Homeಕರ್ನಾಟಕಕನ್ನಡಿಗರ ತೆರಿಗೆಯಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ?: ಹಿಂದಿ ಹೇರಿಕೆ ವಿರುದ್ಧ ನಾರಾಯಣಗೌಡ ಆಕ್ರೋಶ

ಕನ್ನಡಿಗರ ತೆರಿಗೆಯಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ?: ಹಿಂದಿ ಹೇರಿಕೆ ವಿರುದ್ಧ ನಾರಾಯಣಗೌಡ ಆಕ್ರೋಶ

- Advertisement -
- Advertisement -

”ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು, ಹಿಂದಿ ಹೇರಿಕೆ ದೇಶದ ಐಕ್ಯತೆಗೆ ಮಾರಕವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿ ಹೇರಿಕೆ ವಿಚಾರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ”ಹಿಂದಿ ಹೇರಿಕೆಯ ಕ್ರೂರ ಪರಿಣಾಮಗಳನ್ನು‌ ನಾವು ಈಗಾಗಲೇ ನಮ್ಮ ಬ್ಯಾಂಕು, ಅಂಚೆ ಕಚೇರಿಗಳಲ್ಲಿ, ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ, ಹೆದ್ದಾರಿಗಳಲ್ಲಿ ನೋಡುತ್ತಿದ್ದೇವೆ. ಹೀಗೇ ಬಿಟ್ಟರೆ ಹಿಂದಿಯಲ್ಲೇ ಮಾತನಾಡಬೇಕು ಎಂದು ಆದೇಶ ಹೊರಡಿಸಿದರೂ ಆಶ್ಚರ್ಯವಿಲ್ಲ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

”ನಾವು ಯಾವ ನುಡಿಯ ವಿರೋಧಿಗಳೂ ಅಲ್ಲ. ಅವರವರಿಗೆ ಅವರವರ ನುಡಿಗಳು ಹೆಚ್ಚು. ನಿಮ್ಮ ಮೇಲೆ ನಮ್ಮ ನುಡಿಯನ್ನು ನಾವು ಹೇರಿಲ್ಲ. ನಮ್ಮ ಮೇಲೆ ನಿಮ್ಮ ನುಡಿಯನ್ನು ಹೇರಬೇಡಿ. ನಮಗೆ ಇಷ್ಟವಾದ ನುಡಿ ಕಲಿಯುತ್ತೇವೆ. ಹಿಂದಿಯನ್ನೇ ಕಲಿಯಬೇಕು ಎಂಬ ಹೇರಿಕೆ ಮಾಡಬೇಡಿ” ಎಂದು ಕಿಡಿಕಾರಿದ್ದಾರೆ.

”ಭಾರತ ಸಂವಿಧಾನದಲ್ಲಿ ಹಿಂದಿ ನುಡಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ನಿಲ್ಲಿಸಬೇಕು. ಹಿಂದಿಗೆ ಹೆಚ್ಚುಗಾರಿಕೆ ನೀಡುವುದೆಂದರೆ ಹಿಂದಿ ಭಾಷಿಕರಿಗೆ ಹೆಚ್ಚುಗಾರಿಕೆ ನೀಡುವುದು. ಹೀಗಾದಾಗ ಎಲ್ಲರೂ ಸಮಾನರೆಂಬ ಸಂವಿಧಾನದ ಮೂಲ ಆಶಯವೇ ಈಡೇರುವುದಿಲ್ಲ. ಎಲ್ಲ ನುಡಿಗಳೂ ಸಮಾನವಾಗಬೇಕು” ಎಂದು ಹೇಳಿದರು.

”ಒಕ್ಕೂಟ ಸರ್ಕಾರ ಇದೇ ರೀತಿ ಹಿಂದಿ ಹೇರಿಕೆ ಮುಂದುವರೆಸಿದರೆ ಭಾರತದ ಒಗ್ಗಟ್ಟಿನ ಬೇರೇ ಸಡಿಲವಾಗುತ್ತದೆ. ಈ ಹೇರಿಕೆಯಿಂದ ಹಿಂದಿಯೇತರರಲ್ಲಿ ಅಭದ್ರತಾ ಭಾವ ನೆಲೆಸುತ್ತಿದೆ. ಇದು ಒಳ್ಳೆಯ ಸೂಚನೆ ಅಲ್ಲ. ಭಾರತ ಒಂದಾಗಿರಬೇಕೆಂದರೆ ಎಲ್ಲರಿಗೂ ಸಮಾನ ಹಕ್ಕು ಅವಕಾಶಗಳಿರಬೇಕು” ಎಂದಿದ್ದಾರೆ.

”ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಹಿಂದಿಹೇರಿಕೆ ದೇಶದ ಐಕ್ಯತೆಗೆ ಮಾರಕ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಕನ್ನಡಿಗರ ತೆರಿಗೆ ಹಣದಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ? ಉತ್ತರದ ರಾಜ್ಯಗಳಲ್ಲಿ ಎಂದಾದರೂ ಕನ್ನಡ ದಿವಸವನ್ನು ಆಚರಿಸಿದ್ದಾರೆಯೇ? ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಯಾಕೆ? ಹಿಂದಿ ರಾಜ್ಯಗಳಲ್ಲಿ ಹಿಂದಿ ದಿವಸ ಆಚರಿಸಿಕೊಳ್ಳಿ. ಕನ್ನಡ ನಾಡಿನಲ್ಲಿ ನಿಮ್ಮ ಆಚರಣೆ ಬೇಕಿಲ್ಲ” ಎಂದು ವಿರೋಧ ವ್ಯಕ್ತಪಡಿಸಿದರು.

”ಹಿಂದಿ ಎಂಬುದು ಹಿಂದೂಸ್ತಾನಿ, ಉರ್ದು, ಪರ್ಶಿಯನ್, ಸಂಸ್ಕೃತ ನುಡಿಗಳಿಂದ ಸಂಕರಗೊಂಡ ಕೃತಕ ನುಡಿ. ಅದಕ್ಕೆ ಯಾವ ಇತಿಹಾಸವೂ ಇಲ್ಲ. ಅದಕ್ಕೊಂದು ಸಾಂಸ್ಕೃತಿಕ ಪರಂಪರೆಯೂ ಇಲ್ಲ. ನಮಗೆ ನಮ್ಮ ಶ್ರೀಮಂತ ಕನ್ನಡವೇ ರಾಷ್ಟ್ರನುಡಿ. ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ದಕ್ಷಿಣದ ರಾಜ್ಯಗಳಿಗೆ ಯಾವ ರೀತಿಯೂ ಸಂಬಂಧವಿಲ್ಲದ ಹಿಂದಿಯನ್ನು ಬಲವಂತವಾಗಿ ನಮ್ಮ ಶಿಕ್ಷಣದಲ್ಲಿ ತರಲಾಯಿತು. ಕನ್ನಡದ ಮಕ್ಕಳಿಗೆ ಬಲವಂತವಾಗಿ ಕಲಿಸಲಾಯಿತು. ಹಿಂದಿ ದೇಶದ ರಾಷ್ಟ್ರಭಾಷೆ ಎಂದು ಸುಳ್ಳು ಹೇಳಿಕೊಡಲಾಯಿತು. ಇಷ್ಟು ದೊಡ್ಡ ದ್ರೋಹವನ್ನು ಬ್ರಿಟಿಷರೂ ಮಾಡಿರಲಿಲ್ಲ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

”ಕನ್ನಡಿಗರು ಯಾವ ಕಾರಣಕ್ಕೆ ಕಡ್ಡಾಯವಾಗಿ ಹಿಂದಿ ಕಲಿಯಬೇಕು? ಉತ್ತರದ ರಾಜ್ಯಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುತ್ತಿಲ್ಲ ಯಾಕೆ? ಇಷ್ಟನ್ನು ಅರ್ಥ ಮಾಡಿಕೊಂಡರೆ ಹಿಂದಿಹೇರಿಕೆಯ ಹುನ್ನಾರ ಅರ್ಥವಾಗುತ್ತದೆ. ನಮ್ಮನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡುವುದೇ ಹಿಂದಿ ಹೇರಿಕೆಯ ಸಂಚು” ಎಂದು ಹೇಳಿದ್ದಾರೆ.

”ಕನ್ನಡಿಗರಿಗೆ, ಕನ್ನಡ ನುಡಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಾವು ಯಾರ ಅಡಿಯಾಳೂ ಅಲ್ಲ. ನಮಗೆ ನಮ್ಮದೇ ಆದ ಸಂಸ್ಕೃತಿ ಪರಂಪರೆ ಇದೆ. ಹಿಂದಿ ನುಡಿಯ ಯಜಮಾನಿಕೆ ನಮಗೆ ಬೇಕಿಲ್ಲ. ಒಕ್ಕೂಟ ಸರ್ಕಾರ ಇದನ್ನು ಅರ್ಥ ಮಾಡಿಕೊಂಡು ಹಿಂದಿ ಹೇರಿಕೆ ನಿಲ್ಲಿಸಬೇಕು” ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದಿ ಕಲಿಕೆ ಬಗ್ಗೆ ಸಂಸತ್‌ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿಕೆ; ಹಿಂದಿ ಹೇರಿಕೆಗಾಗಿ ಇತಿಹಾಸವನ್ನೇ ತಿರುಚುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...