Homeಮುಖಪುಟಬಿಜೆಪಿಗೆ ಅವಧಿ ಮೀರಿದ ಚುನಾವಣಾ ಬಾಂಡ್‌ ಪಡೆಯಲು ಸಹಕರಿಸುವಂತೆ ಎಸ್‌ಬಿಐ ಮೇಲೆ ಒತ್ತಡ ಹೇರಿದ್ದ ಹಣಕಾಸು...

ಬಿಜೆಪಿಗೆ ಅವಧಿ ಮೀರಿದ ಚುನಾವಣಾ ಬಾಂಡ್‌ ಪಡೆಯಲು ಸಹಕರಿಸುವಂತೆ ಎಸ್‌ಬಿಐ ಮೇಲೆ ಒತ್ತಡ ಹೇರಿದ್ದ ಹಣಕಾಸು ಸಚಿವಾಲಯ

- Advertisement -
- Advertisement -

ಬಿಜೆಪಿಗೆ 10 ಕೋಟಿ ರೂಪಾಯಿ ಮೌಲ್ಯದ ಅವಧಿ ಮೀರಿದ ಚುನಾವಣಾ ಬಾಂಡ್‌ಗಳನ್ನು ನಗದೀಕರಣಕ್ಕೆ ಅನುಮತಿಸುವ ಸಲುವಾಗಿ, 2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಕೇಂದ್ರ ಸರ್ಕಾರ ಅಧಿಕೃತ ನಿಯಮಗಳನ್ನು ಉಲ್ಲಂಘಿಸಿದೆ ಎಂದು ದಿ ರಿಪೋರ್ಟರ್ಸ್ ಕಲೆಕ್ಟಿವ್ ವರದಿ ಮಾಡಿದೆ.

ಭಾರತೀಯ ಚುನಾವಣಾ ಆಯೋಗದ ಹೊಸ ಮಾಹಿತಿಯ ಪ್ರಕಾರ, ದಿವಂಗತ ಅರುಣ್ ಜೇಟ್ಲಿ ನೇತೃತ್ವದ ಹಣಕಾಸು ಸಚಿವಾಲಯವು ಎಸ್‌ಬಿಐಗೆ 10 ಕೋಟಿ ರೂಪಾಯಿಗಳ ಅವಧಿ ಮೀರಿದ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಲು ಒತ್ತಾಯಿಸಿದೆ ಎಂದು ವರದಿ ಉಲ್ಲೇಖಿಸಿದೆ.

2019ರ ಹಿಂದೆ ಪ್ರಕಟವಾದ ವರದಿಯಲ್ಲಿ, ಬಾಂಡ್‌ಗಳನ್ನು ನಗದೀಕರಣ ಮಾಡಲು ಕಾನೂನುಬದ್ಧವಾಗಿ ಕಡ್ಡಾಯಗೊಳಿಸಿದ 15 ದಿನಗಳ ಅವಧಿ ಮುಗಿದ ಎರಡು ದಿನಗಳ ನಂತರ ಎಸ್‌ಬಿಐ ರಾಜಕೀಯ ಪಕ್ಷವೊಂದಕ್ಕೆ 10 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ನಗದೀಕರಣ ಮಾಡಲು ಅವಕಾಶ ಮಾಡಿಕೊಟ್ಟಿದೆ ಎಂದು ರಿಪೋರ್ಟರ್ಸ್ ಕಲೆಕ್ಟಿವ್ ಉಲ್ಲೇಖಿಸಿದೆ. 2019ರಲ್ಲಿ SBIಗೆ ಸಚಿವಾಲಯದ ನಿರ್ದೇಶನದಿಂದ ಯಾವ ರಾಜಕೀಯ ಪಕ್ಷವು ಲಾಭ ಗಳಿಸಿದೆ ಎಂದು ತಿಳಿದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿಯು ಚುನಾವಣಾ ಆಯೋಗಕ್ಕೆ ನೀಡಿದ ಮಾಹಿತಿಯ ಪ್ರಕಾರ, ಹಣಕಾಸು ಸಚಿವಾಲಯವು ನಿಯಮಗಳನ್ನು ಮೀರಿ ಕೇಸರಿ ಪಕ್ಷಕ್ಕೆ 10 ಕೋಟಿ ರೂ. ಮೌಲ್ಯದ ಅವಧಿ ಮೀರಿದ ಬಾಂಡ್‌ಗಳನ್ನು ನಗದೀಕರಣ ಮಾಡಲು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗೆ ಕಾನೂನುಬಾಹಿರ ಆದೇಶವನ್ನು ನೀಡಿದೆ ಎನ್ನುವುದನ್ನು ಬಯಲುಗೊಳಿಸಿದೆ.

ದಿ ರಿಪೋರ್ಟರ್ಸ್ ಕಲೆಕ್ಟಿವ್ ಪ್ರಕಾರ, ಇದು ಚುನಾವಣಾ ಬಾಂಡ್‌ಗಳ ಆದೇಶದ ಉಲ್ಲಂಘನೆಯಾಗಿದೆ.  ಜನವರಿ 2018ರಲ್ಲಿ ಪ್ರಕಟಿಸಲಾದ ನಿಯಮಗಳ ಸ್ಪಷ್ಟ ಉಲ್ಲಂಘನೆಯನ್ನು ಮಾಡಿ ಬಿಜೆಪಿಗೆ ಅವಧಿ ಮೀರಿದ ಚುನಾವಣಾ ಬಾಂಡ್‌ ಪಡೆಯಲು ಅವಕಾಶವನ್ನು ಮಾಡಿಕೊಟ್ಟಿದೆ ಎನ್ನುವುದು ಬಯಲಾಗಿದೆ.

ಬಿಜೆಪಿ ಚುನಾವಣಾ ಬಾಂಡ್‌ ನಿಧಿಯ ಅತಿದೊಡ್ಡ ಫಲಾನುಭವಿಯಾಗಿದೆ. ಈ ಯೋಜನೆಯ ಮೂಲಕ ಪಕ್ಷವು 8,251.8 ಕೋಟಿ ರೂಪಾಯಿಗಳನ್ನು ಪಡೆದಿದ್ದು, ಒಟ್ಟು 16,518 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಮಾರಾಟ ಮಾಡಲಾಗಿದೆ. ಇದರರ್ಥ ಮಾರಾಟವಾದ ಒಟ್ಟು ಬಾಂಡ್‌ಗಳಲ್ಲಿ ಬಿಜೆಪಿ 50% ದಷ್ಟು ದೇಣಿಗೆಯನ್ನು ಪಡೆದಿದೆ. ಚುನಾವಣಾ ಬಾಂಡ್‌ ಮೂಲಕ ದೇಣಿಗೆ ಪಡೆದ ಅಗ್ರ ಪಕ್ಷಗಳ ಪಟ್ಟಿಯಲ್ಲಿ ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿದ್ದು, 1,952 ಕೋಟಿ ರೂ.ದೇಣಿಗೆಯನ್ನು ಪಡೆದಿದೆ. ತೃಣಮೂಲ ಕಾಂಗ್ರೆಸ್ 1,705 ಕೋಟಿ ರೂ.ದೇಣಿಗೆಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...