Homeಮುಖಪುಟಕೆಲಸಕ್ಕಾಗಿ ಇಂಟರ್ ವ್ಯೂ ನೀಡುವಾಗ ನೀವು ವಹಿಸಲೇಬೇಕಾದ ಎಚ್ಚರಿಕೆಗಳು

ಕೆಲಸಕ್ಕಾಗಿ ಇಂಟರ್ ವ್ಯೂ ನೀಡುವಾಗ ನೀವು ವಹಿಸಲೇಬೇಕಾದ ಎಚ್ಚರಿಕೆಗಳು

- Advertisement -
- Advertisement -

ಜೀವನ ಕಲೆಗಳು: ಅಂಕಣ-25

ಕೆಲಸದ ಸಂದರ್ಶನ ನೀಡುವ ಕಲೆ

ಇತ್ತೀಚೆಗೆ ಕೆಲಸಗಳು ಸಿಗುವುದು ಕಷ್ಟಕರವಾಗುತ್ತಿದ್ದು, ಒಂದು ಹುದ್ದೆಗೆ ಸಾವಿರವೋ, ಲಕ್ಷವೋ ಅರ್ಜಿಗಳು ಬರುತ್ತವೆ. ಸಂದರ್ಶನಕ್ಕೆ ಕರೆದ ಕಂಪನಿಗಳು ಅರ್ಜಿಯ ಶುಲ್ಕದಿಂದಲೇ ಕೋಟಿಗಟ್ಟಲೆ ಸಂಗ್ರಹಿಸಿ, ನಿರುದ್ಯೋಗಿ ಯುವಕರ ಕುಟುಂಬಗಳನ್ನು ನಿರ್ದಾಕ್ಷಿಣ್ಯವಾಗಿ ಸುಲಿಯುತ್ತವೆ. ಒಂದು ವೇಳೆ ಸಂದರ್ಶನಕ್ಕೆ ಕರೆ ಬಂದರೂ, ಕೇವಲ ಅರ್ಧ ಅಥವಾ ಒಂದು ನಿಮಿಷದಲ್ಲಿ, ಕಂಪನಿಯ ಹಿರಿಯ ಅಧಿಕಾರಿಗಳು, ನಾಲ್ಕಾರು ಪ್ರಶ್ನೆ ಕೇಳಿ, ಮುಂದಿನ ಅಭ್ಯರ್ಥಿಯನ್ನು ಒಳಗೆ ಕಳುಹಿಸಿ ಎಂದು ಹೇಳಿ ನೌಕರಿ ಕೇಳಲು ಬಂದ ಯುವಜನರನ್ನು ಸಾಗಹಾಕುತ್ತಾರೆ. 1 ನಿಮಿಷದಲ್ಲಿ ಒಬ್ಬ ಯುವಕನ/ಯುವತಿಯ ಬಗ್ಗೆ ಸರಿಯಾಗಿ ತಿಳಿದುಕೊಳ್ಳಲು ಒಳಗೆ ಕುಳಿತಿರುವ ಅಧಿಕಾರಿಗಳಿಗೆ ಹೇಗೆ ಸಾಧ್ಯ, ಸಂದರ್ಶನವೆಲ್ಲಾ ಕೇವಲ ತೋರ್ಪಡಿಕೆ, ಕೆಲಸ ಯಾರಿಗೋ ಮೊದಲೇ ಒಳಗಿಂದೊಳಗೆ ಇತ್ಯರ್ಥವಾಗಿರುತ್ತದೆ ಎಂದು ನಿಮಗೆ ಅನಿಸಿಕೆ ಇರಬಹುದು.

ಹಾಗಾದರೆ ಯುವಕರು ಕೆಲಸಕ್ಕೆ ಅರ್ಜಿ ಸಲ್ಲಿಸಿ, ಪ್ರಾಮಾಣಿಕವಾಗಿ ಕೆಲಸ ಗಿಟ್ಟಿಸಿಕೊಳ್ಳುವುದನ್ನು ಖಾತರಿ ಪಡಿಸಿಕೊಳ್ಳುವುದು ಹೇಗೆ?

ಬಹುಶಃ ನೀವು ದಿನಾ ಟಿವಿ/ರೇಡಿಯೋ ನೋಡುತ್ತೀರಿ/ಕೇಳುತ್ತೀರಿ ಮತ್ತು ಅದರಲ್ಲಿ ಬರುವ ಎಷ್ಟೋ ಜಾಹಿರಾತುಗಳು ಚಿಕ್ಕಂದಿನಿಂದ ನಿಮ್ಮ ಗಮನ ಸೆಳೆದಿವೆ ಎಂದು ನಂಬಿದ್ದೇನೆ. ಸರಾಸರಿ ಒಂದು ಜಾಹಿರಾತಿನ ಸಮಯ ಎಷ್ಟಿರುತ್ತದೆ ಎಂದು ನಿಮಗೆ ಗೊತ್ತೇ? ಕೇವಲ 10 ಸೆಕೆಂಡು ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಹೌದು, ಇದಕ್ಕಿಂತ ಹೆಚ್ಚಿನ ಸಮಯದ ಜಾಹಿರಾತುಗಳೂ ಬರುತ್ತವೆ ಆದರೆ ಅವಕ್ಕೆ ಪ್ರತಿ ಹತ್ತು ಅಥವಾ ಐದು ಸೆಕೆಂಡಿಗೆ ಇನ್ನಷ್ಟು ಹಣ ಕಂಪನಿಯವರು ಟಿವಿ/ರೇಡಿಯೋ ರವರಿಗೆ ತೆರಬೇಕು.

ಕೇವಲ 10 ಸೆಕೆಂಡು? ಇಷ್ಟು ಕಡಿಮೆ ಸಮಯದಲ್ಲಿ ಒಂದು ವಸ್ತುವಿನ ಬಗ್ಗೆ ಗ್ರಾಹಕರ ಮನದಲ್ಲಿ ಛಾಪು ಮೂಡಿಸುವಂತೆ ಸಂದೇಶ ತಲುಪಿಸಲು ಸಾಧ್ಯವೇ ಎಂದು ನಿಮಗೆ ಅನಿಸಬಹುದು. ಆದರೆ ಅದು ದಿನನಿತ್ಯ ನಡೆಯುತ್ತಿರುತ್ತದೆ.  ಅದೇ ಒಂದು ನಿಮಿಷದಲ್ಲಿ, ಹತ್ತು ಸೆಕೆಂಡುಗಳ ಆರು ಟಿವಿ ಜಾಹಿರಾತು ನಿಮ್ಮ ಬಗ್ಗೆಯೇ ಇದ್ದರೆ, ನಿಮ್ಮ ಬಗ್ಗೆ ಒಳ್ಳೆಯ ಪ್ರಚಾರ ಮಾಡುವಂತಿದ್ದರೆ, ನಿಮ್ಮ ಕೆಲಸ ಗ್ಯಾರಂಟಿ ಪಡಿಸಿಕೊಳ್ಳಬಹುದು ಎಂದು ನಿಮಗೆ ಅನಿಸುವುದಿಲ್ಲವೇ?

ಇಲ್ಲಿದೆ ಕೆಲವು ಸುಲಭ ಉಪಾಯ.

ಸಂದರ್ಶನಕ್ಕೆ ಬಂದಾಗ ನಿಮ್ಮ ಹಸ್ತಲಿಖಿತ ಅರ್ಜಿ ಜೊತೆಯಲ್ಲಿ ತಂದಿದ್ದರೆ, ಅಥವಾ ಅದನ್ನು ಕಂಪನಿಗೆ ಮುಂಚಿತವಾಗಿ ಕಳುಹಿಸುವಾಗ, ಅದರಲ್ಲಿ ಯಾವುದೇ ತಪ್ಪು, ತಿದ್ದುಪಡಿಗಳಿಲ್ಲ ಎಂಬುದನ್ನು ಖಚಿತ ಪಡಿಸಿಕೊಳ್ಳಿ. ಅಕ್ಷರ ಕೆಟ್ಟದಾಗಿರುವ, ತಪ್ಪು-ತಿದ್ದುಪಡಿ ಇರುವ ಲಿಖಿತ ಅರ್ಜಿಗಳು ನಿಮ್ಮ ಸ್ವಯಂನಿರ್ಮಿತ ನೇಣುಗಂಬ.

ಸಂದರ್ಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿ. ಸಂದರ್ಶನದ ಸಮಯ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ಎಂದು ಇದ್ದಲ್ಲಿ, ನೀವು ಬೆಳಿಗ್ಗೆ 9.00ರ ಮುಂಚೆ ಸ್ಥಳದಲ್ಲಿರಿ. ನಿಮ್ಮ ಆಗಮನದ ಸಮಯವನ್ನು ಎಲ್ಲೋ ಒಂದು ಕಡೆ ಗುರುತು ಹಾಕಿಕೊಳ್ಳಲಾಗಿರುತ್ತದೆ. ನಿಮ್ಮ ಸಮಯ ಪ್ರಜ್ಞೆ ಎಷ್ಟರ ಮಟ್ಟಿಗೆ ಇದೆ ಎನ್ನುವುದನ್ನು ಯಾರೋ ನೋಂದಾಯಿಸಿಕೊಳ್ಳುತ್ತಿರುತ್ತಾರೆ.

ಸಂದರ್ಶನಕ್ಕೆ ಬಂದಾಗ ನಿಮ್ಮ ವೇಷಭೂಷ ಕೆಲಸಕ್ಕೆ ತಕ್ಕಂತೆ ಇರಲಿ. ನಿಮ್ಮ ವೇಷಭೂಷ, ಹಾವಭಾವ ನಿಮಗಿಂತ ಹೆಚ್ಚು ಮಾತನಾಡುತ್ತವೆ. ನೀವು ಕಾಯಲು ಕುಳಿತಿರುವ ಶೈಲಿಯೂ ನಿಮ್ಮ ಬಗ್ಗೆ ಸಾರಿ ಹೇಳುತ್ತಿರುತ್ತದೆ.

ಎಲ್ಲರೂ ಒಂದೆಡೆ ಗುಂಪಾಗಿ ಕುಳಿತಿರುವಾಗ, ನೀವು ದೂರದಲ್ಲಿ ಒಂಟಿ ಕುರ್ಚಿಯಲ್ಲಿ ಹೋಗಿ ಕುಳಿತುಕೊಳ್ಳಬೇಡಿ. ಇದೂ ನಿಮ್ಮ ಬಗ್ಗೆ ಅಪಪ್ರಚಾರ.

ಸಂದರ್ಶನಕ್ಕೆ ಬಂದ ಅಭ್ಯರ್ಥಿಗಳು ಕಾಯಲು ವಿಶಾಲವಾದ ಕೊಠಡಿಯಲ್ಲಿ ಕುರ್ಚಿಗಳ ವ್ಯವಸ್ಥೆ ಇದೆ ಮತ್ತು ಅಲ್ಲಿ ಹೋಗಿ ಕೂತು, ಕಾಯಲು ನಿಮಗೆ ತಿಳಿಸಲಾಗಿದೆ ಎಂದುಕೊಳ್ಳಿ, ಆಗ ಅದನ್ನು ಬಿಟ್ಟು ಬೇರೆ ಸ್ಥಳದಲ್ಲಿ ನಿಂತು, ಬೇರೆ ಕೊಠಡಿಗಳಲ್ಲಿ ಇಣುಕಿ, ನಿಮ್ಮ ಮುಖ ತೋರಿಸಲು ಹೋಗಬೇಡಿ. ಇದೂ ಸಹ ನಿಮ್ಮ ಬಗ್ಗೆ ಅಪಪ್ರಚಾರವಾಗುತ್ತದೆ.

ಕಾಯುವ ಕೊಠಡಿ (ವೇಟಿಂಗ್ ರೂಂ) ನಲ್ಲಿ ಒಂದೆಡೆ ಕುಡಿಯುವ ನೀರು ಇಡಲಾಗಿದೆ ಮತ್ತು ಕುಡಿದ ಲೋಟ ಎಸೆಯಲು ಕಸದ ಪೆಟ್ಟಿಗೆ ಇದ್ದರೆ ಅದರಲ್ಲಿ ಸರಿಯಾಗಿ ಕಸವನ್ನು ಹಾಕಿ, ಇನ್ನೆಲ್ಲೋ ಎಸೆಯಬೇಡಿ.

ಅಲ್ಲಿ ನೀರು ಕುಡಿಯಲು ಲೋಟ ಇಟ್ಟಿಲ್ಲ ಎಂದುಕೊಳ್ಳಿ, ಎಲ್ಲರೂ ಮುಖ-ಮುಖ ನೋಡಿಕೊಳ್ಳುತ್ತಾ ಕುಳಿತಿರಬೇಡಿ, ನೀವು ಮೊದಲ ಹೆಜ್ಜೆ (ಇನಿಷಿಯೇಟಿವ್) ತೆಗೆದುಕೊಂಡು, ನೀರಿನ ಲೋಟ ಬೇಕೆಂದು ಸ್ವಾಗತಕಾರರ ಕಚೇರಿಯಲ್ಲಿ ಕೇಳಿ, ತಂದಿಡಿ.

ಕಾಯುವ ಕೊಠಡಿಯಲ್ಲಿ ಒಂದು ತಟ್ಟೆಯಲ್ಲಿ ಚಾಕಲೇಟ್ ಇಟ್ಟಿದ್ದಾರೆ ಮತ್ತು ಅಲ್ಲಿ ಅದನ್ನು ನೋಡಿಕೊಳ್ಳಲು ಯಾರೂ ಇಲ್ಲಎಂದುಕೊಳ್ಳಿ. ಸಮಯ ನೋಡಿ ಒಂದಿಷ್ಟು ಚಾಕಲೇಟ್ ನಿಮ್ಮ ಕಿಸೆಗೆ ಸೇರಿಸಿಕೊಳ್ಳಬೇಡಿ. ಮೊದಲೇ ತಿಳಿಸಿದಂತೆ ಕಾಣದ ಕಣ್ಣುಗಳು ನಿಮ್ಮ ಪ್ರತಿಯೊಂದು ಹೆಜ್ಜೆಯನ್ನೂ ಗಮನಿಸುತ್ತಿರುತ್ತವೆ.

ನೀವು ಕೆಲಸಕ್ಕೆ ಅರ್ಜಿ ಹಾಕಿರುವ ಕಂಪನಿಯ ಬಗ್ಗೆ ಒಂದಿಷ್ಟು ಮಾಹಿತಿ ಕಲೆಹಾಕಿ, ಅವರ ಸಾಧನೆಗಳೇನು, ಅವರ ಶಕ್ತಿ ಏನು, ಅವರ ದುರ್ಬಲತೆ ಏನು ಎಂಬ ಬಗ್ಗೆ ಅಥವಾ ಅವರು ಇರುವ ಕ್ಷೇತ್ರದ ಮುನ್ನೋಟ ಏನು ಎಂಬುದರ ಬಗ್ಗೆ ಅಂತರ್ಜಾಲ ಶೋಧಿಸಿ ತಿಳಿದುಕೊಳ್ಳಿ. ಎಷ್ಟೋ ಬಾರಿ ಕಂಪನಿಯ ಈ ರೀತಿಯ ಮಾಹಿತಿ ಪತ್ರಗಳನ್ನು ಸಂದರ್ಶನದ ಕಾಯುವ ಕೊಠಡಿಯಲ್ಲಿ ಇಟ್ಟಿರುತ್ತಾರೆ ಅಥವಾ ಫಲಕದಲ್ಲಿ ಹಾಕಿರುತ್ತಾರೆ. ಅದನ್ನು ಗಮನವಿಟ್ಟು ಓದಿ.

ಸಂದರ್ಶನ ಒಂದು ವ್ಯಾವಹಾರಿಕ ಭೇಟಿ, ಅಲ್ಲಿ ನಿಮ್ಮ ನೆಂಟಸ್ತನ ತೋರಿಸಲು ಹೋಗಬೇಡಿ, ನನಗೆ ಅವರು ಗೊತ್ತು, ಇವರು ಗೊತ್ತು, ಅವರು ನನ್ನ ಸಂಬಂಧಿ ಎಂಬ ಅನಾವಶ್ಯಕ ಬುರುಡೆ ಬಿಡಬೇಡಿ.

ಹೆಚ್ಚು ಮಾತನಾಡಬೇಡಿ, ಸಕ್ರಿಯವಾಗಿ ಕೇಳಿಸಿಕೊಳ್ಳುವುದನ್ನು ಕಲಿಯಿರಿ.

ಕೆಲಸ ನಿಮಗೆ ಅತ್ಯವಶ್ಯಕವಾಗಿದೆ, ಇಲ್ಲದಿದ್ದರೆ ನೀವು ಉಪವಾಸ ಸಾಯುವ ಪರಿಸ್ಥಿತಿ ಇದೆ ಎಂದು ಖಂಡಿತಾ ಹೇಳಬೇಡಿ. ಯಾರೂ ಕನಿಕರ ತೋರಿಸಿ ನಿಮಗೆ ನೌಕರಿ ನೀಡುವುದಿಲ್ಲ.

ಸಂದರ್ಶನಕ್ಕೆ ಬೆಳಿಗ್ಗೆ ಕರೆದು, ಸಂಜೆಯ ತನಕ ಕಾಯಿಸಿದರು ಎಂದುಕೊಳ್ಳಿ, ನಿಮ್ಮ ಕೋಪ, ಹಸಿವು, ತಾಪದ ಮನಃಸ್ಥಿತಿಯನ್ನು ಸಂದರ್ಶನಕಾರರ ಮೇಲೆ ತೀರಿಸಿಕೊಳ್ಳಬೇಡಿ. ಬಡವನ ಸಿಟ್ಟು ದವಡೆಗೆ ಮೂಲ ಎಂಬ ಗಾದೆ ಕೇಳಿರಬಹುದು. ಅಭ್ಯರ್ಥಿಗಳನ್ನು ಕಾಯಿಸುವುದು ಅವರ ಪ್ರತಿಕ್ರಿಯೆ/ನಡವಳಿಕೆ ತಿಳಿದುಕೊಳ್ಳುವ ಒಂದು ವಿಧಾನ.

ಕಂಪನಿಯ ಬಗ್ಗೆ, ಕೆಲಸದ ಬಗ್ಗೆ ನಿಮಗೆ ಹೆಚ್ಚು ಗೊತ್ತಿಲ್ಲದಿದ್ದಲ್ಲಿ ಅಥವಾ ಕೆಲಸದ ಸಮಯ, ಸಂಬಳ ಇತ್ಯಾದಿಗಳ ಬಗ್ಗೆ ಬೇಕಿದ್ದರೆ, ನೀವೂ ಪ್ರಶ್ನೆ ಕೇಳಿ. ಪ್ರಶ್ನೆ ಕೇಳುವ ಅಧಿಕಾರ ನಿಮಗೂ ಇದೆ. ಆದರೆ ಸೌಜನ್ಯಪೂರ್ವಕವಾಗಿ ಮಾತನಾಡಿ.

ನಿಮ್ಮ ಬಗ್ಗೆ ನಿಮಗೇ ಸರಿಯಾದ ಅರಿವು ಇರಲಿ. “ನಿಮ್ಮ ಬಗ್ಗೆ ಏನಾದರೂ ಹೇಳಿ” ಎಂದು ಸಂದರ್ಶನಕಾರರು ಕೇಳಿದಾಗ ಕಕ್ಕಾಬಿಕ್ಕಿಯಾಗಬೇಡಿ. ನಿಮ್ಮ ಶಕ್ತಿಗಳ ಬಗ್ಗೆ, ಆಸಕ್ತಿ, ಆಕಾಂಕ್ಷೆಗಳ ಬಗ್ಗೆ ತಿಳಿಸಿ. ನೀವಾಗೇ ಹೇಳದಿದ್ದರೂ, ನಿಮ್ಮ ದೌರ್ಬಲ್ಯವೇನು ಎಂಬುದನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನು ಅವರು ಇಟ್ಟುಕೊಂಡಿರುತ್ತಾರೆ, ಹಾಗಾಗಿ ಅವರೇ ಮುಂದಾಗಿ ನಿಮ್ಮ ದೌರ್ಬಲ್ಯದ ಬಗ್ಗೆ ಕೇಳಿದಲ್ಲಿ ಅದನ್ನು ನೀವು ಹೇಗೆ ಹೋಗಲಾಡಿಸಿಕೊಳ್ಳುತ್ತೀರಿ ಎಂಬುದರ ಬಗ್ಗೆ ತಿಳಿಸಿ.

ಸಾವಿರ ಅರ್ಜಿದಾರರ ಪೈಕಿ ಕೆಲಸ ಪಡೆದ ಏಕೈಕ ಅಭ್ಯರ್ಥಿ ನೀವಾಗಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...