Homeಮುಖಪುಟಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ.

- Advertisement -
- Advertisement -

| ದೊಡ್ಡಿಪಾಳ್ಯ ನರಸಿಂಹಮೂರ್ತಿ |

‘ಇವಿಎಂ ವಿರೋಧಿಗಳು ಆಧುನಿಕ ತಂತ್ರಜ್ಞಾನದ ವಿರೋಧಿಗಳು, ಇವರು ದೇಶವನ್ನು ಕತ್ತಲ ಯುಗಕ್ಕೆ ಕೊಂಡೊಯ್ಯಲು ಬಯಸಿದ್ದಾರೆ’ ಎಂತಲೂ, ‘ಇವಿಎಂ ನಲ್ಲಿ ದೋಷಾರೋಪಣೆ ಮಾಡುವುದು ಸೋತ ಪಕ್ಷಗಳ ಮಾಮೂಲಿ ವಾದ’ ಎಂತಲೂ, ‘ಇವಿಎಂ ಗಳನ್ನು ಹ್ಯಾಕ್ ಮಾಡಲು ಅಥವ ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ, ಇಡೀ ಜಗತ್ತು ಇವಿಎಂಗಳನ್ನು ಒಪ್ಪಿಕೊಂಡಿದೆ’ ಎಂತಲೂ ಇವಿಎಂ ಪರ ವಕಾಲತ್ತು ವಹಿಸುವವರ ವಾದ. ಈ ವಾದ ಸರಣಿಯನ್ನು ಬೆಂಬಲಿಸುವವರಲ್ಲಿ ಬಹಳಷ್ಟು ಜನಪರ ಚಿಂತಕರು ಹಾಗೂ ಸಾಮಾಜಿಕ ಕಾರ್ಯಕರ್ತರೂ ಕೂಡ ಇದ್ದಾರೆ.

ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವೆ, ಇಲ್ಲವೆ ಎಂಬುದನ್ನು ತೀರ್ಮಾನಿಸಬೇಕಾದವರು ರಾಜಕಾರಣಿಗಳೋ ಅಥವ ಮಾಧ್ಯಮದವರೋ ಅಲ್ಲ. ಚುನಾವಣಾ ಆಯೋಗದ ಅಧಿಕಾರಿಗಳೂ ಅಲ್ಲ. ಈ ತೀರ್ಮಾನ ಕೈಗೊಳ್ಳಬೇಕಾದವರು ಈ ಕ್ಷೇತ್ರದಲ್ಲಿ ಪರಿಣತಿಯುಳ್ಳ ತಂತ್ರಜ್ಞರು, ವಿಜ್ಞಾನಿಗಳು.

ಆದರೆ ನಮ್ಮಲ್ಲಿ ಇವಿಎಂಗಳ ವಿಶ್ವಾಸಾರ್ಹತೆಯನ್ನು ಸಮರ್ಥಿಸಿ ದೊಡ್ಡ ಗಂಟಲಿನಲ್ಲಿ ವಾದ ಮಂಡಿಸುತ್ತಿರುವವರು ರಾಜಕಾರಣಿಗಳು ಹಾಗೂ ಚುನಾವಣಾ ಆಯೋಗದ ಪ್ರಭೃತಿಗಳು. ಮಾಧ್ಯಮದವರು ಕೂಡ ಆಡಳಿತಾರೂಢ ಪಕ್ಷದ ಪರ ಬ್ಯಾಟಿಂಗ್‍ಗೆ ಇಳಿದಿರುವುದರಲ್ಲಿ ಯಾರಿಗೂ ಆಶ್ಚರ್ಯವಿಲ್ಲ.

ಆದರೆ ಎಲೆಕ್ಟ್ರಾನಿಕ್ ತಂತ್ರಜ್ಞಾನ ಕ್ಷೇತ್ರದ ಪರಿಣಿತರು ಈ ಬಗ್ಗೆ ಏನನ್ನುತ್ತಾರೆ? 2010ರ ಜುಲೈನಲ್ಲಿ ವಿಜ್ಞಾನ ವಿಷಯಗಳ ವರದಿಗಾರ ಜೂಲಿಯನ್ ಸಿಡಲ್ ಭಾರತದಲ್ಲಿ ಬಳಸಲಾಗುತ್ತಿರುವ ಇವಿಎಂಗಳ ಬಗ್ಗೆ ಬಿಬಿಸಿಗೆ ಒಂದು ವಿಸ್ತೃತ ವರದಿ ಮಾಡಿದರು. ಆ ವರದಿ ಹೇಳುವಂತೆ ಅಮೆರಿಕದ ಮಿಚಿಗನ್ ಯೂನಿವರ್ಸಿಟಿಯ ಸಂಶೋಧಕರ ತಂಡ ಭಾರತದ ಇವಿಎಂಗಳ ಕಾರ್ಯಕ್ಷಮತೆ ಬಗ್ಗೆ ಒಂದು ತನಿಖೆ ನಡೆಸಿ, ಯಾವುದೇ ಮೊಬೈಲ್‍ಗಳ ಮೂಲಕ ಇವಿಎಂ ಕೋಡ್ (ಆ ಕೋಡ್ ಗೊತ್ತಿರುವವರು) ಬಳಸಿ ಇವಿಎಂಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಮತ್ತು ಫಲಿತಾಂಶವನ್ನು ತಮಗೆ ಬೇಕಾದ ಹಾಗೆ ಬದಲಿಸಬಹುದು ಎಂಬುದನ್ನು ಸಾಬೀತು ಮಾಡಿದ್ದರು.

2009ರ ಜೂನ್ 21ರಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಹೀಗೆ ಬರೆದಿದೆ: “ಕಾಗದ ರಹಿತ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಮತದಾರರು ತಮ್ಮ ಆಯ್ಕೆಯ ಮತ ಚಲಾವಣೆ ಮಾಡುತ್ತಾರೆ. ಎಲ್ಲ ಮತಗಳ ಚಲಾವಣೆ ಮುಗಿದ ಮೇಲೆ ಮತಯಂತ್ರ ಫಲಿತಾಂಶ ತೋರಿಸುತ್ತದೆ. ಆದರೆ ಕುತಂತ್ರಪೂರಿತ ಸಾಫ್ಟ್‍ವೇರ್‍ಗಳ ಮೂಲಕ ಅಥವ ಇವಿಎಂ ಹ್ಯಾಕಿಂಗ್ ಮೂಲಕ ಅಕ್ರಮಗಳನ್ನೆಸಗುವುದು, ಮತಗಳನ್ನು ಕದಿಯುವುದು ಸಾಧ್ಯವಿಲ್ಲ ಎಂಬ ಯಾವ ಭರವಸೆಯೂ ಇಲ್ಲ. ಮತ್ತು ಅನುಮಾನ ಬಂದಾಗ ಮತಗಳ ಮರುಎಣಿಕೆಯೂ ಸಾಧ್ಯವಿಲ್ಲ.”

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ. ತಮ್ಮ ಈ ಹೋರಾಟದಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಅವರ ಮಾತುಗಳನ್ನೇ ಕೇಳೋಣ. “ಪ್ರೋಗ್ರಾಮಿಂಗ್‍ನಲ್ಲಿ ತಪ್ಪುಗಳು, ಉಪಕರಣಗಳು ತಪ್ಪಾಗಿ ಕಾರ್ಯನಿರ್ವಹಿಸುವುದು (malfunctioning), ದುರುದ್ದೇಶಪೂರ್ವಕ ಟ್ಯಾಂಪರಿಂಗ್‍ಗಳಿಗೆ ತುತ್ತಾಗುವ ಅಪಾಯ ಯಾವುದೇ ಕಂಪ್ಯೂಟರೀಕೃತ ಮತಯಂತ್ರಗಳ ಅಂತರ್ಗತ ಗುಣವಾಗಿರುತ್ತದೆ. ಕಾಗದರಹಿತ ಇವಿಎಂ ಉಪಕರಣಗಳ ಮೇಲೆ ಸಾರ್ವಜನಿಕರು ವಿಶ್ವಾಸವಿಡಲು ಯಾವುದೇ ಸ್ಪಷ್ಟ ಆಧಾರವಿಲ್ಲ ಎಂಬ ಅಂಶವನ್ನು ಒಪ್ಪಿಕೊಳ್ಳಲು ಇದು ಸರಿಯಾದ ಸಮಯ.”

ಇಂತಹ ಗೊಂದಲಮಯ ಸಂದರ್ಭದಲ್ಲೇ ‘ಜನತಾ ಕಾ ರಿಪೋರ್ಟರ್’ ಎಂಬ ಜಾಲತಾಣ ಬಹಿರಂಗಗೊಳಿಸಿದ ಸುದ್ದಿ ಆಘಾತಕಾರಿಯಾಗಿದೆ.

ಮೋದಿ ಗುಜರಾತ್ ಸಿಎಂ ಆಗಿದ್ದಾಗ ಅಲ್ಲಿ ಭಾರೀ ಹಗರಣವೊಂದು ನಡೆದಿತ್ತು. ಸರ್ಕಾರಿ ಸ್ವಾಮ್ಯದ ಜಿಎಸ್‍ಪಿಸಿ ಕಂಪನಿಗೆ ಸೇರಿದ 20,000 ಕೋಟಿ ಮೌಲ್ಯದ ಷೇರುಗಳನ್ನು ಜಿಯೋ ಗ್ಲೋಬಲ್ ರಿಸೋರ್ಸಸ್ ಎಂಬ ಕಂಪನಿಯೊಂದಕ್ಕೆ ಅನಾಮತ್ತು ವರ್ಗಾಯಿಸಲಾಗಿತ್ತು. ಈಗ ಇವಿಎಂಗಳಲ್ಲಿ ಅಳವಡಿಸುತ್ತಿರುವ ಮೈಕ್ರೋಚಿಪ್‍ಗಳನ್ನು ಹಾಗೂ ಪ್ರೋಗ್ರಾಮಿಂಗ್ ಸಾಫ್ಟ್‍ವೇರ್‍ಗಳನ್ನು ಸಪ್ಲೈ ಮಾಡಲು ‘ಮೈಕ್ರೋಚಿಪ್ಸ್ ಇಂಕ್’ ಎಂಬ ಅಮೆರಿಕದ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಆಘಾತಕಾರಿ ವಿಷಯವೆಂದರೆ ಜಿಎಸ್‍ಪಿಸಿಯ 20,000 ಕೋಟಿ ಮೊತ್ತವನ್ನು ಗುಳುಂಮಾಡಿದ ಜಿಯೋ ರಿಸೋರ್ಸ್ ಮತ್ತು ಈ ಮೈಕ್ರೋ ಚಿಪ್ಸ್ ಇಂಕ್ ಕಂಪನಿಗಳೆರಡೂ ಅಮೆರಿಕದ ‘ಕೀ ಕ್ಯಾಪಿಟಲ್ ಕಾರ್ಪೊರೇಷನ್’ನ ಒಡೆತನದಲ್ಲಿವೆ ಎಂದು ನಾಸ್ಡಾಕ್‍ನ ದಾಖಲೆಗಳು ಹೇಳುತ್ತವೆ.
ತೆರೆಮರೆಯಲ್ಲಿ ಏನೆಲ್ಲ ನಡೆಯುತ್ತಿದೆ ಎಂಬುದನ್ನು ಬಲ್ಲವರಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...