Homeಕರ್ನಾಟಕ"ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ": ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

“ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ”: ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

- Advertisement -
- Advertisement -

| ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕೊನೆಗೂ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿವೆ. ಹೈದರಾಬಾದ್ ಕರ್ನಾಟಕದಲ್ಲಿ 5ಕ್ಕೆ 5 ಸ್ಥಾನಗಳನ್ನೂ ಬಿಜೆಪಿ ಗೆದ್ದುಕೊಂಡು ಈ ಭಾಗದಲ್ಲಿ ಹೊಸ ದಾಖಲೆ ಮಾಡಿದೆ. ಈ ಐದರಲ್ಲಿ ಎರಡು ಕ್ಷೇತ್ರಗಳು ( ಬಳ್ಳಾರಿ, ರಾಯಚೂರು) ಪರಿಶಿಷ್ಟ ಪಂಗಡದವರಿಗೆ ಮೀಸಲಾಗಿದ್ದು, ಒಂದು ( ಕಲ್ಬುರ್ಗಿ) ಕ್ಷೇತ್ರ ಪರಿಶಿಷ್ಟ ಜಾತಿಯವರಿಗೆ ಮೀಸಲಿದೆ.

ಎರಡು ಕ್ಷೇತ್ರಗಳು ಸಾಮಾನ್ಯ ವರ್ಗಕ್ಕೆ ಸೇರಿವೆ. 2009 ಹಾಗೂ2014ರಲ್ಲಿ ಕಾಂಗ್ರೆಸ್ 2 ಮತ್ತು ಬಿಜೆಪಿ 3 ಸ್ಥಾನಗಳಲ್ಲಿ ಜಯಗಳಿಸಿದ್ದವು. ಆದರೆ ಈ ಬಾರಿ ಮಾತ್ರ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿಬಿಟ್ಟಿತು. ಮಲ್ಲಿಕಾರ್ಜುನ ಖರ್ಗೆ, ಈಶ್ವರ ಖಂಡ್ರೆ ಹಾಗೂ ವಿ.ಎಸ್.ಉಗ್ರಪ್ಪ ನಂತಹ ದಿಗ್ಗಜರು ಸೋಲಿನ ರುಚಿ ನೋಡಬೇಕಾಯಿತು.

ಖರ್ಗೆಗೆ ಮುಳುವಾದ ಪುತ್ರ ವ್ಯಾಮೋಹ:
ಪುರಾಣದಲ್ಲಿನ ಯಯಾತಿಯ ಕಥೆ ಖರ್ಗೆ ವಿಷಯದಲ್ಲಿ ತಿರುವು ಮುರುವಾಗಿದೆ. ಆ ಕತೆಯಲ್ಲಿ ತಂದೆ ಯಯಾತಿ ಮಗ ಪುರುವಿನ ಯೌವ್ವನವನ್ನು ಕಡವಾಗಿ ಪಡೆದರೆ, ಇಲ್ಲಿ ಪ್ರಿಯಾಂಕ ಖರ್ಗೆ ತಂದೆಯ ರಾಜಕೀಯ ಆಯುಷ್ಯವನ್ನೇ ಎರವಲು ಪಡೆದುಬಿಟ್ಟ. ಕಳೆದ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಮಗನನ್ನು ಮಂತ್ರಿಯನ್ನಾಗಿ ಮಾಡುವ ಹಟಕ್ಕೆ ಬಿದ್ದ ಖರ್ಗೆಯವರು ಕಮರುಲ್ ಇಸ್ಲಾಂ, ಬಾಬುರಾವ್ ಚಿಂಚನಸೂರ್ ಹಾಗು ಮಾಲಿಕಯ್ಯ ಗುತ್ತೇದಾರ್‌ರಂತಹ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿ ಅವರ ವಿರೋಧ ಕಟ್ಟಿಕೊಳ್ಳಬೇಕಾಯಿತು.

ಮಾಲಿಕಯ್ಯ, ಬಾಬುರಾವ್‌ರಂತಹ ಹಿಂದುಳಿದ ವರ್ಗಗಳ ಪ್ರಬಲ ನಾಯಕರು ಬಿಜೆಪಿ ಸೇರಿ ಖರ್ಗೆ ಸೋಲಿಸಲು ಟೊಂಕ ಕಟ್ಟಿ ನಿಂತುಬಿಟ್ಟರು. ಒಂದು ರೀತಿಯಲ್ಲಿ ಹೇಳುವುದಾದರೆ ಖರ್ಗೆಯವರನ್ನು ಸೋಲಿಸುವ ಸಂಚು ಒಂದು ವರ್ಷದ ಹಿಂದೆಯೇ ರೂಪುಗೊಂಡಿತ್ತು. ಅಸ್ಪೃಶ್ಯ ದಲಿತ ಸಮುದಾಯದ ಖರ್ಗೆ ವಿರುದ್ಧ, ಅಸ್ಪೃಶ್ಯೇತರ ದಲಿತರಾದ ಉಮೇಶ್ ಜಾಧವ್‌ರನ್ನು ಆಪರೇಷನ್ ಕಮಲದ ಮೂಲಕ ಸೆಳೆದು ಅಭ್ಯರ್ಥಿಯಾಗಿಸುವ ಮೂಲಕ ಬಿಜೆಪಿ ತನ್ನ ಜಾತಿ ರಾಜಕಾರಣದ ಅಸ್ತ್ರ ಪ್ರಯೋಗ ಮಾಡಿತು.

ಇದನ್ನು ಓದಿ: ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಳೆದೆರೆಡು ಚುನಾವಣೆಯಲ್ಲಿ ಅದೇ ಲಂಬಾಣಿ ಸಮುದಾಯದ ರೇವುನಾಯಕ್ ಬೆಳಮಗಿ ವಿರುದ್ದ ಒಮ್ಮೆ14 ಸಾವಿರ, ಮತ್ತೊಮ್ಮೆ 75 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಖರ್ಗೆಯವರು ಈ ಬಾರಿ ಜಾಧವ್ ಎದುರು 85 ಸಾವಿರ ಮತಗಳಿಂದ ಸೋಲುಣಬೇಕಾಯಿತು. ತಮ್ಮ ಮಗನಿಗಾಗಿ ನಮ್ಮ ಕೋಲಿ ಸಮಾಜಕ್ಕೆ ದೊರಕಿದ್ದ ಏಕೈಕ ಮಂತ್ರಿಸ್ಥಾನವನ್ನೂ ಕಿತ್ತುಕೊಂಡರೆಂದು ಖರ್ಗೆ ವಿರುದ್ಧ ಅಸಮಧಾನಗೊಂಡಿದ್ದ ಆ ಸಮಾಜದವರನ್ನು ಬಾಬುರಾವ್ ಚಿಂಚನಸೂರ್ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಸಂಘಟಿಸಿದ್ದೇ ಸಂಘ ಪರಿವಾರ.

ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 3 ಲಕ್ಷದಷ್ಟಿರುವ ಈ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಹುಸಿ ಭರವಸೆ ನೀಡುವ ಮೂಲಕ ಸಾರಾಸಗಟಾಗಿ ಬಿಜೆಪಿಗೆ ಮತ ಚಲಾಯಿಸುವಂತೆ ನೋಡಿಕೊಳ್ಳಲಾಯಿತು. ಕೊನೆಗೆ 371j ಹಾಗು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳು ಕೂಡಾ ಖರ್ಗೆಯವರ ಕೈ ಹಿಡಿಯಲಿಲ್ಲ.

ಖಂಡ್ರೆ

ಇನ್ನು ಬೀದರ್‌ನಲ್ಲಿ ಗೆಲ್ಲಲು ವಿಫುಲ ಅವಕಾಶಗಳಿದ್ದ ಈಶ್ವರ ಖಂಡ್ರೆಯವರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ. ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಹೊಂದಿದ ಲಿಂಗಾಯತ ಹಾಗೂ ದಲಿತರು ಬಿಜೆಪಿಗೆ ಹೆಚ್ಚು ಒಲವು ತೋರಿದ್ದಾರೆನ್ನಲಾಗಿದೆ. ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಐವರು ಮೈತ್ರಿಕೂಟದ ಶಾಸಕರಿದ್ದು ಅದರಲ್ಲಿ ಮೂವರು ಸಚಿವರಾಗಿದ್ದಾರೆ. ಆದರೂ ಖಂಡ್ರೆ ಸೋತಿದ್ದು ವಿಪರ್ಯಾಸವೇ ಸರಿ.

ರಾಯಚೂರು-ಕೊಪ್ಪಳ : ಕಳೆದ ಬಾರಿ ಕೇವಲ ಒಂದೂವರೆ ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಬಿ.ವಿ.ನಾಯಕ ತನ್ನ ಸೋಮಾರಿತನದಿಂದಲೇ ಈ ಬಾರಿ ಸೋಲತ್ತಾರೆನ್ನುವುದು  ಹೆಚ್ಚು ಕಡಿಮೆ ಖಚಿತವಾಗಿತ್ತು. ಅದೇ ರೀತಿ ಆಗಿದೆ. ಇತ್ತ ಕೊಪ್ಪಳದಲ್ಲಿ ರಾಯರೆಡ್ಡಿ ಅಥವಾ ಬಸವನಗೌಡ ಬಾದರ್ಲಿ ಯವರಿಗೆ ಟಿಕೆಟ್ ಕೊಟ್ಟಿದ್ದರ ಕಾಂಗ್ರೆಸ್ ಗೆಲ್ಲಬಹುದಾಗಿತ್ತು. ಆದರೆ ಸಿದ್ಧರಾಮಯಯ್ಯನವರ ಹಠಮಾರಿತನದಿಂದಾಗಿ ಸ್ವಜಾತಿಯ ರಾಜಶೇಖರ ಹಿಟ್ನಾಳರು ಸ್ಪರ್ಧಿಸಿ ಕೇವಲ ಕುರುಬರ ಹಾಗೂ ಮುಸ್ಲಿಮರ ಮತ ಪಡೆದು ಸೋಲಬೇಕಾಯಿತು.

ಬಳ್ಳಾರಿ:  ಗಣಿನಾಡು ಬಳ್ಳಾರಿಯಲ್ಲಿ ಕಳೆದ ಆರು ತಿಂಗಳ ಹಿಂದಷ್ಟೇ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಉಗ್ರಪ್ಪ ಗೆದ್ದಿದ್ದರು.ಆದರೆ ನಂತರದ ದಿನಗಳಲ್ಲಿ ನಡೆದಿದ್ದ ಆನಂದ್‌ಸಿಂಗ್, ಕಂಪ್ಲಿ ಗಣೇಶ್ ಹಾಗೂ ಭೀಮಾನಾಯ್ಕ್ ಮಧ್ಯೆ ನಡೆದಿದ್ದ ಮಾರಾಮಾರಿ, ಅತಿಥಿ ಉಸ್ತುವಾರಿ ಸಚಿವ ಡಿ.ಕೆ‌.ಶಿವಕುಮಾರ್‌ರವರ ಅತಿಯಾದ ಆತ್ಮವಿಶ್ವಾಸಗಳು ಈಗಾಗಲೇ ಉಗ್ರಪ್ಪನವರ ಸೋಲಿಗೆ ಮುನ್ನುಡಿ ಬರೆದಿದ್ದವು. ಹೀಗಾಗಿ ಕ್ಷೇತ್ರದಲ್ಲಿ ಐವರು ಶಾಸಕರು, ಅದರಲ್ಲಿ ಇಬ್ಬರು ಸಚಿವರಾಗಿದ್ದರೂ ಕೂಡಾ ಉಗ್ರಪ್ಪನವರು ಐವತ್ತಾರು ಸಾವಿರ ಮತಗಳ ಅಂತರದಿಂದ ಸೋಲಬೇಕಾಯಿತು. ಒಟ್ಟಿನಲ್ಲಿ ಹೇಳುವುದಾದರೆ ಕಲ್ಯಾಣದ ನಾಡಿನಲ್ಲಿ ಕೋಮುವಾದದ ಕಮಲ ಸಂಪೂರ್ಣ ಅರಳಿದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...