Homeಮುಖಪುಟಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ.

- Advertisement -
- Advertisement -

| ದೊಡ್ಡಿಪಾಳ್ಯ ನರಸಿಂಹಮೂರ್ತಿ |

‘ಇವಿಎಂ ವಿರೋಧಿಗಳು ಆಧುನಿಕ ತಂತ್ರಜ್ಞಾನದ ವಿರೋಧಿಗಳು, ಇವರು ದೇಶವನ್ನು ಕತ್ತಲ ಯುಗಕ್ಕೆ ಕೊಂಡೊಯ್ಯಲು ಬಯಸಿದ್ದಾರೆ’ ಎಂತಲೂ, ‘ಇವಿಎಂ ನಲ್ಲಿ ದೋಷಾರೋಪಣೆ ಮಾಡುವುದು ಸೋತ ಪಕ್ಷಗಳ ಮಾಮೂಲಿ ವಾದ’ ಎಂತಲೂ, ‘ಇವಿಎಂ ಗಳನ್ನು ಹ್ಯಾಕ್ ಮಾಡಲು ಅಥವ ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ, ಇಡೀ ಜಗತ್ತು ಇವಿಎಂಗಳನ್ನು ಒಪ್ಪಿಕೊಂಡಿದೆ’ ಎಂತಲೂ ಇವಿಎಂ ಪರ ವಕಾಲತ್ತು ವಹಿಸುವವರ ವಾದ. ಈ ವಾದ ಸರಣಿಯನ್ನು ಬೆಂಬಲಿಸುವವರಲ್ಲಿ ಬಹಳಷ್ಟು ಜನಪರ ಚಿಂತಕರು ಹಾಗೂ ಸಾಮಾಜಿಕ ಕಾರ್ಯಕರ್ತರೂ ಕೂಡ ಇದ್ದಾರೆ.

ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವೆ, ಇಲ್ಲವೆ ಎಂಬುದನ್ನು ತೀರ್ಮಾನಿಸಬೇಕಾದವರು ರಾಜಕಾರಣಿಗಳೋ ಅಥವ ಮಾಧ್ಯಮದವರೋ ಅಲ್ಲ. ಚುನಾವಣಾ ಆಯೋಗದ ಅಧಿಕಾರಿಗಳೂ ಅಲ್ಲ. ಈ ತೀರ್ಮಾನ ಕೈಗೊಳ್ಳಬೇಕಾದವರು ಈ ಕ್ಷೇತ್ರದಲ್ಲಿ ಪರಿಣತಿಯುಳ್ಳ ತಂತ್ರಜ್ಞರು, ವಿಜ್ಞಾನಿಗಳು.

ಆದರೆ ನಮ್ಮಲ್ಲಿ ಇವಿಎಂಗಳ ವಿಶ್ವಾಸಾರ್ಹತೆಯನ್ನು ಸಮರ್ಥಿಸಿ ದೊಡ್ಡ ಗಂಟಲಿನಲ್ಲಿ ವಾದ ಮಂಡಿಸುತ್ತಿರುವವರು ರಾಜಕಾರಣಿಗಳು ಹಾಗೂ ಚುನಾವಣಾ ಆಯೋಗದ ಪ್ರಭೃತಿಗಳು. ಮಾಧ್ಯಮದವರು ಕೂಡ ಆಡಳಿತಾರೂಢ ಪಕ್ಷದ ಪರ ಬ್ಯಾಟಿಂಗ್‍ಗೆ ಇಳಿದಿರುವುದರಲ್ಲಿ ಯಾರಿಗೂ ಆಶ್ಚರ್ಯವಿಲ್ಲ.

ಆದರೆ ಎಲೆಕ್ಟ್ರಾನಿಕ್ ತಂತ್ರಜ್ಞಾನ ಕ್ಷೇತ್ರದ ಪರಿಣಿತರು ಈ ಬಗ್ಗೆ ಏನನ್ನುತ್ತಾರೆ? 2010ರ ಜುಲೈನಲ್ಲಿ ವಿಜ್ಞಾನ ವಿಷಯಗಳ ವರದಿಗಾರ ಜೂಲಿಯನ್ ಸಿಡಲ್ ಭಾರತದಲ್ಲಿ ಬಳಸಲಾಗುತ್ತಿರುವ ಇವಿಎಂಗಳ ಬಗ್ಗೆ ಬಿಬಿಸಿಗೆ ಒಂದು ವಿಸ್ತೃತ ವರದಿ ಮಾಡಿದರು. ಆ ವರದಿ ಹೇಳುವಂತೆ ಅಮೆರಿಕದ ಮಿಚಿಗನ್ ಯೂನಿವರ್ಸಿಟಿಯ ಸಂಶೋಧಕರ ತಂಡ ಭಾರತದ ಇವಿಎಂಗಳ ಕಾರ್ಯಕ್ಷಮತೆ ಬಗ್ಗೆ ಒಂದು ತನಿಖೆ ನಡೆಸಿ, ಯಾವುದೇ ಮೊಬೈಲ್‍ಗಳ ಮೂಲಕ ಇವಿಎಂ ಕೋಡ್ (ಆ ಕೋಡ್ ಗೊತ್ತಿರುವವರು) ಬಳಸಿ ಇವಿಎಂಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಮತ್ತು ಫಲಿತಾಂಶವನ್ನು ತಮಗೆ ಬೇಕಾದ ಹಾಗೆ ಬದಲಿಸಬಹುದು ಎಂಬುದನ್ನು ಸಾಬೀತು ಮಾಡಿದ್ದರು.

2009ರ ಜೂನ್ 21ರಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಹೀಗೆ ಬರೆದಿದೆ: “ಕಾಗದ ರಹಿತ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಮತದಾರರು ತಮ್ಮ ಆಯ್ಕೆಯ ಮತ ಚಲಾವಣೆ ಮಾಡುತ್ತಾರೆ. ಎಲ್ಲ ಮತಗಳ ಚಲಾವಣೆ ಮುಗಿದ ಮೇಲೆ ಮತಯಂತ್ರ ಫಲಿತಾಂಶ ತೋರಿಸುತ್ತದೆ. ಆದರೆ ಕುತಂತ್ರಪೂರಿತ ಸಾಫ್ಟ್‍ವೇರ್‍ಗಳ ಮೂಲಕ ಅಥವ ಇವಿಎಂ ಹ್ಯಾಕಿಂಗ್ ಮೂಲಕ ಅಕ್ರಮಗಳನ್ನೆಸಗುವುದು, ಮತಗಳನ್ನು ಕದಿಯುವುದು ಸಾಧ್ಯವಿಲ್ಲ ಎಂಬ ಯಾವ ಭರವಸೆಯೂ ಇಲ್ಲ. ಮತ್ತು ಅನುಮಾನ ಬಂದಾಗ ಮತಗಳ ಮರುಎಣಿಕೆಯೂ ಸಾಧ್ಯವಿಲ್ಲ.”

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ. ತಮ್ಮ ಈ ಹೋರಾಟದಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಅವರ ಮಾತುಗಳನ್ನೇ ಕೇಳೋಣ. “ಪ್ರೋಗ್ರಾಮಿಂಗ್‍ನಲ್ಲಿ ತಪ್ಪುಗಳು, ಉಪಕರಣಗಳು ತಪ್ಪಾಗಿ ಕಾರ್ಯನಿರ್ವಹಿಸುವುದು (malfunctioning), ದುರುದ್ದೇಶಪೂರ್ವಕ ಟ್ಯಾಂಪರಿಂಗ್‍ಗಳಿಗೆ ತುತ್ತಾಗುವ ಅಪಾಯ ಯಾವುದೇ ಕಂಪ್ಯೂಟರೀಕೃತ ಮತಯಂತ್ರಗಳ ಅಂತರ್ಗತ ಗುಣವಾಗಿರುತ್ತದೆ. ಕಾಗದರಹಿತ ಇವಿಎಂ ಉಪಕರಣಗಳ ಮೇಲೆ ಸಾರ್ವಜನಿಕರು ವಿಶ್ವಾಸವಿಡಲು ಯಾವುದೇ ಸ್ಪಷ್ಟ ಆಧಾರವಿಲ್ಲ ಎಂಬ ಅಂಶವನ್ನು ಒಪ್ಪಿಕೊಳ್ಳಲು ಇದು ಸರಿಯಾದ ಸಮಯ.”

ಇಂತಹ ಗೊಂದಲಮಯ ಸಂದರ್ಭದಲ್ಲೇ ‘ಜನತಾ ಕಾ ರಿಪೋರ್ಟರ್’ ಎಂಬ ಜಾಲತಾಣ ಬಹಿರಂಗಗೊಳಿಸಿದ ಸುದ್ದಿ ಆಘಾತಕಾರಿಯಾಗಿದೆ.

ಮೋದಿ ಗುಜರಾತ್ ಸಿಎಂ ಆಗಿದ್ದಾಗ ಅಲ್ಲಿ ಭಾರೀ ಹಗರಣವೊಂದು ನಡೆದಿತ್ತು. ಸರ್ಕಾರಿ ಸ್ವಾಮ್ಯದ ಜಿಎಸ್‍ಪಿಸಿ ಕಂಪನಿಗೆ ಸೇರಿದ 20,000 ಕೋಟಿ ಮೌಲ್ಯದ ಷೇರುಗಳನ್ನು ಜಿಯೋ ಗ್ಲೋಬಲ್ ರಿಸೋರ್ಸಸ್ ಎಂಬ ಕಂಪನಿಯೊಂದಕ್ಕೆ ಅನಾಮತ್ತು ವರ್ಗಾಯಿಸಲಾಗಿತ್ತು. ಈಗ ಇವಿಎಂಗಳಲ್ಲಿ ಅಳವಡಿಸುತ್ತಿರುವ ಮೈಕ್ರೋಚಿಪ್‍ಗಳನ್ನು ಹಾಗೂ ಪ್ರೋಗ್ರಾಮಿಂಗ್ ಸಾಫ್ಟ್‍ವೇರ್‍ಗಳನ್ನು ಸಪ್ಲೈ ಮಾಡಲು ‘ಮೈಕ್ರೋಚಿಪ್ಸ್ ಇಂಕ್’ ಎಂಬ ಅಮೆರಿಕದ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಆಘಾತಕಾರಿ ವಿಷಯವೆಂದರೆ ಜಿಎಸ್‍ಪಿಸಿಯ 20,000 ಕೋಟಿ ಮೊತ್ತವನ್ನು ಗುಳುಂಮಾಡಿದ ಜಿಯೋ ರಿಸೋರ್ಸ್ ಮತ್ತು ಈ ಮೈಕ್ರೋ ಚಿಪ್ಸ್ ಇಂಕ್ ಕಂಪನಿಗಳೆರಡೂ ಅಮೆರಿಕದ ‘ಕೀ ಕ್ಯಾಪಿಟಲ್ ಕಾರ್ಪೊರೇಷನ್’ನ ಒಡೆತನದಲ್ಲಿವೆ ಎಂದು ನಾಸ್ಡಾಕ್‍ನ ದಾಖಲೆಗಳು ಹೇಳುತ್ತವೆ.
ತೆರೆಮರೆಯಲ್ಲಿ ಏನೆಲ್ಲ ನಡೆಯುತ್ತಿದೆ ಎಂಬುದನ್ನು ಬಲ್ಲವರಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...