Homeಮುಖಪುಟಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ.

- Advertisement -
- Advertisement -

| ದೊಡ್ಡಿಪಾಳ್ಯ ನರಸಿಂಹಮೂರ್ತಿ |

‘ಇವಿಎಂ ವಿರೋಧಿಗಳು ಆಧುನಿಕ ತಂತ್ರಜ್ಞಾನದ ವಿರೋಧಿಗಳು, ಇವರು ದೇಶವನ್ನು ಕತ್ತಲ ಯುಗಕ್ಕೆ ಕೊಂಡೊಯ್ಯಲು ಬಯಸಿದ್ದಾರೆ’ ಎಂತಲೂ, ‘ಇವಿಎಂ ನಲ್ಲಿ ದೋಷಾರೋಪಣೆ ಮಾಡುವುದು ಸೋತ ಪಕ್ಷಗಳ ಮಾಮೂಲಿ ವಾದ’ ಎಂತಲೂ, ‘ಇವಿಎಂ ಗಳನ್ನು ಹ್ಯಾಕ್ ಮಾಡಲು ಅಥವ ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ, ಇಡೀ ಜಗತ್ತು ಇವಿಎಂಗಳನ್ನು ಒಪ್ಪಿಕೊಂಡಿದೆ’ ಎಂತಲೂ ಇವಿಎಂ ಪರ ವಕಾಲತ್ತು ವಹಿಸುವವರ ವಾದ. ಈ ವಾದ ಸರಣಿಯನ್ನು ಬೆಂಬಲಿಸುವವರಲ್ಲಿ ಬಹಳಷ್ಟು ಜನಪರ ಚಿಂತಕರು ಹಾಗೂ ಸಾಮಾಜಿಕ ಕಾರ್ಯಕರ್ತರೂ ಕೂಡ ಇದ್ದಾರೆ.

ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವೆ, ಇಲ್ಲವೆ ಎಂಬುದನ್ನು ತೀರ್ಮಾನಿಸಬೇಕಾದವರು ರಾಜಕಾರಣಿಗಳೋ ಅಥವ ಮಾಧ್ಯಮದವರೋ ಅಲ್ಲ. ಚುನಾವಣಾ ಆಯೋಗದ ಅಧಿಕಾರಿಗಳೂ ಅಲ್ಲ. ಈ ತೀರ್ಮಾನ ಕೈಗೊಳ್ಳಬೇಕಾದವರು ಈ ಕ್ಷೇತ್ರದಲ್ಲಿ ಪರಿಣತಿಯುಳ್ಳ ತಂತ್ರಜ್ಞರು, ವಿಜ್ಞಾನಿಗಳು.

ಆದರೆ ನಮ್ಮಲ್ಲಿ ಇವಿಎಂಗಳ ವಿಶ್ವಾಸಾರ್ಹತೆಯನ್ನು ಸಮರ್ಥಿಸಿ ದೊಡ್ಡ ಗಂಟಲಿನಲ್ಲಿ ವಾದ ಮಂಡಿಸುತ್ತಿರುವವರು ರಾಜಕಾರಣಿಗಳು ಹಾಗೂ ಚುನಾವಣಾ ಆಯೋಗದ ಪ್ರಭೃತಿಗಳು. ಮಾಧ್ಯಮದವರು ಕೂಡ ಆಡಳಿತಾರೂಢ ಪಕ್ಷದ ಪರ ಬ್ಯಾಟಿಂಗ್‍ಗೆ ಇಳಿದಿರುವುದರಲ್ಲಿ ಯಾರಿಗೂ ಆಶ್ಚರ್ಯವಿಲ್ಲ.

ಆದರೆ ಎಲೆಕ್ಟ್ರಾನಿಕ್ ತಂತ್ರಜ್ಞಾನ ಕ್ಷೇತ್ರದ ಪರಿಣಿತರು ಈ ಬಗ್ಗೆ ಏನನ್ನುತ್ತಾರೆ? 2010ರ ಜುಲೈನಲ್ಲಿ ವಿಜ್ಞಾನ ವಿಷಯಗಳ ವರದಿಗಾರ ಜೂಲಿಯನ್ ಸಿಡಲ್ ಭಾರತದಲ್ಲಿ ಬಳಸಲಾಗುತ್ತಿರುವ ಇವಿಎಂಗಳ ಬಗ್ಗೆ ಬಿಬಿಸಿಗೆ ಒಂದು ವಿಸ್ತೃತ ವರದಿ ಮಾಡಿದರು. ಆ ವರದಿ ಹೇಳುವಂತೆ ಅಮೆರಿಕದ ಮಿಚಿಗನ್ ಯೂನಿವರ್ಸಿಟಿಯ ಸಂಶೋಧಕರ ತಂಡ ಭಾರತದ ಇವಿಎಂಗಳ ಕಾರ್ಯಕ್ಷಮತೆ ಬಗ್ಗೆ ಒಂದು ತನಿಖೆ ನಡೆಸಿ, ಯಾವುದೇ ಮೊಬೈಲ್‍ಗಳ ಮೂಲಕ ಇವಿಎಂ ಕೋಡ್ (ಆ ಕೋಡ್ ಗೊತ್ತಿರುವವರು) ಬಳಸಿ ಇವಿಎಂಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಮತ್ತು ಫಲಿತಾಂಶವನ್ನು ತಮಗೆ ಬೇಕಾದ ಹಾಗೆ ಬದಲಿಸಬಹುದು ಎಂಬುದನ್ನು ಸಾಬೀತು ಮಾಡಿದ್ದರು.

2009ರ ಜೂನ್ 21ರಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಹೀಗೆ ಬರೆದಿದೆ: “ಕಾಗದ ರಹಿತ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಮತದಾರರು ತಮ್ಮ ಆಯ್ಕೆಯ ಮತ ಚಲಾವಣೆ ಮಾಡುತ್ತಾರೆ. ಎಲ್ಲ ಮತಗಳ ಚಲಾವಣೆ ಮುಗಿದ ಮೇಲೆ ಮತಯಂತ್ರ ಫಲಿತಾಂಶ ತೋರಿಸುತ್ತದೆ. ಆದರೆ ಕುತಂತ್ರಪೂರಿತ ಸಾಫ್ಟ್‍ವೇರ್‍ಗಳ ಮೂಲಕ ಅಥವ ಇವಿಎಂ ಹ್ಯಾಕಿಂಗ್ ಮೂಲಕ ಅಕ್ರಮಗಳನ್ನೆಸಗುವುದು, ಮತಗಳನ್ನು ಕದಿಯುವುದು ಸಾಧ್ಯವಿಲ್ಲ ಎಂಬ ಯಾವ ಭರವಸೆಯೂ ಇಲ್ಲ. ಮತ್ತು ಅನುಮಾನ ಬಂದಾಗ ಮತಗಳ ಮರುಎಣಿಕೆಯೂ ಸಾಧ್ಯವಿಲ್ಲ.”

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ. ತಮ್ಮ ಈ ಹೋರಾಟದಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಅವರ ಮಾತುಗಳನ್ನೇ ಕೇಳೋಣ. “ಪ್ರೋಗ್ರಾಮಿಂಗ್‍ನಲ್ಲಿ ತಪ್ಪುಗಳು, ಉಪಕರಣಗಳು ತಪ್ಪಾಗಿ ಕಾರ್ಯನಿರ್ವಹಿಸುವುದು (malfunctioning), ದುರುದ್ದೇಶಪೂರ್ವಕ ಟ್ಯಾಂಪರಿಂಗ್‍ಗಳಿಗೆ ತುತ್ತಾಗುವ ಅಪಾಯ ಯಾವುದೇ ಕಂಪ್ಯೂಟರೀಕೃತ ಮತಯಂತ್ರಗಳ ಅಂತರ್ಗತ ಗುಣವಾಗಿರುತ್ತದೆ. ಕಾಗದರಹಿತ ಇವಿಎಂ ಉಪಕರಣಗಳ ಮೇಲೆ ಸಾರ್ವಜನಿಕರು ವಿಶ್ವಾಸವಿಡಲು ಯಾವುದೇ ಸ್ಪಷ್ಟ ಆಧಾರವಿಲ್ಲ ಎಂಬ ಅಂಶವನ್ನು ಒಪ್ಪಿಕೊಳ್ಳಲು ಇದು ಸರಿಯಾದ ಸಮಯ.”

ಇಂತಹ ಗೊಂದಲಮಯ ಸಂದರ್ಭದಲ್ಲೇ ‘ಜನತಾ ಕಾ ರಿಪೋರ್ಟರ್’ ಎಂಬ ಜಾಲತಾಣ ಬಹಿರಂಗಗೊಳಿಸಿದ ಸುದ್ದಿ ಆಘಾತಕಾರಿಯಾಗಿದೆ.

ಮೋದಿ ಗುಜರಾತ್ ಸಿಎಂ ಆಗಿದ್ದಾಗ ಅಲ್ಲಿ ಭಾರೀ ಹಗರಣವೊಂದು ನಡೆದಿತ್ತು. ಸರ್ಕಾರಿ ಸ್ವಾಮ್ಯದ ಜಿಎಸ್‍ಪಿಸಿ ಕಂಪನಿಗೆ ಸೇರಿದ 20,000 ಕೋಟಿ ಮೌಲ್ಯದ ಷೇರುಗಳನ್ನು ಜಿಯೋ ಗ್ಲೋಬಲ್ ರಿಸೋರ್ಸಸ್ ಎಂಬ ಕಂಪನಿಯೊಂದಕ್ಕೆ ಅನಾಮತ್ತು ವರ್ಗಾಯಿಸಲಾಗಿತ್ತು. ಈಗ ಇವಿಎಂಗಳಲ್ಲಿ ಅಳವಡಿಸುತ್ತಿರುವ ಮೈಕ್ರೋಚಿಪ್‍ಗಳನ್ನು ಹಾಗೂ ಪ್ರೋಗ್ರಾಮಿಂಗ್ ಸಾಫ್ಟ್‍ವೇರ್‍ಗಳನ್ನು ಸಪ್ಲೈ ಮಾಡಲು ‘ಮೈಕ್ರೋಚಿಪ್ಸ್ ಇಂಕ್’ ಎಂಬ ಅಮೆರಿಕದ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಆಘಾತಕಾರಿ ವಿಷಯವೆಂದರೆ ಜಿಎಸ್‍ಪಿಸಿಯ 20,000 ಕೋಟಿ ಮೊತ್ತವನ್ನು ಗುಳುಂಮಾಡಿದ ಜಿಯೋ ರಿಸೋರ್ಸ್ ಮತ್ತು ಈ ಮೈಕ್ರೋ ಚಿಪ್ಸ್ ಇಂಕ್ ಕಂಪನಿಗಳೆರಡೂ ಅಮೆರಿಕದ ‘ಕೀ ಕ್ಯಾಪಿಟಲ್ ಕಾರ್ಪೊರೇಷನ್’ನ ಒಡೆತನದಲ್ಲಿವೆ ಎಂದು ನಾಸ್ಡಾಕ್‍ನ ದಾಖಲೆಗಳು ಹೇಳುತ್ತವೆ.
ತೆರೆಮರೆಯಲ್ಲಿ ಏನೆಲ್ಲ ನಡೆಯುತ್ತಿದೆ ಎಂಬುದನ್ನು ಬಲ್ಲವರಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...