Homeಕರ್ನಾಟಕಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

ಗೃಹಜ್ಯೋತಿ ಯೋಜನೆಗೆ ನಿಮ್ಮ ಮೊಬೈಲ್‌ನಿಂದ ಅರ್ಜಿ ಸಲ್ಲಿಸುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ರಾಜ್ಯ ಕಾಂಗ್ರೆಸ್ ಸರ್ಕಾರದ 5 ಜನಪ್ರಿಯ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಜೂನ್‌ 18ರಿಂದ ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮೊದಲ ಎರಡು ದಿನ ಸರ್ವರ್‌ ಡೌನ್‌ ಆಗಿ, ಗ್ರಾಹಕರು ಪರದಾಡಿದ್ದರು. ಆದರೆ, ಈಗ ಸರ್ವರ್‌ ಸಮಸ್ಯೆ ಸ್ವಲ್ಪ ಒಂದು ಹಂತಕ್ಕೆ ಸರಿಯಾಗಿದ್ದು, ಆನ್‌ಲೈನ್‌ ಅಥವಾ ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಸೇರಿ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ನೀವು ಅರ್ಜಿ ಸಲ್ಲಿಸಬಹುದು.

ನಿಮ್ಮ ಮೊಬೈಲ್‌ನಿಂದಲೇ ಅರ್ಜಿ ಸಲ್ಲಿಸಬಹುದು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಸರಳವಾಗಿದ್ದು, ಸರ್ವರ್‌ ಡೌನ್‌ ಆಗಿಲ್ಲ ಎಂದರೆ ನಿಮ್ಮ ಮೊಬೈಲ್‌ ಅಥವಾ ನಿಮ್ಮ ಲ್ಯಾಪ್‌ಟಾಪ್‌ನಲ್ಲಿಯೂ ಸೇವಾಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ವೇಳೆ ನಿಮ್ಮ ಬಳಿ ವಿದ್ಯುತ್‌ ಬಿಲ್‌, ಆಧಾರ್‌ ಕಾರ್ಡ್ ಮತ್ತು ಒಟಿಪಿ ನಮೂದಿಸಲು ಮೊಬೈಲ್‌ ಇರಬೇಕು.

1 ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಗೂಗಲ್‌ ಕ್ರೋಮ್‌ ಅಥವಾ ಫೈರ್‌ಫಾಕ್ಸ್‌ ಬ್ರೌಸರ್‌ ಅನ್ನು ಓಪನ್‌ ಮಾಡಿ. ಅಲ್ಲಿನ ಯುಆರ್‌ಎಲ್‌ ಬಾರ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿಯೇ ರೂಪಿಸಲಾದ ಸೇವಾಸಿಂಧು ಪೋರ್ಟಲ್‌ನ ಪ್ರತ್ಯೇಕ ವೆಬ್‌ಸೈಟ್‌ sevasindhugs.karnataka.gov.in ಎಂದು ಟೈಪ್‌ ಮಾಡಿ ಸರ್ಚ್‌ ಮಾಡಿ. ಅದಾದ ಬಳಿಕ ನಿಮಗೆ ಈ ರೀತಿ ವೆಬ್‌ಪೇಜ್‌ ಒಪನ್‌ ಆಗುತ್ತದೆ. ಇಲ್ಲಿ ಅನ್ನಭಾಗ್ಯ ಹೊರತುಪಡಿಸಿ ಉಳಿದ ನಾಲ್ಕು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು. ಸದ್ಯ ಗೃಹಜ್ಯೋತಿಗೆ ಮಾತ್ರ ಅರ್ಜಿ ಸಲ್ಲಿಸುವ ಆಯ್ಕೆ ಇದೆ.

2 ಗೃಹಜ್ಯೋತಿ ಟ್ಯಾಬ್‌ ಮೇಲೆ ಕ್ಲಿಕ್‌ ಮಾಡಿ. ಅಲ್ಲಿ ನಿಮಗೆ ಗೃಹಜ್ಯೋತಿ ಯೋಜನೆಗೆ ನೋಂದಣಿ ಮಾಡಿಕೊಳ್ಳುವ ಅರ್ಜಿ ತೆರೆದುಕೊಳ್ಳುತ್ತದೆ. ಅಲ್ಲಿ ನೀವು ಹಲವು ಮಾಹಿತಿಯನ್ನು ನಮೂದಿಸಬೇಕಾಗುತ್ತದೆ.

3 ಮೊದಲು ನಿಮ್ಮ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.

4 ಬಳಿಕ ನಿಮ್ಮ ವ್ಯಾಪ್ತಿಯ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಆರು ಎಸ್ಕಾಂಗಳು ಇದ್ದು, BESCOM, CHESCOM, HESCOM, GESCOM, MESCOM ಹಾಗೂ ಹುಕ್ಕೇರಿ ಸೊಸೈಟಿ ಎಂಬ ಆಯ್ಕೆಗಳು ಇವೆ. ಅದರಲ್ಲಿ ನಿಮ್ಮ ಎಸ್ಕಾಂ ಅನ್ನು ಆಯ್ಕೆ ಮಾಡಿಕೊಳ್ಳಬೇಕು.

5 ನಿಮ್ಮ ಅಕೌಂಟ್‌ ನಂಬರ್‌ ನಮೂದಿಸಿ! ಬೆಸ್ಕಾಂ ಆಯ್ಕೆ ಮಾಡಿಕೊಂಡ ತಕ್ಷಣ ನಿಮ್ಮ ವಿದ್ಯುತ್‌ ಮೀಟರ್‌ನ ಅಕೌಂಟ್‌ ನಂಬರ್‌ ಅನ್ನು ನಮೂದಿಸಿ. ಆರ್‌ಆರ್‌ ಸಂಖ್ಯೆಯನ್ನು ನೀವು ಇಲ್ಲಿ ನಮೂದಿಸಬಾರದು. ಆರ್‌ಆರ್‌ ಸಂಖ್ಯೆಯೇ ಬೇರೆ, ಅಕೌಂಟ್‌ ಸಂಖ್ಯೆಯೇ ಬೇರೆ. ಈ ಸಂಖ್ಯೆ ನಿಮ್ಮ ಕರೆಂಟ್‌ ಬಿಲ್‌ನಲ್ಲಿ ಆರ್‌ಆರ್‌ ಸಂಖ್ಯೆಯ ಕೆಳಗಡೆ ಇರುತ್ತದೆ. ನೀವು ಅಕೌಂಟ್‌ ನಂಬರ್‌ ನಮೂದಿಸಿದ ಬಳಿಕ ವಿದ್ಯುತ್‌ ಮೀಟರ್‌ ಯಾರ ಹೆಸರಿನಲ್ಲಿದೆಯೋ ಅವರ ಹೆಸರು ಹಾಗೂ ವಿಳಾಸ ಆಟೋಮ್ಯಾಟಿಕ್‌ ಆಗಿ ಅಪ್‌ಡೇಟ್‌ ಆಗಲಿದೆ.

ಆ ನಂತರ ನೀವು ಬಾಡಿಗೆದಾರರೋ ಅಥವಾ ಮನೆ ಮಾಲೀಕರೋ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಎರಡು ಆಯ್ಕೆಗಳಿದ್ದು, ನಿಮಗೆ ಸರಿ ಹೊಂದಿಸುವ ಆಯ್ಕೆಯನ್ನು ಕ್ಲಿಕ್‌ ಮಾಡಿ.

7 ಬಳಿಕ ನಿಮ್ಮ ಆಧಾರ್‌ ಸಂಖ್ಯೆಯನ್ನು ನಮೂದಿಸಿ. ಆಧಾರ್‌ ಸಂಖ್ಯೆಯನ್ನು ನಮೂದಿಸಿದ ಬಳಿಕ ನಿಮಗೆ ಆಧಾರ್‌ ದೃಢೀಕರಣದ ಆಯ್ಕೆಗಳು ಕಾಣುತ್ತವೆ. ಆಧಾರ್‌ ದೃಢೀಕರಣ ಆಯ್ಕೆ ಮೇಲೆ ಕ್ಲಿಕ್‌ ಮಾಡಿ. ಒಂದು ವೇಳೆ ಈಗಾಗಲೇ ಆಧಾರ್‌ ದೃಢೀಕರಣ ಆಗಿದ್ದರೆ, ನೀವು ಆಧಾರ್‌ ಸಂಖ್ಯೆ ನಮೂದಿಸಿದ ತಕ್ಷಣ ನಿಮ್ಮ ಹೆಸರು ಕೂಡ ಅಲ್ಲಿ ಆಟೋಮ್ಯಾಟಿಕ್‌ ಆಗಿ ಬರಲಿದೆ.

8 ಮೊಬೈಲ್‌ ನಂಬರ್‌ ನಮೂದಿಸಿ! ಆಧಾರ್‌ ದೃಢೀಕರಣದ ಬಳಿಕ ನಿಮ್ಮ 10 ಅಂಕಿಯ ಮೊಬೈಲ್‌ ನಂಬರ್‌ ಅನ್ನು ನಮೂದಿಸಿ. ಇದಾದ ಬಳಿಕ ನಿಮ್ಮ ಮೊಬೈಲ್‌ಗೆ ಒಂದು ಒಟಿಪಿ ಬರಲಿದೆ. ಆ ಒಟಿಪಿಯನ್ನು ನಮೂದಿಸಿ.

9 ಒಟಿಪಿ ನಮೂದಿಸಿದ ಬಳಿಕ ಕೆಳಗಡೆ ಡಿಕ್ಲರೇಷನ್‌ ಎಂಬ ವಿಭಾಗ ಇದ್ದು, ಅಲ್ಲಿ ಐ ಅಗ್ರಿ ಎಂಬ ಟಿಕ್‌ ಬಾಕ್ಸ್‌ ಅನ್ನು ಕ್ಲಿಕ್‌ ಮಾಡಬೇಕು. ಅದಾದ ನಂತರ ವರ್ಡ್‌ ವೆರಿಫಿಕೇಷನ್‌ ಕೇಳುತ್ತದೆ. ಅಲ್ಲಿರುವ ಸಂಖ್ಯೆಯನ್ನು ನೀವು ಕೊಟ್ಟಿರುವ ಬಾಕ್ಸ್‌ನಲ್ಲಿ ಸರಿಯಾಗಿ ನಮೂದಿಸಬೇಕು.

ಬಳಿಕ ಕೆಳಗಡೆ ಸಬ್ಮಿಟ್, ಕ್ಯಾನ್ಸಲ್‌ ಹಾಗೂ ಕ್ಲೋಸ್‌ ಎಂಬ ಮೂರು ಆಯ್ಕೆಗಳಿದ್ದು, ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಿ. ಇದರ ಬಳಿಕ ಮತ್ತೊಂದು ವೆಬ್‌ಪೇಜ್‌ಗೆ ನೀವು ಹೋಗುತ್ತೀರಿ. ಅಲ್ಲಿ ನೀವು ನಮೂದಿಸಿರುವ ಮಾಹಿತಿಯನ್ನು ಮತ್ತೊಂದು ಸಲ ವೆಬ್‌ಸೈಟ್‌ ತೋರಿಸುತ್ತದೆ. ಎಲ್ಲ ಸರಿ ಇದೆ ಎಂದು ಖಚಿತಪಡಿಸಿಕೊಂಡ ಬಳಿಕ ನೀವು ಮತ್ತೊಂದು ಸಲ ಸಬ್ಮಿಟ್ ಬಟನ್‌ ಅನ್ನು ಕ್ಲಿಕ್‌ ಮಾಡಬೇಕು. ಎಡಿಟ್‌ ಮಾಡಲು ಕೂಡ ಅವಕಾಶ ಇದೆ.

ಕೊನೆಗೆ ಸಬ್ಮಿಟ್ ಬಟನ್‌ ಕ್ಲಿಕ್‌ ಮಾಡಿದ ಬಳಿಕ ನಿಮಗೆ ಒಂದು ಸ್ವೀಕೃತಿ ಪತ್ರ ಅಥವಾ ಅಕ್ನಾಲೇಜ್‌ಮೆಂಟ್‌ ಬರಲಿದೆ. ಅದನ್ನು ನೀವು ಎಕ್ಸ್‌ಪೋರ್ಟ್‌ ಪಿಡಿಎಫ್‌ ಎಂದು ಆಯ್ಕೆ ಕೊಟ್ಟರೆ ಸ್ವೀಕೃತಿ ಪತ್ರ ನಿಮ್ಮ ಮೊಬೈಲ್‌ ಅಥವಾ ಕಂಪ್ಯೂಟರ್‌ನಲ್ಲಿ ಸೇವ್‌ ಆಗಲಿದೆ. ಮುಂದೆ ಅರ್ಜಿಯನ್ನು ಪರಿಶೀಲಿಸಲಿರುವ ಸರ್ಕಾರ ನಿಮಗೆ ಉಚಿತವಾಗಿ ವಿದ್ಯುತ್‌ ಅನ್ನು ನೀಡಲಿದೆ. ಸದ್ಯಕ್ಕೆ ಯಾವುದೇ ರೀತಿಯ ದಾಖಲೆಗಳನ್ನು ಅಪ್‌ಲೋಡ್‌ ಮಾಡುವಂತಿಲ್ಲ. ಮುಂದೆ ದಾಖಲೆಗಳನ್ನು ಪರಿಶೀಲಿಸುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಮೊಬೈಲ್‌ನಲ್ಲೇ ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್‌: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...