Homeಅಂತರಾಷ್ಟ್ರೀಯತೈವಾನ್ ದೇಶದ ಕೊರೊನಾ ಚಮತ್ಕಾರ: ನಾಗೇಶ್‌ ಹೆಗಡೆ ಅವರ ಲೇಖನ

ತೈವಾನ್ ದೇಶದ ಕೊರೊನಾ ಚಮತ್ಕಾರ: ನಾಗೇಶ್‌ ಹೆಗಡೆ ಅವರ ಲೇಖನ

- Advertisement -
- Advertisement -

ಚೀನಾದ ಪಕ್ಕದಲ್ಲೇ ಇರುವ ಪುಟ್ಟ ದ್ವೀಪದೇಶ ತೈವಾನ್. ಕೊರೊನಾ ದಾಳಿಯಿಂದ ತತ್ತರಿಸಿ ಹೋಗಬೇಕಿತ್ತು. ಏಕೆಂದರೆ ಸುಮಾರು ಹದಿಮೂರು ಲಕ್ಷ ಮಂದಿ ತೈವಾನೀಯರು ಚೀನಾದೊಂದಿಗೆ ನಿತ್ಯ ಸಂಪರ್ಕ ಇಟ್ಟುಕೊಂಡಿದ್ದಾರೆ. ದಿನವೂ ವುಹಾನ್ ಜೊತೆ ನೇರ ವಿಮಾನಗಳ ಸಂಚಾರವಿದೆ. (2019ರಲ್ಲಿ 27 ಲಕ್ಷ ಜನರು ಚೀನಾಕ್ಕೆ ಹೋಗಿ ಬಂದಿದ್ದಾರೆ.) ಆದರೆ ಅಚ್ಚರಿ ನೋಡಿ: ಅಲ್ಲಿ ಕೇವಲ 395 ಜನರಲ್ಲಿ ರೋಗಲಕ್ಷಣ ಕಂಡಿದೆ. 155 ಜನರು ಗುಣಮುಖರಾಗಿದ್ದಾರೆ. 6 ಜನ ಮಾತ್ರ ಸಾವಪ್ಪಿದ್ದಾರೆ. ಹಾಗೆಂದು ಅಲ್ಲಿನ ಪ್ರಜೆಗಳ ಮೇಲೆ ತುರ್ತುಸ್ಥಿತಿಯನ್ನು ಹೇರಿಲ್ಲ. ಯಾವ ಊರನ್ನೂ ಲಾಕ್‌ಡೌನ್ ಮಾಡಲಿಲ್ಲ. ಮನೆಮನೆಗೆ ಹೊಕ್ಕು ಟೆಸ್ಟಿಂಗ್ ಮಾಡಿಲ್ಲ. ಪೊಲೀಸರ ದಬ್ಬಾಳಿಕೆ ಇಲ್ಲ (ಅಲ್ಲಿ ಮಿಲಿಟರಿ ಆಡಳಿತವಿಲ್ಲ, ಪ್ರಜಾಪ್ರಭುತ್ವ ಇದೆ). ವಲಸೆ ಹೊರಟವರ ಗೋಳಿನ ಕತೆಗಳಿಲ್ಲ.

ಜಗತ್ತಿನ ಇತರೆಲ್ಲ ದೇಶಗಳಿಗೆ ಮಾದರಿಯಾಗುವಂಥ ಅದೇನು ಮ್ಯಾಜಿಕ್ ಅಲ್ಲಿ ನಡೆದಿದೆ ಗೊತ್ತೆ?

1. ಕೊರೊನಾದ ಹೊಸ ಅವತಾರ ತಲೆ ಎತ್ತಿದೆ ಎಂಬುದು ಗೊತ್ತಾದ ತಕ್ಷಣವೇ ಜನವರಿಯಲ್ಲೇ ತೈವಾನ್ ವಿಶೇಷ ನಿಗಾ ದಳವನ್ನು ಸೃಷ್ಟಿಸಿ, ಬಿಗಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿತು. ಅಲ್ಲಿಂದ ಬರುವ ವಿಮಾನಗಳಲ್ಲಿ ಜ್ವರ ಪೀಡಿತರ ತಪಾಸಣೆಯನ್ನು ಆರಂಭಿಸಿತು. ವಿಮಾನ ನೆಲಕ್ಕಿಳಿಯುವ ಮೊದಲೇ ತಪಾಸಣೆ ನಡೆದಿದ್ದರಿಂದ ಉದ್ದುದ್ದ ಕ್ಯೂ ಇರಲಿಲ್ಲ.

2. ಫೆಬ್ರುವರಿ 10ರ ವೇಳೆಗೆ ಚೀನಾದಲ್ಲಿ 30 ಸಾವಿರ ಮಂದಿ ಕಾಯಿಲೆ ಬಿದ್ದಾಗ ತೈವಾನ್ನಲ್ಲಿ ಕೇವಲ 16 ರೋಗಿಗಳು ಪತ್ತೆ ಆಗಿದ್ದೇ ತಡ, ಚೀನಾದಿಂದ ಬರುವ ಎಲ್ಲ ಉಡ್ಡಾಣಗಳನ್ನೂ ಸ್ಥಗಿತಗೊಳಿಸಿ, ಹಾಂಗ್‌ಕಾಂಗ್ ಮೂಲಕ ಬರುವವರ ಪರೀಕ್ಷೆಯನ್ನು ವಿಮಾನದಲ್ಲೇ ನಡೆಸತೊಡಗಿತು. ತನ್ನ ದ್ವೀಪದ ಸುತ್ತ ಲಕ್ಷ್ಮಣ ರೇಖೆಯನ್ನು ಎಳೆಯಿತು.

2. ಮುಖವಾಡಗಳ ರಫ್ತನ್ನು ನಿಲ್ಲಿಸಿತು. ಉತ್ಪಾದನೆಯನ್ನು ಎಂಟು ಪಟ್ಟು ಹೆಚ್ಚಿಸಿತು. ಅವುಗಳ ತಯಾರಿಕೆಯನ್ನು ಮೊದಲು ಕೈದಿಗಳಿಗೆ (ಕೆಳಗಿನ ಚಿತ್ರ – ಹೊಲಿಗೆ ಕೆಲಸದಲ್ಲಿ ನಿರತರಾದ ಕೈದಿಗಳದ್ದು), ಆನಂತರ ಮಿಲಿಟರಿಗೇ ಒಪ್ಪಿಸಿತು. ಪ್ರತಿಯೊಬ್ಬ ಪ್ರಜೆಗೂ ವಾರಕ್ಕೆ ಮೂರು ನಾಲ್ಕು ಮುಖವಾಡಗಳ ವ್ಯವಸ್ಥೆ ಮಾಡಿತು. ಅದು ಎಲ್ಲಿ ಸಿಗುತ್ತದೆ ಎಂಬುದನ್ನು ಅವರವರ ಮೊಬೈಲ್‌ನಲ್ಲೇ ಮಾಹಿತಿ ಸಿಗುವಂತೆ ಮಾಡಿತು.

3. ಕೊರೊನಾ ಪೀಡಿತರನ್ನು ವೈರಸ್ ಥರಾ ಪರಿಗಣಿಸದೆ ಅವರನ್ನು ಪ್ರಜೆಗಳಂತೇ ನೋಡಿಕೊಂಡಿತು. ಅವರಿಗೆ ಅತ್ಯುತ್ತಮ ಕ್ವಾರಂಟೈನ್ ವ್ಯವಸ್ಥೆಯನ್ನು ಕಲ್ಪಿಸಿತು. ಅವರ ನಿವಾಸಕ್ಕೆ ಅನ್ನಾಹಾರ ಹಾಗೂ ಅಗತ್ಯ ವಸ್ತುಗಳ ಕೊರತೆ ಆಗದಂತೆ ನೋಡಿಕೊಂಡಿತು. ಪುಸ್ತಕಗಳನ್ನೂ ಒದಗಿಸಿತು. ದಿನಭತ್ಯೆಯನ್ನೂ ಘೋಷಿಸಿತು. ಜನರು ತಾವಾಗಿ ಖುಷಿಯಿಂದ ಕ್ವಾರಂಟೈನ್‌ಗೆ ಒಳಪಡುವಂತೆ ಮನವೊಲಿಸಿತು. ಅವರ ಫೋನ್ ನಂಬರನ್ನು ಪಡೆದು ಅದರಲ್ಲಿ ವಿಶೇಷ ಆಪ್ ಹಾಕಿತು. ಮನೆಬಿಟ್ಟು ಆಚೆ ಹೋದರೆ ಅವರ ಬ್ಯಾಂಕ್ ಖಾತೆಯಿಂದ ದೊಡ್ಡ ಮೊತ್ತದ ದಂಡ ವಜಾ ಆಗುತ್ತದೆಂದು ಟಿವಿ ಮೂಲಕ ಪ್ರಚಾರ ಕೊಟ್ಟಿತು. ಕಾಯಿಲೆ ಉಲ್ಪಣಗೊಂಡರೆ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿತು.

4. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುವದಂತಿಗಳನ್ನು ಪತ್ತೆ ಹಚ್ಚಬಲ್ಲ ವಿಶೇಷ ಅಲ್ಗೊರಿದಮ್ಮನ್ನು ಅದು ಸೃಷ್ಟಿಸಿತು. ಅದು ಚೀನಾದಿಂದ ಬರುವ ಸುಳ್ಳುಸುದ್ದಿಗಳನ್ನು ಫಿಲ್ಟರ್ ಮಾಡತೊಡಗಿತು. ದೇಶದೊಳಕ್ಕೆ ಬರುವ ಎಲ್ಲರ ಡೇಟಾಗಳನ್ನು ವಿಮಾ ಕಂಪನಿಗಳಿಂದ ತರಿಸಿಕೊಂಡು, ಅದನ್ನು ವೀಸಾ ವಿಭಾಗದ ಡೇಟಾ ಜೊತೆ ಜೋಡಿಸಿ, ಜ್ವರಪೀಡಿತರ ಕುರಿತ ಮಾಹಿತಿ ಎಲ್ಲ ಆಸ್ಪತ್ರೆ, ಔಷಧಾಲಯಗಳಿಗೂ ಮುಂಚಿತವಾಗಿಯೇ ಲಭಿಸುವಂತೆ ನೋಡಿಕೊಂಡಿತು.

 

* ಇತರ ಕೆಲವು ಮಹತ್ವದ ಮಾಹಿತಿಗಳು: ತೈವಾನ್ ದೇಶದ ಅಧ್ಯಕ್ಷರು ವಿಶ್ವವಿಖ್ಯಾತ ಲಂಡನ್ ಸ್ಕೂಲ್ ಆಫ್ ಇಕಾನಮಿಕ್ಸ್‌ನಲ್ಲಿ ಪಿಎಚ್‌ಡಿ ಮಾಡಿದ ಅರ್ಥತಜ್ಞ. ಉಪಾಧ್ಯಕ್ಷರು ಸ್ವತಃ ಎಪಿಡೀಮಿಯಾಲಜಿ ಡಾಕ್ಟರು- ಅಂದರೆ ಸಾಂಕ್ರಾಮಿಕ ರೋಗತಜ್ಞ. ಅಲ್ಲಿ ಕೊರೊನಾ ಸಂದರ್ಭದ ಅವರ TTT ಘೋಷವಾಕ್ಯ ಏನೆಂದರೆ ಟ್ರಸ್ಟ್, ಟ್ರಾನ್ಸಪರೆನ್ಸಿ ಮತ್ತು ಟೆಕ್ನಾಲಜಿ. ಜನರೊಂದಿಗಿನ ವಿಶ್ವಾಸ, ಪಾರದರ್ಶಕತೆ ಮತ್ತು ತಂತ್ರಜ್ಞಾನ. ಅಲ್ಲಿ ಕೇವಲ 20 ನಿಮಿಷಗಳಲ್ಲಿ ಕೋವಿಡ್ ಟೆಸ್ಟ್ ಫಲಿತಾಂಶ ಬರುವಂಥ ವೈದ್ಯಕೀಯ ವಿಧಾನ ಚಾಲ್ತಿಗೆ ಬಂದಿದೆ (ನಮ್ಮಲ್ಲಿ ಫಲಿತಾಂಶ ಬರಲು 6 ಗಂಟೆಯಿಂದ 24 ಗಂಟೆ ಬೇಕು).

*ತೈವಾನ್ ಜನಸಂಖ್ಯೆ 238 ಲಕ್ಷ ನಿಜ. ಆದರೆ ವುಹಾನ್‌ನಿಂದ ಕೇವಲ 943 ಕಿ.ಮೀ. ದೂರದಲ್ಲಿದೆ. ಅದಕ್ಕೆ ಹೋಲಿಸಿದರೆ ವುಹಾನ್ನಿಂದ 7500 ಕಿ.ಮೀ. ದೂರದ, ಕೇವಲ 192 ಲಕ್ಷ ಜನರಿರುವ ರುಮೇನಿಯಾದಲ್ಲಿ 7700 ರೋಗಿಗಳಿದ್ದು 392 ಮೃತರಾಗಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಇನ್ನೂ ಕಡಿಮೆ ಜನಸಂಖ್ಯೆಯ ಕತಾರ್ ದೇಶದಲ್ಲಿ 4103 ರೋಗಿಗಳಿದ್ದಾರೆ, 7 ಮಂದಿ ಗತಿಸಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಬಹ್ರೇನ್ ದೇಶದಲ್ಲೂ 1703 ರೋಗಿಗಳಿದ್ದು 7 ಮಂದಿ ಗತಿಸಿದ್ದಾರೆ. ಕೊನೆಯ ಈ ಎರಡೂ ದೇಶಗಳು ಭಾರೀ ತೈಲಧನಿಕ ಅಷ್ಟೇ ಅಲ್ಲ, ಮುನ್ನೆಚ್ಚರಿಕೆಗೆ ಅವಕ್ಕೆ ಮೂರು ತಿಂಗಳು ಕಾಲಾವಧಿ ಇತ್ತು.

ಕೊನೆಯ ಕುಟುಕು: ವುಹಾನ್ ಮಹಾಮಾರಿಯ ಅಲೆ ದಶದಿಕ್ಕುಗಳಲ್ಲಿ ಹಬ್ಬುತ್ತಿದ್ದಾಗ, ಎಲ್ಲ ಬಿಬಿಸಿ-ಸಿಎನ್‌ಎನ್‌ಗಳಲ್ಲಿ ಅದರದೇ ಪ್ರಮುಖ ಸುದ್ದಿ ಬರುತ್ತಿದ್ದಾಗ ನಮ್ಮ ಮಾಧ್ಯಮಗಳ ಗಮನವೆಲ್ಲ ಕಮಲನಾಥ್ ಸರಕಾರವನ್ನು ಕೆಡವುವ ಕಮಲದ ಸರ್ಕಸ್ ಕಡೆ, ಹಾಗೂ ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಟ್ರಂಪ್ ಮಹಾಶಯನ ಟ್ರಂಪೆಟ್‌ ಕಡೆ ನೆಟ್ಟಿತ್ತು.

(ಕೃಪೆ: ನಾಗೇಶ್ ಹೆಗಡೆ ಅವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...