Homeಮುಖಪುಟಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಇವಿಎಂಗಳು ಎಷ್ಟು ಸುರಕ್ಷಿತ? ಚುನಾವಣೆ ಹಿನ್ನೆಲೆಯಲ್ಲಿ ಒಂದು ಗಂಭೀರ ಪ್ರಶ್ನೆ

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ.

- Advertisement -
- Advertisement -

| ದೊಡ್ಡಿಪಾಳ್ಯ ನರಸಿಂಹಮೂರ್ತಿ |

‘ಇವಿಎಂ ವಿರೋಧಿಗಳು ಆಧುನಿಕ ತಂತ್ರಜ್ಞಾನದ ವಿರೋಧಿಗಳು, ಇವರು ದೇಶವನ್ನು ಕತ್ತಲ ಯುಗಕ್ಕೆ ಕೊಂಡೊಯ್ಯಲು ಬಯಸಿದ್ದಾರೆ’ ಎಂತಲೂ, ‘ಇವಿಎಂ ನಲ್ಲಿ ದೋಷಾರೋಪಣೆ ಮಾಡುವುದು ಸೋತ ಪಕ್ಷಗಳ ಮಾಮೂಲಿ ವಾದ’ ಎಂತಲೂ, ‘ಇವಿಎಂ ಗಳನ್ನು ಹ್ಯಾಕ್ ಮಾಡಲು ಅಥವ ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ, ಇಡೀ ಜಗತ್ತು ಇವಿಎಂಗಳನ್ನು ಒಪ್ಪಿಕೊಂಡಿದೆ’ ಎಂತಲೂ ಇವಿಎಂ ಪರ ವಕಾಲತ್ತು ವಹಿಸುವವರ ವಾದ. ಈ ವಾದ ಸರಣಿಯನ್ನು ಬೆಂಬಲಿಸುವವರಲ್ಲಿ ಬಹಳಷ್ಟು ಜನಪರ ಚಿಂತಕರು ಹಾಗೂ ಸಾಮಾಜಿಕ ಕಾರ್ಯಕರ್ತರೂ ಕೂಡ ಇದ್ದಾರೆ.

ಇವಿಎಂಗಳನ್ನು ಹ್ಯಾಕ್ ಮಾಡಲು ಸಾಧ್ಯವೆ, ಇಲ್ಲವೆ ಎಂಬುದನ್ನು ತೀರ್ಮಾನಿಸಬೇಕಾದವರು ರಾಜಕಾರಣಿಗಳೋ ಅಥವ ಮಾಧ್ಯಮದವರೋ ಅಲ್ಲ. ಚುನಾವಣಾ ಆಯೋಗದ ಅಧಿಕಾರಿಗಳೂ ಅಲ್ಲ. ಈ ತೀರ್ಮಾನ ಕೈಗೊಳ್ಳಬೇಕಾದವರು ಈ ಕ್ಷೇತ್ರದಲ್ಲಿ ಪರಿಣತಿಯುಳ್ಳ ತಂತ್ರಜ್ಞರು, ವಿಜ್ಞಾನಿಗಳು.

ಆದರೆ ನಮ್ಮಲ್ಲಿ ಇವಿಎಂಗಳ ವಿಶ್ವಾಸಾರ್ಹತೆಯನ್ನು ಸಮರ್ಥಿಸಿ ದೊಡ್ಡ ಗಂಟಲಿನಲ್ಲಿ ವಾದ ಮಂಡಿಸುತ್ತಿರುವವರು ರಾಜಕಾರಣಿಗಳು ಹಾಗೂ ಚುನಾವಣಾ ಆಯೋಗದ ಪ್ರಭೃತಿಗಳು. ಮಾಧ್ಯಮದವರು ಕೂಡ ಆಡಳಿತಾರೂಢ ಪಕ್ಷದ ಪರ ಬ್ಯಾಟಿಂಗ್‍ಗೆ ಇಳಿದಿರುವುದರಲ್ಲಿ ಯಾರಿಗೂ ಆಶ್ಚರ್ಯವಿಲ್ಲ.

ಆದರೆ ಎಲೆಕ್ಟ್ರಾನಿಕ್ ತಂತ್ರಜ್ಞಾನ ಕ್ಷೇತ್ರದ ಪರಿಣಿತರು ಈ ಬಗ್ಗೆ ಏನನ್ನುತ್ತಾರೆ? 2010ರ ಜುಲೈನಲ್ಲಿ ವಿಜ್ಞಾನ ವಿಷಯಗಳ ವರದಿಗಾರ ಜೂಲಿಯನ್ ಸಿಡಲ್ ಭಾರತದಲ್ಲಿ ಬಳಸಲಾಗುತ್ತಿರುವ ಇವಿಎಂಗಳ ಬಗ್ಗೆ ಬಿಬಿಸಿಗೆ ಒಂದು ವಿಸ್ತೃತ ವರದಿ ಮಾಡಿದರು. ಆ ವರದಿ ಹೇಳುವಂತೆ ಅಮೆರಿಕದ ಮಿಚಿಗನ್ ಯೂನಿವರ್ಸಿಟಿಯ ಸಂಶೋಧಕರ ತಂಡ ಭಾರತದ ಇವಿಎಂಗಳ ಕಾರ್ಯಕ್ಷಮತೆ ಬಗ್ಗೆ ಒಂದು ತನಿಖೆ ನಡೆಸಿ, ಯಾವುದೇ ಮೊಬೈಲ್‍ಗಳ ಮೂಲಕ ಇವಿಎಂ ಕೋಡ್ (ಆ ಕೋಡ್ ಗೊತ್ತಿರುವವರು) ಬಳಸಿ ಇವಿಎಂಗಳನ್ನು ಸುಲಭವಾಗಿ ಹ್ಯಾಕ್ ಮಾಡಬಹುದು ಮತ್ತು ಫಲಿತಾಂಶವನ್ನು ತಮಗೆ ಬೇಕಾದ ಹಾಗೆ ಬದಲಿಸಬಹುದು ಎಂಬುದನ್ನು ಸಾಬೀತು ಮಾಡಿದ್ದರು.

2009ರ ಜೂನ್ 21ರಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಹೀಗೆ ಬರೆದಿದೆ: “ಕಾಗದ ರಹಿತ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಮತದಾರರು ತಮ್ಮ ಆಯ್ಕೆಯ ಮತ ಚಲಾವಣೆ ಮಾಡುತ್ತಾರೆ. ಎಲ್ಲ ಮತಗಳ ಚಲಾವಣೆ ಮುಗಿದ ಮೇಲೆ ಮತಯಂತ್ರ ಫಲಿತಾಂಶ ತೋರಿಸುತ್ತದೆ. ಆದರೆ ಕುತಂತ್ರಪೂರಿತ ಸಾಫ್ಟ್‍ವೇರ್‍ಗಳ ಮೂಲಕ ಅಥವ ಇವಿಎಂ ಹ್ಯಾಕಿಂಗ್ ಮೂಲಕ ಅಕ್ರಮಗಳನ್ನೆಸಗುವುದು, ಮತಗಳನ್ನು ಕದಿಯುವುದು ಸಾಧ್ಯವಿಲ್ಲ ಎಂಬ ಯಾವ ಭರವಸೆಯೂ ಇಲ್ಲ. ಮತ್ತು ಅನುಮಾನ ಬಂದಾಗ ಮತಗಳ ಮರುಎಣಿಕೆಯೂ ಸಾಧ್ಯವಿಲ್ಲ.”

ಕ್ಯಾಲಿಫೋರ್ನಿಯಾದ ಸ್ಟ್ಯಾನ್‍ಫೊರ್ಡ್ ಯೂನಿವರ್ಸಿಟಿಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿಜ್ಞಾನಿ ಡೇವಿಡ್.ಎಲ್.ಡಿಲ್ ಅವರು ಇವಿಎಂ ಮತಯಂತ್ರ ಮತ್ತು ಆನ್‍ಲೈನ್ ವೋಟಿಂಗ್ ವಿರುದ್ಧದ ಚಳವಳಿಯಲ್ಲಿ ದಶಕಕ್ಕೂ ಹೆಚ್ಚು ಕಾಲದಿಂದ ಸಕ್ರಿಯವಾಗಿದ್ದಾರೆ. ತಮ್ಮ ಈ ಹೋರಾಟದಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಅವರ ಮಾತುಗಳನ್ನೇ ಕೇಳೋಣ. “ಪ್ರೋಗ್ರಾಮಿಂಗ್‍ನಲ್ಲಿ ತಪ್ಪುಗಳು, ಉಪಕರಣಗಳು ತಪ್ಪಾಗಿ ಕಾರ್ಯನಿರ್ವಹಿಸುವುದು (malfunctioning), ದುರುದ್ದೇಶಪೂರ್ವಕ ಟ್ಯಾಂಪರಿಂಗ್‍ಗಳಿಗೆ ತುತ್ತಾಗುವ ಅಪಾಯ ಯಾವುದೇ ಕಂಪ್ಯೂಟರೀಕೃತ ಮತಯಂತ್ರಗಳ ಅಂತರ್ಗತ ಗುಣವಾಗಿರುತ್ತದೆ. ಕಾಗದರಹಿತ ಇವಿಎಂ ಉಪಕರಣಗಳ ಮೇಲೆ ಸಾರ್ವಜನಿಕರು ವಿಶ್ವಾಸವಿಡಲು ಯಾವುದೇ ಸ್ಪಷ್ಟ ಆಧಾರವಿಲ್ಲ ಎಂಬ ಅಂಶವನ್ನು ಒಪ್ಪಿಕೊಳ್ಳಲು ಇದು ಸರಿಯಾದ ಸಮಯ.”

ಇಂತಹ ಗೊಂದಲಮಯ ಸಂದರ್ಭದಲ್ಲೇ ‘ಜನತಾ ಕಾ ರಿಪೋರ್ಟರ್’ ಎಂಬ ಜಾಲತಾಣ ಬಹಿರಂಗಗೊಳಿಸಿದ ಸುದ್ದಿ ಆಘಾತಕಾರಿಯಾಗಿದೆ.

ಮೋದಿ ಗುಜರಾತ್ ಸಿಎಂ ಆಗಿದ್ದಾಗ ಅಲ್ಲಿ ಭಾರೀ ಹಗರಣವೊಂದು ನಡೆದಿತ್ತು. ಸರ್ಕಾರಿ ಸ್ವಾಮ್ಯದ ಜಿಎಸ್‍ಪಿಸಿ ಕಂಪನಿಗೆ ಸೇರಿದ 20,000 ಕೋಟಿ ಮೌಲ್ಯದ ಷೇರುಗಳನ್ನು ಜಿಯೋ ಗ್ಲೋಬಲ್ ರಿಸೋರ್ಸಸ್ ಎಂಬ ಕಂಪನಿಯೊಂದಕ್ಕೆ ಅನಾಮತ್ತು ವರ್ಗಾಯಿಸಲಾಗಿತ್ತು. ಈಗ ಇವಿಎಂಗಳಲ್ಲಿ ಅಳವಡಿಸುತ್ತಿರುವ ಮೈಕ್ರೋಚಿಪ್‍ಗಳನ್ನು ಹಾಗೂ ಪ್ರೋಗ್ರಾಮಿಂಗ್ ಸಾಫ್ಟ್‍ವೇರ್‍ಗಳನ್ನು ಸಪ್ಲೈ ಮಾಡಲು ‘ಮೈಕ್ರೋಚಿಪ್ಸ್ ಇಂಕ್’ ಎಂಬ ಅಮೆರಿಕದ ಕಂಪನಿಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಆಘಾತಕಾರಿ ವಿಷಯವೆಂದರೆ ಜಿಎಸ್‍ಪಿಸಿಯ 20,000 ಕೋಟಿ ಮೊತ್ತವನ್ನು ಗುಳುಂಮಾಡಿದ ಜಿಯೋ ರಿಸೋರ್ಸ್ ಮತ್ತು ಈ ಮೈಕ್ರೋ ಚಿಪ್ಸ್ ಇಂಕ್ ಕಂಪನಿಗಳೆರಡೂ ಅಮೆರಿಕದ ‘ಕೀ ಕ್ಯಾಪಿಟಲ್ ಕಾರ್ಪೊರೇಷನ್’ನ ಒಡೆತನದಲ್ಲಿವೆ ಎಂದು ನಾಸ್ಡಾಕ್‍ನ ದಾಖಲೆಗಳು ಹೇಳುತ್ತವೆ.
ತೆರೆಮರೆಯಲ್ಲಿ ಏನೆಲ್ಲ ನಡೆಯುತ್ತಿದೆ ಎಂಬುದನ್ನು ಬಲ್ಲವರಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...