Homeಕರ್ನಾಟಕ"ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ": ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

“ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ”: ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

- Advertisement -
- Advertisement -

| ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕೊನೆಗೂ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿವೆ. ಹೈದರಾಬಾದ್ ಕರ್ನಾಟಕದಲ್ಲಿ 5ಕ್ಕೆ 5 ಸ್ಥಾನಗಳನ್ನೂ ಬಿಜೆಪಿ ಗೆದ್ದುಕೊಂಡು ಈ ಭಾಗದಲ್ಲಿ ಹೊಸ ದಾಖಲೆ ಮಾಡಿದೆ. ಈ ಐದರಲ್ಲಿ ಎರಡು ಕ್ಷೇತ್ರಗಳು ( ಬಳ್ಳಾರಿ, ರಾಯಚೂರು) ಪರಿಶಿಷ್ಟ ಪಂಗಡದವರಿಗೆ ಮೀಸಲಾಗಿದ್ದು, ಒಂದು ( ಕಲ್ಬುರ್ಗಿ) ಕ್ಷೇತ್ರ ಪರಿಶಿಷ್ಟ ಜಾತಿಯವರಿಗೆ ಮೀಸಲಿದೆ.

ಎರಡು ಕ್ಷೇತ್ರಗಳು ಸಾಮಾನ್ಯ ವರ್ಗಕ್ಕೆ ಸೇರಿವೆ. 2009 ಹಾಗೂ2014ರಲ್ಲಿ ಕಾಂಗ್ರೆಸ್ 2 ಮತ್ತು ಬಿಜೆಪಿ 3 ಸ್ಥಾನಗಳಲ್ಲಿ ಜಯಗಳಿಸಿದ್ದವು. ಆದರೆ ಈ ಬಾರಿ ಮಾತ್ರ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿಬಿಟ್ಟಿತು. ಮಲ್ಲಿಕಾರ್ಜುನ ಖರ್ಗೆ, ಈಶ್ವರ ಖಂಡ್ರೆ ಹಾಗೂ ವಿ.ಎಸ್.ಉಗ್ರಪ್ಪ ನಂತಹ ದಿಗ್ಗಜರು ಸೋಲಿನ ರುಚಿ ನೋಡಬೇಕಾಯಿತು.

ಖರ್ಗೆಗೆ ಮುಳುವಾದ ಪುತ್ರ ವ್ಯಾಮೋಹ:
ಪುರಾಣದಲ್ಲಿನ ಯಯಾತಿಯ ಕಥೆ ಖರ್ಗೆ ವಿಷಯದಲ್ಲಿ ತಿರುವು ಮುರುವಾಗಿದೆ. ಆ ಕತೆಯಲ್ಲಿ ತಂದೆ ಯಯಾತಿ ಮಗ ಪುರುವಿನ ಯೌವ್ವನವನ್ನು ಕಡವಾಗಿ ಪಡೆದರೆ, ಇಲ್ಲಿ ಪ್ರಿಯಾಂಕ ಖರ್ಗೆ ತಂದೆಯ ರಾಜಕೀಯ ಆಯುಷ್ಯವನ್ನೇ ಎರವಲು ಪಡೆದುಬಿಟ್ಟ. ಕಳೆದ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಮಗನನ್ನು ಮಂತ್ರಿಯನ್ನಾಗಿ ಮಾಡುವ ಹಟಕ್ಕೆ ಬಿದ್ದ ಖರ್ಗೆಯವರು ಕಮರುಲ್ ಇಸ್ಲಾಂ, ಬಾಬುರಾವ್ ಚಿಂಚನಸೂರ್ ಹಾಗು ಮಾಲಿಕಯ್ಯ ಗುತ್ತೇದಾರ್‌ರಂತಹ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿ ಅವರ ವಿರೋಧ ಕಟ್ಟಿಕೊಳ್ಳಬೇಕಾಯಿತು.

ಮಾಲಿಕಯ್ಯ, ಬಾಬುರಾವ್‌ರಂತಹ ಹಿಂದುಳಿದ ವರ್ಗಗಳ ಪ್ರಬಲ ನಾಯಕರು ಬಿಜೆಪಿ ಸೇರಿ ಖರ್ಗೆ ಸೋಲಿಸಲು ಟೊಂಕ ಕಟ್ಟಿ ನಿಂತುಬಿಟ್ಟರು. ಒಂದು ರೀತಿಯಲ್ಲಿ ಹೇಳುವುದಾದರೆ ಖರ್ಗೆಯವರನ್ನು ಸೋಲಿಸುವ ಸಂಚು ಒಂದು ವರ್ಷದ ಹಿಂದೆಯೇ ರೂಪುಗೊಂಡಿತ್ತು. ಅಸ್ಪೃಶ್ಯ ದಲಿತ ಸಮುದಾಯದ ಖರ್ಗೆ ವಿರುದ್ಧ, ಅಸ್ಪೃಶ್ಯೇತರ ದಲಿತರಾದ ಉಮೇಶ್ ಜಾಧವ್‌ರನ್ನು ಆಪರೇಷನ್ ಕಮಲದ ಮೂಲಕ ಸೆಳೆದು ಅಭ್ಯರ್ಥಿಯಾಗಿಸುವ ಮೂಲಕ ಬಿಜೆಪಿ ತನ್ನ ಜಾತಿ ರಾಜಕಾರಣದ ಅಸ್ತ್ರ ಪ್ರಯೋಗ ಮಾಡಿತು.

ಇದನ್ನು ಓದಿ: ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಳೆದೆರೆಡು ಚುನಾವಣೆಯಲ್ಲಿ ಅದೇ ಲಂಬಾಣಿ ಸಮುದಾಯದ ರೇವುನಾಯಕ್ ಬೆಳಮಗಿ ವಿರುದ್ದ ಒಮ್ಮೆ14 ಸಾವಿರ, ಮತ್ತೊಮ್ಮೆ 75 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಖರ್ಗೆಯವರು ಈ ಬಾರಿ ಜಾಧವ್ ಎದುರು 85 ಸಾವಿರ ಮತಗಳಿಂದ ಸೋಲುಣಬೇಕಾಯಿತು. ತಮ್ಮ ಮಗನಿಗಾಗಿ ನಮ್ಮ ಕೋಲಿ ಸಮಾಜಕ್ಕೆ ದೊರಕಿದ್ದ ಏಕೈಕ ಮಂತ್ರಿಸ್ಥಾನವನ್ನೂ ಕಿತ್ತುಕೊಂಡರೆಂದು ಖರ್ಗೆ ವಿರುದ್ಧ ಅಸಮಧಾನಗೊಂಡಿದ್ದ ಆ ಸಮಾಜದವರನ್ನು ಬಾಬುರಾವ್ ಚಿಂಚನಸೂರ್ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಸಂಘಟಿಸಿದ್ದೇ ಸಂಘ ಪರಿವಾರ.

ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 3 ಲಕ್ಷದಷ್ಟಿರುವ ಈ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಹುಸಿ ಭರವಸೆ ನೀಡುವ ಮೂಲಕ ಸಾರಾಸಗಟಾಗಿ ಬಿಜೆಪಿಗೆ ಮತ ಚಲಾಯಿಸುವಂತೆ ನೋಡಿಕೊಳ್ಳಲಾಯಿತು. ಕೊನೆಗೆ 371j ಹಾಗು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳು ಕೂಡಾ ಖರ್ಗೆಯವರ ಕೈ ಹಿಡಿಯಲಿಲ್ಲ.

ಖಂಡ್ರೆ

ಇನ್ನು ಬೀದರ್‌ನಲ್ಲಿ ಗೆಲ್ಲಲು ವಿಫುಲ ಅವಕಾಶಗಳಿದ್ದ ಈಶ್ವರ ಖಂಡ್ರೆಯವರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ. ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಹೊಂದಿದ ಲಿಂಗಾಯತ ಹಾಗೂ ದಲಿತರು ಬಿಜೆಪಿಗೆ ಹೆಚ್ಚು ಒಲವು ತೋರಿದ್ದಾರೆನ್ನಲಾಗಿದೆ. ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಐವರು ಮೈತ್ರಿಕೂಟದ ಶಾಸಕರಿದ್ದು ಅದರಲ್ಲಿ ಮೂವರು ಸಚಿವರಾಗಿದ್ದಾರೆ. ಆದರೂ ಖಂಡ್ರೆ ಸೋತಿದ್ದು ವಿಪರ್ಯಾಸವೇ ಸರಿ.

ರಾಯಚೂರು-ಕೊಪ್ಪಳ : ಕಳೆದ ಬಾರಿ ಕೇವಲ ಒಂದೂವರೆ ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಬಿ.ವಿ.ನಾಯಕ ತನ್ನ ಸೋಮಾರಿತನದಿಂದಲೇ ಈ ಬಾರಿ ಸೋಲತ್ತಾರೆನ್ನುವುದು  ಹೆಚ್ಚು ಕಡಿಮೆ ಖಚಿತವಾಗಿತ್ತು. ಅದೇ ರೀತಿ ಆಗಿದೆ. ಇತ್ತ ಕೊಪ್ಪಳದಲ್ಲಿ ರಾಯರೆಡ್ಡಿ ಅಥವಾ ಬಸವನಗೌಡ ಬಾದರ್ಲಿ ಯವರಿಗೆ ಟಿಕೆಟ್ ಕೊಟ್ಟಿದ್ದರ ಕಾಂಗ್ರೆಸ್ ಗೆಲ್ಲಬಹುದಾಗಿತ್ತು. ಆದರೆ ಸಿದ್ಧರಾಮಯಯ್ಯನವರ ಹಠಮಾರಿತನದಿಂದಾಗಿ ಸ್ವಜಾತಿಯ ರಾಜಶೇಖರ ಹಿಟ್ನಾಳರು ಸ್ಪರ್ಧಿಸಿ ಕೇವಲ ಕುರುಬರ ಹಾಗೂ ಮುಸ್ಲಿಮರ ಮತ ಪಡೆದು ಸೋಲಬೇಕಾಯಿತು.

ಬಳ್ಳಾರಿ:  ಗಣಿನಾಡು ಬಳ್ಳಾರಿಯಲ್ಲಿ ಕಳೆದ ಆರು ತಿಂಗಳ ಹಿಂದಷ್ಟೇ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಉಗ್ರಪ್ಪ ಗೆದ್ದಿದ್ದರು.ಆದರೆ ನಂತರದ ದಿನಗಳಲ್ಲಿ ನಡೆದಿದ್ದ ಆನಂದ್‌ಸಿಂಗ್, ಕಂಪ್ಲಿ ಗಣೇಶ್ ಹಾಗೂ ಭೀಮಾನಾಯ್ಕ್ ಮಧ್ಯೆ ನಡೆದಿದ್ದ ಮಾರಾಮಾರಿ, ಅತಿಥಿ ಉಸ್ತುವಾರಿ ಸಚಿವ ಡಿ.ಕೆ‌.ಶಿವಕುಮಾರ್‌ರವರ ಅತಿಯಾದ ಆತ್ಮವಿಶ್ವಾಸಗಳು ಈಗಾಗಲೇ ಉಗ್ರಪ್ಪನವರ ಸೋಲಿಗೆ ಮುನ್ನುಡಿ ಬರೆದಿದ್ದವು. ಹೀಗಾಗಿ ಕ್ಷೇತ್ರದಲ್ಲಿ ಐವರು ಶಾಸಕರು, ಅದರಲ್ಲಿ ಇಬ್ಬರು ಸಚಿವರಾಗಿದ್ದರೂ ಕೂಡಾ ಉಗ್ರಪ್ಪನವರು ಐವತ್ತಾರು ಸಾವಿರ ಮತಗಳ ಅಂತರದಿಂದ ಸೋಲಬೇಕಾಯಿತು. ಒಟ್ಟಿನಲ್ಲಿ ಹೇಳುವುದಾದರೆ ಕಲ್ಯಾಣದ ನಾಡಿನಲ್ಲಿ ಕೋಮುವಾದದ ಕಮಲ ಸಂಪೂರ್ಣ ಅರಳಿದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...