Homeಕರ್ನಾಟಕಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

ಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಜನಪ್ರಿಯ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್‌ 18ರಿಂದ ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೊದಲ ಎರಡು ದಿನ ಸರ್ವರ್‌ ಡೌನ್‌ ಆಗಿ, ಗ್ರಾಹಕರು ಪರದಾಡಿದ್ದರು. ಆದರೆ, ಈಗ ಸರ್ವರ್‌ ಸಮಸ್ಯೆ ಸ್ವಲ್ಪ ಒಂದು ಹಂತಕ್ಕೆ ಸರಿಯಾಗಿದ್ದು, ಆನ್‌ಲೈನ್‌ ಅಥವಾ ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಸೇರಿ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ನೀವು ಅರ್ಜಿ ಸಲ್ಲಿಸಬಹುದು.

ನಿಮ್ಮ ಮೊಬೈಲ್‌ನಿಂದಲೇ ಅರ್ಜಿ ಸಲ್ಲಿಸಬಹುದು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸರಳವಾಗಿದ್ದು, ಸರ್ವರ್‌ ಡೌನ್‌ ಆಗಿಲ್ಲ ಎಂದರೆ ನಿಮ್ಮ ಮೊಬೈಲ್‌ ಅಥವಾ ನಿಮ್ಮ ಲ್ಯಾಪ್‌ಟಾಪ್‌ನಲ್ಲಿಯೂ ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ನಿಮ್ಮ ಬಳಿ ವಿದ್ಯುತ್‌ ಬಿಲ್‌, ಆಧಾರ್‌ ಕಾರ್ಡ್ ಮತ್ತು ಒಟಿಪಿ ನಮೂದಿಸಲು ಮೊಬೈಲ್‌ ಇರಬೇಕು.

1 ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಗೂಗಲ್‌ ಕ್ರೋಮ್‌ ಅಥವಾ ಫೈರ್‌ಫಾಕ್ಸ್‌ ಬ್ರೌಸರ್‌ ಅನ್ನು ಓಪನ್‌ ಮಾಡಿ. ಅಲ್ಲಿನ ಯುಆರ್‌ಎಲ್‌ ಬಾರ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿಯೇ ರೂಪಿಸಲಾದ ಸೇವಾಸಿಂಧು ಪೋರ್ಟಲ್‌ನ ಪ್ರತ್ಯೇಕ ವೆಬ್‌ಸೈಟ್‌ sevasindhugs.karnataka.gov.in ಎಂದು ಟೈಪ್‌ ಮಾಡಿ ಸರ್ಚ್‌ ಮಾಡಿ. ಅದಾದ ಬಳಿಕ ನಿಮಗೆ ಈ ರೀತಿ ವೆಬ್‌ಪೇಜ್‌ ಒಪನ್‌ ಆಗುತ್ತದೆ. ಇಲ್ಲಿ ಅನ್ನಭಾಗ್ಯ ಹೊರತುಪಡಿಸಿ ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು. ಸದ್ಯ ಗೃಹಜ್ಯೋತಿಗೆ ಮಾತ್ರ ಅರ್ಜಿ ಸಲ್ಲಿಸುವ ಆಯ್ಕೆ ಇದೆ.

2 ಗೃಹಜ್ಯೋತಿ ಟ್ಯಾಬ್‌ ಮೇಲೆ ಕ್ಲಿಕ್‌ ಮಾಡಿ. ಅಲ್ಲಿ ನಿಮಗೆ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಅರ್ಜಿ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಹಲವು ಮಾಹಿತಿಯನ್ನು ನಮೂದಿಸಬೇಕಾಗುತ್ತದೆ.

3 ಮೊದಲು ನಿಮ್ಮ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.

4 ಬಳಿಕ ನಿಮ್ಮ ವ್ಯಾಪ್ತಿಯ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಆರು ಎಸ್ಕಾಂಗಳು ಇದ್ದು, BESCOM, CHESCOM, HESCOM, GESCOM, MESCOM ಹಾಗೂ ಹುಕ್ಕೇರಿ ಸೊಸೈಟಿ ಎಂಬ ಆಯ್ಕೆಗಳು ಇವೆ. ಅದರಲ್ಲಿ ನಿಮ್ಮ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು.

5 ನಿಮ್ಮ ಅಕೌಂಟ್‌ ನಂಬರ್‌ ನಮೂದಿಸಿ! ಬೆಸ್ಕಾಂ ಆಯ್ಕೆ ಮಾಡಿಕೊಂಡ ತಕ್ಷಣ ನಿಮ್ಮ ವಿದ್ಯುತ್‌ ಮೀಟರ್‌ನ ಅಕೌಂಟ್‌ ನಂಬರ್‌ ಅನ್ನು ನಮೂದಿಸಿ. ಆರ್‌ಆರ್‌ ಸಂಖ್ಯೆಯನ್ನು ನೀವು ಇಲ್ಲಿ ನಮೂದಿಸಬಾರದು. ಆರ್‌ಆರ್‌ ಸಂಖ್ಯೆಯೇ ಬೇರೆ, ಅಕೌಂಟ್‌ ಸಂಖ್ಯೆಯೇ ಬೇರೆ. ಈ ಸಂಖ್ಯೆ ನಿಮ್ಮ ಕರೆಂಟ್‌ ಬಿಲ್‌ನಲ್ಲಿ ಆರ್‌ಆರ್‌ ಸಂಖ್ಯೆಯ ಕೆಳಗಡೆ ಇರುತ್ತದೆ. ನೀವು ಅಕೌಂಟ್‌ ನಂಬರ್‌ ನಮೂದಿಸಿದ ಬಳಿಕ ವಿದ್ಯುತ್‌ ಮೀಟರ್‌ ಯಾರ ಹೆಸರಿನಲ್ಲಿದೆಯೋ ಅವರ ಹೆಸರು ಹಾಗೂ ವಿಳಾಸ ಆಟೋಮ್ಯಾಟಿಕ್‌ ಆಗಿ ಅಪ್‌ಡೇಟ್‌ ಆಗಲಿದೆ.

ಆ ನಂತರ ನೀವು ಬಾಡಿಗೆದಾರರೋ ಅಥವಾ ಮನೆ ಮಾಲೀಕರೋ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಎರಡು ಆಯ್ಕೆಗಳಿದ್ದು, ನಿಮಗೆ ಸರಿ ಹೊಂದಿಸುವ ಆಯ್ಕೆಯನ್ನು ಕ್ಲಿಕ್‌ ಮಾಡಿ.

7 ಬಳಿಕ ನಿಮ್ಮ ಆಧಾರ್‌ ಸಂಖ್ಯೆಯನ್ನು ನಮೂದಿಸಿ. ಆಧಾರ್‌ ಸಂಖ್ಯೆಯನ್ನು ನಮೂದಿಸಿದ ಬಳಿಕ ನಿಮಗೆ ಆಧಾರ್‌ ದೃಢೀಕರಣದ ಆಯ್ಕೆಗಳು ಕಾಣುತ್ತವೆ. ಆಧಾರ್‌ ದೃಢೀಕರಣ ಆಯ್ಕೆ ಮೇಲೆ ಕ್ಲಿಕ್‌ ಮಾಡಿ. ಒಂದು ವೇಳೆ ಈಗಾಗಲೇ ಆಧಾರ್‌ ದೃಢೀಕರಣ ಆಗಿದ್ದರೆ, ನೀವು ಆಧಾರ್‌ ಸಂಖ್ಯೆ ನಮೂದಿಸಿದ ತಕ್ಷಣ ನಿಮ್ಮ ಹೆಸರು ಕೂಡ ಅಲ್ಲಿ ಆಟೋಮ್ಯಾಟಿಕ್‌ ಆಗಿ ಬರಲಿದೆ.

8 ಮೊಬೈಲ್‌ ನಂಬರ್‌ ನಮೂದಿಸಿ! ಆಧಾರ್‌ ದೃಢೀಕರಣದ ಬಳಿಕ ನಿಮ್ಮ 10 ಅಂಕಿಯ ಮೊಬೈಲ್‌ ನಂಬರ್‌ ಅನ್ನು ನಮೂದಿಸಿ. ಇದಾದ ಬಳಿಕ ನಿಮ್ಮ ಮೊಬೈಲ್‌ಗೆ ಒಂದು ಒಟಿಪಿ ಬರಲಿದೆ. ಆ ಒಟಿಪಿಯನ್ನು ನಮೂದಿಸಿ.

9 ಒಟಿಪಿ ನಮೂದಿಸಿದ ಬಳಿಕ ಕೆಳಗಡೆ ಡಿಕ್ಲರೇಷನ್‌ ಎಂಬ ವಿಭಾಗ ಇದ್ದು, ಅಲ್ಲಿ ಐ ಅಗ್ರಿ ಎಂಬ ಟಿಕ್‌ ಬಾಕ್ಸ್‌ ಅನ್ನು ಕ್ಲಿಕ್‌ ಮಾಡಬೇಕು. ಅದಾದ ನಂತರ ವರ್ಡ್‌ ವೆರಿಫಿಕೇಷನ್‌ ಕೇಳುತ್ತದೆ. ಅಲ್ಲಿರುವ ಸಂಖ್ಯೆಯನ್ನು ನೀವು ಕೊಟ್ಟಿರುವ ಬಾಕ್ಸ್‌ನಲ್ಲಿ ಸರಿಯಾಗಿ ನಮೂದಿಸಬೇಕು.

ಬಳಿಕ ಕೆಳಗಡೆ ಸಬ್ಮಿಟ್, ಕ್ಯಾನ್ಸಲ್‌ ಹಾಗೂ ಕ್ಲೋಸ್‌ ಎಂಬ ಮೂರು ಆಯ್ಕೆಗಳಿದ್ದು, ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಿ. ಇದರ ಬಳಿಕ ಮತ್ತೊಂದು ವೆಬ್‌ಪೇಜ್‌ಗೆ ನೀವು ಹೋಗುತ್ತೀರಿ. ಅಲ್ಲಿ ನೀವು ನಮೂದಿಸಿರುವ ಮಾಹಿತಿಯನ್ನು ಮತ್ತೊಂದು ಸಲ ವೆಬ್‌ಸೈಟ್‌ ತೋರಿಸುತ್ತದೆ. ಎಲ್ಲ ಸರಿ ಇದೆ ಎಂದು ಖಚಿತಪಡಿಸಿಕೊಂಡ ಬಳಿಕ ನೀವು ಮತ್ತೊಂದು ಸಲ ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಬೇಕು. ಎಡಿಟ್‌ ಮಾಡಲು ಕೂಡ ಅವಕಾಶ ಇದೆ.

ಕೊನೆಗೆ ಸಬ್ಮಿಟ್ ಬಟನ್‌ ಕ್ಲಿಕ್‌ ಮಾಡಿದ ಬಳಿಕ ನಿಮಗೆ ಒಂದು ಸ್ವೀಕೃತಿ ಪತ್ರ ಅಥವಾ ಅಕ್ನಾಲೇಜ್‌ಮೆಂಟ್‌ ಬರಲಿದೆ. ಅದನ್ನು ನೀವು ಎಕ್ಸ್‌ಪೋರ್ಟ್‌ ಪಿಡಿಎಫ್‌ ಎಂದು ಆಯ್ಕೆ ಕೊಟ್ಟರೆ ಸ್ವೀಕೃತಿ ಪತ್ರ ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಸೇವ್‌ ಆಗಲಿದೆ. ಮುಂದೆ ಅರ್ಜಿಯನ್ನು ಪರಿಶೀಲಿಸಲಿರುವ ಸರ್ಕಾರ ನಿಮಗೆ ಉಚಿತವಾಗಿ ವಿದ್ಯುತ್‌ ಅನ್ನು ನೀಡಲಿದೆ. ಸದ್ಯಕ್ಕೆ ಯಾವುದೇ ರೀತಿಯ ದಾಖಲೆಗಳನ್ನು ಅಪ್‌ಲೋಡ್‌ ಮಾಡುವಂತಿಲ್ಲ. ಮುಂದೆ ದಾಖಲೆಗಳನ್ನು ಪರಿಶೀಲಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್‌: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...