Homeಮುಖಪುಟಕೊಚ್ಚಿ; ವಿವಿ ಕ್ಯಾಂಪಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದೇಗೆ? ಪ್ರತ್ಯಕ್ಷದರ್ಶಿಗಳಿಂದ ದುರಂತದ ವಿವರಣೆ..

ಕೊಚ್ಚಿ; ವಿವಿ ಕ್ಯಾಂಪಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದೇಗೆ? ಪ್ರತ್ಯಕ್ಷದರ್ಶಿಗಳಿಂದ ದುರಂತದ ವಿವರಣೆ..

- Advertisement -
- Advertisement -

ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ (CUSAT) ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ಟೆಕ್‌ಫೆಸ್ಟ್‌ನಲ್ಲಿ ಕಾಲ್ತುಳಿತ ಸಂಭವಿಸಿ ನಾಲ್ವರು ಸಾವನ್ನಪ್ಪಿ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.  ಸ್ಕೂಲ್ ಆಫ್ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಆಯೋಜಿಸಿದ್ದ ಟೆಕ್ ಫೆಸ್ಟ್ ಈ ದುರಂತ ಸಾವಿಗೆ ಕಾರಣವಾಗಿತ್ತು.

ಕಾಲ್ತುಳಿತದಲ್ಲಿ ಅತುಲ್ ತಂಬಿ, ಆನ್ ರುಫ್ತಾ, ಸಾರಾ ಥಾಮಸ್ ಮತ್ತು ಅಲ್ವಿನ್ ಜೋಸೆಫ್ ಪ್ರಾಣವನ್ನು ಕಳೆದುಕೊಂಡಿದ್ದರು. ಅಲ್ವಿನ್ ಹೊರತುಪಡಿಸಿ ಉಳಿದ ಮೂವರು CUSAT ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದರು.

ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಧಿಷ್ನಾ ಎಂಬ ವಾರ್ಷಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ವಸ್ತು ಪ್ರದರ್ಶನಗಳು ಇರುತ್ತದೆ. ಇದಕ್ಕೆ ಪ್ರವೇಶಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗಿತ್ತು. ಉತ್ಸವದ ಪ್ರತಿ ದಿನದ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಏರ್ಪಡಿಸಲಾಗುತ್ತಿತ್ತು. 2020ರಲ್ಲಿ ಧಿಷ್ಣಾದ ಕೊನೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೋವಿಡ್‌ ಬಳಿಕ ಮೊದಲ ಬಾರಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸ್ಕೂಲ್ ಆಫ್ ಇಂಜಿನಿಯರಿಂಗ್‌ ಪ್ರಾಂಶುಪಾಲ ಡಾ. ದಿಲೀಪ್‌ಕುಮಾರ್ ಹೇಳಿದ್ದಾರೆ.

ಈವೆಂಟ್‌ನ್ನು ವಿವಿಧ ವಿಭಾಗಗಳ ವಿದ್ಯಾರ್ಥಿಗಳನ್ನು ಒಳಗೊಂಡಿರುವ ಕೋರ್ ಕಮಿಟಿ ಆಯೋಜಿಸುತ್ತದೆ ಮತ್ತು ಸಾಮಾನ್ಯವಾಗಿ ಇಬ್ಬರು ಅಧ್ಯಾಪಕರು ಸಂಯೋಜಕರಾಗಿರುತ್ತಾರೆ. ಶನಿವಾರದ ದಿನ ಬಾಲಿವುಡ್ ಗಾಯಕಿ ನಿಖಿತಾ ಗಾಂಧಿಯವರ ಸಂಗೀತ ಕಚೇರಿಗಾಗಿ ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಒಟ್ಟುಗೂಡಿದ್ದರು.

ವಿಶ್ವವಿದ್ಯಾನಿಲಯದ ಮುಖ್ಯ ದ್ವಾರದಲ್ಲೇ ಸಭಾಂಗಣವು ಇತ್ತು. ಥಿಯೇಟರ್‌ನಂತೆ ಸಭಾಂಗಣವನ್ನು ರಚನೆ ಮಾಡಲಾಗಿದೆ. ಇದರಲ್ಲಿ ಪ್ರವೇಶ ಮತ್ತು ನಿರ್ಗಮನ ಎರಡಕ್ಕೂ ಹಿಂಭಾಗದಲ್ಲಿ ಒಂದೇ ಗೇಟ್ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ಸಂಘಟಕರು ಥಿಯೇಟರ್‌ನೊಳಗೆ ಬ್ಯಾರಿಕೇಡ್‌ಗಳನ್ನು ಹಾಕಿದರು, ವಿದ್ಯಾರ್ಥಿಗಳು ಮತ್ತು ಇತರ ಭಾಗವಹಿಸುವವರಿಗೆ ಕುಳಿತುಕೊಳ್ಳಲು ಸ್ಥಳಗಳನ್ನು ಗೊತ್ತುಪಡಿಸಿದ್ದರು.

ಸಂಜೆ 7 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗುವ ಮೊದಲು, ಎಸ್‌ಒಇ ವಿದ್ಯಾರ್ಥಿಗಳಿಗೆ ಮೊದಲು ಸಭಾಂಗಣಕ್ಕೆ ಪ್ರವೇಶಿಸಲು ಅನುಮತಿಸಲಾಗಿದೆ. ಅವರ ಪ್ರವೇಶವನ್ನು ಸ್ವಯಂಸೇವಕರಾಗಿದ್ದ ವಿದ್ಯಾರ್ಥಿಗಳು ನಿಯಂತ್ರಿಸಿದರು. ಇದರ ನಂತರ ವಿಶ್ವವಿದ್ಯಾನಿಲಯದ ಇತರ ಶಾಲೆಗಳು ಮತ್ತು ಇತರ ಕಾಲೇಜುಗಳ ವಿದ್ಯಾರ್ಥಿಗಳನ್ನು ಒಳಗೆ ಬಿಡಲಾಯಿತು. ಪ್ರೇಕ್ಷಕರ ಪ್ರವೇಶವನ್ನು ನಿಯಂತ್ರಿಸಲು ಸಂಘಟಕರು ಒಬ್ಬರು ಅಥವಾ ಇಬ್ಬರು ವ್ಯಕ್ತಿಗಳು ಪ್ರವೇಶಿಸುವಷ್ಟು ಗೇಟ್‌ನ್ನು ತೆರೆದಿದ್ದರು. ಕಾರ್ಯಕ್ರಮಕ್ಕೆ ನಿಗದಿತ ಸಮಯ ಸಮೀಪಿಸುತ್ತಿದ್ದಂತೆ ಹೆಚ್ಚಿನ ಜನರು ಬರಲು ಪ್ರಾರಂಭಿಸಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಹಠಾತ್ ಮಳೆಯಿಂದಾಗಿ ವಿದ್ಯಾರ್ಥಿಗಳು ಆಶ್ರಯ ಪಡೆಯಲು ಸಭಾಂಗಣಕ್ಕೆ ತೆರಳಿದ್ದರು. ಈ ವೇಳೆ ನೂಕು ನುಗ್ಗಲು ನಡೆದಿದೆ ಎಂದು ಆರಂಭಿಕ ವರದಿಗಳು ಹೇಳಿದರೆ, ಈವೆಂಟ್‌ಗೆ ಸ್ವಲ್ಪ ಮೊದಲು ಜನರು ಧಾವಿಸಿ ಗೇಟ್‌ನಲ್ಲಿ ಕಿಕ್ಕಿರಿದು ನೂಕುನುಗ್ಗಲಿಗೆ ಕಾರಣವಾಗಿದೆ ಎಂಬುವುದು ಈಗ ಸ್ಪಷ್ಟವಾಗಿ ತೋರುತ್ತದೆ. ಅಲ್ಲಿ ತುಂತುರು ಮಳೆಯಾಗಿದ್ದು ಮಳೆಯಿಂದ ರಕ್ಷಣೆ ಪಡೆಯಲು ಜನರು ಧಾವಿಸಿರುವುದು ದುರಂತಕ್ಕೆ ಕಾರಣವಾಗಿರಲು ಸಾಧ್ಯವಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ.

ಸಭಾಂಗಣವು ಕೆಳಮಟ್ಟದಲ್ಲಿದ್ದು, ಗೇಟ್‌ನಿಂದ ಕೆಳಗಿಳಿಯುವಾಗ ಮೆಟ್ಟಿಲುಗಳನ್ನು ಹೊಂದಿದೆ. ಮೆಟ್ಟಿಲುಗಳ ಮೇಲ್ಭಾಗದಲ್ಲಿ ಪ್ರವೇಶಿಸಲು ಪ್ರಯತ್ನಿಸುತ್ತಿರುವ ಜನರು ಕೆಳಭಾಗದಲ್ಲಿದ್ದವರನ್ನು ಕೆಳಗೆ ತಳ್ಳಿದ್ದಾರೆ. ಈ ವೇಳೆ  ಹಲವರು ಕೆಳಗೆ ಬಿದ್ದಿದ್ದಾರೆ. ಪ್ರವೇಶ ದ್ವಾರದ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಹಾಕಿದ್ದರಿಂದ ಜನರು ಬದಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಆ ಹೊತ್ತಿಗೆ ಗೇಟ್‌ನಿಂದ ಕೆಳಗಿಳಿಯುವ ಮೆಟ್ಟಿಲುಗಳು ತುಂಬಿದ್ದವು. ಕೆಲವು ಜನರು ಉಸಿರುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದರು. ಮೆಟ್ಟಿಲುಗಳ ಕೆಳಭಾಗದಲ್ಲಿ ಕೆಳಗೆ ಬಿದ್ದವರ ಮೇಲೆ  ಹಲವರು ಎಡವಿ ಬಿದ್ದಿದ್ದಾರೆ. ಸ್ವಯಂಸೇವಕರು ಗೇಟ್‌ನಲ್ಲಿ ಗುಂಪನ್ನು ಚದುರಿಸಲು ಮತ್ತು ಬಿದ್ದವರಿಗೆ ಸಹಾಯ ಮಾಡಲು ಈ ವೇಳೆ ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಏನಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದಕ್ಕೆ ನಮಗೆ ಸಾಧ್ಯವಾಗಿಲ್ಲ. ಕಾಲ್ತುಳಿತ ಸಂಭವಿಸಿದಾಗ ಪ್ರವೇಶ ದ್ವಾರದಲ್ಲಿದ್ದ ಮಹಿಳಾ ವಿದ್ಯಾರ್ಥಿಗಳ ಗುಂಪು ಸಿಲುಕಿತ್ತು. ನಮ್ಮೆಲ್ಲರನ್ನು ಒಮ್ಮೆ ಮುಂದಕ್ಕೆ ನಂತರ ಹಿಂದಕ್ಕೆ ತಳ್ಳಲಾಯಿತು. ಜನಸಂದಣಿಯೊಂದಿಗೆ ಮುಂದುವರಿಯುವುದು ಬಿಟ್ಟು ನಾವು ಏನೂ ಮಾಡಲಾಗಲಿಲ್ಲ. ತಳ್ಳಾಟದ ವೇಳೆ ಜನರು ಬಿದ್ದಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ನಾವು ಸಾಧ್ಯವಾದಷ್ಟು ಬೇಗ ಸಭಾಂಗಣದಿಂದ ನಿರ್ಗಮಿಸಿದೆವು. ಆದರೆ ದುರಂತದ ಪ್ರಮಾಣದ ಬಗ್ಗೆ ನಮಗೆ ತಿಳಿದಿರಲಿಲ್ಲ. ನಾವು ಆಂಬ್ಯುಲೆನ್ಸ್ ಹೊರಡುವುದನ್ನು ನೋಡಿದ್ದೇವೆ ಮತ್ತು ಯಾವುದೋ ಕಾರಣದಿಂದ ಯಾರಿಗಾದರೂ ಸಣ್ಣ ಗಾಯವಾಗಿದೆ ಎಂದು ಭಾವಿಸಿದ್ದೇವೆ. ಇನ್ನೂ ಅನೇಕ ಆಂಬ್ಯುಲೆನ್ಸ್‌ಗಳು ಮತ್ತು ಖಾಸಗಿ ವಾಹನಗಳು ಕ್ಯಾಂಪಸ್‌ಗೆ ಬಂದವು. ಈ ವೇಳೆ ಅಸಲಿ ವಿಚಾರ ನಮ್ಮಗಮನಕ್ಕೆ ಬಂದಿದೆ ಎಂದು ವಿದ್ಯಾರ್ಥಿಯೋರ್ವರು ಹೇಳಿದ್ದಾರೆ.

ಮೃತ ಅತುಲ್ ಥಂಪಿಯ ಸಹಪಾಠಿಗಳಾದ ಅಭಿರಾಮ್ ಕೆಆರ್ ಮತ್ತು ಅರುಣ್ ಪಿಎ ಮಾತನಾಡಿದ್ದು, ಅತುಲ್ ಥಂಪಿಯ ಸಾವು ಮತ್ತು ಗಾಯಗಳಿಗೆ ಒಳಗಾದ ಇತರ ಸ್ನೇಹಿತರ ನೋವನ್ನು ಅರಗಿಸಿಕೊಳ್ಳುವುದು ಕಷ್ಟಕರವಾಗಿದೆ. ಆಡಿಟೋರಿಯಂ ಪ್ರವೇಶಿಸುವಾಗ ಅತುಲ್ ನಮ್ಮ ಹಿಂದೆಯೇ ಇದ್ದರು. ಆಸ್ಪತ್ರೆಗೆ ಕರೆದೊಯ್ದವರು ಕರೆಗಳನ್ನು ಮಾಡಿದ ನಂತರವೇ ದುರಂತದ ಬಗ್ಗೆ ನಮಗೆ ತಿಳಿದಿದೆ. ನಾವು ಈ ವೇಳೆ ಸಭಾಂಗಣದಲ್ಲಿದ್ದೆವು. ಆದರೆ ಪ್ರವೇಶದ್ವಾರದಲ್ಲಿ ಇದು ಸಂಭವಿಸಿದೆ ಎಂದು ನಮಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...