Homeಅಂತರಾಷ್ಟ್ರೀಯತೈವಾನ್ ದೇಶದ ಕೊರೊನಾ ಚಮತ್ಕಾರ: ನಾಗೇಶ್‌ ಹೆಗಡೆ ಅವರ ಲೇಖನ

ತೈವಾನ್ ದೇಶದ ಕೊರೊನಾ ಚಮತ್ಕಾರ: ನಾಗೇಶ್‌ ಹೆಗಡೆ ಅವರ ಲೇಖನ

- Advertisement -
- Advertisement -

ಚೀನಾದ ಪಕ್ಕದಲ್ಲೇ ಇರುವ ಪುಟ್ಟ ದ್ವೀಪದೇಶ ತೈವಾನ್. ಕೊರೊನಾ ದಾಳಿಯಿಂದ ತತ್ತರಿಸಿ ಹೋಗಬೇಕಿತ್ತು. ಏಕೆಂದರೆ ಸುಮಾರು ಹದಿಮೂರು ಲಕ್ಷ ಮಂದಿ ತೈವಾನೀಯರು ಚೀನಾದೊಂದಿಗೆ ನಿತ್ಯ ಸಂಪರ್ಕ ಇಟ್ಟುಕೊಂಡಿದ್ದಾರೆ. ದಿನವೂ ವುಹಾನ್ ಜೊತೆ ನೇರ ವಿಮಾನಗಳ ಸಂಚಾರವಿದೆ. (2019ರಲ್ಲಿ 27 ಲಕ್ಷ ಜನರು ಚೀನಾಕ್ಕೆ ಹೋಗಿ ಬಂದಿದ್ದಾರೆ.) ಆದರೆ ಅಚ್ಚರಿ ನೋಡಿ: ಅಲ್ಲಿ ಕೇವಲ 395 ಜನರಲ್ಲಿ ರೋಗಲಕ್ಷಣ ಕಂಡಿದೆ. 155 ಜನರು ಗುಣಮುಖರಾಗಿದ್ದಾರೆ. 6 ಜನ ಮಾತ್ರ ಸಾವಪ್ಪಿದ್ದಾರೆ. ಹಾಗೆಂದು ಅಲ್ಲಿನ ಪ್ರಜೆಗಳ ಮೇಲೆ ತುರ್ತುಸ್ಥಿತಿಯನ್ನು ಹೇರಿಲ್ಲ. ಯಾವ ಊರನ್ನೂ ಲಾಕ್‌ಡೌನ್ ಮಾಡಲಿಲ್ಲ. ಮನೆಮನೆಗೆ ಹೊಕ್ಕು ಟೆಸ್ಟಿಂಗ್ ಮಾಡಿಲ್ಲ. ಪೊಲೀಸರ ದಬ್ಬಾಳಿಕೆ ಇಲ್ಲ (ಅಲ್ಲಿ ಮಿಲಿಟರಿ ಆಡಳಿತವಿಲ್ಲ, ಪ್ರಜಾಪ್ರಭುತ್ವ ಇದೆ). ವಲಸೆ ಹೊರಟವರ ಗೋಳಿನ ಕತೆಗಳಿಲ್ಲ.

ಜಗತ್ತಿನ ಇತರೆಲ್ಲ ದೇಶಗಳಿಗೆ ಮಾದರಿಯಾಗುವಂಥ ಅದೇನು ಮ್ಯಾಜಿಕ್ ಅಲ್ಲಿ ನಡೆದಿದೆ ಗೊತ್ತೆ?

1. ಕೊರೊನಾದ ಹೊಸ ಅವತಾರ ತಲೆ ಎತ್ತಿದೆ ಎಂಬುದು ಗೊತ್ತಾದ ತಕ್ಷಣವೇ ಜನವರಿಯಲ್ಲೇ ತೈವಾನ್ ವಿಶೇಷ ನಿಗಾ ದಳವನ್ನು ಸೃಷ್ಟಿಸಿ, ಬಿಗಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿತು. ಅಲ್ಲಿಂದ ಬರುವ ವಿಮಾನಗಳಲ್ಲಿ ಜ್ವರ ಪೀಡಿತರ ತಪಾಸಣೆಯನ್ನು ಆರಂಭಿಸಿತು. ವಿಮಾನ ನೆಲಕ್ಕಿಳಿಯುವ ಮೊದಲೇ ತಪಾಸಣೆ ನಡೆದಿದ್ದರಿಂದ ಉದ್ದುದ್ದ ಕ್ಯೂ ಇರಲಿಲ್ಲ.

2. ಫೆಬ್ರುವರಿ 10ರ ವೇಳೆಗೆ ಚೀನಾದಲ್ಲಿ 30 ಸಾವಿರ ಮಂದಿ ಕಾಯಿಲೆ ಬಿದ್ದಾಗ ತೈವಾನ್ನಲ್ಲಿ ಕೇವಲ 16 ರೋಗಿಗಳು ಪತ್ತೆ ಆಗಿದ್ದೇ ತಡ, ಚೀನಾದಿಂದ ಬರುವ ಎಲ್ಲ ಉಡ್ಡಾಣಗಳನ್ನೂ ಸ್ಥಗಿತಗೊಳಿಸಿ, ಹಾಂಗ್‌ಕಾಂಗ್ ಮೂಲಕ ಬರುವವರ ಪರೀಕ್ಷೆಯನ್ನು ವಿಮಾನದಲ್ಲೇ ನಡೆಸತೊಡಗಿತು. ತನ್ನ ದ್ವೀಪದ ಸುತ್ತ ಲಕ್ಷ್ಮಣ ರೇಖೆಯನ್ನು ಎಳೆಯಿತು.

2. ಮುಖವಾಡಗಳ ರಫ್ತನ್ನು ನಿಲ್ಲಿಸಿತು. ಉತ್ಪಾದನೆಯನ್ನು ಎಂಟು ಪಟ್ಟು ಹೆಚ್ಚಿಸಿತು. ಅವುಗಳ ತಯಾರಿಕೆಯನ್ನು ಮೊದಲು ಕೈದಿಗಳಿಗೆ (ಕೆಳಗಿನ ಚಿತ್ರ – ಹೊಲಿಗೆ ಕೆಲಸದಲ್ಲಿ ನಿರತರಾದ ಕೈದಿಗಳದ್ದು), ಆನಂತರ ಮಿಲಿಟರಿಗೇ ಒಪ್ಪಿಸಿತು. ಪ್ರತಿಯೊಬ್ಬ ಪ್ರಜೆಗೂ ವಾರಕ್ಕೆ ಮೂರು ನಾಲ್ಕು ಮುಖವಾಡಗಳ ವ್ಯವಸ್ಥೆ ಮಾಡಿತು. ಅದು ಎಲ್ಲಿ ಸಿಗುತ್ತದೆ ಎಂಬುದನ್ನು ಅವರವರ ಮೊಬೈಲ್‌ನಲ್ಲೇ ಮಾಹಿತಿ ಸಿಗುವಂತೆ ಮಾಡಿತು.

3. ಕೊರೊನಾ ಪೀಡಿತರನ್ನು ವೈರಸ್ ಥರಾ ಪರಿಗಣಿಸದೆ ಅವರನ್ನು ಪ್ರಜೆಗಳಂತೇ ನೋಡಿಕೊಂಡಿತು. ಅವರಿಗೆ ಅತ್ಯುತ್ತಮ ಕ್ವಾರಂಟೈನ್ ವ್ಯವಸ್ಥೆಯನ್ನು ಕಲ್ಪಿಸಿತು. ಅವರ ನಿವಾಸಕ್ಕೆ ಅನ್ನಾಹಾರ ಹಾಗೂ ಅಗತ್ಯ ವಸ್ತುಗಳ ಕೊರತೆ ಆಗದಂತೆ ನೋಡಿಕೊಂಡಿತು. ಪುಸ್ತಕಗಳನ್ನೂ ಒದಗಿಸಿತು. ದಿನಭತ್ಯೆಯನ್ನೂ ಘೋಷಿಸಿತು. ಜನರು ತಾವಾಗಿ ಖುಷಿಯಿಂದ ಕ್ವಾರಂಟೈನ್‌ಗೆ ಒಳಪಡುವಂತೆ ಮನವೊಲಿಸಿತು. ಅವರ ಫೋನ್ ನಂಬರನ್ನು ಪಡೆದು ಅದರಲ್ಲಿ ವಿಶೇಷ ಆಪ್ ಹಾಕಿತು. ಮನೆಬಿಟ್ಟು ಆಚೆ ಹೋದರೆ ಅವರ ಬ್ಯಾಂಕ್ ಖಾತೆಯಿಂದ ದೊಡ್ಡ ಮೊತ್ತದ ದಂಡ ವಜಾ ಆಗುತ್ತದೆಂದು ಟಿವಿ ಮೂಲಕ ಪ್ರಚಾರ ಕೊಟ್ಟಿತು. ಕಾಯಿಲೆ ಉಲ್ಪಣಗೊಂಡರೆ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿತು.

4. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುವದಂತಿಗಳನ್ನು ಪತ್ತೆ ಹಚ್ಚಬಲ್ಲ ವಿಶೇಷ ಅಲ್ಗೊರಿದಮ್ಮನ್ನು ಅದು ಸೃಷ್ಟಿಸಿತು. ಅದು ಚೀನಾದಿಂದ ಬರುವ ಸುಳ್ಳುಸುದ್ದಿಗಳನ್ನು ಫಿಲ್ಟರ್ ಮಾಡತೊಡಗಿತು. ದೇಶದೊಳಕ್ಕೆ ಬರುವ ಎಲ್ಲರ ಡೇಟಾಗಳನ್ನು ವಿಮಾ ಕಂಪನಿಗಳಿಂದ ತರಿಸಿಕೊಂಡು, ಅದನ್ನು ವೀಸಾ ವಿಭಾಗದ ಡೇಟಾ ಜೊತೆ ಜೋಡಿಸಿ, ಜ್ವರಪೀಡಿತರ ಕುರಿತ ಮಾಹಿತಿ ಎಲ್ಲ ಆಸ್ಪತ್ರೆ, ಔಷಧಾಲಯಗಳಿಗೂ ಮುಂಚಿತವಾಗಿಯೇ ಲಭಿಸುವಂತೆ ನೋಡಿಕೊಂಡಿತು.

 

* ಇತರ ಕೆಲವು ಮಹತ್ವದ ಮಾಹಿತಿಗಳು: ತೈವಾನ್ ದೇಶದ ಅಧ್ಯಕ್ಷರು ವಿಶ್ವವಿಖ್ಯಾತ ಲಂಡನ್ ಸ್ಕೂಲ್ ಆಫ್ ಇಕಾನಮಿಕ್ಸ್‌ನಲ್ಲಿ ಪಿಎಚ್‌ಡಿ ಮಾಡಿದ ಅರ್ಥತಜ್ಞ. ಉಪಾಧ್ಯಕ್ಷರು ಸ್ವತಃ ಎಪಿಡೀಮಿಯಾಲಜಿ ಡಾಕ್ಟರು- ಅಂದರೆ ಸಾಂಕ್ರಾಮಿಕ ರೋಗತಜ್ಞ. ಅಲ್ಲಿ ಕೊರೊನಾ ಸಂದರ್ಭದ ಅವರ TTT ಘೋಷವಾಕ್ಯ ಏನೆಂದರೆ ಟ್ರಸ್ಟ್, ಟ್ರಾನ್ಸಪರೆನ್ಸಿ ಮತ್ತು ಟೆಕ್ನಾಲಜಿ. ಜನರೊಂದಿಗಿನ ವಿಶ್ವಾಸ, ಪಾರದರ್ಶಕತೆ ಮತ್ತು ತಂತ್ರಜ್ಞಾನ. ಅಲ್ಲಿ ಕೇವಲ 20 ನಿಮಿಷಗಳಲ್ಲಿ ಕೋವಿಡ್ ಟೆಸ್ಟ್ ಫಲಿತಾಂಶ ಬರುವಂಥ ವೈದ್ಯಕೀಯ ವಿಧಾನ ಚಾಲ್ತಿಗೆ ಬಂದಿದೆ (ನಮ್ಮಲ್ಲಿ ಫಲಿತಾಂಶ ಬರಲು 6 ಗಂಟೆಯಿಂದ 24 ಗಂಟೆ ಬೇಕು).

*ತೈವಾನ್ ಜನಸಂಖ್ಯೆ 238 ಲಕ್ಷ ನಿಜ. ಆದರೆ ವುಹಾನ್‌ನಿಂದ ಕೇವಲ 943 ಕಿ.ಮೀ. ದೂರದಲ್ಲಿದೆ. ಅದಕ್ಕೆ ಹೋಲಿಸಿದರೆ ವುಹಾನ್ನಿಂದ 7500 ಕಿ.ಮೀ. ದೂರದ, ಕೇವಲ 192 ಲಕ್ಷ ಜನರಿರುವ ರುಮೇನಿಯಾದಲ್ಲಿ 7700 ರೋಗಿಗಳಿದ್ದು 392 ಮೃತರಾಗಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಇನ್ನೂ ಕಡಿಮೆ ಜನಸಂಖ್ಯೆಯ ಕತಾರ್ ದೇಶದಲ್ಲಿ 4103 ರೋಗಿಗಳಿದ್ದಾರೆ, 7 ಮಂದಿ ಗತಿಸಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಬಹ್ರೇನ್ ದೇಶದಲ್ಲೂ 1703 ರೋಗಿಗಳಿದ್ದು 7 ಮಂದಿ ಗತಿಸಿದ್ದಾರೆ. ಕೊನೆಯ ಈ ಎರಡೂ ದೇಶಗಳು ಭಾರೀ ತೈಲಧನಿಕ ಅಷ್ಟೇ ಅಲ್ಲ, ಮುನ್ನೆಚ್ಚರಿಕೆಗೆ ಅವಕ್ಕೆ ಮೂರು ತಿಂಗಳು ಕಾಲಾವಧಿ ಇತ್ತು.

ಕೊನೆಯ ಕುಟುಕು: ವುಹಾನ್ ಮಹಾಮಾರಿಯ ಅಲೆ ದಶದಿಕ್ಕುಗಳಲ್ಲಿ ಹಬ್ಬುತ್ತಿದ್ದಾಗ, ಎಲ್ಲ ಬಿಬಿಸಿ-ಸಿಎನ್‌ಎನ್‌ಗಳಲ್ಲಿ ಅದರದೇ ಪ್ರಮುಖ ಸುದ್ದಿ ಬರುತ್ತಿದ್ದಾಗ ನಮ್ಮ ಮಾಧ್ಯಮಗಳ ಗಮನವೆಲ್ಲ ಕಮಲನಾಥ್ ಸರಕಾರವನ್ನು ಕೆಡವುವ ಕಮಲದ ಸರ್ಕಸ್ ಕಡೆ, ಹಾಗೂ ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಟ್ರಂಪ್ ಮಹಾಶಯನ ಟ್ರಂಪೆಟ್‌ ಕಡೆ ನೆಟ್ಟಿತ್ತು.

(ಕೃಪೆ: ನಾಗೇಶ್ ಹೆಗಡೆ ಅವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...

ಸಂವಿಧಾನ, ಸದನದ ಘನತೆ ಉಳಿಸಲು ಲೋಕಸಭಾ ಸ್ಪೀಕರ್ ವಿರುದ್ಧ ನಿರ್ಣಯ: ಕಾಂಗ್ರೆಸ್ ಸಂಸದ ಗೊಗೊಯ್

ಸ್ಪೀಕರ್ ಓಂ ಬಿರ್ಲಾ ಪಕ್ಷಪಾತಿ ವರ್ತನೆ ಹೊಂದಿದ್ದಾರೆ. ಹಾಗಾಗಿ, ಸಂವಿಧಾನ ಉಳಿಸಲು ವಿರೋಧ ಪಕ್ಷವು ಅವರನ್ನು ಪದಚ್ಯುತಗೊಳಿಸುವ ನಿರ್ಣಯ ತರಬೇಕಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಮಂಗಳವಾರ (ಮಾ.10) ಲೋಕಸಭೆಯಲ್ಲಿ ಹೇಳಿದರು....

ನಿರಂತರ ಎಲ್‌ಪಿಜಿ ಪೂರೈಕೆ ಖಚಿತಪಡಿಸಿಕೊಳ್ಳಲು ‘ಅಗತ್ಯ ಸರಕು ಕಾಯ್ದೆ’ ಜಾರಿಗೆ ತಂದ ಕೇಂದ್ರ

ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆ ಕುರಿತು ದೂರು ನೀಡಿದ ನಂತರ, ದೇಶೀಯ ಅಡುಗೆ ಅನಿಲದ ನಿರಂತರ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು 'ಅಗತ್ಯ ಸರಕು ಕಾಯ್ದೆ'ಯನ್ನು ಜಾರಿಗೆ ತಂದಿದೆ ಎಂದು...

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...