ಅಧಿಕಾರಿಗಳು, ಉಳ್ಳವರು, ಜನಪ್ರತಿನಿಧಿಗಳು, ಅವರ ಹಿಂಬಾಲಕರು ಮತ್ತು ಭೂಗಳ್ಳರ ದಾಖಲೆಗಳು ಅಕ್ರಮವಾಗಿದ್ದರೂ ಸಹ ರಾತ್ರೊ ರಾತ್ರಿ ಸಿದ್ದವಾಗುತ್ತವೆ. ಅವರಿಗೆ ಯಾವುದೇ ಕಾನೂನು ನಿಯಮಗಳು ಅಡ್ಡಿಯಾಗುವುದಿಲ್ಲ. ಇದು ಇಂದಿನ ಕಂದಾಯ ಮತ್ತು ಸರ್ವೆ ಇಲಾಖೆಯ ಪರಿಸ್ಥಿತಿ. ಇನ್ನೂ ಮುಂದುವರೆದು ನೋಡುವುದಾದರೆ ಸರ್ಕಾರದಿಂದ ಬರುವ ಪರಿಹಾರಗಳು ಬಂದರೆ ಅದನ್ನು ರೈತನ ಖಾತೆಗೆ ಜಮಾ ಮಾಡಲು ಇಲಾಖೆಯಲ್ಲಿ ರೈತರ ಮಾಹಿತಿಯೇ ಇರುವುದಿಲ್ಲ. 1947 ಕ್ಕಿಂತ ಹಿಂದಿನಿಂದಲೂ ರೈತರಾಗಿದ್ದರೂ ಸಹ ರೈತರ ಮಾಹಿತಿ ಮಾತ್ರ ಕಂದಾಯ ಇಲಾಖೆಯಲ್ಲಿರುವುದಿಲ್ಲ. ಬೆಳೆ ದರ್ಶಕ್ ಆಪ್‌ನಲ್ಲಿ ಪ್ರತಿ ರೈತನ ವಿವರ, ಬೆಳೆ, ಸರ್ವೆ ನಂಬರ್ ಸಮೇತ Upload ಮಾಡುವುದು ಕಡ್ಡಾಯ. ಆದರೆ ಅಧಿಕಾರಿಗಳು ಸ್ಥಳಪರಿಶೀಲನೆ ಮಾಡಿ ನಿಖರ ದಾಖಲೆಳನ್ನು ನೀಡುವುದರ ಬದಲು ಮನಬಂದಂತೆ ಮಾಹಿತಿಗಳನ್ನು Upload ಮಾಡಿರುತ್ತಾರೆ.

ಸರ್ಕಾರ ಯಾವುದಾದರೂ ಯೋಜನೆ ಜಾರಿ ಮಾಡಿದರೆ ಆಗ ಇಲಾಖೆ ರೈತರಿಂದ ಅರ್ಜಿ ಕರೆಯುತ್ತದೆ. ಕೊರೊನಾ ಸಂದರ್ಭದಲ್ಲಿಯೂ ಹೂಬೆಳೆ, ತರಕಾರಿಗಳಿಗೆ ಪರಿಹಾರ ಘೋಷಣೆ ಮಾಡಿದಾಗ ನಮ್ಮ ಕಣ್ಣು ಮುಂದೆಯೇ ರೈತರು ಅರ್ಜಿ ಫಾರಂ ಹಿಡಿದು ಕಛೇರಿ ಮುಂದೆ ದಿನಗಟ್ಟಲೆ ನಿಂತು ಕಾದಿರುವುದನ್ನು ನೊಡಿದ್ದೇವೆ. ಇದಕ್ಕೆಲ್ಲಾ ಕಾರಣ ಕಂದಾಯ ಇಲಾಖೆ ಸಮರ್ಪಕ ಬೆಳೆ ಸಮೀಕ್ಷೆ ಮಾಡದೇ ಇರುವುದು. ಇದರಿಂದ ಕಟ್ಟಕಡೆಯ ರೈತನಿಗೆ ಪರಿಹಾರ ಸಿಗುವುದಿಲ್ಲ.

ಹಿಂದಿನ ಕಂದಾಯ ಇಲಾಖೆಗೂ ಈಗಿನ ಕಂದಾಯ ಇಲಾಖೆಗೂ ಬಹಳ ವ್ಯತ್ಯಾಸ ಕಂಡುಬರುತ್ತದೆ. ಹೇಗೆಂದರೆ ಹಿಂದಿನ ನಮ್ಮ ತಾತಂದಿರ ಕಾಲದಲ್ಲಿ ಅಧಿಕಾರಿಗಳು ಸ್ವಲ್ಪ ಮಟ್ಟಿಗಾದರೂ ರೈತರ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ಈಗಿನ ಕಂದಾಯ ಇಲಾಖೆ ಶ್ರೀಮಂತರು, ಉಳ್ಳವರ ಪರವಾಗಿ ಮಾತ್ರ ಕೆಲಸ ಮಾಡುತ್ತಿದೆ. ಬಡ ರೈತರು ಪ್ರತಿದಿನವೂ ಕಛೇರಿಗಳಿಗೆ ಅಲೆದು ಅಲೆದು ಸುಸ್ತಾದರೂ ಅವರ ಮಕ್ಕಳ ಕಾಲಕ್ಕೂ ಸಹ ಕೆಲಸವಾಗಿರುವುದಿಲ್ಲ.

ರಾಜ್ಯದ ಯಾವುದೇ ತಾಲ್ಲೂಕು ಕಛೇರಿ ಬಾಗಿಲಿಗೆ ಹೋಗಿ ನಿಂತರೆ ಸಾಕು, ಹಲವು ತರಹದ ಕತೆಗಳು ಕಣ್ಣಿಗೆ ರಾಚುತ್ತವೆ. ಹಕ್ಕು ಪತ್ರಕ್ಕಾಗಿ, ಸಾಗುವಳಿ ಚೀಟಗಾಗಿ, ಖಾತೆ ಬದಲಾವಣೆಗಾಗಿ ಅಂಗಲಾಚುತ್ತಿರುವವರು, ಅಲ್ಲದೆ ಪಹಣಿಯಲ್ಲಿ ಬೆಳೆ ನಮೂದಾತಿಯಿಲ್ಲದೆ ಒದ್ದಾಡುತ್ತಿರುವ ನೂರಾರು ರೈತರನ್ನು ನಾವು ನೋಡಬಹುದು.

ಹೌದು ಪಹಣಿಯಲ್ಲಿ ಬೆಳೆಯಿಲ್ಲ ಎಂಬುದು ರೈತನ ಪಾಲಿನ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಹರಸಹಾಸ ಪಡಬೇಕಾಗಿದೆ.
ಕಂದಾಯ ಇಲಾಖೆಯಂತೆ ಈಗಿನ ಸರ್ಕಾರಗಳು ಸಹ ದಪ್ಪ ಚರ್ಮದವು. ಕಂದಾಯ ಇಲಾಖೆಯ ತಪ್ಪುಗಳನ್ನು ಪತ್ರಿಕೆಗಳ ಮುಖಾಂತರ ಸರ್ಕಾರದ ಗಮನಕ್ಕೆ ತಂದರೆ ಸಂಬಂಧಪಟ್ಟ ಸರ್ಕಾರಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಅನ್ನುವ ರೀತಿಯಲ್ಲಿ ವರ್ತಿಸುತ್ತಿವೆ.

ಹಳ್ಳಿಯ ಗ್ರಾಮ ಸಹಾಯಕರಿಂದ ಹಿಡಿದು ಜಿಲ್ಲಾಧಿಕಾರಿಗಳನ್ನು ಕಾಣಲು ದಲ್ಲಾಳಿಗಳ ಮೂಲಕ ಹೋದರೆ ಮಾತ್ರ ಕಾಣಬಹುದು ಪರಿಸ್ಥಿತಿ ಇಂದು ಎಲ್ಲಾ ಜಿಲ್ಲೆಗಳಲ್ಲಿ ನಿರ್ಮಾಣವಾಗಿದೆ. ಪ್ರತಿ ಕೆಲಸಕ್ಕೂ ಮಧ್ಯವರ್ತಿಗಳ ಕಾಟವಿದೆ. ಕೆಲವು ಕಛೇರಿಗಳಂತೂ ದಲ್ಲಾಳಿಗಳೇ ಅಧಿಕಾರಿಗಳಾಗಿರುತ್ತಾರೆ. ಅಧಿಕಾರಿ ಸಹಿ ಮಾಡುವುದು ಬಿಟ್ಟರೆ ಉಳಿದ ಎಲ್ಲವನ್ನು ದಲ್ಲಾಳಿಗಳೇ ಮಾಡುತ್ತಿದ್ದಾರೆ. ದಲ್ಲಾಳಿಗಳು ಹೇಳಿದ ಹಾಗೆ ಅಧಿಕಾರಿಗಳು ಕೇಳುವ ಪರಿಸ್ಥಿತಿ ಇದೆ. ಇವರ ಕಮಿಷನ್ ಕೊಡಲಾಗದೆ ರೈತರು ಕಂಗಾಲಾಗಿದ್ದಾರೆ.

ಈಗ ಕಂದಾಯ ಇಲಾಖೆಯ ಈ ಸರ್ವಾಧಿಕಾರವನ್ನು ಕೊನೆಗಾಣಿಸಬೇಕಾಗಿದೆ. ಇದಕ್ಕಾಗಿ ರೈತರು ಒಗ್ಗಟ್ಟಾಗಬೇಕಿದೆ. ಇಲ್ಲದಿದ್ದಲ್ಲಿ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಕೊಳ್ಳುವುದು ಖಚಿತ. ಸರ್ಕಾರಗಳು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲು ದೊಡ್ಡ ಹೋರಾಟದ ಅನಿವಾರ್ಯತೆ ಇದೆ.


ಇದನ್ನೂ ಓದಿ: ಹೊಂಬಾಳೆ-1: ದೇಶದ ಅನ್ನದ ಬಟ್ಟಲನ್ನೇ ಮಾರಲು ಹೊರಟರೆ ಕೊನೆಗೆ ಏನು ಉಳಿದೀತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರೈತನನ್ನ ಮಾತಿಗಷ್ಟೆ ದೇಶದ ಬೆನ್ನೆಲುಬು ಎನ್ನುತ್ತಾರೆ ಅದರೆ ಅವನ ಎಲುಬುಗಳನ್ನೆ ಮುರಿದು ಹಾಕುತ್ತಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...