Homeಮುಖಪುಟಕೆಲಸಕ್ಕಾಗಿ ಇಂಟರ್ ವ್ಯೂ ನೀಡುವಾಗ ನೀವು ವಹಿಸಲೇಬೇಕಾದ ಎಚ್ಚರಿಕೆಗಳು

ಕೆಲಸಕ್ಕಾಗಿ ಇಂಟರ್ ವ್ಯೂ ನೀಡುವಾಗ ನೀವು ವಹಿಸಲೇಬೇಕಾದ ಎಚ್ಚರಿಕೆಗಳು

- Advertisement -
- Advertisement -

ಜೀವನ ಕಲೆಗಳು: ಅಂಕಣ-25

ಕೆಲಸದ ಸಂದರ್ಶನ ನೀಡುವ ಕಲೆ

ಇತ್ತೀಚೆಗೆ ಕೆಲಸಗಳು ಸಿಗುವುದು ಕಷ್ಟಕರವಾಗುತ್ತಿದ್ದು, ಒಂದು ಹುದ್ದೆಗೆ ಸಾವಿರವೋ, ಲಕ್ಷವೋ ಅರ್ಜಿಗಳು ಬರುತ್ತವೆ. ಸಂದರ್ಶನಕ್ಕೆ ಕರೆದ ಕಂಪನಿಗಳು ಅರ್ಜಿಯ ಶುಲ್ಕದಿಂದಲೇ ಕೋಟಿಗಟ್ಟಲೆ ಸಂಗ್ರಹಿಸಿ, ನಿರುದ್ಯೋಗಿ ಯುವಕರ ಕುಟುಂಬಗಳನ್ನು ನಿರ್ದಾಕ್ಷಿಣ್ಯವಾಗಿ ಸುಲಿಯುತ್ತವೆ. ಒಂದು ವೇಳೆ ಸಂದರ್ಶನಕ್ಕೆ ಕರೆ ಬಂದರೂ, ಕೇವಲ ಅರ್ಧ ಅಥವಾ ಒಂದು ನಿಮಿಷದಲ್ಲಿ, ಕಂಪನಿಯ ಹಿರಿಯ ಅಧಿಕಾರಿಗಳು, ನಾಲ್ಕಾರು ಪ್ರಶ್ನೆ ಕೇಳಿ, ಮುಂದಿನ ಅಭ್ಯರ್ಥಿಯನ್ನು ಒಳಗೆ ಕಳುಹಿಸಿ ಎಂದು ಹೇಳಿ ನೌಕರಿ ಕೇಳಲು ಬಂದ ಯುವಜನರನ್ನು ಸಾಗಹಾಕುತ್ತಾರೆ. 1 ನಿಮಿಷದಲ್ಲಿ ಒಬ್ಬ ಯುವಕನ/ಯುವತಿಯ ಬಗ್ಗೆ ಸರಿಯಾಗಿ ತಿಳಿದುಕೊಳ್ಳಲು ಒಳಗೆ ಕುಳಿತಿರುವ ಅಧಿಕಾರಿಗಳಿಗೆ ಹೇಗೆ ಸಾಧ್ಯ, ಸಂದರ್ಶನವೆಲ್ಲಾ ಕೇವಲ ತೋರ್ಪಡಿಕೆ, ಕೆಲಸ ಯಾರಿಗೋ ಮೊದಲೇ ಒಳಗಿಂದೊಳಗೆ ಇತ್ಯರ್ಥವಾಗಿರುತ್ತದೆ ಎಂದು ನಿಮಗೆ ಅನಿಸಿಕೆ ಇರಬಹುದು.

ಹಾಗಾದರೆ ಯುವಕರು ಕೆಲಸಕ್ಕೆ ಅರ್ಜಿ ಸಲ್ಲಿಸಿ, ಪ್ರಾಮಾಣಿಕವಾಗಿ ಕೆಲಸ ಗಿಟ್ಟಿಸಿಕೊಳ್ಳುವುದನ್ನು ಖಾತರಿ ಪಡಿಸಿಕೊಳ್ಳುವುದು ಹೇಗೆ?

ಬಹುಶಃ ನೀವು ದಿನಾ ಟಿವಿ/ರೇಡಿಯೋ ನೋಡುತ್ತೀರಿ/ಕೇಳುತ್ತೀರಿ ಮತ್ತು ಅದರಲ್ಲಿ ಬರುವ ಎಷ್ಟೋ ಜಾಹಿರಾತುಗಳು ಚಿಕ್ಕಂದಿನಿಂದ ನಿಮ್ಮ ಗಮನ ಸೆಳೆದಿವೆ ಎಂದು ನಂಬಿದ್ದೇನೆ. ಸರಾಸರಿ ಒಂದು ಜಾಹಿರಾತಿನ ಸಮಯ ಎಷ್ಟಿರುತ್ತದೆ ಎಂದು ನಿಮಗೆ ಗೊತ್ತೇ? ಕೇವಲ 10 ಸೆಕೆಂಡು ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಹೌದು, ಇದಕ್ಕಿಂತ ಹೆಚ್ಚಿನ ಸಮಯದ ಜಾಹಿರಾತುಗಳೂ ಬರುತ್ತವೆ ಆದರೆ ಅವಕ್ಕೆ ಪ್ರತಿ ಹತ್ತು ಅಥವಾ ಐದು ಸೆಕೆಂಡಿಗೆ ಇನ್ನಷ್ಟು ಹಣ ಕಂಪನಿಯವರು ಟಿವಿ/ರೇಡಿಯೋ ರವರಿಗೆ ತೆರಬೇಕು.

ಕೇವಲ 10 ಸೆಕೆಂಡು? ಇಷ್ಟು ಕಡಿಮೆ ಸಮಯದಲ್ಲಿ ಒಂದು ವಸ್ತುವಿನ ಬಗ್ಗೆ ಗ್ರಾಹಕರ ಮನದಲ್ಲಿ ಛಾಪು ಮೂಡಿಸುವಂತೆ ಸಂದೇಶ ತಲುಪಿಸಲು ಸಾಧ್ಯವೇ ಎಂದು ನಿಮಗೆ ಅನಿಸಬಹುದು. ಆದರೆ ಅದು ದಿನನಿತ್ಯ ನಡೆಯುತ್ತಿರುತ್ತದೆ.  ಅದೇ ಒಂದು ನಿಮಿಷದಲ್ಲಿ, ಹತ್ತು ಸೆಕೆಂಡುಗಳ ಆರು ಟಿವಿ ಜಾಹಿರಾತು ನಿಮ್ಮ ಬಗ್ಗೆಯೇ ಇದ್ದರೆ, ನಿಮ್ಮ ಬಗ್ಗೆ ಒಳ್ಳೆಯ ಪ್ರಚಾರ ಮಾಡುವಂತಿದ್ದರೆ, ನಿಮ್ಮ ಕೆಲಸ ಗ್ಯಾರಂಟಿ ಪಡಿಸಿಕೊಳ್ಳಬಹುದು ಎಂದು ನಿಮಗೆ ಅನಿಸುವುದಿಲ್ಲವೇ?

ಇಲ್ಲಿದೆ ಕೆಲವು ಸುಲಭ ಉಪಾಯ.

ಸಂದರ್ಶನಕ್ಕೆ ಬಂದಾಗ ನಿಮ್ಮ ಹಸ್ತಲಿಖಿತ ಅರ್ಜಿ ಜೊತೆಯಲ್ಲಿ ತಂದಿದ್ದರೆ, ಅಥವಾ ಅದನ್ನು ಕಂಪನಿಗೆ ಮುಂಚಿತವಾಗಿ ಕಳುಹಿಸುವಾಗ, ಅದರಲ್ಲಿ ಯಾವುದೇ ತಪ್ಪು, ತಿದ್ದುಪಡಿಗಳಿಲ್ಲ ಎಂಬುದನ್ನು ಖಚಿತ ಪಡಿಸಿಕೊಳ್ಳಿ. ಅಕ್ಷರ ಕೆಟ್ಟದಾಗಿರುವ, ತಪ್ಪು-ತಿದ್ದುಪಡಿ ಇರುವ ಲಿಖಿತ ಅರ್ಜಿಗಳು ನಿಮ್ಮ ಸ್ವಯಂನಿರ್ಮಿತ ನೇಣುಗಂಬ.

ಸಂದರ್ಶನಕ್ಕೆ ಸಮಯಕ್ಕೆ ಸರಿಯಾಗಿ ಹಾಜರಾಗಿ. ಸಂದರ್ಶನದ ಸಮಯ ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ಎಂದು ಇದ್ದಲ್ಲಿ, ನೀವು ಬೆಳಿಗ್ಗೆ 9.00ರ ಮುಂಚೆ ಸ್ಥಳದಲ್ಲಿರಿ. ನಿಮ್ಮ ಆಗಮನದ ಸಮಯವನ್ನು ಎಲ್ಲೋ ಒಂದು ಕಡೆ ಗುರುತು ಹಾಕಿಕೊಳ್ಳಲಾಗಿರುತ್ತದೆ. ನಿಮ್ಮ ಸಮಯ ಪ್ರಜ್ಞೆ ಎಷ್ಟರ ಮಟ್ಟಿಗೆ ಇದೆ ಎನ್ನುವುದನ್ನು ಯಾರೋ ನೋಂದಾಯಿಸಿಕೊಳ್ಳುತ್ತಿರುತ್ತಾರೆ.

ಸಂದರ್ಶನಕ್ಕೆ ಬಂದಾಗ ನಿಮ್ಮ ವೇಷಭೂಷ ಕೆಲಸಕ್ಕೆ ತಕ್ಕಂತೆ ಇರಲಿ. ನಿಮ್ಮ ವೇಷಭೂಷ, ಹಾವಭಾವ ನಿಮಗಿಂತ ಹೆಚ್ಚು ಮಾತನಾಡುತ್ತವೆ. ನೀವು ಕಾಯಲು ಕುಳಿತಿರುವ ಶೈಲಿಯೂ ನಿಮ್ಮ ಬಗ್ಗೆ ಸಾರಿ ಹೇಳುತ್ತಿರುತ್ತದೆ.

ಎಲ್ಲರೂ ಒಂದೆಡೆ ಗುಂಪಾಗಿ ಕುಳಿತಿರುವಾಗ, ನೀವು ದೂರದಲ್ಲಿ ಒಂಟಿ ಕುರ್ಚಿಯಲ್ಲಿ ಹೋಗಿ ಕುಳಿತುಕೊಳ್ಳಬೇಡಿ. ಇದೂ ನಿಮ್ಮ ಬಗ್ಗೆ ಅಪಪ್ರಚಾರ.

ಸಂದರ್ಶನಕ್ಕೆ ಬಂದ ಅಭ್ಯರ್ಥಿಗಳು ಕಾಯಲು ವಿಶಾಲವಾದ ಕೊಠಡಿಯಲ್ಲಿ ಕುರ್ಚಿಗಳ ವ್ಯವಸ್ಥೆ ಇದೆ ಮತ್ತು ಅಲ್ಲಿ ಹೋಗಿ ಕೂತು, ಕಾಯಲು ನಿಮಗೆ ತಿಳಿಸಲಾಗಿದೆ ಎಂದುಕೊಳ್ಳಿ, ಆಗ ಅದನ್ನು ಬಿಟ್ಟು ಬೇರೆ ಸ್ಥಳದಲ್ಲಿ ನಿಂತು, ಬೇರೆ ಕೊಠಡಿಗಳಲ್ಲಿ ಇಣುಕಿ, ನಿಮ್ಮ ಮುಖ ತೋರಿಸಲು ಹೋಗಬೇಡಿ. ಇದೂ ಸಹ ನಿಮ್ಮ ಬಗ್ಗೆ ಅಪಪ್ರಚಾರವಾಗುತ್ತದೆ.

ಕಾಯುವ ಕೊಠಡಿ (ವೇಟಿಂಗ್ ರೂಂ) ನಲ್ಲಿ ಒಂದೆಡೆ ಕುಡಿಯುವ ನೀರು ಇಡಲಾಗಿದೆ ಮತ್ತು ಕುಡಿದ ಲೋಟ ಎಸೆಯಲು ಕಸದ ಪೆಟ್ಟಿಗೆ ಇದ್ದರೆ ಅದರಲ್ಲಿ ಸರಿಯಾಗಿ ಕಸವನ್ನು ಹಾಕಿ, ಇನ್ನೆಲ್ಲೋ ಎಸೆಯಬೇಡಿ.

ಅಲ್ಲಿ ನೀರು ಕುಡಿಯಲು ಲೋಟ ಇಟ್ಟಿಲ್ಲ ಎಂದುಕೊಳ್ಳಿ, ಎಲ್ಲರೂ ಮುಖ-ಮುಖ ನೋಡಿಕೊಳ್ಳುತ್ತಾ ಕುಳಿತಿರಬೇಡಿ, ನೀವು ಮೊದಲ ಹೆಜ್ಜೆ (ಇನಿಷಿಯೇಟಿವ್) ತೆಗೆದುಕೊಂಡು, ನೀರಿನ ಲೋಟ ಬೇಕೆಂದು ಸ್ವಾಗತಕಾರರ ಕಚೇರಿಯಲ್ಲಿ ಕೇಳಿ, ತಂದಿಡಿ.

ಕಾಯುವ ಕೊಠಡಿಯಲ್ಲಿ ಒಂದು ತಟ್ಟೆಯಲ್ಲಿ ಚಾಕಲೇಟ್ ಇಟ್ಟಿದ್ದಾರೆ ಮತ್ತು ಅಲ್ಲಿ ಅದನ್ನು ನೋಡಿಕೊಳ್ಳಲು ಯಾರೂ ಇಲ್ಲಎಂದುಕೊಳ್ಳಿ. ಸಮಯ ನೋಡಿ ಒಂದಿಷ್ಟು ಚಾಕಲೇಟ್ ನಿಮ್ಮ ಕಿಸೆಗೆ ಸೇರಿಸಿಕೊಳ್ಳಬೇಡಿ. ಮೊದಲೇ ತಿಳಿಸಿದಂತೆ ಕಾಣದ ಕಣ್ಣುಗಳು ನಿಮ್ಮ ಪ್ರತಿಯೊಂದು ಹೆಜ್ಜೆಯನ್ನೂ ಗಮನಿಸುತ್ತಿರುತ್ತವೆ.

ನೀವು ಕೆಲಸಕ್ಕೆ ಅರ್ಜಿ ಹಾಕಿರುವ ಕಂಪನಿಯ ಬಗ್ಗೆ ಒಂದಿಷ್ಟು ಮಾಹಿತಿ ಕಲೆಹಾಕಿ, ಅವರ ಸಾಧನೆಗಳೇನು, ಅವರ ಶಕ್ತಿ ಏನು, ಅವರ ದುರ್ಬಲತೆ ಏನು ಎಂಬ ಬಗ್ಗೆ ಅಥವಾ ಅವರು ಇರುವ ಕ್ಷೇತ್ರದ ಮುನ್ನೋಟ ಏನು ಎಂಬುದರ ಬಗ್ಗೆ ಅಂತರ್ಜಾಲ ಶೋಧಿಸಿ ತಿಳಿದುಕೊಳ್ಳಿ. ಎಷ್ಟೋ ಬಾರಿ ಕಂಪನಿಯ ಈ ರೀತಿಯ ಮಾಹಿತಿ ಪತ್ರಗಳನ್ನು ಸಂದರ್ಶನದ ಕಾಯುವ ಕೊಠಡಿಯಲ್ಲಿ ಇಟ್ಟಿರುತ್ತಾರೆ ಅಥವಾ ಫಲಕದಲ್ಲಿ ಹಾಕಿರುತ್ತಾರೆ. ಅದನ್ನು ಗಮನವಿಟ್ಟು ಓದಿ.

ಸಂದರ್ಶನ ಒಂದು ವ್ಯಾವಹಾರಿಕ ಭೇಟಿ, ಅಲ್ಲಿ ನಿಮ್ಮ ನೆಂಟಸ್ತನ ತೋರಿಸಲು ಹೋಗಬೇಡಿ, ನನಗೆ ಅವರು ಗೊತ್ತು, ಇವರು ಗೊತ್ತು, ಅವರು ನನ್ನ ಸಂಬಂಧಿ ಎಂಬ ಅನಾವಶ್ಯಕ ಬುರುಡೆ ಬಿಡಬೇಡಿ.

ಹೆಚ್ಚು ಮಾತನಾಡಬೇಡಿ, ಸಕ್ರಿಯವಾಗಿ ಕೇಳಿಸಿಕೊಳ್ಳುವುದನ್ನು ಕಲಿಯಿರಿ.

ಕೆಲಸ ನಿಮಗೆ ಅತ್ಯವಶ್ಯಕವಾಗಿದೆ, ಇಲ್ಲದಿದ್ದರೆ ನೀವು ಉಪವಾಸ ಸಾಯುವ ಪರಿಸ್ಥಿತಿ ಇದೆ ಎಂದು ಖಂಡಿತಾ ಹೇಳಬೇಡಿ. ಯಾರೂ ಕನಿಕರ ತೋರಿಸಿ ನಿಮಗೆ ನೌಕರಿ ನೀಡುವುದಿಲ್ಲ.

ಸಂದರ್ಶನಕ್ಕೆ ಬೆಳಿಗ್ಗೆ ಕರೆದು, ಸಂಜೆಯ ತನಕ ಕಾಯಿಸಿದರು ಎಂದುಕೊಳ್ಳಿ, ನಿಮ್ಮ ಕೋಪ, ಹಸಿವು, ತಾಪದ ಮನಃಸ್ಥಿತಿಯನ್ನು ಸಂದರ್ಶನಕಾರರ ಮೇಲೆ ತೀರಿಸಿಕೊಳ್ಳಬೇಡಿ. ಬಡವನ ಸಿಟ್ಟು ದವಡೆಗೆ ಮೂಲ ಎಂಬ ಗಾದೆ ಕೇಳಿರಬಹುದು. ಅಭ್ಯರ್ಥಿಗಳನ್ನು ಕಾಯಿಸುವುದು ಅವರ ಪ್ರತಿಕ್ರಿಯೆ/ನಡವಳಿಕೆ ತಿಳಿದುಕೊಳ್ಳುವ ಒಂದು ವಿಧಾನ.

ಕಂಪನಿಯ ಬಗ್ಗೆ, ಕೆಲಸದ ಬಗ್ಗೆ ನಿಮಗೆ ಹೆಚ್ಚು ಗೊತ್ತಿಲ್ಲದಿದ್ದಲ್ಲಿ ಅಥವಾ ಕೆಲಸದ ಸಮಯ, ಸಂಬಳ ಇತ್ಯಾದಿಗಳ ಬಗ್ಗೆ ಬೇಕಿದ್ದರೆ, ನೀವೂ ಪ್ರಶ್ನೆ ಕೇಳಿ. ಪ್ರಶ್ನೆ ಕೇಳುವ ಅಧಿಕಾರ ನಿಮಗೂ ಇದೆ. ಆದರೆ ಸೌಜನ್ಯಪೂರ್ವಕವಾಗಿ ಮಾತನಾಡಿ.

ನಿಮ್ಮ ಬಗ್ಗೆ ನಿಮಗೇ ಸರಿಯಾದ ಅರಿವು ಇರಲಿ. “ನಿಮ್ಮ ಬಗ್ಗೆ ಏನಾದರೂ ಹೇಳಿ” ಎಂದು ಸಂದರ್ಶನಕಾರರು ಕೇಳಿದಾಗ ಕಕ್ಕಾಬಿಕ್ಕಿಯಾಗಬೇಡಿ. ನಿಮ್ಮ ಶಕ್ತಿಗಳ ಬಗ್ಗೆ, ಆಸಕ್ತಿ, ಆಕಾಂಕ್ಷೆಗಳ ಬಗ್ಗೆ ತಿಳಿಸಿ. ನೀವಾಗೇ ಹೇಳದಿದ್ದರೂ, ನಿಮ್ಮ ದೌರ್ಬಲ್ಯವೇನು ಎಂಬುದನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನು ಅವರು ಇಟ್ಟುಕೊಂಡಿರುತ್ತಾರೆ, ಹಾಗಾಗಿ ಅವರೇ ಮುಂದಾಗಿ ನಿಮ್ಮ ದೌರ್ಬಲ್ಯದ ಬಗ್ಗೆ ಕೇಳಿದಲ್ಲಿ ಅದನ್ನು ನೀವು ಹೇಗೆ ಹೋಗಲಾಡಿಸಿಕೊಳ್ಳುತ್ತೀರಿ ಎಂಬುದರ ಬಗ್ಗೆ ತಿಳಿಸಿ.

ಸಾವಿರ ಅರ್ಜಿದಾರರ ಪೈಕಿ ಕೆಲಸ ಪಡೆದ ಏಕೈಕ ಅಭ್ಯರ್ಥಿ ನೀವಾಗಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...