Homeಮುಖಪುಟಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ.

- Advertisement -
- Advertisement -

| ದೊಡ್ಡಿಪಾಳ್ಯ ನರಸಿಂಹಮೂರ್ತಿ |

‘ಇವಿಎಂ ವಿರೋಧಿಗಳು ಆಧುನಿಕ ತಂತ್ರಜ್ಞಾನದ ವಿರೋಧಿಗಳು, ಇವರು ದೇಶವನ್ನು ಕತ್ತಲ ಯುಗಕ್ಕೆ ಕೊಂಡೊಯ್ಯಲು ಬಯಸಿದ್ದಾರೆ’ ಎಂತಲೂ, ‘ಇವಿಎಂ ನಲ್ಲಿ ದೋಷಾರೋಪಣೆ ಮಾಡುವುದು ಸೋತ ಪಕ್ಷಗಳ ಮಾಮೂಲಿ ವಾದ’ ಎಂತಲೂ, ‘ಇವಿಎಂ ಗಳನ್ನು ಹ್ಯಾಕ್ ಮಾಡಲು ಅಥವ ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ, ಇಡೀ ಜಗತ್ತು ಇವಿಎಂಗಳನ್ನು ಒಪ್ಪಿಕೊಂಡಿದೆ’ ಎಂತಲೂ ಇವಿಎಂ ಪರ ವಕಾಲತ್ತು ವಹಿಸುವವರ ವಾದ. ಈ ವಾದ ಸರಣಿಯನ್ನು ಬೆಂಬಲಿಸುವವರಲ್ಲಿ ಬಹಳಷ್ಟು ಜನಪರ ಚಿಂತಕರು ಹಾಗೂ ಸಾಮಾಜಿಕ ಕಾರ್ಯಕರ್ತರೂ ಕೂಡ ಇದ್ದಾರೆ.

ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವೆ, ಇಲ್ಲವೆ ಎಂಬುದನ್ನು ತೀರ್ಮಾನಿಸಬೇಕಾದವರು ರಾಜಕಾರಣಿಗಳೋ ಅಥವ ಮಾಧ್ಯಮದವರೋ ಅಲ್ಲ. ಚುನಾವಣಾ ಆಯೋಗದ ಅಧಿಕಾರಿಗಳೂ ಅಲ್ಲ. ಈ ತೀರ್ಮಾನ ಕೈಗೊಳ್ಳಬೇಕಾದವರು ಈ ಕ್ಷೇತ್ರದಲ್ಲಿ ಪರಿಣತಿಯುಳ್ಳ ತಂತ್ರಜ್ಞರು, ವಿಜ್ಞಾನಿಗಳು.

ಆದರೆ ನಮ್ಮಲ್ಲಿ ಇವಿಎಂಗಳ ವಿಶ್ವಾಸಾರ್ಹತೆಯನ್ನು ಸಮರ್ಥಿಸಿ ದೊಡ್ಡ ಗಂಟಲಿನಲ್ಲಿ ವಾದ ಮಂಡಿಸುತ್ತಿರುವವರು ರಾಜಕಾರಣಿಗಳು ಹಾಗೂ ಚುನಾವಣಾ ಆಯೋಗದ ಪ್ರಭೃತಿಗಳು. ಮಾಧ್ಯಮದವರು ಕೂಡ ಆಡಳಿತಾರೂಢ ಪಕ್ಷದ ಪರ ಬ್ಯಾಟಿಂಗ್‍ಗೆ ಇಳಿದಿರುವುದರಲ್ಲಿ ಯಾರಿಗೂ ಆಶ್ಚರ್ಯವಿಲ್ಲ.

ಆದರೆ ಎಲೆಕ್ಟ್ರಾನಿಕ್ ತಂತ್ರಜ್ಞಾನ ಕ್ಷೇತ್ರದ ಪರಿಣಿತರು ಈ ಬಗ್ಗೆ ಏನನ್ನುತ್ತಾರೆ? 2010ರ ಜುಲೈನಲ್ಲಿ ವಿಜ್ಞಾನ ವಿಷಯಗಳ ವರದಿಗಾರ ಜೂಲಿಯನ್ ಸಿಡಲ್ ಭಾರತದಲ್ಲಿ ಬಳಸಲಾಗುತ್ತಿರುವ ಇವಿಎಂಗಳ ಬಗ್ಗೆ ಬಿಬಿಸಿಗೆ ಒಂದು ವಿಸ್ತೃತ ವರದಿ ಮಾಡಿದರು. ಆ ವರದಿ ಹೇಳುವಂತೆ ಅಮೆರಿಕದ ಮಿಚಿಗನ್ ಯೂನಿವರ್ಸಿಟಿಯ ಸಂಶೋಧಕರ ತಂಡ ಭಾರತದ ಇವಿಎಂಗಳ ಕಾರ್ಯಕ್ಷಮತೆ ಬಗ್ಗೆ ಒಂದು ತನಿಖೆ ನಡೆಸಿ, ಯಾವುದೇ ಮೊಬೈಲ್‍ಗಳ ಮೂಲಕ ಇವಿಎಂ ಕೋಡ್ (ಆ ಕೋಡ್ ಗೊತ್ತಿರುವವರು) ಬಳಸಿ ಇವಿಎಂಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಮತ್ತು ಫಲಿತಾಂಶವನ್ನು ತಮಗೆ ಬೇಕಾದ ಹಾಗೆ ಬದಲಿಸಬಹುದು ಎಂಬುದನ್ನು ಸಾಬೀತು ಮಾಡಿದ್ದರು.

2009ರ ಜೂನ್ 21ರಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಹೀಗೆ ಬರೆದಿದೆ: “ಕಾಗದ ರಹಿತ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಮತದಾರರು ತಮ್ಮ ಆಯ್ಕೆಯ ಮತ ಚಲಾವಣೆ ಮಾಡುತ್ತಾರೆ. ಎಲ್ಲ ಮತಗಳ ಚಲಾವಣೆ ಮುಗಿದ ಮೇಲೆ ಮತಯಂತ್ರ ಫಲಿತಾಂಶ ತೋರಿಸುತ್ತದೆ. ಆದರೆ ಕುತಂತ್ರಪೂರಿತ ಸಾಫ್ಟ್‍ವೇರ್‍ಗಳ ಮೂಲಕ ಅಥವ ಇವಿಎಂ ಹ್ಯಾಕಿಂಗ್ ಮೂಲಕ ಅಕ್ರಮಗಳನ್ನೆಸಗುವುದು, ಮತಗಳನ್ನು ಕದಿಯುವುದು ಸಾಧ್ಯವಿಲ್ಲ ಎಂಬ ಯಾವ ಭರವಸೆಯೂ ಇಲ್ಲ. ಮತ್ತು ಅನುಮಾನ ಬಂದಾಗ ಮತಗಳ ಮರುಎಣಿಕೆಯೂ ಸಾಧ್ಯವಿಲ್ಲ.”

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ. ತಮ್ಮ ಈ ಹೋರಾಟದಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಅವರ ಮಾತುಗಳನ್ನೇ ಕೇಳೋಣ. “ಪ್ರೋಗ್ರಾಮಿಂಗ್‍ನಲ್ಲಿ ತಪ್ಪುಗಳು, ಉಪಕರಣಗಳು ತಪ್ಪಾಗಿ ಕಾರ್ಯನಿರ್ವಹಿಸುವುದು (malfunctioning), ದುರುದ್ದೇಶಪೂರ್ವಕ ಟ್ಯಾಂಪರಿಂಗ್‍ಗಳಿಗೆ ತುತ್ತಾಗುವ ಅಪಾಯ ಯಾವುದೇ ಕಂಪ್ಯೂಟರೀಕೃತ ಮತಯಂತ್ರಗಳ ಅಂತರ್ಗತ ಗುಣವಾಗಿರುತ್ತದೆ. ಕಾಗದರಹಿತ ಇವಿಎಂ ಉಪಕರಣಗಳ ಮೇಲೆ ಸಾರ್ವಜನಿಕರು ವಿಶ್ವಾಸವಿಡಲು ಯಾವುದೇ ಸ್ಪಷ್ಟ ಆಧಾರವಿಲ್ಲ ಎಂಬ ಅಂಶವನ್ನು ಒಪ್ಪಿಕೊಳ್ಳಲು ಇದು ಸರಿಯಾದ ಸಮಯ.”

ಇಂತಹ ಗೊಂದಲಮಯ ಸಂದರ್ಭದಲ್ಲೇ ‘ಜನತಾ ಕಾ ರಿಪೋರ್ಟರ್’ ಎಂಬ ಜಾಲತಾಣ ಬಹಿರಂಗಗೊಳಿಸಿದ ಸುದ್ದಿ ಆಘಾತಕಾರಿಯಾಗಿದೆ.

ಮೋದಿ ಗುಜರಾತ್ ಸಿಎಂ ಆಗಿದ್ದಾಗ ಅಲ್ಲಿ ಭಾರೀ ಹಗರಣವೊಂದು ನಡೆದಿತ್ತು. ಸರ್ಕಾರಿ ಸ್ವಾಮ್ಯದ ಜಿಎಸ್‍ಪಿಸಿ ಕಂಪನಿಗೆ ಸೇರಿದ 20,000 ಕೋಟಿ ಮೌಲ್ಯದ ಷೇರುಗಳನ್ನು ಜಿಯೋ ಗ್ಲೋಬಲ್ ರಿಸೋರ್ಸಸ್ ಎಂಬ ಕಂಪನಿಯೊಂದಕ್ಕೆ ಅನಾಮತ್ತು ವರ್ಗಾಯಿಸಲಾಗಿತ್ತು. ಈಗ ಇವಿಎಂಗಳಲ್ಲಿ ಅಳವಡಿಸುತ್ತಿರುವ ಮೈಕ್ರೋಚಿಪ್‍ಗಳನ್ನು ಹಾಗೂ ಪ್ರೋಗ್ರಾಮಿಂಗ್ ಸಾಫ್ಟ್‍ವೇರ್‍ಗಳನ್ನು ಸಪ್ಲೈ ಮಾಡಲು ‘ಮೈಕ್ರೋಚಿಪ್ಸ್ ಇಂಕ್’ ಎಂಬ ಅಮೆರಿಕದ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಆಘಾತಕಾರಿ ವಿಷಯವೆಂದರೆ ಜಿಎಸ್‍ಪಿಸಿಯ 20,000 ಕೋಟಿ ಮೊತ್ತವನ್ನು ಗುಳುಂಮಾಡಿದ ಜಿಯೋ ರಿಸೋರ್ಸ್ ಮತ್ತು ಈ ಮೈಕ್ರೋ ಚಿಪ್ಸ್ ಇಂಕ್ ಕಂಪನಿಗಳೆರಡೂ ಅಮೆರಿಕದ ‘ಕೀ ಕ್ಯಾಪಿಟಲ್ ಕಾರ್ಪೊರೇಷನ್’ನ ಒಡೆತನದಲ್ಲಿವೆ ಎಂದು ನಾಸ್ಡಾಕ್‍ನ ದಾಖಲೆಗಳು ಹೇಳುತ್ತವೆ.
ತೆರೆಮರೆಯಲ್ಲಿ ಏನೆಲ್ಲ ನಡೆಯುತ್ತಿದೆ ಎಂಬುದನ್ನು ಬಲ್ಲವರಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...