Homeಕರ್ನಾಟಕ"ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ": ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

“ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ”: ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

- Advertisement -
- Advertisement -

| ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕೊನೆಗೂ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿವೆ. ಹೈದರಾಬಾದ್ ಕರ್ನಾಟಕದಲ್ಲಿ 5ಕ್ಕೆ 5 ಸ್ಥಾನಗಳನ್ನೂ ಬಿಜೆಪಿ ಗೆದ್ದುಕೊಂಡು ಈ ಭಾಗದಲ್ಲಿ ಹೊಸ ದಾಖಲೆ ಮಾಡಿದೆ. ಈ ಐದರಲ್ಲಿ ಎರಡು ಕ್ಷೇತ್ರಗಳು ( ಬಳ್ಳಾರಿ, ರಾಯಚೂರು) ಪರಿಶಿಷ್ಟ ಪಂಗಡದವರಿಗೆ ಮೀಸಲಾಗಿದ್ದು, ಒಂದು ( ಕಲ್ಬುರ್ಗಿ) ಕ್ಷೇತ್ರ ಪರಿಶಿಷ್ಟ ಜಾತಿಯವರಿಗೆ ಮೀಸಲಿದೆ.

ಎರಡು ಕ್ಷೇತ್ರಗಳು ಸಾಮಾನ್ಯ ವರ್ಗಕ್ಕೆ ಸೇರಿವೆ. 2009 ಹಾಗೂ2014ರಲ್ಲಿ ಕಾಂಗ್ರೆಸ್ 2 ಮತ್ತು ಬಿಜೆಪಿ 3 ಸ್ಥಾನಗಳಲ್ಲಿ ಜಯಗಳಿಸಿದ್ದವು. ಆದರೆ ಈ ಬಾರಿ ಮಾತ್ರ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿಬಿಟ್ಟಿತು. ಮಲ್ಲಿಕಾರ್ಜುನ ಖರ್ಗೆ, ಈಶ್ವರ ಖಂಡ್ರೆ ಹಾಗೂ ವಿ.ಎಸ್.ಉಗ್ರಪ್ಪ ನಂತಹ ದಿಗ್ಗಜರು ಸೋಲಿನ ರುಚಿ ನೋಡಬೇಕಾಯಿತು.

ಖರ್ಗೆಗೆ ಮುಳುವಾದ ಪುತ್ರ ವ್ಯಾಮೋಹ:
ಪುರಾಣದಲ್ಲಿನ ಯಯಾತಿಯ ಕಥೆ ಖರ್ಗೆ ವಿಷಯದಲ್ಲಿ ತಿರುವು ಮುರುವಾಗಿದೆ. ಆ ಕತೆಯಲ್ಲಿ ತಂದೆ ಯಯಾತಿ ಮಗ ಪುರುವಿನ ಯೌವ್ವನವನ್ನು ಕಡವಾಗಿ ಪಡೆದರೆ, ಇಲ್ಲಿ ಪ್ರಿಯಾಂಕ ಖರ್ಗೆ ತಂದೆಯ ರಾಜಕೀಯ ಆಯುಷ್ಯವನ್ನೇ ಎರವಲು ಪಡೆದುಬಿಟ್ಟ. ಕಳೆದ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಮಗನನ್ನು ಮಂತ್ರಿಯನ್ನಾಗಿ ಮಾಡುವ ಹಟಕ್ಕೆ ಬಿದ್ದ ಖರ್ಗೆಯವರು ಕಮರುಲ್ ಇಸ್ಲಾಂ, ಬಾಬುರಾವ್ ಚಿಂಚನಸೂರ್ ಹಾಗು ಮಾಲಿಕಯ್ಯ ಗುತ್ತೇದಾರ್‌ರಂತಹ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿ ಅವರ ವಿರೋಧ ಕಟ್ಟಿಕೊಳ್ಳಬೇಕಾಯಿತು.

ಮಾಲಿಕಯ್ಯ, ಬಾಬುರಾವ್‌ರಂತಹ ಹಿಂದುಳಿದ ವರ್ಗಗಳ ಪ್ರಬಲ ನಾಯಕರು ಬಿಜೆಪಿ ಸೇರಿ ಖರ್ಗೆ ಸೋಲಿಸಲು ಟೊಂಕ ಕಟ್ಟಿ ನಿಂತುಬಿಟ್ಟರು. ಒಂದು ರೀತಿಯಲ್ಲಿ ಹೇಳುವುದಾದರೆ ಖರ್ಗೆಯವರನ್ನು ಸೋಲಿಸುವ ಸಂಚು ಒಂದು ವರ್ಷದ ಹಿಂದೆಯೇ ರೂಪುಗೊಂಡಿತ್ತು. ಅಸ್ಪೃಶ್ಯ ದಲಿತ ಸಮುದಾಯದ ಖರ್ಗೆ ವಿರುದ್ಧ, ಅಸ್ಪೃಶ್ಯೇತರ ದಲಿತರಾದ ಉಮೇಶ್ ಜಾಧವ್‌ರನ್ನು ಆಪರೇಷನ್ ಕಮಲದ ಮೂಲಕ ಸೆಳೆದು ಅಭ್ಯರ್ಥಿಯಾಗಿಸುವ ಮೂಲಕ ಬಿಜೆಪಿ ತನ್ನ ಜಾತಿ ರಾಜಕಾರಣದ ಅಸ್ತ್ರ ಪ್ರಯೋಗ ಮಾಡಿತು.

ಇದನ್ನು ಓದಿ: ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಳೆದೆರೆಡು ಚುನಾವಣೆಯಲ್ಲಿ ಅದೇ ಲಂಬಾಣಿ ಸಮುದಾಯದ ರೇವುನಾಯಕ್ ಬೆಳಮಗಿ ವಿರುದ್ದ ಒಮ್ಮೆ14 ಸಾವಿರ, ಮತ್ತೊಮ್ಮೆ 75 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಖರ್ಗೆಯವರು ಈ ಬಾರಿ ಜಾಧವ್ ಎದುರು 85 ಸಾವಿರ ಮತಗಳಿಂದ ಸೋಲುಣಬೇಕಾಯಿತು. ತಮ್ಮ ಮಗನಿಗಾಗಿ ನಮ್ಮ ಕೋಲಿ ಸಮಾಜಕ್ಕೆ ದೊರಕಿದ್ದ ಏಕೈಕ ಮಂತ್ರಿಸ್ಥಾನವನ್ನೂ ಕಿತ್ತುಕೊಂಡರೆಂದು ಖರ್ಗೆ ವಿರುದ್ಧ ಅಸಮಧಾನಗೊಂಡಿದ್ದ ಆ ಸಮಾಜದವರನ್ನು ಬಾಬುರಾವ್ ಚಿಂಚನಸೂರ್ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಸಂಘಟಿಸಿದ್ದೇ ಸಂಘ ಪರಿವಾರ.

ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 3 ಲಕ್ಷದಷ್ಟಿರುವ ಈ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಹುಸಿ ಭರವಸೆ ನೀಡುವ ಮೂಲಕ ಸಾರಾಸಗಟಾಗಿ ಬಿಜೆಪಿಗೆ ಮತ ಚಲಾಯಿಸುವಂತೆ ನೋಡಿಕೊಳ್ಳಲಾಯಿತು. ಕೊನೆಗೆ 371j ಹಾಗು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳು ಕೂಡಾ ಖರ್ಗೆಯವರ ಕೈ ಹಿಡಿಯಲಿಲ್ಲ.

ಖಂಡ್ರೆ

ಇನ್ನು ಬೀದರ್‌ನಲ್ಲಿ ಗೆಲ್ಲಲು ವಿಫುಲ ಅವಕಾಶಗಳಿದ್ದ ಈಶ್ವರ ಖಂಡ್ರೆಯವರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ. ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಹೊಂದಿದ ಲಿಂಗಾಯತ ಹಾಗೂ ದಲಿತರು ಬಿಜೆಪಿಗೆ ಹೆಚ್ಚು ಒಲವು ತೋರಿದ್ದಾರೆನ್ನಲಾಗಿದೆ. ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಐವರು ಮೈತ್ರಿಕೂಟದ ಶಾಸಕರಿದ್ದು ಅದರಲ್ಲಿ ಮೂವರು ಸಚಿವರಾಗಿದ್ದಾರೆ. ಆದರೂ ಖಂಡ್ರೆ ಸೋತಿದ್ದು ವಿಪರ್ಯಾಸವೇ ಸರಿ.

ರಾಯಚೂರು-ಕೊಪ್ಪಳ : ಕಳೆದ ಬಾರಿ ಕೇವಲ ಒಂದೂವರೆ ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಬಿ.ವಿ.ನಾಯಕ ತನ್ನ ಸೋಮಾರಿತನದಿಂದಲೇ ಈ ಬಾರಿ ಸೋಲತ್ತಾರೆನ್ನುವುದು  ಹೆಚ್ಚು ಕಡಿಮೆ ಖಚಿತವಾಗಿತ್ತು. ಅದೇ ರೀತಿ ಆಗಿದೆ. ಇತ್ತ ಕೊಪ್ಪಳದಲ್ಲಿ ರಾಯರೆಡ್ಡಿ ಅಥವಾ ಬಸವನಗೌಡ ಬಾದರ್ಲಿ ಯವರಿಗೆ ಟಿಕೆಟ್ ಕೊಟ್ಟಿದ್ದರ ಕಾಂಗ್ರೆಸ್ ಗೆಲ್ಲಬಹುದಾಗಿತ್ತು. ಆದರೆ ಸಿದ್ಧರಾಮಯಯ್ಯನವರ ಹಠಮಾರಿತನದಿಂದಾಗಿ ಸ್ವಜಾತಿಯ ರಾಜಶೇಖರ ಹಿಟ್ನಾಳರು ಸ್ಪರ್ಧಿಸಿ ಕೇವಲ ಕುರುಬರ ಹಾಗೂ ಮುಸ್ಲಿಮರ ಮತ ಪಡೆದು ಸೋಲಬೇಕಾಯಿತು.

ಬಳ್ಳಾರಿ:  ಗಣಿನಾಡು ಬಳ್ಳಾರಿಯಲ್ಲಿ ಕಳೆದ ಆರು ತಿಂಗಳ ಹಿಂದಷ್ಟೇ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಉಗ್ರಪ್ಪ ಗೆದ್ದಿದ್ದರು.ಆದರೆ ನಂತರದ ದಿನಗಳಲ್ಲಿ ನಡೆದಿದ್ದ ಆನಂದ್‌ಸಿಂಗ್, ಕಂಪ್ಲಿ ಗಣೇಶ್ ಹಾಗೂ ಭೀಮಾನಾಯ್ಕ್ ಮಧ್ಯೆ ನಡೆದಿದ್ದ ಮಾರಾಮಾರಿ, ಅತಿಥಿ ಉಸ್ತುವಾರಿ ಸಚಿವ ಡಿ.ಕೆ‌.ಶಿವಕುಮಾರ್‌ರವರ ಅತಿಯಾದ ಆತ್ಮವಿಶ್ವಾಸಗಳು ಈಗಾಗಲೇ ಉಗ್ರಪ್ಪನವರ ಸೋಲಿಗೆ ಮುನ್ನುಡಿ ಬರೆದಿದ್ದವು. ಹೀಗಾಗಿ ಕ್ಷೇತ್ರದಲ್ಲಿ ಐವರು ಶಾಸಕರು, ಅದರಲ್ಲಿ ಇಬ್ಬರು ಸಚಿವರಾಗಿದ್ದರೂ ಕೂಡಾ ಉಗ್ರಪ್ಪನವರು ಐವತ್ತಾರು ಸಾವಿರ ಮತಗಳ ಅಂತರದಿಂದ ಸೋಲಬೇಕಾಯಿತು. ಒಟ್ಟಿನಲ್ಲಿ ಹೇಳುವುದಾದರೆ ಕಲ್ಯಾಣದ ನಾಡಿನಲ್ಲಿ ಕೋಮುವಾದದ ಕಮಲ ಸಂಪೂರ್ಣ ಅರಳಿದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...