Homeಅಂತರಾಷ್ಟ್ರೀಯತೈವಾನ್ ದೇಶದ ಕೊರೊನಾ ಚಮತ್ಕಾರ: ನಾಗೇಶ್‌ ಹೆಗಡೆ ಅವರ ಲೇಖನ

ತೈವಾನ್ ದೇಶದ ಕೊರೊನಾ ಚಮತ್ಕಾರ: ನಾಗೇಶ್‌ ಹೆಗಡೆ ಅವರ ಲೇಖನ

- Advertisement -
- Advertisement -

ಚೀನಾದ ಪಕ್ಕದಲ್ಲೇ ಇರುವ ಪುಟ್ಟ ದ್ವೀಪದೇಶ ತೈವಾನ್. ಕೊರೊನಾ ದಾಳಿಯಿಂದ ತತ್ತರಿಸಿ ಹೋಗಬೇಕಿತ್ತು. ಏಕೆಂದರೆ ಸುಮಾರು ಹದಿಮೂರು ಲಕ್ಷ ಮಂದಿ ತೈವಾನೀಯರು ಚೀನಾದೊಂದಿಗೆ ನಿತ್ಯ ಸಂಪರ್ಕ ಇಟ್ಟುಕೊಂಡಿದ್ದಾರೆ. ದಿನವೂ ವುಹಾನ್ ಜೊತೆ ನೇರ ವಿಮಾನಗಳ ಸಂಚಾರವಿದೆ. (2019ರಲ್ಲಿ 27 ಲಕ್ಷ ಜನರು ಚೀನಾಕ್ಕೆ ಹೋಗಿ ಬಂದಿದ್ದಾರೆ.) ಆದರೆ ಅಚ್ಚರಿ ನೋಡಿ: ಅಲ್ಲಿ ಕೇವಲ 395 ಜನರಲ್ಲಿ ರೋಗಲಕ್ಷಣ ಕಂಡಿದೆ. 155 ಜನರು ಗುಣಮುಖರಾಗಿದ್ದಾರೆ. 6 ಜನ ಮಾತ್ರ ಸಾವಪ್ಪಿದ್ದಾರೆ. ಹಾಗೆಂದು ಅಲ್ಲಿನ ಪ್ರಜೆಗಳ ಮೇಲೆ ತುರ್ತುಸ್ಥಿತಿಯನ್ನು ಹೇರಿಲ್ಲ. ಯಾವ ಊರನ್ನೂ ಲಾಕ್‌ಡೌನ್ ಮಾಡಲಿಲ್ಲ. ಮನೆಮನೆಗೆ ಹೊಕ್ಕು ಟೆಸ್ಟಿಂಗ್ ಮಾಡಿಲ್ಲ. ಪೊಲೀಸರ ದಬ್ಬಾಳಿಕೆ ಇಲ್ಲ (ಅಲ್ಲಿ ಮಿಲಿಟರಿ ಆಡಳಿತವಿಲ್ಲ, ಪ್ರಜಾಪ್ರಭುತ್ವ ಇದೆ). ವಲಸೆ ಹೊರಟವರ ಗೋಳಿನ ಕತೆಗಳಿಲ್ಲ.

ಜಗತ್ತಿನ ಇತರೆಲ್ಲ ದೇಶಗಳಿಗೆ ಮಾದರಿಯಾಗುವಂಥ ಅದೇನು ಮ್ಯಾಜಿಕ್ ಅಲ್ಲಿ ನಡೆದಿದೆ ಗೊತ್ತೆ?

1. ಕೊರೊನಾದ ಹೊಸ ಅವತಾರ ತಲೆ ಎತ್ತಿದೆ ಎಂಬುದು ಗೊತ್ತಾದ ತಕ್ಷಣವೇ ಜನವರಿಯಲ್ಲೇ ತೈವಾನ್ ವಿಶೇಷ ನಿಗಾ ದಳವನ್ನು ಸೃಷ್ಟಿಸಿ, ಬಿಗಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿತು. ಅಲ್ಲಿಂದ ಬರುವ ವಿಮಾನಗಳಲ್ಲಿ ಜ್ವರ ಪೀಡಿತರ ತಪಾಸಣೆಯನ್ನು ಆರಂಭಿಸಿತು. ವಿಮಾನ ನೆಲಕ್ಕಿಳಿಯುವ ಮೊದಲೇ ತಪಾಸಣೆ ನಡೆದಿದ್ದರಿಂದ ಉದ್ದುದ್ದ ಕ್ಯೂ ಇರಲಿಲ್ಲ.

2. ಫೆಬ್ರುವರಿ 10ರ ವೇಳೆಗೆ ಚೀನಾದಲ್ಲಿ 30 ಸಾವಿರ ಮಂದಿ ಕಾಯಿಲೆ ಬಿದ್ದಾಗ ತೈವಾನ್ನಲ್ಲಿ ಕೇವಲ 16 ರೋಗಿಗಳು ಪತ್ತೆ ಆಗಿದ್ದೇ ತಡ, ಚೀನಾದಿಂದ ಬರುವ ಎಲ್ಲ ಉಡ್ಡಾಣಗಳನ್ನೂ ಸ್ಥಗಿತಗೊಳಿಸಿ, ಹಾಂಗ್‌ಕಾಂಗ್ ಮೂಲಕ ಬರುವವರ ಪರೀಕ್ಷೆಯನ್ನು ವಿಮಾನದಲ್ಲೇ ನಡೆಸತೊಡಗಿತು. ತನ್ನ ದ್ವೀಪದ ಸುತ್ತ ಲಕ್ಷ್ಮಣ ರೇಖೆಯನ್ನು ಎಳೆಯಿತು.

2. ಮುಖವಾಡಗಳ ರಫ್ತನ್ನು ನಿಲ್ಲಿಸಿತು. ಉತ್ಪಾದನೆಯನ್ನು ಎಂಟು ಪಟ್ಟು ಹೆಚ್ಚಿಸಿತು. ಅವುಗಳ ತಯಾರಿಕೆಯನ್ನು ಮೊದಲು ಕೈದಿಗಳಿಗೆ (ಕೆಳಗಿನ ಚಿತ್ರ – ಹೊಲಿಗೆ ಕೆಲಸದಲ್ಲಿ ನಿರತರಾದ ಕೈದಿಗಳದ್ದು), ಆನಂತರ ಮಿಲಿಟರಿಗೇ ಒಪ್ಪಿಸಿತು. ಪ್ರತಿಯೊಬ್ಬ ಪ್ರಜೆಗೂ ವಾರಕ್ಕೆ ಮೂರು ನಾಲ್ಕು ಮುಖವಾಡಗಳ ವ್ಯವಸ್ಥೆ ಮಾಡಿತು. ಅದು ಎಲ್ಲಿ ಸಿಗುತ್ತದೆ ಎಂಬುದನ್ನು ಅವರವರ ಮೊಬೈಲ್‌ನಲ್ಲೇ ಮಾಹಿತಿ ಸಿಗುವಂತೆ ಮಾಡಿತು.

3. ಕೊರೊನಾ ಪೀಡಿತರನ್ನು ವೈರಸ್ ಥರಾ ಪರಿಗಣಿಸದೆ ಅವರನ್ನು ಪ್ರಜೆಗಳಂತೇ ನೋಡಿಕೊಂಡಿತು. ಅವರಿಗೆ ಅತ್ಯುತ್ತಮ ಕ್ವಾರಂಟೈನ್ ವ್ಯವಸ್ಥೆಯನ್ನು ಕಲ್ಪಿಸಿತು. ಅವರ ನಿವಾಸಕ್ಕೆ ಅನ್ನಾಹಾರ ಹಾಗೂ ಅಗತ್ಯ ವಸ್ತುಗಳ ಕೊರತೆ ಆಗದಂತೆ ನೋಡಿಕೊಂಡಿತು. ಪುಸ್ತಕಗಳನ್ನೂ ಒದಗಿಸಿತು. ದಿನಭತ್ಯೆಯನ್ನೂ ಘೋಷಿಸಿತು. ಜನರು ತಾವಾಗಿ ಖುಷಿಯಿಂದ ಕ್ವಾರಂಟೈನ್‌ಗೆ ಒಳಪಡುವಂತೆ ಮನವೊಲಿಸಿತು. ಅವರ ಫೋನ್ ನಂಬರನ್ನು ಪಡೆದು ಅದರಲ್ಲಿ ವಿಶೇಷ ಆಪ್ ಹಾಕಿತು. ಮನೆಬಿಟ್ಟು ಆಚೆ ಹೋದರೆ ಅವರ ಬ್ಯಾಂಕ್ ಖಾತೆಯಿಂದ ದೊಡ್ಡ ಮೊತ್ತದ ದಂಡ ವಜಾ ಆಗುತ್ತದೆಂದು ಟಿವಿ ಮೂಲಕ ಪ್ರಚಾರ ಕೊಟ್ಟಿತು. ಕಾಯಿಲೆ ಉಲ್ಪಣಗೊಂಡರೆ ತುರ್ತು ಚಿಕಿತ್ಸೆಯ ವ್ಯವಸ್ಥೆ ಮಾಡಿತು.

4. ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುವದಂತಿಗಳನ್ನು ಪತ್ತೆ ಹಚ್ಚಬಲ್ಲ ವಿಶೇಷ ಅಲ್ಗೊರಿದಮ್ಮನ್ನು ಅದು ಸೃಷ್ಟಿಸಿತು. ಅದು ಚೀನಾದಿಂದ ಬರುವ ಸುಳ್ಳುಸುದ್ದಿಗಳನ್ನು ಫಿಲ್ಟರ್ ಮಾಡತೊಡಗಿತು. ದೇಶದೊಳಕ್ಕೆ ಬರುವ ಎಲ್ಲರ ಡೇಟಾಗಳನ್ನು ವಿಮಾ ಕಂಪನಿಗಳಿಂದ ತರಿಸಿಕೊಂಡು, ಅದನ್ನು ವೀಸಾ ವಿಭಾಗದ ಡೇಟಾ ಜೊತೆ ಜೋಡಿಸಿ, ಜ್ವರಪೀಡಿತರ ಕುರಿತ ಮಾಹಿತಿ ಎಲ್ಲ ಆಸ್ಪತ್ರೆ, ಔಷಧಾಲಯಗಳಿಗೂ ಮುಂಚಿತವಾಗಿಯೇ ಲಭಿಸುವಂತೆ ನೋಡಿಕೊಂಡಿತು.

 

* ಇತರ ಕೆಲವು ಮಹತ್ವದ ಮಾಹಿತಿಗಳು: ತೈವಾನ್ ದೇಶದ ಅಧ್ಯಕ್ಷರು ವಿಶ್ವವಿಖ್ಯಾತ ಲಂಡನ್ ಸ್ಕೂಲ್ ಆಫ್ ಇಕಾನಮಿಕ್ಸ್‌ನಲ್ಲಿ ಪಿಎಚ್‌ಡಿ ಮಾಡಿದ ಅರ್ಥತಜ್ಞ. ಉಪಾಧ್ಯಕ್ಷರು ಸ್ವತಃ ಎಪಿಡೀಮಿಯಾಲಜಿ ಡಾಕ್ಟರು- ಅಂದರೆ ಸಾಂಕ್ರಾಮಿಕ ರೋಗತಜ್ಞ. ಅಲ್ಲಿ ಕೊರೊನಾ ಸಂದರ್ಭದ ಅವರ TTT ಘೋಷವಾಕ್ಯ ಏನೆಂದರೆ ಟ್ರಸ್ಟ್, ಟ್ರಾನ್ಸಪರೆನ್ಸಿ ಮತ್ತು ಟೆಕ್ನಾಲಜಿ. ಜನರೊಂದಿಗಿನ ವಿಶ್ವಾಸ, ಪಾರದರ್ಶಕತೆ ಮತ್ತು ತಂತ್ರಜ್ಞಾನ. ಅಲ್ಲಿ ಕೇವಲ 20 ನಿಮಿಷಗಳಲ್ಲಿ ಕೋವಿಡ್ ಟೆಸ್ಟ್ ಫಲಿತಾಂಶ ಬರುವಂಥ ವೈದ್ಯಕೀಯ ವಿಧಾನ ಚಾಲ್ತಿಗೆ ಬಂದಿದೆ (ನಮ್ಮಲ್ಲಿ ಫಲಿತಾಂಶ ಬರಲು 6 ಗಂಟೆಯಿಂದ 24 ಗಂಟೆ ಬೇಕು).

*ತೈವಾನ್ ಜನಸಂಖ್ಯೆ 238 ಲಕ್ಷ ನಿಜ. ಆದರೆ ವುಹಾನ್‌ನಿಂದ ಕೇವಲ 943 ಕಿ.ಮೀ. ದೂರದಲ್ಲಿದೆ. ಅದಕ್ಕೆ ಹೋಲಿಸಿದರೆ ವುಹಾನ್ನಿಂದ 7500 ಕಿ.ಮೀ. ದೂರದ, ಕೇವಲ 192 ಲಕ್ಷ ಜನರಿರುವ ರುಮೇನಿಯಾದಲ್ಲಿ 7700 ರೋಗಿಗಳಿದ್ದು 392 ಮೃತರಾಗಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಇನ್ನೂ ಕಡಿಮೆ ಜನಸಂಖ್ಯೆಯ ಕತಾರ್ ದೇಶದಲ್ಲಿ 4103 ರೋಗಿಗಳಿದ್ದಾರೆ, 7 ಮಂದಿ ಗತಿಸಿದ್ದಾರೆ. ಸುಮಾರು ಅಷ್ಟೇ ದೂರದಲ್ಲಿರುವ ಬಹ್ರೇನ್ ದೇಶದಲ್ಲೂ 1703 ರೋಗಿಗಳಿದ್ದು 7 ಮಂದಿ ಗತಿಸಿದ್ದಾರೆ. ಕೊನೆಯ ಈ ಎರಡೂ ದೇಶಗಳು ಭಾರೀ ತೈಲಧನಿಕ ಅಷ್ಟೇ ಅಲ್ಲ, ಮುನ್ನೆಚ್ಚರಿಕೆಗೆ ಅವಕ್ಕೆ ಮೂರು ತಿಂಗಳು ಕಾಲಾವಧಿ ಇತ್ತು.

ಕೊನೆಯ ಕುಟುಕು: ವುಹಾನ್ ಮಹಾಮಾರಿಯ ಅಲೆ ದಶದಿಕ್ಕುಗಳಲ್ಲಿ ಹಬ್ಬುತ್ತಿದ್ದಾಗ, ಎಲ್ಲ ಬಿಬಿಸಿ-ಸಿಎನ್‌ಎನ್‌ಗಳಲ್ಲಿ ಅದರದೇ ಪ್ರಮುಖ ಸುದ್ದಿ ಬರುತ್ತಿದ್ದಾಗ ನಮ್ಮ ಮಾಧ್ಯಮಗಳ ಗಮನವೆಲ್ಲ ಕಮಲನಾಥ್ ಸರಕಾರವನ್ನು ಕೆಡವುವ ಕಮಲದ ಸರ್ಕಸ್ ಕಡೆ, ಹಾಗೂ ಅಹ್ಮದಾಬಾದ್ ಕ್ರೀಡಾಂಗಣದಲ್ಲಿ ಟ್ರಂಪ್ ಮಹಾಶಯನ ಟ್ರಂಪೆಟ್‌ ಕಡೆ ನೆಟ್ಟಿತ್ತು.

(ಕೃಪೆ: ನಾಗೇಶ್ ಹೆಗಡೆ ಅವರ ಫೇಸ್‌ಬುಕ್‌ ವಾಲ್‌ನಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...