Homeಮುಖಪುಟಬಿಜೆಪಿಗೆ ಅವಧಿ ಮೀರಿದ ಚುನಾವಣಾ ಬಾಂಡ್‌ ಪಡೆಯಲು ಸಹಕರಿಸುವಂತೆ ಎಸ್‌ಬಿಐ ಮೇಲೆ ಒತ್ತಡ ಹೇರಿದ್ದ ಹಣಕಾಸು...

ಬಿಜೆಪಿಗೆ ಅವಧಿ ಮೀರಿದ ಚುನಾವಣಾ ಬಾಂಡ್‌ ಪಡೆಯಲು ಸಹಕರಿಸುವಂತೆ ಎಸ್‌ಬಿಐ ಮೇಲೆ ಒತ್ತಡ ಹೇರಿದ್ದ ಹಣಕಾಸು ಸಚಿವಾಲಯ

- Advertisement -
- Advertisement -

ಬಿಜೆಪಿಗೆ 10 ಕೋಟಿ ರೂಪಾಯಿ ಮೌಲ್ಯದ ಅವಧಿ ಮೀರಿದ ಚುನಾವಣಾ ಬಾಂಡ್‌ಗಳನ್ನು ನಗದೀಕರಣಕ್ಕೆ ಅನುಮತಿಸುವ ಸಲುವಾಗಿ, 2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ಮುನ್ನಾದಿನದಂದು ಕೇಂದ್ರ ಸರ್ಕಾರ ಅಧಿಕೃತ ನಿಯಮಗಳನ್ನು ಉಲ್ಲಂಘಿಸಿದೆ ಎಂದು ದಿ ರಿಪೋರ್ಟರ್ಸ್ ಕಲೆಕ್ಟಿವ್ ವರದಿ ಮಾಡಿದೆ.

ಭಾರತೀಯ ಚುನಾವಣಾ ಆಯೋಗದ ಹೊಸ ಮಾಹಿತಿಯ ಪ್ರಕಾರ, ದಿವಂಗತ ಅರುಣ್ ಜೇಟ್ಲಿ ನೇತೃತ್ವದ ಹಣಕಾಸು ಸಚಿವಾಲಯವು ಎಸ್‌ಬಿಐಗೆ 10 ಕೋಟಿ ರೂಪಾಯಿಗಳ ಅವಧಿ ಮೀರಿದ ಚುನಾವಣಾ ಬಾಂಡ್‌ಗಳನ್ನು ಸ್ವೀಕರಿಸಲು ಒತ್ತಾಯಿಸಿದೆ ಎಂದು ವರದಿ ಉಲ್ಲೇಖಿಸಿದೆ.

2019ರ ಹಿಂದೆ ಪ್ರಕಟವಾದ ವರದಿಯಲ್ಲಿ, ಬಾಂಡ್‌ಗಳನ್ನು ನಗದೀಕರಣ ಮಾಡಲು ಕಾನೂನುಬದ್ಧವಾಗಿ ಕಡ್ಡಾಯಗೊಳಿಸಿದ 15 ದಿನಗಳ ಅವಧಿ ಮುಗಿದ ಎರಡು ದಿನಗಳ ನಂತರ ಎಸ್‌ಬಿಐ ರಾಜಕೀಯ ಪಕ್ಷವೊಂದಕ್ಕೆ 10 ಕೋಟಿ ರೂಪಾಯಿ ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ನಗದೀಕರಣ ಮಾಡಲು ಅವಕಾಶ ಮಾಡಿಕೊಟ್ಟಿದೆ ಎಂದು ರಿಪೋರ್ಟರ್ಸ್ ಕಲೆಕ್ಟಿವ್ ಉಲ್ಲೇಖಿಸಿದೆ. 2019ರಲ್ಲಿ SBIಗೆ ಸಚಿವಾಲಯದ ನಿರ್ದೇಶನದಿಂದ ಯಾವ ರಾಜಕೀಯ ಪಕ್ಷವು ಲಾಭ ಗಳಿಸಿದೆ ಎಂದು ತಿಳಿದಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಬಿಜೆಪಿಯು ಚುನಾವಣಾ ಆಯೋಗಕ್ಕೆ ನೀಡಿದ ಮಾಹಿತಿಯ ಪ್ರಕಾರ, ಹಣಕಾಸು ಸಚಿವಾಲಯವು ನಿಯಮಗಳನ್ನು ಮೀರಿ ಕೇಸರಿ ಪಕ್ಷಕ್ಕೆ 10 ಕೋಟಿ ರೂ. ಮೌಲ್ಯದ ಅವಧಿ ಮೀರಿದ ಬಾಂಡ್‌ಗಳನ್ನು ನಗದೀಕರಣ ಮಾಡಲು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗೆ ಕಾನೂನುಬಾಹಿರ ಆದೇಶವನ್ನು ನೀಡಿದೆ ಎನ್ನುವುದನ್ನು ಬಯಲುಗೊಳಿಸಿದೆ.

ದಿ ರಿಪೋರ್ಟರ್ಸ್ ಕಲೆಕ್ಟಿವ್ ಪ್ರಕಾರ, ಇದು ಚುನಾವಣಾ ಬಾಂಡ್‌ಗಳ ಆದೇಶದ ಉಲ್ಲಂಘನೆಯಾಗಿದೆ.  ಜನವರಿ 2018ರಲ್ಲಿ ಪ್ರಕಟಿಸಲಾದ ನಿಯಮಗಳ ಸ್ಪಷ್ಟ ಉಲ್ಲಂಘನೆಯನ್ನು ಮಾಡಿ ಬಿಜೆಪಿಗೆ ಅವಧಿ ಮೀರಿದ ಚುನಾವಣಾ ಬಾಂಡ್‌ ಪಡೆಯಲು ಅವಕಾಶವನ್ನು ಮಾಡಿಕೊಟ್ಟಿದೆ ಎನ್ನುವುದು ಬಯಲಾಗಿದೆ.

ಬಿಜೆಪಿ ಚುನಾವಣಾ ಬಾಂಡ್‌ ನಿಧಿಯ ಅತಿದೊಡ್ಡ ಫಲಾನುಭವಿಯಾಗಿದೆ. ಈ ಯೋಜನೆಯ ಮೂಲಕ ಪಕ್ಷವು 8,251.8 ಕೋಟಿ ರೂಪಾಯಿಗಳನ್ನು ಪಡೆದಿದ್ದು, ಒಟ್ಟು 16,518 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳನ್ನು ಮಾರಾಟ ಮಾಡಲಾಗಿದೆ. ಇದರರ್ಥ ಮಾರಾಟವಾದ ಒಟ್ಟು ಬಾಂಡ್‌ಗಳಲ್ಲಿ ಬಿಜೆಪಿ 50% ದಷ್ಟು ದೇಣಿಗೆಯನ್ನು ಪಡೆದಿದೆ. ಚುನಾವಣಾ ಬಾಂಡ್‌ ಮೂಲಕ ದೇಣಿಗೆ ಪಡೆದ ಅಗ್ರ ಪಕ್ಷಗಳ ಪಟ್ಟಿಯಲ್ಲಿ ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿದ್ದು, 1,952 ಕೋಟಿ ರೂ.ದೇಣಿಗೆಯನ್ನು ಪಡೆದಿದೆ. ತೃಣಮೂಲ ಕಾಂಗ್ರೆಸ್ 1,705 ಕೋಟಿ ರೂ.ದೇಣಿಗೆಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದನ್ನು ಓದಿ: ಅಣೆಕಟ್ಟು ಯೋಜನೆಯ ಟೆಂಡರ್‌ ಸಿಕ್ಕಿದ ಬೆನ್ನಲ್ಲಿ 45 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ ಖರೀದಿಸಿದ ಬಿಜೆಪಿ ಸಂಸದನ ಮಾಲಕತ್ವದ ಕಂಪೆನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...