Homeಕರ್ನಾಟಕ"ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ": ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

“ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ”: ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

- Advertisement -
- Advertisement -

| ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕೊನೆಗೂ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿವೆ. ಹೈದರಾಬಾದ್ ಕರ್ನಾಟಕದಲ್ಲಿ 5ಕ್ಕೆ 5 ಸ್ಥಾನಗಳನ್ನೂ ಬಿಜೆಪಿ ಗೆದ್ದುಕೊಂಡು ಈ ಭಾಗದಲ್ಲಿ ಹೊಸ ದಾಖಲೆ ಮಾಡಿದೆ. ಈ ಐದರಲ್ಲಿ ಎರಡು ಕ್ಷೇತ್ರಗಳು ( ಬಳ್ಳಾರಿ, ರಾಯಚೂರು) ಪರಿಶಿಷ್ಟ ಪಂಗಡದವರಿಗೆ ಮೀಸಲಾಗಿದ್ದು, ಒಂದು ( ಕಲ್ಬುರ್ಗಿ) ಕ್ಷೇತ್ರ ಪರಿಶಿಷ್ಟ ಜಾತಿಯವರಿಗೆ ಮೀಸಲಿದೆ.

ಎರಡು ಕ್ಷೇತ್ರಗಳು ಸಾಮಾನ್ಯ ವರ್ಗಕ್ಕೆ ಸೇರಿವೆ. 2009 ಹಾಗೂ2014ರಲ್ಲಿ ಕಾಂಗ್ರೆಸ್ 2 ಮತ್ತು ಬಿಜೆಪಿ 3 ಸ್ಥಾನಗಳಲ್ಲಿ ಜಯಗಳಿಸಿದ್ದವು. ಆದರೆ ಈ ಬಾರಿ ಮಾತ್ರ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿಬಿಟ್ಟಿತು. ಮಲ್ಲಿಕಾರ್ಜುನ ಖರ್ಗೆ, ಈಶ್ವರ ಖಂಡ್ರೆ ಹಾಗೂ ವಿ.ಎಸ್.ಉಗ್ರಪ್ಪ ನಂತಹ ದಿಗ್ಗಜರು ಸೋಲಿನ ರುಚಿ ನೋಡಬೇಕಾಯಿತು.

ಖರ್ಗೆಗೆ ಮುಳುವಾದ ಪುತ್ರ ವ್ಯಾಮೋಹ:
ಪುರಾಣದಲ್ಲಿನ ಯಯಾತಿಯ ಕಥೆ ಖರ್ಗೆ ವಿಷಯದಲ್ಲಿ ತಿರುವು ಮುರುವಾಗಿದೆ. ಆ ಕತೆಯಲ್ಲಿ ತಂದೆ ಯಯಾತಿ ಮಗ ಪುರುವಿನ ಯೌವ್ವನವನ್ನು ಕಡವಾಗಿ ಪಡೆದರೆ, ಇಲ್ಲಿ ಪ್ರಿಯಾಂಕ ಖರ್ಗೆ ತಂದೆಯ ರಾಜಕೀಯ ಆಯುಷ್ಯವನ್ನೇ ಎರವಲು ಪಡೆದುಬಿಟ್ಟ. ಕಳೆದ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಮಗನನ್ನು ಮಂತ್ರಿಯನ್ನಾಗಿ ಮಾಡುವ ಹಟಕ್ಕೆ ಬಿದ್ದ ಖರ್ಗೆಯವರು ಕಮರುಲ್ ಇಸ್ಲಾಂ, ಬಾಬುರಾವ್ ಚಿಂಚನಸೂರ್ ಹಾಗು ಮಾಲಿಕಯ್ಯ ಗುತ್ತೇದಾರ್‌ರಂತಹ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿ ಅವರ ವಿರೋಧ ಕಟ್ಟಿಕೊಳ್ಳಬೇಕಾಯಿತು.

ಮಾಲಿಕಯ್ಯ, ಬಾಬುರಾವ್‌ರಂತಹ ಹಿಂದುಳಿದ ವರ್ಗಗಳ ಪ್ರಬಲ ನಾಯಕರು ಬಿಜೆಪಿ ಸೇರಿ ಖರ್ಗೆ ಸೋಲಿಸಲು ಟೊಂಕ ಕಟ್ಟಿ ನಿಂತುಬಿಟ್ಟರು. ಒಂದು ರೀತಿಯಲ್ಲಿ ಹೇಳುವುದಾದರೆ ಖರ್ಗೆಯವರನ್ನು ಸೋಲಿಸುವ ಸಂಚು ಒಂದು ವರ್ಷದ ಹಿಂದೆಯೇ ರೂಪುಗೊಂಡಿತ್ತು. ಅಸ್ಪೃಶ್ಯ ದಲಿತ ಸಮುದಾಯದ ಖರ್ಗೆ ವಿರುದ್ಧ, ಅಸ್ಪೃಶ್ಯೇತರ ದಲಿತರಾದ ಉಮೇಶ್ ಜಾಧವ್‌ರನ್ನು ಆಪರೇಷನ್ ಕಮಲದ ಮೂಲಕ ಸೆಳೆದು ಅಭ್ಯರ್ಥಿಯಾಗಿಸುವ ಮೂಲಕ ಬಿಜೆಪಿ ತನ್ನ ಜಾತಿ ರಾಜಕಾರಣದ ಅಸ್ತ್ರ ಪ್ರಯೋಗ ಮಾಡಿತು.

ಇದನ್ನು ಓದಿ: ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಳೆದೆರೆಡು ಚುನಾವಣೆಯಲ್ಲಿ ಅದೇ ಲಂಬಾಣಿ ಸಮುದಾಯದ ರೇವುನಾಯಕ್ ಬೆಳಮಗಿ ವಿರುದ್ದ ಒಮ್ಮೆ14 ಸಾವಿರ, ಮತ್ತೊಮ್ಮೆ 75 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಖರ್ಗೆಯವರು ಈ ಬಾರಿ ಜಾಧವ್ ಎದುರು 85 ಸಾವಿರ ಮತಗಳಿಂದ ಸೋಲುಣಬೇಕಾಯಿತು. ತಮ್ಮ ಮಗನಿಗಾಗಿ ನಮ್ಮ ಕೋಲಿ ಸಮಾಜಕ್ಕೆ ದೊರಕಿದ್ದ ಏಕೈಕ ಮಂತ್ರಿಸ್ಥಾನವನ್ನೂ ಕಿತ್ತುಕೊಂಡರೆಂದು ಖರ್ಗೆ ವಿರುದ್ಧ ಅಸಮಧಾನಗೊಂಡಿದ್ದ ಆ ಸಮಾಜದವರನ್ನು ಬಾಬುರಾವ್ ಚಿಂಚನಸೂರ್ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಸಂಘಟಿಸಿದ್ದೇ ಸಂಘ ಪರಿವಾರ.

ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 3 ಲಕ್ಷದಷ್ಟಿರುವ ಈ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಹುಸಿ ಭರವಸೆ ನೀಡುವ ಮೂಲಕ ಸಾರಾಸಗಟಾಗಿ ಬಿಜೆಪಿಗೆ ಮತ ಚಲಾಯಿಸುವಂತೆ ನೋಡಿಕೊಳ್ಳಲಾಯಿತು. ಕೊನೆಗೆ 371j ಹಾಗು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳು ಕೂಡಾ ಖರ್ಗೆಯವರ ಕೈ ಹಿಡಿಯಲಿಲ್ಲ.

ಖಂಡ್ರೆ

ಇನ್ನು ಬೀದರ್‌ನಲ್ಲಿ ಗೆಲ್ಲಲು ವಿಫುಲ ಅವಕಾಶಗಳಿದ್ದ ಈಶ್ವರ ಖಂಡ್ರೆಯವರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ. ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಹೊಂದಿದ ಲಿಂಗಾಯತ ಹಾಗೂ ದಲಿತರು ಬಿಜೆಪಿಗೆ ಹೆಚ್ಚು ಒಲವು ತೋರಿದ್ದಾರೆನ್ನಲಾಗಿದೆ. ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಐವರು ಮೈತ್ರಿಕೂಟದ ಶಾಸಕರಿದ್ದು ಅದರಲ್ಲಿ ಮೂವರು ಸಚಿವರಾಗಿದ್ದಾರೆ. ಆದರೂ ಖಂಡ್ರೆ ಸೋತಿದ್ದು ವಿಪರ್ಯಾಸವೇ ಸರಿ.

ರಾಯಚೂರು-ಕೊಪ್ಪಳ : ಕಳೆದ ಬಾರಿ ಕೇವಲ ಒಂದೂವರೆ ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಬಿ.ವಿ.ನಾಯಕ ತನ್ನ ಸೋಮಾರಿತನದಿಂದಲೇ ಈ ಬಾರಿ ಸೋಲತ್ತಾರೆನ್ನುವುದು  ಹೆಚ್ಚು ಕಡಿಮೆ ಖಚಿತವಾಗಿತ್ತು. ಅದೇ ರೀತಿ ಆಗಿದೆ. ಇತ್ತ ಕೊಪ್ಪಳದಲ್ಲಿ ರಾಯರೆಡ್ಡಿ ಅಥವಾ ಬಸವನಗೌಡ ಬಾದರ್ಲಿ ಯವರಿಗೆ ಟಿಕೆಟ್ ಕೊಟ್ಟಿದ್ದರ ಕಾಂಗ್ರೆಸ್ ಗೆಲ್ಲಬಹುದಾಗಿತ್ತು. ಆದರೆ ಸಿದ್ಧರಾಮಯಯ್ಯನವರ ಹಠಮಾರಿತನದಿಂದಾಗಿ ಸ್ವಜಾತಿಯ ರಾಜಶೇಖರ ಹಿಟ್ನಾಳರು ಸ್ಪರ್ಧಿಸಿ ಕೇವಲ ಕುರುಬರ ಹಾಗೂ ಮುಸ್ಲಿಮರ ಮತ ಪಡೆದು ಸೋಲಬೇಕಾಯಿತು.

ಬಳ್ಳಾರಿ:  ಗಣಿನಾಡು ಬಳ್ಳಾರಿಯಲ್ಲಿ ಕಳೆದ ಆರು ತಿಂಗಳ ಹಿಂದಷ್ಟೇ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಉಗ್ರಪ್ಪ ಗೆದ್ದಿದ್ದರು.ಆದರೆ ನಂತರದ ದಿನಗಳಲ್ಲಿ ನಡೆದಿದ್ದ ಆನಂದ್‌ಸಿಂಗ್, ಕಂಪ್ಲಿ ಗಣೇಶ್ ಹಾಗೂ ಭೀಮಾನಾಯ್ಕ್ ಮಧ್ಯೆ ನಡೆದಿದ್ದ ಮಾರಾಮಾರಿ, ಅತಿಥಿ ಉಸ್ತುವಾರಿ ಸಚಿವ ಡಿ.ಕೆ‌.ಶಿವಕುಮಾರ್‌ರವರ ಅತಿಯಾದ ಆತ್ಮವಿಶ್ವಾಸಗಳು ಈಗಾಗಲೇ ಉಗ್ರಪ್ಪನವರ ಸೋಲಿಗೆ ಮುನ್ನುಡಿ ಬರೆದಿದ್ದವು. ಹೀಗಾಗಿ ಕ್ಷೇತ್ರದಲ್ಲಿ ಐವರು ಶಾಸಕರು, ಅದರಲ್ಲಿ ಇಬ್ಬರು ಸಚಿವರಾಗಿದ್ದರೂ ಕೂಡಾ ಉಗ್ರಪ್ಪನವರು ಐವತ್ತಾರು ಸಾವಿರ ಮತಗಳ ಅಂತರದಿಂದ ಸೋಲಬೇಕಾಯಿತು. ಒಟ್ಟಿನಲ್ಲಿ ಹೇಳುವುದಾದರೆ ಕಲ್ಯಾಣದ ನಾಡಿನಲ್ಲಿ ಕೋಮುವಾದದ ಕಮಲ ಸಂಪೂರ್ಣ ಅರಳಿದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...