Homeಕರ್ನಾಟಕಕನ್ನಡಿಗರ ತೆರಿಗೆಯಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ?: ಹಿಂದಿ ಹೇರಿಕೆ ವಿರುದ್ಧ ನಾರಾಯಣಗೌಡ ಆಕ್ರೋಶ

ಕನ್ನಡಿಗರ ತೆರಿಗೆಯಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ?: ಹಿಂದಿ ಹೇರಿಕೆ ವಿರುದ್ಧ ನಾರಾಯಣಗೌಡ ಆಕ್ರೋಶ

- Advertisement -
- Advertisement -

”ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು, ಹಿಂದಿ ಹೇರಿಕೆ ದೇಶದ ಐಕ್ಯತೆಗೆ ಮಾರಕವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿ ಹೇರಿಕೆ ವಿಚಾರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ”ಹಿಂದಿ ಹೇರಿಕೆಯ ಕ್ರೂರ ಪರಿಣಾಮಗಳನ್ನು‌ ನಾವು ಈಗಾಗಲೇ ನಮ್ಮ ಬ್ಯಾಂಕು, ಅಂಚೆ ಕಚೇರಿಗಳಲ್ಲಿ, ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ, ಹೆದ್ದಾರಿಗಳಲ್ಲಿ ನೋಡುತ್ತಿದ್ದೇವೆ. ಹೀಗೇ ಬಿಟ್ಟರೆ ಹಿಂದಿಯಲ್ಲೇ ಮಾತನಾಡಬೇಕು ಎಂದು ಆದೇಶ ಹೊರಡಿಸಿದರೂ ಆಶ್ಚರ್ಯವಿಲ್ಲ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

”ನಾವು ಯಾವ ನುಡಿಯ ವಿರೋಧಿಗಳೂ ಅಲ್ಲ. ಅವರವರಿಗೆ ಅವರವರ ನುಡಿಗಳು ಹೆಚ್ಚು. ನಿಮ್ಮ ಮೇಲೆ ನಮ್ಮ ನುಡಿಯನ್ನು ನಾವು ಹೇರಿಲ್ಲ. ನಮ್ಮ ಮೇಲೆ ನಿಮ್ಮ ನುಡಿಯನ್ನು ಹೇರಬೇಡಿ. ನಮಗೆ ಇಷ್ಟವಾದ ನುಡಿ ಕಲಿಯುತ್ತೇವೆ. ಹಿಂದಿಯನ್ನೇ ಕಲಿಯಬೇಕು ಎಂಬ ಹೇರಿಕೆ ಮಾಡಬೇಡಿ” ಎಂದು ಕಿಡಿಕಾರಿದ್ದಾರೆ.

”ಭಾರತ ಸಂವಿಧಾನದಲ್ಲಿ ಹಿಂದಿ ನುಡಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ನಿಲ್ಲಿಸಬೇಕು. ಹಿಂದಿಗೆ ಹೆಚ್ಚುಗಾರಿಕೆ ನೀಡುವುದೆಂದರೆ ಹಿಂದಿ ಭಾಷಿಕರಿಗೆ ಹೆಚ್ಚುಗಾರಿಕೆ ನೀಡುವುದು. ಹೀಗಾದಾಗ ಎಲ್ಲರೂ ಸಮಾನರೆಂಬ ಸಂವಿಧಾನದ ಮೂಲ ಆಶಯವೇ ಈಡೇರುವುದಿಲ್ಲ. ಎಲ್ಲ ನುಡಿಗಳೂ ಸಮಾನವಾಗಬೇಕು” ಎಂದು ಹೇಳಿದರು.

”ಒಕ್ಕೂಟ ಸರ್ಕಾರ ಇದೇ ರೀತಿ ಹಿಂದಿ ಹೇರಿಕೆ ಮುಂದುವರೆಸಿದರೆ ಭಾರತದ ಒಗ್ಗಟ್ಟಿನ ಬೇರೇ ಸಡಿಲವಾಗುತ್ತದೆ. ಈ ಹೇರಿಕೆಯಿಂದ ಹಿಂದಿಯೇತರರಲ್ಲಿ ಅಭದ್ರತಾ ಭಾವ ನೆಲೆಸುತ್ತಿದೆ. ಇದು ಒಳ್ಳೆಯ ಸೂಚನೆ ಅಲ್ಲ. ಭಾರತ ಒಂದಾಗಿರಬೇಕೆಂದರೆ ಎಲ್ಲರಿಗೂ ಸಮಾನ ಹಕ್ಕು ಅವಕಾಶಗಳಿರಬೇಕು” ಎಂದಿದ್ದಾರೆ.

”ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಹಿಂದಿಹೇರಿಕೆ ದೇಶದ ಐಕ್ಯತೆಗೆ ಮಾರಕ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಕನ್ನಡಿಗರ ತೆರಿಗೆ ಹಣದಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ? ಉತ್ತರದ ರಾಜ್ಯಗಳಲ್ಲಿ ಎಂದಾದರೂ ಕನ್ನಡ ದಿವಸವನ್ನು ಆಚರಿಸಿದ್ದಾರೆಯೇ? ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಯಾಕೆ? ಹಿಂದಿ ರಾಜ್ಯಗಳಲ್ಲಿ ಹಿಂದಿ ದಿವಸ ಆಚರಿಸಿಕೊಳ್ಳಿ. ಕನ್ನಡ ನಾಡಿನಲ್ಲಿ ನಿಮ್ಮ ಆಚರಣೆ ಬೇಕಿಲ್ಲ” ಎಂದು ವಿರೋಧ ವ್ಯಕ್ತಪಡಿಸಿದರು.

”ಹಿಂದಿ ಎಂಬುದು ಹಿಂದೂಸ್ತಾನಿ, ಉರ್ದು, ಪರ್ಶಿಯನ್, ಸಂಸ್ಕೃತ ನುಡಿಗಳಿಂದ ಸಂಕರಗೊಂಡ ಕೃತಕ ನುಡಿ. ಅದಕ್ಕೆ ಯಾವ ಇತಿಹಾಸವೂ ಇಲ್ಲ. ಅದಕ್ಕೊಂದು ಸಾಂಸ್ಕೃತಿಕ ಪರಂಪರೆಯೂ ಇಲ್ಲ. ನಮಗೆ ನಮ್ಮ ಶ್ರೀಮಂತ ಕನ್ನಡವೇ ರಾಷ್ಟ್ರನುಡಿ. ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ದಕ್ಷಿಣದ ರಾಜ್ಯಗಳಿಗೆ ಯಾವ ರೀತಿಯೂ ಸಂಬಂಧವಿಲ್ಲದ ಹಿಂದಿಯನ್ನು ಬಲವಂತವಾಗಿ ನಮ್ಮ ಶಿಕ್ಷಣದಲ್ಲಿ ತರಲಾಯಿತು. ಕನ್ನಡದ ಮಕ್ಕಳಿಗೆ ಬಲವಂತವಾಗಿ ಕಲಿಸಲಾಯಿತು. ಹಿಂದಿ ದೇಶದ ರಾಷ್ಟ್ರಭಾಷೆ ಎಂದು ಸುಳ್ಳು ಹೇಳಿಕೊಡಲಾಯಿತು. ಇಷ್ಟು ದೊಡ್ಡ ದ್ರೋಹವನ್ನು ಬ್ರಿಟಿಷರೂ ಮಾಡಿರಲಿಲ್ಲ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

”ಕನ್ನಡಿಗರು ಯಾವ ಕಾರಣಕ್ಕೆ ಕಡ್ಡಾಯವಾಗಿ ಹಿಂದಿ ಕಲಿಯಬೇಕು? ಉತ್ತರದ ರಾಜ್ಯಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುತ್ತಿಲ್ಲ ಯಾಕೆ? ಇಷ್ಟನ್ನು ಅರ್ಥ ಮಾಡಿಕೊಂಡರೆ ಹಿಂದಿಹೇರಿಕೆಯ ಹುನ್ನಾರ ಅರ್ಥವಾಗುತ್ತದೆ. ನಮ್ಮನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡುವುದೇ ಹಿಂದಿ ಹೇರಿಕೆಯ ಸಂಚು” ಎಂದು ಹೇಳಿದ್ದಾರೆ.

”ಕನ್ನಡಿಗರಿಗೆ, ಕನ್ನಡ ನುಡಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಾವು ಯಾರ ಅಡಿಯಾಳೂ ಅಲ್ಲ. ನಮಗೆ ನಮ್ಮದೇ ಆದ ಸಂಸ್ಕೃತಿ ಪರಂಪರೆ ಇದೆ. ಹಿಂದಿ ನುಡಿಯ ಯಜಮಾನಿಕೆ ನಮಗೆ ಬೇಕಿಲ್ಲ. ಒಕ್ಕೂಟ ಸರ್ಕಾರ ಇದನ್ನು ಅರ್ಥ ಮಾಡಿಕೊಂಡು ಹಿಂದಿ ಹೇರಿಕೆ ನಿಲ್ಲಿಸಬೇಕು” ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದಿ ಕಲಿಕೆ ಬಗ್ಗೆ ಸಂಸತ್‌ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿಕೆ; ಹಿಂದಿ ಹೇರಿಕೆಗಾಗಿ ಇತಿಹಾಸವನ್ನೇ ತಿರುಚುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...