Homeಅಂತರಾಷ್ಟ್ರೀಯತೈವಾನ್ ದೇಶದ ಕೊರೊನಾ ಚಮತ್ಕಾರ: ನಾಗೇಶ್‌ ಹೆಗಡೆ ಅವರ ಲೇಖನ

ತೈವಾನ್ ದೇಶದ ಕೊರೊನಾ ಚಮತ್ಕಾರ: ನಾಗೇಶ್‌ ಹೆಗಡೆ ಅವರ ಲೇಖನ

- Advertisement -
- Advertisement -

ಚೀನಾದ ಪಕ್ಕದಲ್ಲೇ ಇರುವ ಪುಟ್ಟ ದ್ವೀಪದೇಶ ತೈವಾನ್. ಕೊರೊನಾ ದಾಳಿಯಿಂದ ತತ್ತರಿಸಿ ಹೋಗಬೇಕಿತ್ತು. ಏಕೆಂದರೆ ಸುಮಾರು ಹದಿಮೂರು ಲಕ್ಷ ಮಂದಿ ತೈವಾನೀಯರು ಚೀನಾದೊಂದಿಗೆ ನಿತ್ಯ ಸಂಪರ್ಕ ಇಟ್ಟುಕೊಂಡಿದ್ದಾರೆ. ದಿನವೂ ವುಹಾನ್ ಜೊತೆ ನೇರ ವಿಮಾನಗಳ ಸಂಚಾರವಿದೆ. (2019ರಲ್ಲಿ 27 ಲಕ್ಷ ಜನರು ಚೀನಾಕ್ಕೆ ಹೋಗಿ ಬಂದಿದ್ದಾರೆ.) ಆದರೆ ಅಚ್ಚರಿ ನೋಡಿ: ಅಲ್ಲಿ ಕೇವಲ 395 ಜನರಲ್ಲಿ ರೋಗಲಕ್ಷಣ ಕಂಡಿದೆ. 155 ಜನರು ಗುಣಮುಖರಾಗಿದ್ದಾರೆ. 6 ಜನ ಮಾತ್ರ ಸಾವಪ್ಪಿದ್ದಾರೆ. ಹಾಗೆಂದು ಅಲ್ಲಿನ ಪ್ರಜೆಗಳ ಮೇಲೆ ತುರ್ತುಸ್ಥಿತಿಯನ್ನು ಹೇರಿಲ್ಲ. ಯಾವ ಊರನ್ನೂ ಲಾಕ್‌ಡೌನ್ ಮಾಡಲಿಲ್ಲ. ಮನೆಮನೆಗೆ ಹೊಕ್ಕು ಟೆಸ್ಟಿಂಗ್ ಮಾಡಿಲ್ಲ. ಪೊಲೀಸರ ದಬ್ಬಾಳಿಕೆ ಇಲ್ಲ (ಅಲ್ಲಿ ಮಿಲಿಟರಿ ಆಡಳಿತವಿಲ್ಲ, ಪ್ರಜಾಪ್ರಭುತ್ವ ಇದೆ). ವಲಸೆ ಹೊರಟವರ ಗೋಳಿನ ಕತೆಗಳಿಲ್ಲ.

ಜಗತ್ತಿನ ಇತರೆಲ್ಲ ದೇಶಗಳಿಗೆ ಮಾದರಿಯಾಗುವಂಥ ಅದೇನು ಮ್ಯಾಜಿಕ್ ಅಲ್ಲಿ ನಡೆದಿದೆ ಗೊತ್ತೆ?

1. ಕೊರೊನಾದ ಹೊಸ ಅವತಾರ ತಲೆ ಎತ್ತಿದೆ ಎಂಬುದು ಗೊತ್ತಾದ ತಕ್ಷಣವೇ ಜನವರಿಯಲ್ಲೇ ತೈವಾನ್ ವಿಶೇಷ ನಿಗಾ ದಳವನ್ನು ಸೃಷ್ಟಿಸಿ, ಬಿಗಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿತು. ಅಲ್ಲಿಂದ ಬರುವ ವಿಮಾನಗಳಲ್ಲಿ ಜ್ವರ ಪೀಡಿತರ ತಪಾಸಣೆಯನ್ನು ಆರಂಭಿಸಿತು. ವಿಮಾನ ನೆಲಕ್ಕಿಳಿಯುವ ಮೊದಲೇ ತಪಾಸಣೆ ನಡೆದಿದ್ದರಿಂದ ಉದ್ದುದ್ದ ಕ್ಯೂ ಇರಲಿಲ್ಲ.

2. ಫೆಬ್ರುವರಿ 10ರ ವೇಳೆಗೆ ಚೀನಾದಲ್ಲಿ 30 ಸಾವಿರ ಮಂದಿ ಕಾಯಿಲೆ ಬಿದ್ದಾಗ ತೈವಾನ್ನಲ್ಲಿ ಕೇವಲ 16 ರೋಗಿಗಳು ಪತ್ತೆ ಆಗಿದ್ದೇ ತಡ, ಚೀನಾದಿಂದ ಬರುವ ಎಲ್ಲ ಉಡ್ಡಾಣಗಳನ್ನೂ ಸ್ಥಗಿತಗೊಳಿಸಿ, ಹಾಂಗ್‌ಕಾಂಗ್ ಮೂಲಕ ಬರುವವರ ಪರೀಕ್ಷೆಯನ್ನು ವಿಮಾನದಲ್ಲೇ ನಡೆಸತೊಡಗಿತು. ತನ್ನ ದ್ವೀಪದ ಸುತ್ತ ಲಕ್ಷ್ಮಣ ರೇಖೆಯನ್ನು ಎಳೆಯಿತು.

2. ಮುಖವಾಡಗಳ ರಫ್ತನ್ನು ನಿಲ್ಲಿಸಿತು. ಉತ್ಪಾದನೆಯನ್ನು ಎಂಟು ಪಟ್ಟು ಹೆಚ್ಚಿಸಿತು. ಅವುಗಳ ತಯಾರಿಕೆಯನ್ನು ಮೊದಲು ಕೈದಿಗಳಿಗೆ (ಕೆಳಗಿನ ಚಿತ್ರ – ಹೊಲಿಗೆ ಕೆಲಸದಲ್ಲಿ ನಿರತರಾದ ಕೈದಿಗಳದ್ದು), ಆನಂತರ ಮಿಲಿಟರಿಗೇ ಒಪ್ಪಿಸಿತು. ಪ್ರತಿಯೊಬ್ಬ ಪ್ರಜೆಗೂ ವಾರಕ್ಕೆ ಮೂರು ನಾಲ್ಕು ಮುಖವಾಡಗಳ ವ್ಯವಸ್ಥೆ ಮಾಡಿತು. ಅದು ಎಲ್ಲಿ ಸಿಗುತ್ತದೆ ಎಂಬುದನ್ನು ಅವರವರ ಮೊಬೈಲ್‌ನಲ್ಲೇ ಮಾಹಿತಿ ಸಿಗುವಂತೆ ಮಾಡಿತು.

3. ಕೊರೊನಾ ಪೀಡಿತರನ್ನು ವೈರಸ್ ಥರಾ ಪರಿಗಣಿಸದೆ ಅವರನ್ನು ಪ್ರಜೆಗಳಂತೇ ನೋಡಿಕೊಂಡಿತು. ಅವರಿಗೆ ಅತ್ಯುತ್ತಮ ಕ್ವಾರಂಟೈನ್ ವ್ಯವಸ್ಥೆಯನ್ನು ಕಲ್ಪಿಸಿತು. ಅವರ ನಿವಾಸಕ್ಕೆ ಅನ್ನಾಹಾರ ಹಾಗೂ ಅಗತ್ಯ ವಸ್ತುಗಳ ಕೊರತೆ ಆಗದಂತೆ ನೋಡಿಕೊಂಡಿತು. ಪುಸ್ತಕಗಳನ್ನೂ ಒದಗಿಸಿತು. ದಿನಭತ್ಯೆಯನ್ನೂ ಘೋಷಿಸಿತು. ಜನರು ತಾವಾಗಿ ಖುಷಿಯಿಂದ ಕ್ವಾರಂಟೈನ್‌ಗೆ ಒಳಪಡುವಂತೆ ಮನವೊಲಿಸಿತು. ಅವರ ಫೋನ್ ನಂಬರನ್ನು ಪಡೆದು ಅದರಲ್ಲಿ ವಿಶೇಷ ಆಪ್ ಹಾಕಿತು. ಮನೆಬಿಟ್ಟು ಆಚೆ ಹೋದರೆ ಅವರ ಬ್ಯಾಂಕ್ ಖಾತೆಯಿಂದ ದೊಡ್ಡ ಮೊತ್ತದ ದಂಡ ವಜಾ ಆಗುತ್ತದೆಂದು ಟಿವಿ ಮೂಲಕ ಪ್ರಚಾರ ಕೊಟ್ಟಿತು. ಕಾಯಿಲೆ ಉಲ್ಪಣಗೊಂಡರೆ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿತು.

4. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುವದಂತಿಗಳನ್ನು ಪತ್ತೆ ಹಚ್ಚಬಲ್ಲ ವಿಶೇಷ ಅಲ್ಗೊರಿದಮ್ಮನ್ನು ಅದು ಸೃಷ್ಟಿಸಿತು. ಅದು ಚೀನಾದಿಂದ ಬರುವ ಸುಳ್ಳುಸುದ್ದಿಗಳನ್ನು ಫಿಲ್ಟರ್ ಮಾಡತೊಡಗಿತು. ದೇಶದೊಳಕ್ಕೆ ಬರುವ ಎಲ್ಲರ ಡೇಟಾಗಳನ್ನು ವಿಮಾ ಕಂಪನಿಗಳಿಂದ ತರಿಸಿಕೊಂಡು, ಅದನ್ನು ವೀಸಾ ವಿಭಾಗದ ಡೇಟಾ ಜೊತೆ ಜೋಡಿಸಿ, ಜ್ವರಪೀಡಿತರ ಕುರಿತ ಮಾಹಿತಿ ಎಲ್ಲ ಆಸ್ಪತ್ರೆ, ಔಷಧಾಲಯಗಳಿಗೂ ಮುಂಚಿತವಾಗಿಯೇ ಲಭಿಸುವಂತೆ ನೋಡಿಕೊಂಡಿತು.

 

* ಇತರ ಕೆಲವು ಮಹತ್ವದ ಮಾಹಿತಿಗಳು: ತೈವಾನ್ ದೇಶದ ಅಧ್ಯಕ್ಷರು ವಿಶ್ವವಿಖ್ಯಾತ ಲಂಡನ್ ಸ್ಕೂಲ್ ಆಫ್ ಇಕಾನಮಿಕ್ಸ್‌ನಲ್ಲಿ ಪಿಎಚ್‌ಡಿ ಮಾಡಿದ ಅರ್ಥತಜ್ಞ. ಉಪಾಧ್ಯಕ್ಷರು ಸ್ವತಃ ಎಪಿಡೀಮಿಯಾಲಜಿ ಡಾಕ್ಟರು- ಅಂದರೆ ಸಾಂಕ್ರಾಮಿಕ ರೋಗತಜ್ಞ. ಅಲ್ಲಿ ಕೊರೊನಾ ಸಂದರ್ಭದ ಅವರ TTT ಘೋಷವಾಕ್ಯ ಏನೆಂದರೆ ಟ್ರಸ್ಟ್, ಟ್ರಾನ್ಸಪರೆನ್ಸಿ ಮತ್ತು ಟೆಕ್ನಾಲಜಿ. ಜನರೊಂದಿಗಿನ ವಿಶ್ವಾಸ, ಪಾರದರ್ಶಕತೆ ಮತ್ತು ತಂತ್ರಜ್ಞಾನ. ಅಲ್ಲಿ ಕೇವಲ 20 ನಿಮಿಷಗಳಲ್ಲಿ ಕೋವಿಡ್ ಟೆಸ್ಟ್ ಫಲಿತಾಂಶ ಬರುವಂಥ ವೈದ್ಯಕೀಯ ವಿಧಾನ ಚಾಲ್ತಿಗೆ ಬಂದಿದೆ (ನಮ್ಮಲ್ಲಿ ಫಲಿತಾಂಶ ಬರಲು 6 ಗಂಟೆಯಿಂದ 24 ಗಂಟೆ ಬೇಕು).

*ತೈವಾನ್ ಜನಸಂಖ್ಯೆ 238 ಲಕ್ಷ ನಿಜ. ಆದರೆ ವುಹಾನ್‌ನಿಂದ ಕೇವಲ 943 ಕಿ.ಮೀ. ದೂರದಲ್ಲಿದೆ. ಅದಕ್ಕೆ ಹೋಲಿಸಿದರೆ ವುಹಾನ್ನಿಂದ 7500 ಕಿ.ಮೀ. ದೂರದ, ಕೇವಲ 192 ಲಕ್ಷ ಜನರಿರುವ ರುಮೇನಿಯಾದಲ್ಲಿ 7700 ರೋಗಿಗಳಿದ್ದು 392 ಮೃತರಾಗಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಇನ್ನೂ ಕಡಿಮೆ ಜನಸಂಖ್ಯೆಯ ಕತಾರ್ ದೇಶದಲ್ಲಿ 4103 ರೋಗಿಗಳಿದ್ದಾರೆ, 7 ಮಂದಿ ಗತಿಸಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಬಹ್ರೇನ್ ದೇಶದಲ್ಲೂ 1703 ರೋಗಿಗಳಿದ್ದು 7 ಮಂದಿ ಗತಿಸಿದ್ದಾರೆ. ಕೊನೆಯ ಈ ಎರಡೂ ದೇಶಗಳು ಭಾರೀ ತೈಲಧನಿಕ ಅಷ್ಟೇ ಅಲ್ಲ, ಮುನ್ನೆಚ್ಚರಿಕೆಗೆ ಅವಕ್ಕೆ ಮೂರು ತಿಂಗಳು ಕಾಲಾವಧಿ ಇತ್ತು.

ಕೊನೆಯ ಕುಟುಕು: ವುಹಾನ್ ಮಹಾಮಾರಿಯ ಅಲೆ ದಶದಿಕ್ಕುಗಳಲ್ಲಿ ಹಬ್ಬುತ್ತಿದ್ದಾಗ, ಎಲ್ಲ ಬಿಬಿಸಿ-ಸಿಎನ್‌ಎನ್‌ಗಳಲ್ಲಿ ಅದರದೇ ಪ್ರಮುಖ ಸುದ್ದಿ ಬರುತ್ತಿದ್ದಾಗ ನಮ್ಮ ಮಾಧ್ಯಮಗಳ ಗಮನವೆಲ್ಲ ಕಮಲನಾಥ್ ಸರಕಾರವನ್ನು ಕೆಡವುವ ಕಮಲದ ಸರ್ಕಸ್ ಕಡೆ, ಹಾಗೂ ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಟ್ರಂಪ್ ಮಹಾಶಯನ ಟ್ರಂಪೆಟ್‌ ಕಡೆ ನೆಟ್ಟಿತ್ತು.

(ಕೃಪೆ: ನಾಗೇಶ್ ಹೆಗಡೆ ಅವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...