Homeಕರ್ನಾಟಕಕನ್ನಡಿಗರ ತೆರಿಗೆಯಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ?: ಹಿಂದಿ ಹೇರಿಕೆ ವಿರುದ್ಧ ನಾರಾಯಣಗೌಡ ಆಕ್ರೋಶ

ಕನ್ನಡಿಗರ ತೆರಿಗೆಯಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ?: ಹಿಂದಿ ಹೇರಿಕೆ ವಿರುದ್ಧ ನಾರಾಯಣಗೌಡ ಆಕ್ರೋಶ

- Advertisement -
- Advertisement -

”ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು, ಹಿಂದಿ ಹೇರಿಕೆ ದೇಶದ ಐಕ್ಯತೆಗೆ ಮಾರಕವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದಿ ಹೇರಿಕೆ ವಿಚಾರವಾಗಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಅವರು, ”ಹಿಂದಿ ಹೇರಿಕೆಯ ಕ್ರೂರ ಪರಿಣಾಮಗಳನ್ನು‌ ನಾವು ಈಗಾಗಲೇ ನಮ್ಮ ಬ್ಯಾಂಕು, ಅಂಚೆ ಕಚೇರಿಗಳಲ್ಲಿ, ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ, ಹೆದ್ದಾರಿಗಳಲ್ಲಿ ನೋಡುತ್ತಿದ್ದೇವೆ. ಹೀಗೇ ಬಿಟ್ಟರೆ ಹಿಂದಿಯಲ್ಲೇ ಮಾತನಾಡಬೇಕು ಎಂದು ಆದೇಶ ಹೊರಡಿಸಿದರೂ ಆಶ್ಚರ್ಯವಿಲ್ಲ. ಕನ್ನಡಿಗರು ಎಚ್ಚೆತ್ತುಕೊಳ್ಳಬೇಕು” ಎಂದು ಎಚ್ಚರಿಸಿದ್ದಾರೆ.

”ನಾವು ಯಾವ ನುಡಿಯ ವಿರೋಧಿಗಳೂ ಅಲ್ಲ. ಅವರವರಿಗೆ ಅವರವರ ನುಡಿಗಳು ಹೆಚ್ಚು. ನಿಮ್ಮ ಮೇಲೆ ನಮ್ಮ ನುಡಿಯನ್ನು ನಾವು ಹೇರಿಲ್ಲ. ನಮ್ಮ ಮೇಲೆ ನಿಮ್ಮ ನುಡಿಯನ್ನು ಹೇರಬೇಡಿ. ನಮಗೆ ಇಷ್ಟವಾದ ನುಡಿ ಕಲಿಯುತ್ತೇವೆ. ಹಿಂದಿಯನ್ನೇ ಕಲಿಯಬೇಕು ಎಂಬ ಹೇರಿಕೆ ಮಾಡಬೇಡಿ” ಎಂದು ಕಿಡಿಕಾರಿದ್ದಾರೆ.

”ಭಾರತ ಸಂವಿಧಾನದಲ್ಲಿ ಹಿಂದಿ ನುಡಿಗೆ ನೀಡಿರುವ ಹೆಚ್ಚುಗಾರಿಕೆಯನ್ನು ನಿಲ್ಲಿಸಬೇಕು. ಹಿಂದಿಗೆ ಹೆಚ್ಚುಗಾರಿಕೆ ನೀಡುವುದೆಂದರೆ ಹಿಂದಿ ಭಾಷಿಕರಿಗೆ ಹೆಚ್ಚುಗಾರಿಕೆ ನೀಡುವುದು. ಹೀಗಾದಾಗ ಎಲ್ಲರೂ ಸಮಾನರೆಂಬ ಸಂವಿಧಾನದ ಮೂಲ ಆಶಯವೇ ಈಡೇರುವುದಿಲ್ಲ. ಎಲ್ಲ ನುಡಿಗಳೂ ಸಮಾನವಾಗಬೇಕು” ಎಂದು ಹೇಳಿದರು.

”ಒಕ್ಕೂಟ ಸರ್ಕಾರ ಇದೇ ರೀತಿ ಹಿಂದಿ ಹೇರಿಕೆ ಮುಂದುವರೆಸಿದರೆ ಭಾರತದ ಒಗ್ಗಟ್ಟಿನ ಬೇರೇ ಸಡಿಲವಾಗುತ್ತದೆ. ಈ ಹೇರಿಕೆಯಿಂದ ಹಿಂದಿಯೇತರರಲ್ಲಿ ಅಭದ್ರತಾ ಭಾವ ನೆಲೆಸುತ್ತಿದೆ. ಇದು ಒಳ್ಳೆಯ ಸೂಚನೆ ಅಲ್ಲ. ಭಾರತ ಒಂದಾಗಿರಬೇಕೆಂದರೆ ಎಲ್ಲರಿಗೂ ಸಮಾನ ಹಕ್ಕು ಅವಕಾಶಗಳಿರಬೇಕು” ಎಂದಿದ್ದಾರೆ.

”ಕನ್ನಡಿಗರ ಮೇಲೆ ಹಿಂದಿ ನುಡಿಯನ್ನು ಹೇರುವುದು ಕ್ರೌರ್ಯ. ಇದು ಮೋಸದಿಂದ ಕನ್ನಡ ಜನಾಂಗದ ಮೇಲೆ ಹೂಡಲಾಗಿರುವ ಪರೋಕ್ಷ ಯುದ್ಧ. ದೇಶ ಯಾವತ್ತಿಗೂ ಒಂದಾಗಿರಬೇಕೆಂದು ಬಯಸುವುದಾದರೆ ಹಿಂದಿ ಹೇರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಹಿಂದಿಹೇರಿಕೆ ದೇಶದ ಐಕ್ಯತೆಗೆ ಮಾರಕ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಕನ್ನಡಿಗರ ತೆರಿಗೆ ಹಣದಿಂದ ಹಿಂದಿ ದಿವಸ ಆಚರಣೆ ಎಷ್ಟು ಸರಿ? ಉತ್ತರದ ರಾಜ್ಯಗಳಲ್ಲಿ ಎಂದಾದರೂ ಕನ್ನಡ ದಿವಸವನ್ನು ಆಚರಿಸಿದ್ದಾರೆಯೇ? ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಯಾಕೆ? ಹಿಂದಿ ರಾಜ್ಯಗಳಲ್ಲಿ ಹಿಂದಿ ದಿವಸ ಆಚರಿಸಿಕೊಳ್ಳಿ. ಕನ್ನಡ ನಾಡಿನಲ್ಲಿ ನಿಮ್ಮ ಆಚರಣೆ ಬೇಕಿಲ್ಲ” ಎಂದು ವಿರೋಧ ವ್ಯಕ್ತಪಡಿಸಿದರು.

”ಹಿಂದಿ ಎಂಬುದು ಹಿಂದೂಸ್ತಾನಿ, ಉರ್ದು, ಪರ್ಶಿಯನ್, ಸಂಸ್ಕೃತ ನುಡಿಗಳಿಂದ ಸಂಕರಗೊಂಡ ಕೃತಕ ನುಡಿ. ಅದಕ್ಕೆ ಯಾವ ಇತಿಹಾಸವೂ ಇಲ್ಲ. ಅದಕ್ಕೊಂದು ಸಾಂಸ್ಕೃತಿಕ ಪರಂಪರೆಯೂ ಇಲ್ಲ. ನಮಗೆ ನಮ್ಮ ಶ್ರೀಮಂತ ಕನ್ನಡವೇ ರಾಷ್ಟ್ರನುಡಿ. ಅದನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

”ದಕ್ಷಿಣದ ರಾಜ್ಯಗಳಿಗೆ ಯಾವ ರೀತಿಯೂ ಸಂಬಂಧವಿಲ್ಲದ ಹಿಂದಿಯನ್ನು ಬಲವಂತವಾಗಿ ನಮ್ಮ ಶಿಕ್ಷಣದಲ್ಲಿ ತರಲಾಯಿತು. ಕನ್ನಡದ ಮಕ್ಕಳಿಗೆ ಬಲವಂತವಾಗಿ ಕಲಿಸಲಾಯಿತು. ಹಿಂದಿ ದೇಶದ ರಾಷ್ಟ್ರಭಾಷೆ ಎಂದು ಸುಳ್ಳು ಹೇಳಿಕೊಡಲಾಯಿತು. ಇಷ್ಟು ದೊಡ್ಡ ದ್ರೋಹವನ್ನು ಬ್ರಿಟಿಷರೂ ಮಾಡಿರಲಿಲ್ಲ” ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

”ಕನ್ನಡಿಗರು ಯಾವ ಕಾರಣಕ್ಕೆ ಕಡ್ಡಾಯವಾಗಿ ಹಿಂದಿ ಕಲಿಯಬೇಕು? ಉತ್ತರದ ರಾಜ್ಯಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಕಲಿಸುತ್ತಿಲ್ಲ ಯಾಕೆ? ಇಷ್ಟನ್ನು ಅರ್ಥ ಮಾಡಿಕೊಂಡರೆ ಹಿಂದಿಹೇರಿಕೆಯ ಹುನ್ನಾರ ಅರ್ಥವಾಗುತ್ತದೆ. ನಮ್ಮನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡುವುದೇ ಹಿಂದಿ ಹೇರಿಕೆಯ ಸಂಚು” ಎಂದು ಹೇಳಿದ್ದಾರೆ.

”ಕನ್ನಡಿಗರಿಗೆ, ಕನ್ನಡ ನುಡಿಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಾವು ಯಾರ ಅಡಿಯಾಳೂ ಅಲ್ಲ. ನಮಗೆ ನಮ್ಮದೇ ಆದ ಸಂಸ್ಕೃತಿ ಪರಂಪರೆ ಇದೆ. ಹಿಂದಿ ನುಡಿಯ ಯಜಮಾನಿಕೆ ನಮಗೆ ಬೇಕಿಲ್ಲ. ಒಕ್ಕೂಟ ಸರ್ಕಾರ ಇದನ್ನು ಅರ್ಥ ಮಾಡಿಕೊಂಡು ಹಿಂದಿ ಹೇರಿಕೆ ನಿಲ್ಲಿಸಬೇಕು” ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದಿ ಕಲಿಕೆ ಬಗ್ಗೆ ಸಂಸತ್‌ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿಕೆ; ಹಿಂದಿ ಹೇರಿಕೆಗಾಗಿ ಇತಿಹಾಸವನ್ನೇ ತಿರುಚುವುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...