Homeಮುಖಪುಟಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ.

- Advertisement -
- Advertisement -

| ದೊಡ್ಡಿಪಾಳ್ಯ ನರಸಿಂಹಮೂರ್ತಿ |

‘ಇವಿಎಂ ವಿರೋಧಿಗಳು ಆಧುನಿಕ ತಂತ್ರಜ್ಞಾನದ ವಿರೋಧಿಗಳು, ಇವರು ದೇಶವನ್ನು ಕತ್ತಲ ಯುಗಕ್ಕೆ ಕೊಂಡೊಯ್ಯಲು ಬಯಸಿದ್ದಾರೆ’ ಎಂತಲೂ, ‘ಇವಿಎಂ ನಲ್ಲಿ ದೋಷಾರೋಪಣೆ ಮಾಡುವುದು ಸೋತ ಪಕ್ಷಗಳ ಮಾಮೂಲಿ ವಾದ’ ಎಂತಲೂ, ‘ಇವಿಎಂ ಗಳನ್ನು ಹ್ಯಾಕ್ ಮಾಡಲು ಅಥವ ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ, ಇಡೀ ಜಗತ್ತು ಇವಿಎಂಗಳನ್ನು ಒಪ್ಪಿಕೊಂಡಿದೆ’ ಎಂತಲೂ ಇವಿಎಂ ಪರ ವಕಾಲತ್ತು ವಹಿಸುವವರ ವಾದ. ಈ ವಾದ ಸರಣಿಯನ್ನು ಬೆಂಬಲಿಸುವವರಲ್ಲಿ ಬಹಳಷ್ಟು ಜನಪರ ಚಿಂತಕರು ಹಾಗೂ ಸಾಮಾಜಿಕ ಕಾರ್ಯಕರ್ತರೂ ಕೂಡ ಇದ್ದಾರೆ.

ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವೆ, ಇಲ್ಲವೆ ಎಂಬುದನ್ನು ತೀರ್ಮಾನಿಸಬೇಕಾದವರು ರಾಜಕಾರಣಿಗಳೋ ಅಥವ ಮಾಧ್ಯಮದವರೋ ಅಲ್ಲ. ಚುನಾವಣಾ ಆಯೋಗದ ಅಧಿಕಾರಿಗಳೂ ಅಲ್ಲ. ಈ ತೀರ್ಮಾನ ಕೈಗೊಳ್ಳಬೇಕಾದವರು ಈ ಕ್ಷೇತ್ರದಲ್ಲಿ ಪರಿಣತಿಯುಳ್ಳ ತಂತ್ರಜ್ಞರು, ವಿಜ್ಞಾನಿಗಳು.

ಆದರೆ ನಮ್ಮಲ್ಲಿ ಇವಿಎಂಗಳ ವಿಶ್ವಾಸಾರ್ಹತೆಯನ್ನು ಸಮರ್ಥಿಸಿ ದೊಡ್ಡ ಗಂಟಲಿನಲ್ಲಿ ವಾದ ಮಂಡಿಸುತ್ತಿರುವವರು ರಾಜಕಾರಣಿಗಳು ಹಾಗೂ ಚುನಾವಣಾ ಆಯೋಗದ ಪ್ರಭೃತಿಗಳು. ಮಾಧ್ಯಮದವರು ಕೂಡ ಆಡಳಿತಾರೂಢ ಪಕ್ಷದ ಪರ ಬ್ಯಾಟಿಂಗ್‍ಗೆ ಇಳಿದಿರುವುದರಲ್ಲಿ ಯಾರಿಗೂ ಆಶ್ಚರ್ಯವಿಲ್ಲ.

ಆದರೆ ಎಲೆಕ್ಟ್ರಾನಿಕ್ ತಂತ್ರಜ್ಞಾನ ಕ್ಷೇತ್ರದ ಪರಿಣಿತರು ಈ ಬಗ್ಗೆ ಏನನ್ನುತ್ತಾರೆ? 2010ರ ಜುಲೈನಲ್ಲಿ ವಿಜ್ಞಾನ ವಿಷಯಗಳ ವರದಿಗಾರ ಜೂಲಿಯನ್ ಸಿಡಲ್ ಭಾರತದಲ್ಲಿ ಬಳಸಲಾಗುತ್ತಿರುವ ಇವಿಎಂಗಳ ಬಗ್ಗೆ ಬಿಬಿಸಿಗೆ ಒಂದು ವಿಸ್ತೃತ ವರದಿ ಮಾಡಿದರು. ಆ ವರದಿ ಹೇಳುವಂತೆ ಅಮೆರಿಕದ ಮಿಚಿಗನ್ ಯೂನಿವರ್ಸಿಟಿಯ ಸಂಶೋಧಕರ ತಂಡ ಭಾರತದ ಇವಿಎಂಗಳ ಕಾರ್ಯಕ್ಷಮತೆ ಬಗ್ಗೆ ಒಂದು ತನಿಖೆ ನಡೆಸಿ, ಯಾವುದೇ ಮೊಬೈಲ್‍ಗಳ ಮೂಲಕ ಇವಿಎಂ ಕೋಡ್ (ಆ ಕೋಡ್ ಗೊತ್ತಿರುವವರು) ಬಳಸಿ ಇವಿಎಂಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಮತ್ತು ಫಲಿತಾಂಶವನ್ನು ತಮಗೆ ಬೇಕಾದ ಹಾಗೆ ಬದಲಿಸಬಹುದು ಎಂಬುದನ್ನು ಸಾಬೀತು ಮಾಡಿದ್ದರು.

2009ರ ಜೂನ್ 21ರಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಹೀಗೆ ಬರೆದಿದೆ: “ಕಾಗದ ರಹಿತ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಮತದಾರರು ತಮ್ಮ ಆಯ್ಕೆಯ ಮತ ಚಲಾವಣೆ ಮಾಡುತ್ತಾರೆ. ಎಲ್ಲ ಮತಗಳ ಚಲಾವಣೆ ಮುಗಿದ ಮೇಲೆ ಮತಯಂತ್ರ ಫಲಿತಾಂಶ ತೋರಿಸುತ್ತದೆ. ಆದರೆ ಕುತಂತ್ರಪೂರಿತ ಸಾಫ್ಟ್‍ವೇರ್‍ಗಳ ಮೂಲಕ ಅಥವ ಇವಿಎಂ ಹ್ಯಾಕಿಂಗ್ ಮೂಲಕ ಅಕ್ರಮಗಳನ್ನೆಸಗುವುದು, ಮತಗಳನ್ನು ಕದಿಯುವುದು ಸಾಧ್ಯವಿಲ್ಲ ಎಂಬ ಯಾವ ಭರವಸೆಯೂ ಇಲ್ಲ. ಮತ್ತು ಅನುಮಾನ ಬಂದಾಗ ಮತಗಳ ಮರುಎಣಿಕೆಯೂ ಸಾಧ್ಯವಿಲ್ಲ.”

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ. ತಮ್ಮ ಈ ಹೋರಾಟದಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಅವರ ಮಾತುಗಳನ್ನೇ ಕೇಳೋಣ. “ಪ್ರೋಗ್ರಾಮಿಂಗ್‍ನಲ್ಲಿ ತಪ್ಪುಗಳು, ಉಪಕರಣಗಳು ತಪ್ಪಾಗಿ ಕಾರ್ಯನಿರ್ವಹಿಸುವುದು (malfunctioning), ದುರುದ್ದೇಶಪೂರ್ವಕ ಟ್ಯಾಂಪರಿಂಗ್‍ಗಳಿಗೆ ತುತ್ತಾಗುವ ಅಪಾಯ ಯಾವುದೇ ಕಂಪ್ಯೂಟರೀಕೃತ ಮತಯಂತ್ರಗಳ ಅಂತರ್ಗತ ಗುಣವಾಗಿರುತ್ತದೆ. ಕಾಗದರಹಿತ ಇವಿಎಂ ಉಪಕರಣಗಳ ಮೇಲೆ ಸಾರ್ವಜನಿಕರು ವಿಶ್ವಾಸವಿಡಲು ಯಾವುದೇ ಸ್ಪಷ್ಟ ಆಧಾರವಿಲ್ಲ ಎಂಬ ಅಂಶವನ್ನು ಒಪ್ಪಿಕೊಳ್ಳಲು ಇದು ಸರಿಯಾದ ಸಮಯ.”

ಇಂತಹ ಗೊಂದಲಮಯ ಸಂದರ್ಭದಲ್ಲೇ ‘ಜನತಾ ಕಾ ರಿಪೋರ್ಟರ್’ ಎಂಬ ಜಾಲತಾಣ ಬಹಿರಂಗಗೊಳಿಸಿದ ಸುದ್ದಿ ಆಘಾತಕಾರಿಯಾಗಿದೆ.

ಮೋದಿ ಗುಜರಾತ್ ಸಿಎಂ ಆಗಿದ್ದಾಗ ಅಲ್ಲಿ ಭಾರೀ ಹಗರಣವೊಂದು ನಡೆದಿತ್ತು. ಸರ್ಕಾರಿ ಸ್ವಾಮ್ಯದ ಜಿಎಸ್‍ಪಿಸಿ ಕಂಪನಿಗೆ ಸೇರಿದ 20,000 ಕೋಟಿ ಮೌಲ್ಯದ ಷೇರುಗಳನ್ನು ಜಿಯೋ ಗ್ಲೋಬಲ್ ರಿಸೋರ್ಸಸ್ ಎಂಬ ಕಂಪನಿಯೊಂದಕ್ಕೆ ಅನಾಮತ್ತು ವರ್ಗಾಯಿಸಲಾಗಿತ್ತು. ಈಗ ಇವಿಎಂಗಳಲ್ಲಿ ಅಳವಡಿಸುತ್ತಿರುವ ಮೈಕ್ರೋಚಿಪ್‍ಗಳನ್ನು ಹಾಗೂ ಪ್ರೋಗ್ರಾಮಿಂಗ್ ಸಾಫ್ಟ್‍ವೇರ್‍ಗಳನ್ನು ಸಪ್ಲೈ ಮಾಡಲು ‘ಮೈಕ್ರೋಚಿಪ್ಸ್ ಇಂಕ್’ ಎಂಬ ಅಮೆರಿಕದ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಆಘಾತಕಾರಿ ವಿಷಯವೆಂದರೆ ಜಿಎಸ್‍ಪಿಸಿಯ 20,000 ಕೋಟಿ ಮೊತ್ತವನ್ನು ಗುಳುಂಮಾಡಿದ ಜಿಯೋ ರಿಸೋರ್ಸ್ ಮತ್ತು ಈ ಮೈಕ್ರೋ ಚಿಪ್ಸ್ ಇಂಕ್ ಕಂಪನಿಗಳೆರಡೂ ಅಮೆರಿಕದ ‘ಕೀ ಕ್ಯಾಪಿಟಲ್ ಕಾರ್ಪೊರೇಷನ್’ನ ಒಡೆತನದಲ್ಲಿವೆ ಎಂದು ನಾಸ್ಡಾಕ್‍ನ ದಾಖಲೆಗಳು ಹೇಳುತ್ತವೆ.
ತೆರೆಮರೆಯಲ್ಲಿ ಏನೆಲ್ಲ ನಡೆಯುತ್ತಿದೆ ಎಂಬುದನ್ನು ಬಲ್ಲವರಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...