Homeಕರ್ನಾಟಕಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

ಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಜನಪ್ರಿಯ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್‌ 18ರಿಂದ ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೊದಲ ಎರಡು ದಿನ ಸರ್ವರ್‌ ಡೌನ್‌ ಆಗಿ, ಗ್ರಾಹಕರು ಪರದಾಡಿದ್ದರು. ಆದರೆ, ಈಗ ಸರ್ವರ್‌ ಸಮಸ್ಯೆ ಸ್ವಲ್ಪ ಒಂದು ಹಂತಕ್ಕೆ ಸರಿಯಾಗಿದ್ದು, ಆನ್‌ಲೈನ್‌ ಅಥವಾ ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಸೇರಿ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ನೀವು ಅರ್ಜಿ ಸಲ್ಲಿಸಬಹುದು.

ನಿಮ್ಮ ಮೊಬೈಲ್‌ನಿಂದಲೇ ಅರ್ಜಿ ಸಲ್ಲಿಸಬಹುದು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸರಳವಾಗಿದ್ದು, ಸರ್ವರ್‌ ಡೌನ್‌ ಆಗಿಲ್ಲ ಎಂದರೆ ನಿಮ್ಮ ಮೊಬೈಲ್‌ ಅಥವಾ ನಿಮ್ಮ ಲ್ಯಾಪ್‌ಟಾಪ್‌ನಲ್ಲಿಯೂ ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ನಿಮ್ಮ ಬಳಿ ವಿದ್ಯುತ್‌ ಬಿಲ್‌, ಆಧಾರ್‌ ಕಾರ್ಡ್ ಮತ್ತು ಒಟಿಪಿ ನಮೂದಿಸಲು ಮೊಬೈಲ್‌ ಇರಬೇಕು.

1 ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಗೂಗಲ್‌ ಕ್ರೋಮ್‌ ಅಥವಾ ಫೈರ್‌ಫಾಕ್ಸ್‌ ಬ್ರೌಸರ್‌ ಅನ್ನು ಓಪನ್‌ ಮಾಡಿ. ಅಲ್ಲಿನ ಯುಆರ್‌ಎಲ್‌ ಬಾರ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿಯೇ ರೂಪಿಸಲಾದ ಸೇವಾಸಿಂಧು ಪೋರ್ಟಲ್‌ನ ಪ್ರತ್ಯೇಕ ವೆಬ್‌ಸೈಟ್‌ sevasindhugs.karnataka.gov.in ಎಂದು ಟೈಪ್‌ ಮಾಡಿ ಸರ್ಚ್‌ ಮಾಡಿ. ಅದಾದ ಬಳಿಕ ನಿಮಗೆ ಈ ರೀತಿ ವೆಬ್‌ಪೇಜ್‌ ಒಪನ್‌ ಆಗುತ್ತದೆ. ಇಲ್ಲಿ ಅನ್ನಭಾಗ್ಯ ಹೊರತುಪಡಿಸಿ ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು. ಸದ್ಯ ಗೃಹಜ್ಯೋತಿಗೆ ಮಾತ್ರ ಅರ್ಜಿ ಸಲ್ಲಿಸುವ ಆಯ್ಕೆ ಇದೆ.

2 ಗೃಹಜ್ಯೋತಿ ಟ್ಯಾಬ್‌ ಮೇಲೆ ಕ್ಲಿಕ್‌ ಮಾಡಿ. ಅಲ್ಲಿ ನಿಮಗೆ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಅರ್ಜಿ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಹಲವು ಮಾಹಿತಿಯನ್ನು ನಮೂದಿಸಬೇಕಾಗುತ್ತದೆ.

3 ಮೊದಲು ನಿಮ್ಮ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.

4 ಬಳಿಕ ನಿಮ್ಮ ವ್ಯಾಪ್ತಿಯ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಆರು ಎಸ್ಕಾಂಗಳು ಇದ್ದು, BESCOM, CHESCOM, HESCOM, GESCOM, MESCOM ಹಾಗೂ ಹುಕ್ಕೇರಿ ಸೊಸೈಟಿ ಎಂಬ ಆಯ್ಕೆಗಳು ಇವೆ. ಅದರಲ್ಲಿ ನಿಮ್ಮ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು.

5 ನಿಮ್ಮ ಅಕೌಂಟ್‌ ನಂಬರ್‌ ನಮೂದಿಸಿ! ಬೆಸ್ಕಾಂ ಆಯ್ಕೆ ಮಾಡಿಕೊಂಡ ತಕ್ಷಣ ನಿಮ್ಮ ವಿದ್ಯುತ್‌ ಮೀಟರ್‌ನ ಅಕೌಂಟ್‌ ನಂಬರ್‌ ಅನ್ನು ನಮೂದಿಸಿ. ಆರ್‌ಆರ್‌ ಸಂಖ್ಯೆಯನ್ನು ನೀವು ಇಲ್ಲಿ ನಮೂದಿಸಬಾರದು. ಆರ್‌ಆರ್‌ ಸಂಖ್ಯೆಯೇ ಬೇರೆ, ಅಕೌಂಟ್‌ ಸಂಖ್ಯೆಯೇ ಬೇರೆ. ಈ ಸಂಖ್ಯೆ ನಿಮ್ಮ ಕರೆಂಟ್‌ ಬಿಲ್‌ನಲ್ಲಿ ಆರ್‌ಆರ್‌ ಸಂಖ್ಯೆಯ ಕೆಳಗಡೆ ಇರುತ್ತದೆ. ನೀವು ಅಕೌಂಟ್‌ ನಂಬರ್‌ ನಮೂದಿಸಿದ ಬಳಿಕ ವಿದ್ಯುತ್‌ ಮೀಟರ್‌ ಯಾರ ಹೆಸರಿನಲ್ಲಿದೆಯೋ ಅವರ ಹೆಸರು ಹಾಗೂ ವಿಳಾಸ ಆಟೋಮ್ಯಾಟಿಕ್‌ ಆಗಿ ಅಪ್‌ಡೇಟ್‌ ಆಗಲಿದೆ.

ಆ ನಂತರ ನೀವು ಬಾಡಿಗೆದಾರರೋ ಅಥವಾ ಮನೆ ಮಾಲೀಕರೋ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಎರಡು ಆಯ್ಕೆಗಳಿದ್ದು, ನಿಮಗೆ ಸರಿ ಹೊಂದಿಸುವ ಆಯ್ಕೆಯನ್ನು ಕ್ಲಿಕ್‌ ಮಾಡಿ.

7 ಬಳಿಕ ನಿಮ್ಮ ಆಧಾರ್‌ ಸಂಖ್ಯೆಯನ್ನು ನಮೂದಿಸಿ. ಆಧಾರ್‌ ಸಂಖ್ಯೆಯನ್ನು ನಮೂದಿಸಿದ ಬಳಿಕ ನಿಮಗೆ ಆಧಾರ್‌ ದೃಢೀಕರಣದ ಆಯ್ಕೆಗಳು ಕಾಣುತ್ತವೆ. ಆಧಾರ್‌ ದೃಢೀಕರಣ ಆಯ್ಕೆ ಮೇಲೆ ಕ್ಲಿಕ್‌ ಮಾಡಿ. ಒಂದು ವೇಳೆ ಈಗಾಗಲೇ ಆಧಾರ್‌ ದೃಢೀಕರಣ ಆಗಿದ್ದರೆ, ನೀವು ಆಧಾರ್‌ ಸಂಖ್ಯೆ ನಮೂದಿಸಿದ ತಕ್ಷಣ ನಿಮ್ಮ ಹೆಸರು ಕೂಡ ಅಲ್ಲಿ ಆಟೋಮ್ಯಾಟಿಕ್‌ ಆಗಿ ಬರಲಿದೆ.

8 ಮೊಬೈಲ್‌ ನಂಬರ್‌ ನಮೂದಿಸಿ! ಆಧಾರ್‌ ದೃಢೀಕರಣದ ಬಳಿಕ ನಿಮ್ಮ 10 ಅಂಕಿಯ ಮೊಬೈಲ್‌ ನಂಬರ್‌ ಅನ್ನು ನಮೂದಿಸಿ. ಇದಾದ ಬಳಿಕ ನಿಮ್ಮ ಮೊಬೈಲ್‌ಗೆ ಒಂದು ಒಟಿಪಿ ಬರಲಿದೆ. ಆ ಒಟಿಪಿಯನ್ನು ನಮೂದಿಸಿ.

9 ಒಟಿಪಿ ನಮೂದಿಸಿದ ಬಳಿಕ ಕೆಳಗಡೆ ಡಿಕ್ಲರೇಷನ್‌ ಎಂಬ ವಿಭಾಗ ಇದ್ದು, ಅಲ್ಲಿ ಐ ಅಗ್ರಿ ಎಂಬ ಟಿಕ್‌ ಬಾಕ್ಸ್‌ ಅನ್ನು ಕ್ಲಿಕ್‌ ಮಾಡಬೇಕು. ಅದಾದ ನಂತರ ವರ್ಡ್‌ ವೆರಿಫಿಕೇಷನ್‌ ಕೇಳುತ್ತದೆ. ಅಲ್ಲಿರುವ ಸಂಖ್ಯೆಯನ್ನು ನೀವು ಕೊಟ್ಟಿರುವ ಬಾಕ್ಸ್‌ನಲ್ಲಿ ಸರಿಯಾಗಿ ನಮೂದಿಸಬೇಕು.

ಬಳಿಕ ಕೆಳಗಡೆ ಸಬ್ಮಿಟ್, ಕ್ಯಾನ್ಸಲ್‌ ಹಾಗೂ ಕ್ಲೋಸ್‌ ಎಂಬ ಮೂರು ಆಯ್ಕೆಗಳಿದ್ದು, ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಿ. ಇದರ ಬಳಿಕ ಮತ್ತೊಂದು ವೆಬ್‌ಪೇಜ್‌ಗೆ ನೀವು ಹೋಗುತ್ತೀರಿ. ಅಲ್ಲಿ ನೀವು ನಮೂದಿಸಿರುವ ಮಾಹಿತಿಯನ್ನು ಮತ್ತೊಂದು ಸಲ ವೆಬ್‌ಸೈಟ್‌ ತೋರಿಸುತ್ತದೆ. ಎಲ್ಲ ಸರಿ ಇದೆ ಎಂದು ಖಚಿತಪಡಿಸಿಕೊಂಡ ಬಳಿಕ ನೀವು ಮತ್ತೊಂದು ಸಲ ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಬೇಕು. ಎಡಿಟ್‌ ಮಾಡಲು ಕೂಡ ಅವಕಾಶ ಇದೆ.

ಕೊನೆಗೆ ಸಬ್ಮಿಟ್ ಬಟನ್‌ ಕ್ಲಿಕ್‌ ಮಾಡಿದ ಬಳಿಕ ನಿಮಗೆ ಒಂದು ಸ್ವೀಕೃತಿ ಪತ್ರ ಅಥವಾ ಅಕ್ನಾಲೇಜ್‌ಮೆಂಟ್‌ ಬರಲಿದೆ. ಅದನ್ನು ನೀವು ಎಕ್ಸ್‌ಪೋರ್ಟ್‌ ಪಿಡಿಎಫ್‌ ಎಂದು ಆಯ್ಕೆ ಕೊಟ್ಟರೆ ಸ್ವೀಕೃತಿ ಪತ್ರ ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಸೇವ್‌ ಆಗಲಿದೆ. ಮುಂದೆ ಅರ್ಜಿಯನ್ನು ಪರಿಶೀಲಿಸಲಿರುವ ಸರ್ಕಾರ ನಿಮಗೆ ಉಚಿತವಾಗಿ ವಿದ್ಯುತ್‌ ಅನ್ನು ನೀಡಲಿದೆ. ಸದ್ಯಕ್ಕೆ ಯಾವುದೇ ರೀತಿಯ ದಾಖಲೆಗಳನ್ನು ಅಪ್‌ಲೋಡ್‌ ಮಾಡುವಂತಿಲ್ಲ. ಮುಂದೆ ದಾಖಲೆಗಳನ್ನು ಪರಿಶೀಲಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್‌: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...