Homeಮುಖಪುಟಕೊಚ್ಚಿ; ವಿವಿ ಕ್ಯಾಂಪಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದೇಗೆ? ಪ್ರತ್ಯಕ್ಷದರ್ಶಿಗಳಿಂದ ದುರಂತದ ವಿವರಣೆ..

ಕೊಚ್ಚಿ; ವಿವಿ ಕ್ಯಾಂಪಸ್‌ನಲ್ಲಿ ಕಾಲ್ತುಳಿತ ಸಂಭವಿಸಿದ್ದೇಗೆ? ಪ್ರತ್ಯಕ್ಷದರ್ಶಿಗಳಿಂದ ದುರಂತದ ವಿವರಣೆ..

- Advertisement -
- Advertisement -

ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ (CUSAT) ಸ್ಕೂಲ್ ಆಫ್ ಇಂಜಿನಿಯರಿಂಗ್‌ನ ಟೆಕ್‌ಫೆಸ್ಟ್‌ನಲ್ಲಿ ಕಾಲ್ತುಳಿತ ಸಂಭವಿಸಿ ನಾಲ್ವರು ಸಾವನ್ನಪ್ಪಿ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.  ಸ್ಕೂಲ್ ಆಫ್ ಇಂಜಿನಿಯರಿಂಗ್‌ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಆಯೋಜಿಸಿದ್ದ ಟೆಕ್ ಫೆಸ್ಟ್ ಈ ದುರಂತ ಸಾವಿಗೆ ಕಾರಣವಾಗಿತ್ತು.

ಕಾಲ್ತುಳಿತದಲ್ಲಿ ಅತುಲ್ ತಂಬಿ, ಆನ್ ರುಫ್ತಾ, ಸಾರಾ ಥಾಮಸ್ ಮತ್ತು ಅಲ್ವಿನ್ ಜೋಸೆಫ್ ಪ್ರಾಣವನ್ನು ಕಳೆದುಕೊಂಡಿದ್ದರು. ಅಲ್ವಿನ್ ಹೊರತುಪಡಿಸಿ ಉಳಿದ ಮೂವರು CUSAT ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದರು.

ಕೊಚ್ಚಿಯ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ಧಿಷ್ನಾ ಎಂಬ ವಾರ್ಷಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ವಸ್ತು ಪ್ರದರ್ಶನಗಳು ಇರುತ್ತದೆ. ಇದಕ್ಕೆ ಪ್ರವೇಶಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ನೀಡಲಾಗಿತ್ತು. ಉತ್ಸವದ ಪ್ರತಿ ದಿನದ ಕೊನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನೂ ಏರ್ಪಡಿಸಲಾಗುತ್ತಿತ್ತು. 2020ರಲ್ಲಿ ಧಿಷ್ಣಾದ ಕೊನೆಯ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕೋವಿಡ್‌ ಬಳಿಕ ಮೊದಲ ಬಾರಿಗೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸ್ಕೂಲ್ ಆಫ್ ಇಂಜಿನಿಯರಿಂಗ್‌ ಪ್ರಾಂಶುಪಾಲ ಡಾ. ದಿಲೀಪ್‌ಕುಮಾರ್ ಹೇಳಿದ್ದಾರೆ.

ಈವೆಂಟ್‌ನ್ನು ವಿವಿಧ ವಿಭಾಗಗಳ ವಿದ್ಯಾರ್ಥಿಗಳನ್ನು ಒಳಗೊಂಡಿರುವ ಕೋರ್ ಕಮಿಟಿ ಆಯೋಜಿಸುತ್ತದೆ ಮತ್ತು ಸಾಮಾನ್ಯವಾಗಿ ಇಬ್ಬರು ಅಧ್ಯಾಪಕರು ಸಂಯೋಜಕರಾಗಿರುತ್ತಾರೆ. ಶನಿವಾರದ ದಿನ ಬಾಲಿವುಡ್ ಗಾಯಕಿ ನಿಖಿತಾ ಗಾಂಧಿಯವರ ಸಂಗೀತ ಕಚೇರಿಗಾಗಿ ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು ಒಟ್ಟುಗೂಡಿದ್ದರು.

ವಿಶ್ವವಿದ್ಯಾನಿಲಯದ ಮುಖ್ಯ ದ್ವಾರದಲ್ಲೇ ಸಭಾಂಗಣವು ಇತ್ತು. ಥಿಯೇಟರ್‌ನಂತೆ ಸಭಾಂಗಣವನ್ನು ರಚನೆ ಮಾಡಲಾಗಿದೆ. ಇದರಲ್ಲಿ ಪ್ರವೇಶ ಮತ್ತು ನಿರ್ಗಮನ ಎರಡಕ್ಕೂ ಹಿಂಭಾಗದಲ್ಲಿ ಒಂದೇ ಗೇಟ್ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ಸಂಘಟಕರು ಥಿಯೇಟರ್‌ನೊಳಗೆ ಬ್ಯಾರಿಕೇಡ್‌ಗಳನ್ನು ಹಾಕಿದರು, ವಿದ್ಯಾರ್ಥಿಗಳು ಮತ್ತು ಇತರ ಭಾಗವಹಿಸುವವರಿಗೆ ಕುಳಿತುಕೊಳ್ಳಲು ಸ್ಥಳಗಳನ್ನು ಗೊತ್ತುಪಡಿಸಿದ್ದರು.

ಸಂಜೆ 7 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗುವ ಮೊದಲು, ಎಸ್‌ಒಇ ವಿದ್ಯಾರ್ಥಿಗಳಿಗೆ ಮೊದಲು ಸಭಾಂಗಣಕ್ಕೆ ಪ್ರವೇಶಿಸಲು ಅನುಮತಿಸಲಾಗಿದೆ. ಅವರ ಪ್ರವೇಶವನ್ನು ಸ್ವಯಂಸೇವಕರಾಗಿದ್ದ ವಿದ್ಯಾರ್ಥಿಗಳು ನಿಯಂತ್ರಿಸಿದರು. ಇದರ ನಂತರ ವಿಶ್ವವಿದ್ಯಾನಿಲಯದ ಇತರ ಶಾಲೆಗಳು ಮತ್ತು ಇತರ ಕಾಲೇಜುಗಳ ವಿದ್ಯಾರ್ಥಿಗಳನ್ನು ಒಳಗೆ ಬಿಡಲಾಯಿತು. ಪ್ರೇಕ್ಷಕರ ಪ್ರವೇಶವನ್ನು ನಿಯಂತ್ರಿಸಲು ಸಂಘಟಕರು ಒಬ್ಬರು ಅಥವಾ ಇಬ್ಬರು ವ್ಯಕ್ತಿಗಳು ಪ್ರವೇಶಿಸುವಷ್ಟು ಗೇಟ್‌ನ್ನು ತೆರೆದಿದ್ದರು. ಕಾರ್ಯಕ್ರಮಕ್ಕೆ ನಿಗದಿತ ಸಮಯ ಸಮೀಪಿಸುತ್ತಿದ್ದಂತೆ ಹೆಚ್ಚಿನ ಜನರು ಬರಲು ಪ್ರಾರಂಭಿಸಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಹಠಾತ್ ಮಳೆಯಿಂದಾಗಿ ವಿದ್ಯಾರ್ಥಿಗಳು ಆಶ್ರಯ ಪಡೆಯಲು ಸಭಾಂಗಣಕ್ಕೆ ತೆರಳಿದ್ದರು. ಈ ವೇಳೆ ನೂಕು ನುಗ್ಗಲು ನಡೆದಿದೆ ಎಂದು ಆರಂಭಿಕ ವರದಿಗಳು ಹೇಳಿದರೆ, ಈವೆಂಟ್‌ಗೆ ಸ್ವಲ್ಪ ಮೊದಲು ಜನರು ಧಾವಿಸಿ ಗೇಟ್‌ನಲ್ಲಿ ಕಿಕ್ಕಿರಿದು ನೂಕುನುಗ್ಗಲಿಗೆ ಕಾರಣವಾಗಿದೆ ಎಂಬುವುದು ಈಗ ಸ್ಪಷ್ಟವಾಗಿ ತೋರುತ್ತದೆ. ಅಲ್ಲಿ ತುಂತುರು ಮಳೆಯಾಗಿದ್ದು ಮಳೆಯಿಂದ ರಕ್ಷಣೆ ಪಡೆಯಲು ಜನರು ಧಾವಿಸಿರುವುದು ದುರಂತಕ್ಕೆ ಕಾರಣವಾಗಿರಲು ಸಾಧ್ಯವಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಿದ್ದಾರೆ.

ಸಭಾಂಗಣವು ಕೆಳಮಟ್ಟದಲ್ಲಿದ್ದು, ಗೇಟ್‌ನಿಂದ ಕೆಳಗಿಳಿಯುವಾಗ ಮೆಟ್ಟಿಲುಗಳನ್ನು ಹೊಂದಿದೆ. ಮೆಟ್ಟಿಲುಗಳ ಮೇಲ್ಭಾಗದಲ್ಲಿ ಪ್ರವೇಶಿಸಲು ಪ್ರಯತ್ನಿಸುತ್ತಿರುವ ಜನರು ಕೆಳಭಾಗದಲ್ಲಿದ್ದವರನ್ನು ಕೆಳಗೆ ತಳ್ಳಿದ್ದಾರೆ. ಈ ವೇಳೆ  ಹಲವರು ಕೆಳಗೆ ಬಿದ್ದಿದ್ದಾರೆ. ಪ್ರವೇಶ ದ್ವಾರದ ಇಕ್ಕೆಲಗಳಲ್ಲಿ ಬ್ಯಾರಿಕೇಡ್ ಹಾಕಿದ್ದರಿಂದ ಜನರು ಬದಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಆ ಹೊತ್ತಿಗೆ ಗೇಟ್‌ನಿಂದ ಕೆಳಗಿಳಿಯುವ ಮೆಟ್ಟಿಲುಗಳು ತುಂಬಿದ್ದವು. ಕೆಲವು ಜನರು ಉಸಿರುಗಟ್ಟಿ ಪ್ರಜ್ಞೆ ಕಳೆದುಕೊಂಡಿದ್ದರು. ಮೆಟ್ಟಿಲುಗಳ ಕೆಳಭಾಗದಲ್ಲಿ ಕೆಳಗೆ ಬಿದ್ದವರ ಮೇಲೆ  ಹಲವರು ಎಡವಿ ಬಿದ್ದಿದ್ದಾರೆ. ಸ್ವಯಂಸೇವಕರು ಗೇಟ್‌ನಲ್ಲಿ ಗುಂಪನ್ನು ಚದುರಿಸಲು ಮತ್ತು ಬಿದ್ದವರಿಗೆ ಸಹಾಯ ಮಾಡಲು ಈ ವೇಳೆ ಪ್ರಯತ್ನಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಏನಾಗುತ್ತಿದೆ ಎಂಬುದನ್ನು ಅರ್ಥಮಾಡಿಕೊಳ್ಳುವುದಕ್ಕೆ ನಮಗೆ ಸಾಧ್ಯವಾಗಿಲ್ಲ. ಕಾಲ್ತುಳಿತ ಸಂಭವಿಸಿದಾಗ ಪ್ರವೇಶ ದ್ವಾರದಲ್ಲಿದ್ದ ಮಹಿಳಾ ವಿದ್ಯಾರ್ಥಿಗಳ ಗುಂಪು ಸಿಲುಕಿತ್ತು. ನಮ್ಮೆಲ್ಲರನ್ನು ಒಮ್ಮೆ ಮುಂದಕ್ಕೆ ನಂತರ ಹಿಂದಕ್ಕೆ ತಳ್ಳಲಾಯಿತು. ಜನಸಂದಣಿಯೊಂದಿಗೆ ಮುಂದುವರಿಯುವುದು ಬಿಟ್ಟು ನಾವು ಏನೂ ಮಾಡಲಾಗಲಿಲ್ಲ. ತಳ್ಳಾಟದ ವೇಳೆ ಜನರು ಬಿದ್ದಿದ್ದಾರೆ ಎಂದು ಹೆಸರು ಹೇಳಲು ಇಚ್ಛಿಸದ ವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

ನಾವು ಸಾಧ್ಯವಾದಷ್ಟು ಬೇಗ ಸಭಾಂಗಣದಿಂದ ನಿರ್ಗಮಿಸಿದೆವು. ಆದರೆ ದುರಂತದ ಪ್ರಮಾಣದ ಬಗ್ಗೆ ನಮಗೆ ತಿಳಿದಿರಲಿಲ್ಲ. ನಾವು ಆಂಬ್ಯುಲೆನ್ಸ್ ಹೊರಡುವುದನ್ನು ನೋಡಿದ್ದೇವೆ ಮತ್ತು ಯಾವುದೋ ಕಾರಣದಿಂದ ಯಾರಿಗಾದರೂ ಸಣ್ಣ ಗಾಯವಾಗಿದೆ ಎಂದು ಭಾವಿಸಿದ್ದೇವೆ. ಇನ್ನೂ ಅನೇಕ ಆಂಬ್ಯುಲೆನ್ಸ್‌ಗಳು ಮತ್ತು ಖಾಸಗಿ ವಾಹನಗಳು ಕ್ಯಾಂಪಸ್‌ಗೆ ಬಂದವು. ಈ ವೇಳೆ ಅಸಲಿ ವಿಚಾರ ನಮ್ಮಗಮನಕ್ಕೆ ಬಂದಿದೆ ಎಂದು ವಿದ್ಯಾರ್ಥಿಯೋರ್ವರು ಹೇಳಿದ್ದಾರೆ.

ಮೃತ ಅತುಲ್ ಥಂಪಿಯ ಸಹಪಾಠಿಗಳಾದ ಅಭಿರಾಮ್ ಕೆಆರ್ ಮತ್ತು ಅರುಣ್ ಪಿಎ ಮಾತನಾಡಿದ್ದು, ಅತುಲ್ ಥಂಪಿಯ ಸಾವು ಮತ್ತು ಗಾಯಗಳಿಗೆ ಒಳಗಾದ ಇತರ ಸ್ನೇಹಿತರ ನೋವನ್ನು ಅರಗಿಸಿಕೊಳ್ಳುವುದು ಕಷ್ಟಕರವಾಗಿದೆ. ಆಡಿಟೋರಿಯಂ ಪ್ರವೇಶಿಸುವಾಗ ಅತುಲ್ ನಮ್ಮ ಹಿಂದೆಯೇ ಇದ್ದರು. ಆಸ್ಪತ್ರೆಗೆ ಕರೆದೊಯ್ದವರು ಕರೆಗಳನ್ನು ಮಾಡಿದ ನಂತರವೇ ದುರಂತದ ಬಗ್ಗೆ ನಮಗೆ ತಿಳಿದಿದೆ. ನಾವು ಈ ವೇಳೆ ಸಭಾಂಗಣದಲ್ಲಿದ್ದೆವು. ಆದರೆ ಪ್ರವೇಶದ್ವಾರದಲ್ಲಿ ಇದು ಸಂಭವಿಸಿದೆ ಎಂದು ನಮಗೆ ತಿಳಿದಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೊಚ್ಚಿ: ‘ಟೆಕ್‌ ಫೆಸ್ಟ್‌’ನಲ್ಲಿ ಕಾಲ್ತುಳಿತ; ನಾಲ್ವರು ವಿದ್ಯಾರ್ಥಿಗಳು ಸಾವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...