Homeಅಂತರಾಷ್ಟ್ರೀಯತೈವಾನ್ ದೇಶದ ಕೊರೊನಾ ಚಮತ್ಕಾರ: ನಾಗೇಶ್‌ ಹೆಗಡೆ ಅವರ ಲೇಖನ

ತೈವಾನ್ ದೇಶದ ಕೊರೊನಾ ಚಮತ್ಕಾರ: ನಾಗೇಶ್‌ ಹೆಗಡೆ ಅವರ ಲೇಖನ

- Advertisement -
- Advertisement -

ಚೀನಾದ ಪಕ್ಕದಲ್ಲೇ ಇರುವ ಪುಟ್ಟ ದ್ವೀಪದೇಶ ತೈವಾನ್. ಕೊರೊನಾ ದಾಳಿಯಿಂದ ತತ್ತರಿಸಿ ಹೋಗಬೇಕಿತ್ತು. ಏಕೆಂದರೆ ಸುಮಾರು ಹದಿಮೂರು ಲಕ್ಷ ಮಂದಿ ತೈವಾನೀಯರು ಚೀನಾದೊಂದಿಗೆ ನಿತ್ಯ ಸಂಪರ್ಕ ಇಟ್ಟುಕೊಂಡಿದ್ದಾರೆ. ದಿನವೂ ವುಹಾನ್ ಜೊತೆ ನೇರ ವಿಮಾನಗಳ ಸಂಚಾರವಿದೆ. (2019ರಲ್ಲಿ 27 ಲಕ್ಷ ಜನರು ಚೀನಾಕ್ಕೆ ಹೋಗಿ ಬಂದಿದ್ದಾರೆ.) ಆದರೆ ಅಚ್ಚರಿ ನೋಡಿ: ಅಲ್ಲಿ ಕೇವಲ 395 ಜನರಲ್ಲಿ ರೋಗಲಕ್ಷಣ ಕಂಡಿದೆ. 155 ಜನರು ಗುಣಮುಖರಾಗಿದ್ದಾರೆ. 6 ಜನ ಮಾತ್ರ ಸಾವಪ್ಪಿದ್ದಾರೆ. ಹಾಗೆಂದು ಅಲ್ಲಿನ ಪ್ರಜೆಗಳ ಮೇಲೆ ತುರ್ತುಸ್ಥಿತಿಯನ್ನು ಹೇರಿಲ್ಲ. ಯಾವ ಊರನ್ನೂ ಲಾಕ್‌ಡೌನ್ ಮಾಡಲಿಲ್ಲ. ಮನೆಮನೆಗೆ ಹೊಕ್ಕು ಟೆಸ್ಟಿಂಗ್ ಮಾಡಿಲ್ಲ. ಪೊಲೀಸರ ದಬ್ಬಾಳಿಕೆ ಇಲ್ಲ (ಅಲ್ಲಿ ಮಿಲಿಟರಿ ಆಡಳಿತವಿಲ್ಲ, ಪ್ರಜಾಪ್ರಭುತ್ವ ಇದೆ). ವಲಸೆ ಹೊರಟವರ ಗೋಳಿನ ಕತೆಗಳಿಲ್ಲ.

ಜಗತ್ತಿನ ಇತರೆಲ್ಲ ದೇಶಗಳಿಗೆ ಮಾದರಿಯಾಗುವಂಥ ಅದೇನು ಮ್ಯಾಜಿಕ್ ಅಲ್ಲಿ ನಡೆದಿದೆ ಗೊತ್ತೆ?

1. ಕೊರೊನಾದ ಹೊಸ ಅವತಾರ ತಲೆ ಎತ್ತಿದೆ ಎಂಬುದು ಗೊತ್ತಾದ ತಕ್ಷಣವೇ ಜನವರಿಯಲ್ಲೇ ತೈವಾನ್ ವಿಶೇಷ ನಿಗಾ ದಳವನ್ನು ಸೃಷ್ಟಿಸಿ, ಬಿಗಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿತು. ಅಲ್ಲಿಂದ ಬರುವ ವಿಮಾನಗಳಲ್ಲಿ ಜ್ವರ ಪೀಡಿತರ ತಪಾಸಣೆಯನ್ನು ಆರಂಭಿಸಿತು. ವಿಮಾನ ನೆಲಕ್ಕಿಳಿಯುವ ಮೊದಲೇ ತಪಾಸಣೆ ನಡೆದಿದ್ದರಿಂದ ಉದ್ದುದ್ದ ಕ್ಯೂ ಇರಲಿಲ್ಲ.

2. ಫೆಬ್ರುವರಿ 10ರ ವೇಳೆಗೆ ಚೀನಾದಲ್ಲಿ 30 ಸಾವಿರ ಮಂದಿ ಕಾಯಿಲೆ ಬಿದ್ದಾಗ ತೈವಾನ್ನಲ್ಲಿ ಕೇವಲ 16 ರೋಗಿಗಳು ಪತ್ತೆ ಆಗಿದ್ದೇ ತಡ, ಚೀನಾದಿಂದ ಬರುವ ಎಲ್ಲ ಉಡ್ಡಾಣಗಳನ್ನೂ ಸ್ಥಗಿತಗೊಳಿಸಿ, ಹಾಂಗ್‌ಕಾಂಗ್ ಮೂಲಕ ಬರುವವರ ಪರೀಕ್ಷೆಯನ್ನು ವಿಮಾನದಲ್ಲೇ ನಡೆಸತೊಡಗಿತು. ತನ್ನ ದ್ವೀಪದ ಸುತ್ತ ಲಕ್ಷ್ಮಣ ರೇಖೆಯನ್ನು ಎಳೆಯಿತು.

2. ಮುಖವಾಡಗಳ ರಫ್ತನ್ನು ನಿಲ್ಲಿಸಿತು. ಉತ್ಪಾದನೆಯನ್ನು ಎಂಟು ಪಟ್ಟು ಹೆಚ್ಚಿಸಿತು. ಅವುಗಳ ತಯಾರಿಕೆಯನ್ನು ಮೊದಲು ಕೈದಿಗಳಿಗೆ (ಕೆಳಗಿನ ಚಿತ್ರ – ಹೊಲಿಗೆ ಕೆಲಸದಲ್ಲಿ ನಿರತರಾದ ಕೈದಿಗಳದ್ದು), ಆನಂತರ ಮಿಲಿಟರಿಗೇ ಒಪ್ಪಿಸಿತು. ಪ್ರತಿಯೊಬ್ಬ ಪ್ರಜೆಗೂ ವಾರಕ್ಕೆ ಮೂರು ನಾಲ್ಕು ಮುಖವಾಡಗಳ ವ್ಯವಸ್ಥೆ ಮಾಡಿತು. ಅದು ಎಲ್ಲಿ ಸಿಗುತ್ತದೆ ಎಂಬುದನ್ನು ಅವರವರ ಮೊಬೈಲ್‌ನಲ್ಲೇ ಮಾಹಿತಿ ಸಿಗುವಂತೆ ಮಾಡಿತು.

3. ಕೊರೊನಾ ಪೀಡಿತರನ್ನು ವೈರಸ್ ಥರಾ ಪರಿಗಣಿಸದೆ ಅವರನ್ನು ಪ್ರಜೆಗಳಂತೇ ನೋಡಿಕೊಂಡಿತು. ಅವರಿಗೆ ಅತ್ಯುತ್ತಮ ಕ್ವಾರಂಟೈನ್ ವ್ಯವಸ್ಥೆಯನ್ನು ಕಲ್ಪಿಸಿತು. ಅವರ ನಿವಾಸಕ್ಕೆ ಅನ್ನಾಹಾರ ಹಾಗೂ ಅಗತ್ಯ ವಸ್ತುಗಳ ಕೊರತೆ ಆಗದಂತೆ ನೋಡಿಕೊಂಡಿತು. ಪುಸ್ತಕಗಳನ್ನೂ ಒದಗಿಸಿತು. ದಿನಭತ್ಯೆಯನ್ನೂ ಘೋಷಿಸಿತು. ಜನರು ತಾವಾಗಿ ಖುಷಿಯಿಂದ ಕ್ವಾರಂಟೈನ್‌ಗೆ ಒಳಪಡುವಂತೆ ಮನವೊಲಿಸಿತು. ಅವರ ಫೋನ್ ನಂಬರನ್ನು ಪಡೆದು ಅದರಲ್ಲಿ ವಿಶೇಷ ಆಪ್ ಹಾಕಿತು. ಮನೆಬಿಟ್ಟು ಆಚೆ ಹೋದರೆ ಅವರ ಬ್ಯಾಂಕ್ ಖಾತೆಯಿಂದ ದೊಡ್ಡ ಮೊತ್ತದ ದಂಡ ವಜಾ ಆಗುತ್ತದೆಂದು ಟಿವಿ ಮೂಲಕ ಪ್ರಚಾರ ಕೊಟ್ಟಿತು. ಕಾಯಿಲೆ ಉಲ್ಪಣಗೊಂಡರೆ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿತು.

4. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುವದಂತಿಗಳನ್ನು ಪತ್ತೆ ಹಚ್ಚಬಲ್ಲ ವಿಶೇಷ ಅಲ್ಗೊರಿದಮ್ಮನ್ನು ಅದು ಸೃಷ್ಟಿಸಿತು. ಅದು ಚೀನಾದಿಂದ ಬರುವ ಸುಳ್ಳುಸುದ್ದಿಗಳನ್ನು ಫಿಲ್ಟರ್ ಮಾಡತೊಡಗಿತು. ದೇಶದೊಳಕ್ಕೆ ಬರುವ ಎಲ್ಲರ ಡೇಟಾಗಳನ್ನು ವಿಮಾ ಕಂಪನಿಗಳಿಂದ ತರಿಸಿಕೊಂಡು, ಅದನ್ನು ವೀಸಾ ವಿಭಾಗದ ಡೇಟಾ ಜೊತೆ ಜೋಡಿಸಿ, ಜ್ವರಪೀಡಿತರ ಕುರಿತ ಮಾಹಿತಿ ಎಲ್ಲ ಆಸ್ಪತ್ರೆ, ಔಷಧಾಲಯಗಳಿಗೂ ಮುಂಚಿತವಾಗಿಯೇ ಲಭಿಸುವಂತೆ ನೋಡಿಕೊಂಡಿತು.

 

* ಇತರ ಕೆಲವು ಮಹತ್ವದ ಮಾಹಿತಿಗಳು: ತೈವಾನ್ ದೇಶದ ಅಧ್ಯಕ್ಷರು ವಿಶ್ವವಿಖ್ಯಾತ ಲಂಡನ್ ಸ್ಕೂಲ್ ಆಫ್ ಇಕಾನಮಿಕ್ಸ್‌ನಲ್ಲಿ ಪಿಎಚ್‌ಡಿ ಮಾಡಿದ ಅರ್ಥತಜ್ಞ. ಉಪಾಧ್ಯಕ್ಷರು ಸ್ವತಃ ಎಪಿಡೀಮಿಯಾಲಜಿ ಡಾಕ್ಟರು- ಅಂದರೆ ಸಾಂಕ್ರಾಮಿಕ ರೋಗತಜ್ಞ. ಅಲ್ಲಿ ಕೊರೊನಾ ಸಂದರ್ಭದ ಅವರ TTT ಘೋಷವಾಕ್ಯ ಏನೆಂದರೆ ಟ್ರಸ್ಟ್, ಟ್ರಾನ್ಸಪರೆನ್ಸಿ ಮತ್ತು ಟೆಕ್ನಾಲಜಿ. ಜನರೊಂದಿಗಿನ ವಿಶ್ವಾಸ, ಪಾರದರ್ಶಕತೆ ಮತ್ತು ತಂತ್ರಜ್ಞಾನ. ಅಲ್ಲಿ ಕೇವಲ 20 ನಿಮಿಷಗಳಲ್ಲಿ ಕೋವಿಡ್ ಟೆಸ್ಟ್ ಫಲಿತಾಂಶ ಬರುವಂಥ ವೈದ್ಯಕೀಯ ವಿಧಾನ ಚಾಲ್ತಿಗೆ ಬಂದಿದೆ (ನಮ್ಮಲ್ಲಿ ಫಲಿತಾಂಶ ಬರಲು 6 ಗಂಟೆಯಿಂದ 24 ಗಂಟೆ ಬೇಕು).

*ತೈವಾನ್ ಜನಸಂಖ್ಯೆ 238 ಲಕ್ಷ ನಿಜ. ಆದರೆ ವುಹಾನ್‌ನಿಂದ ಕೇವಲ 943 ಕಿ.ಮೀ. ದೂರದಲ್ಲಿದೆ. ಅದಕ್ಕೆ ಹೋಲಿಸಿದರೆ ವುಹಾನ್ನಿಂದ 7500 ಕಿ.ಮೀ. ದೂರದ, ಕೇವಲ 192 ಲಕ್ಷ ಜನರಿರುವ ರುಮೇನಿಯಾದಲ್ಲಿ 7700 ರೋಗಿಗಳಿದ್ದು 392 ಮೃತರಾಗಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಇನ್ನೂ ಕಡಿಮೆ ಜನಸಂಖ್ಯೆಯ ಕತಾರ್ ದೇಶದಲ್ಲಿ 4103 ರೋಗಿಗಳಿದ್ದಾರೆ, 7 ಮಂದಿ ಗತಿಸಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಬಹ್ರೇನ್ ದೇಶದಲ್ಲೂ 1703 ರೋಗಿಗಳಿದ್ದು 7 ಮಂದಿ ಗತಿಸಿದ್ದಾರೆ. ಕೊನೆಯ ಈ ಎರಡೂ ದೇಶಗಳು ಭಾರೀ ತೈಲಧನಿಕ ಅಷ್ಟೇ ಅಲ್ಲ, ಮುನ್ನೆಚ್ಚರಿಕೆಗೆ ಅವಕ್ಕೆ ಮೂರು ತಿಂಗಳು ಕಾಲಾವಧಿ ಇತ್ತು.

ಕೊನೆಯ ಕುಟುಕು: ವುಹಾನ್ ಮಹಾಮಾರಿಯ ಅಲೆ ದಶದಿಕ್ಕುಗಳಲ್ಲಿ ಹಬ್ಬುತ್ತಿದ್ದಾಗ, ಎಲ್ಲ ಬಿಬಿಸಿ-ಸಿಎನ್‌ಎನ್‌ಗಳಲ್ಲಿ ಅದರದೇ ಪ್ರಮುಖ ಸುದ್ದಿ ಬರುತ್ತಿದ್ದಾಗ ನಮ್ಮ ಮಾಧ್ಯಮಗಳ ಗಮನವೆಲ್ಲ ಕಮಲನಾಥ್ ಸರಕಾರವನ್ನು ಕೆಡವುವ ಕಮಲದ ಸರ್ಕಸ್ ಕಡೆ, ಹಾಗೂ ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಟ್ರಂಪ್ ಮಹಾಶಯನ ಟ್ರಂಪೆಟ್‌ ಕಡೆ ನೆಟ್ಟಿತ್ತು.

(ಕೃಪೆ: ನಾಗೇಶ್ ಹೆಗಡೆ ಅವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...