Homeಕರ್ನಾಟಕಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

ಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಜನಪ್ರಿಯ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್‌ 18ರಿಂದ ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೊದಲ ಎರಡು ದಿನ ಸರ್ವರ್‌ ಡೌನ್‌ ಆಗಿ, ಗ್ರಾಹಕರು ಪರದಾಡಿದ್ದರು. ಆದರೆ, ಈಗ ಸರ್ವರ್‌ ಸಮಸ್ಯೆ ಸ್ವಲ್ಪ ಒಂದು ಹಂತಕ್ಕೆ ಸರಿಯಾಗಿದ್ದು, ಆನ್‌ಲೈನ್‌ ಅಥವಾ ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಸೇರಿ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ನೀವು ಅರ್ಜಿ ಸಲ್ಲಿಸಬಹುದು.

ನಿಮ್ಮ ಮೊಬೈಲ್‌ನಿಂದಲೇ ಅರ್ಜಿ ಸಲ್ಲಿಸಬಹುದು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸರಳವಾಗಿದ್ದು, ಸರ್ವರ್‌ ಡೌನ್‌ ಆಗಿಲ್ಲ ಎಂದರೆ ನಿಮ್ಮ ಮೊಬೈಲ್‌ ಅಥವಾ ನಿಮ್ಮ ಲ್ಯಾಪ್‌ಟಾಪ್‌ನಲ್ಲಿಯೂ ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ನಿಮ್ಮ ಬಳಿ ವಿದ್ಯುತ್‌ ಬಿಲ್‌, ಆಧಾರ್‌ ಕಾರ್ಡ್ ಮತ್ತು ಒಟಿಪಿ ನಮೂದಿಸಲು ಮೊಬೈಲ್‌ ಇರಬೇಕು.

1 ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಗೂಗಲ್‌ ಕ್ರೋಮ್‌ ಅಥವಾ ಫೈರ್‌ಫಾಕ್ಸ್‌ ಬ್ರೌಸರ್‌ ಅನ್ನು ಓಪನ್‌ ಮಾಡಿ. ಅಲ್ಲಿನ ಯುಆರ್‌ಎಲ್‌ ಬಾರ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿಯೇ ರೂಪಿಸಲಾದ ಸೇವಾಸಿಂಧು ಪೋರ್ಟಲ್‌ನ ಪ್ರತ್ಯೇಕ ವೆಬ್‌ಸೈಟ್‌ sevasindhugs.karnataka.gov.in ಎಂದು ಟೈಪ್‌ ಮಾಡಿ ಸರ್ಚ್‌ ಮಾಡಿ. ಅದಾದ ಬಳಿಕ ನಿಮಗೆ ಈ ರೀತಿ ವೆಬ್‌ಪೇಜ್‌ ಒಪನ್‌ ಆಗುತ್ತದೆ. ಇಲ್ಲಿ ಅನ್ನಭಾಗ್ಯ ಹೊರತುಪಡಿಸಿ ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು. ಸದ್ಯ ಗೃಹಜ್ಯೋತಿಗೆ ಮಾತ್ರ ಅರ್ಜಿ ಸಲ್ಲಿಸುವ ಆಯ್ಕೆ ಇದೆ.

2 ಗೃಹಜ್ಯೋತಿ ಟ್ಯಾಬ್‌ ಮೇಲೆ ಕ್ಲಿಕ್‌ ಮಾಡಿ. ಅಲ್ಲಿ ನಿಮಗೆ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಅರ್ಜಿ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಹಲವು ಮಾಹಿತಿಯನ್ನು ನಮೂದಿಸಬೇಕಾಗುತ್ತದೆ.

3 ಮೊದಲು ನಿಮ್ಮ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.

4 ಬಳಿಕ ನಿಮ್ಮ ವ್ಯಾಪ್ತಿಯ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಆರು ಎಸ್ಕಾಂಗಳು ಇದ್ದು, BESCOM, CHESCOM, HESCOM, GESCOM, MESCOM ಹಾಗೂ ಹುಕ್ಕೇರಿ ಸೊಸೈಟಿ ಎಂಬ ಆಯ್ಕೆಗಳು ಇವೆ. ಅದರಲ್ಲಿ ನಿಮ್ಮ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು.

5 ನಿಮ್ಮ ಅಕೌಂಟ್‌ ನಂಬರ್‌ ನಮೂದಿಸಿ! ಬೆಸ್ಕಾಂ ಆಯ್ಕೆ ಮಾಡಿಕೊಂಡ ತಕ್ಷಣ ನಿಮ್ಮ ವಿದ್ಯುತ್‌ ಮೀಟರ್‌ನ ಅಕೌಂಟ್‌ ನಂಬರ್‌ ಅನ್ನು ನಮೂದಿಸಿ. ಆರ್‌ಆರ್‌ ಸಂಖ್ಯೆಯನ್ನು ನೀವು ಇಲ್ಲಿ ನಮೂದಿಸಬಾರದು. ಆರ್‌ಆರ್‌ ಸಂಖ್ಯೆಯೇ ಬೇರೆ, ಅಕೌಂಟ್‌ ಸಂಖ್ಯೆಯೇ ಬೇರೆ. ಈ ಸಂಖ್ಯೆ ನಿಮ್ಮ ಕರೆಂಟ್‌ ಬಿಲ್‌ನಲ್ಲಿ ಆರ್‌ಆರ್‌ ಸಂಖ್ಯೆಯ ಕೆಳಗಡೆ ಇರುತ್ತದೆ. ನೀವು ಅಕೌಂಟ್‌ ನಂಬರ್‌ ನಮೂದಿಸಿದ ಬಳಿಕ ವಿದ್ಯುತ್‌ ಮೀಟರ್‌ ಯಾರ ಹೆಸರಿನಲ್ಲಿದೆಯೋ ಅವರ ಹೆಸರು ಹಾಗೂ ವಿಳಾಸ ಆಟೋಮ್ಯಾಟಿಕ್‌ ಆಗಿ ಅಪ್‌ಡೇಟ್‌ ಆಗಲಿದೆ.

ಆ ನಂತರ ನೀವು ಬಾಡಿಗೆದಾರರೋ ಅಥವಾ ಮನೆ ಮಾಲೀಕರೋ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಎರಡು ಆಯ್ಕೆಗಳಿದ್ದು, ನಿಮಗೆ ಸರಿ ಹೊಂದಿಸುವ ಆಯ್ಕೆಯನ್ನು ಕ್ಲಿಕ್‌ ಮಾಡಿ.

7 ಬಳಿಕ ನಿಮ್ಮ ಆಧಾರ್‌ ಸಂಖ್ಯೆಯನ್ನು ನಮೂದಿಸಿ. ಆಧಾರ್‌ ಸಂಖ್ಯೆಯನ್ನು ನಮೂದಿಸಿದ ಬಳಿಕ ನಿಮಗೆ ಆಧಾರ್‌ ದೃಢೀಕರಣದ ಆಯ್ಕೆಗಳು ಕಾಣುತ್ತವೆ. ಆಧಾರ್‌ ದೃಢೀಕರಣ ಆಯ್ಕೆ ಮೇಲೆ ಕ್ಲಿಕ್‌ ಮಾಡಿ. ಒಂದು ವೇಳೆ ಈಗಾಗಲೇ ಆಧಾರ್‌ ದೃಢೀಕರಣ ಆಗಿದ್ದರೆ, ನೀವು ಆಧಾರ್‌ ಸಂಖ್ಯೆ ನಮೂದಿಸಿದ ತಕ್ಷಣ ನಿಮ್ಮ ಹೆಸರು ಕೂಡ ಅಲ್ಲಿ ಆಟೋಮ್ಯಾಟಿಕ್‌ ಆಗಿ ಬರಲಿದೆ.

8 ಮೊಬೈಲ್‌ ನಂಬರ್‌ ನಮೂದಿಸಿ! ಆಧಾರ್‌ ದೃಢೀಕರಣದ ಬಳಿಕ ನಿಮ್ಮ 10 ಅಂಕಿಯ ಮೊಬೈಲ್‌ ನಂಬರ್‌ ಅನ್ನು ನಮೂದಿಸಿ. ಇದಾದ ಬಳಿಕ ನಿಮ್ಮ ಮೊಬೈಲ್‌ಗೆ ಒಂದು ಒಟಿಪಿ ಬರಲಿದೆ. ಆ ಒಟಿಪಿಯನ್ನು ನಮೂದಿಸಿ.

9 ಒಟಿಪಿ ನಮೂದಿಸಿದ ಬಳಿಕ ಕೆಳಗಡೆ ಡಿಕ್ಲರೇಷನ್‌ ಎಂಬ ವಿಭಾಗ ಇದ್ದು, ಅಲ್ಲಿ ಐ ಅಗ್ರಿ ಎಂಬ ಟಿಕ್‌ ಬಾಕ್ಸ್‌ ಅನ್ನು ಕ್ಲಿಕ್‌ ಮಾಡಬೇಕು. ಅದಾದ ನಂತರ ವರ್ಡ್‌ ವೆರಿಫಿಕೇಷನ್‌ ಕೇಳುತ್ತದೆ. ಅಲ್ಲಿರುವ ಸಂಖ್ಯೆಯನ್ನು ನೀವು ಕೊಟ್ಟಿರುವ ಬಾಕ್ಸ್‌ನಲ್ಲಿ ಸರಿಯಾಗಿ ನಮೂದಿಸಬೇಕು.

ಬಳಿಕ ಕೆಳಗಡೆ ಸಬ್ಮಿಟ್, ಕ್ಯಾನ್ಸಲ್‌ ಹಾಗೂ ಕ್ಲೋಸ್‌ ಎಂಬ ಮೂರು ಆಯ್ಕೆಗಳಿದ್ದು, ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಿ. ಇದರ ಬಳಿಕ ಮತ್ತೊಂದು ವೆಬ್‌ಪೇಜ್‌ಗೆ ನೀವು ಹೋಗುತ್ತೀರಿ. ಅಲ್ಲಿ ನೀವು ನಮೂದಿಸಿರುವ ಮಾಹಿತಿಯನ್ನು ಮತ್ತೊಂದು ಸಲ ವೆಬ್‌ಸೈಟ್‌ ತೋರಿಸುತ್ತದೆ. ಎಲ್ಲ ಸರಿ ಇದೆ ಎಂದು ಖಚಿತಪಡಿಸಿಕೊಂಡ ಬಳಿಕ ನೀವು ಮತ್ತೊಂದು ಸಲ ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಬೇಕು. ಎಡಿಟ್‌ ಮಾಡಲು ಕೂಡ ಅವಕಾಶ ಇದೆ.

ಕೊನೆಗೆ ಸಬ್ಮಿಟ್ ಬಟನ್‌ ಕ್ಲಿಕ್‌ ಮಾಡಿದ ಬಳಿಕ ನಿಮಗೆ ಒಂದು ಸ್ವೀಕೃತಿ ಪತ್ರ ಅಥವಾ ಅಕ್ನಾಲೇಜ್‌ಮೆಂಟ್‌ ಬರಲಿದೆ. ಅದನ್ನು ನೀವು ಎಕ್ಸ್‌ಪೋರ್ಟ್‌ ಪಿಡಿಎಫ್‌ ಎಂದು ಆಯ್ಕೆ ಕೊಟ್ಟರೆ ಸ್ವೀಕೃತಿ ಪತ್ರ ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಸೇವ್‌ ಆಗಲಿದೆ. ಮುಂದೆ ಅರ್ಜಿಯನ್ನು ಪರಿಶೀಲಿಸಲಿರುವ ಸರ್ಕಾರ ನಿಮಗೆ ಉಚಿತವಾಗಿ ವಿದ್ಯುತ್‌ ಅನ್ನು ನೀಡಲಿದೆ. ಸದ್ಯಕ್ಕೆ ಯಾವುದೇ ರೀತಿಯ ದಾಖಲೆಗಳನ್ನು ಅಪ್‌ಲೋಡ್‌ ಮಾಡುವಂತಿಲ್ಲ. ಮುಂದೆ ದಾಖಲೆಗಳನ್ನು ಪರಿಶೀಲಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್‌: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...