Homeಕರ್ನಾಟಕ"ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ": ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

“ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ”: ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

- Advertisement -
- Advertisement -

| ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕೊನೆಗೂ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿವೆ. ಹೈದರಾಬಾದ್ ಕರ್ನಾಟಕದಲ್ಲಿ 5ಕ್ಕೆ 5 ಸ್ಥಾನಗಳನ್ನೂ ಬಿಜೆಪಿ ಗೆದ್ದುಕೊಂಡು ಈ ಭಾಗದಲ್ಲಿ ಹೊಸ ದಾಖಲೆ ಮಾಡಿದೆ. ಈ ಐದರಲ್ಲಿ ಎರಡು ಕ್ಷೇತ್ರಗಳು ( ಬಳ್ಳಾರಿ, ರಾಯಚೂರು) ಪರಿಶಿಷ್ಟ ಪಂಗಡದವರಿಗೆ ಮೀಸಲಾಗಿದ್ದು, ಒಂದು ( ಕಲ್ಬುರ್ಗಿ) ಕ್ಷೇತ್ರ ಪರಿಶಿಷ್ಟ ಜಾತಿಯವರಿಗೆ ಮೀಸಲಿದೆ.

ಎರಡು ಕ್ಷೇತ್ರಗಳು ಸಾಮಾನ್ಯ ವರ್ಗಕ್ಕೆ ಸೇರಿವೆ. 2009 ಹಾಗೂ2014ರಲ್ಲಿ ಕಾಂಗ್ರೆಸ್ 2 ಮತ್ತು ಬಿಜೆಪಿ 3 ಸ್ಥಾನಗಳಲ್ಲಿ ಜಯಗಳಿಸಿದ್ದವು. ಆದರೆ ಈ ಬಾರಿ ಮಾತ್ರ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿಬಿಟ್ಟಿತು. ಮಲ್ಲಿಕಾರ್ಜುನ ಖರ್ಗೆ, ಈಶ್ವರ ಖಂಡ್ರೆ ಹಾಗೂ ವಿ.ಎಸ್.ಉಗ್ರಪ್ಪ ನಂತಹ ದಿಗ್ಗಜರು ಸೋಲಿನ ರುಚಿ ನೋಡಬೇಕಾಯಿತು.

ಖರ್ಗೆಗೆ ಮುಳುವಾದ ಪುತ್ರ ವ್ಯಾಮೋಹ:
ಪುರಾಣದಲ್ಲಿನ ಯಯಾತಿಯ ಕಥೆ ಖರ್ಗೆ ವಿಷಯದಲ್ಲಿ ತಿರುವು ಮುರುವಾಗಿದೆ. ಆ ಕತೆಯಲ್ಲಿ ತಂದೆ ಯಯಾತಿ ಮಗ ಪುರುವಿನ ಯೌವ್ವನವನ್ನು ಕಡವಾಗಿ ಪಡೆದರೆ, ಇಲ್ಲಿ ಪ್ರಿಯಾಂಕ ಖರ್ಗೆ ತಂದೆಯ ರಾಜಕೀಯ ಆಯುಷ್ಯವನ್ನೇ ಎರವಲು ಪಡೆದುಬಿಟ್ಟ. ಕಳೆದ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಮಗನನ್ನು ಮಂತ್ರಿಯನ್ನಾಗಿ ಮಾಡುವ ಹಟಕ್ಕೆ ಬಿದ್ದ ಖರ್ಗೆಯವರು ಕಮರುಲ್ ಇಸ್ಲಾಂ, ಬಾಬುರಾವ್ ಚಿಂಚನಸೂರ್ ಹಾಗು ಮಾಲಿಕಯ್ಯ ಗುತ್ತೇದಾರ್‌ರಂತಹ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿ ಅವರ ವಿರೋಧ ಕಟ್ಟಿಕೊಳ್ಳಬೇಕಾಯಿತು.

ಮಾಲಿಕಯ್ಯ, ಬಾಬುರಾವ್‌ರಂತಹ ಹಿಂದುಳಿದ ವರ್ಗಗಳ ಪ್ರಬಲ ನಾಯಕರು ಬಿಜೆಪಿ ಸೇರಿ ಖರ್ಗೆ ಸೋಲಿಸಲು ಟೊಂಕ ಕಟ್ಟಿ ನಿಂತುಬಿಟ್ಟರು. ಒಂದು ರೀತಿಯಲ್ಲಿ ಹೇಳುವುದಾದರೆ ಖರ್ಗೆಯವರನ್ನು ಸೋಲಿಸುವ ಸಂಚು ಒಂದು ವರ್ಷದ ಹಿಂದೆಯೇ ರೂಪುಗೊಂಡಿತ್ತು. ಅಸ್ಪೃಶ್ಯ ದಲಿತ ಸಮುದಾಯದ ಖರ್ಗೆ ವಿರುದ್ಧ, ಅಸ್ಪೃಶ್ಯೇತರ ದಲಿತರಾದ ಉಮೇಶ್ ಜಾಧವ್‌ರನ್ನು ಆಪರೇಷನ್ ಕಮಲದ ಮೂಲಕ ಸೆಳೆದು ಅಭ್ಯರ್ಥಿಯಾಗಿಸುವ ಮೂಲಕ ಬಿಜೆಪಿ ತನ್ನ ಜಾತಿ ರಾಜಕಾರಣದ ಅಸ್ತ್ರ ಪ್ರಯೋಗ ಮಾಡಿತು.

ಇದನ್ನು ಓದಿ: ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಳೆದೆರೆಡು ಚುನಾವಣೆಯಲ್ಲಿ ಅದೇ ಲಂಬಾಣಿ ಸಮುದಾಯದ ರೇವುನಾಯಕ್ ಬೆಳಮಗಿ ವಿರುದ್ದ ಒಮ್ಮೆ14 ಸಾವಿರ, ಮತ್ತೊಮ್ಮೆ 75 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಖರ್ಗೆಯವರು ಈ ಬಾರಿ ಜಾಧವ್ ಎದುರು 85 ಸಾವಿರ ಮತಗಳಿಂದ ಸೋಲುಣಬೇಕಾಯಿತು. ತಮ್ಮ ಮಗನಿಗಾಗಿ ನಮ್ಮ ಕೋಲಿ ಸಮಾಜಕ್ಕೆ ದೊರಕಿದ್ದ ಏಕೈಕ ಮಂತ್ರಿಸ್ಥಾನವನ್ನೂ ಕಿತ್ತುಕೊಂಡರೆಂದು ಖರ್ಗೆ ವಿರುದ್ಧ ಅಸಮಧಾನಗೊಂಡಿದ್ದ ಆ ಸಮಾಜದವರನ್ನು ಬಾಬುರಾವ್ ಚಿಂಚನಸೂರ್ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಸಂಘಟಿಸಿದ್ದೇ ಸಂಘ ಪರಿವಾರ.

ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 3 ಲಕ್ಷದಷ್ಟಿರುವ ಈ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಹುಸಿ ಭರವಸೆ ನೀಡುವ ಮೂಲಕ ಸಾರಾಸಗಟಾಗಿ ಬಿಜೆಪಿಗೆ ಮತ ಚಲಾಯಿಸುವಂತೆ ನೋಡಿಕೊಳ್ಳಲಾಯಿತು. ಕೊನೆಗೆ 371j ಹಾಗು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳು ಕೂಡಾ ಖರ್ಗೆಯವರ ಕೈ ಹಿಡಿಯಲಿಲ್ಲ.

ಖಂಡ್ರೆ

ಇನ್ನು ಬೀದರ್‌ನಲ್ಲಿ ಗೆಲ್ಲಲು ವಿಫುಲ ಅವಕಾಶಗಳಿದ್ದ ಈಶ್ವರ ಖಂಡ್ರೆಯವರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ. ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಹೊಂದಿದ ಲಿಂಗಾಯತ ಹಾಗೂ ದಲಿತರು ಬಿಜೆಪಿಗೆ ಹೆಚ್ಚು ಒಲವು ತೋರಿದ್ದಾರೆನ್ನಲಾಗಿದೆ. ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಐವರು ಮೈತ್ರಿಕೂಟದ ಶಾಸಕರಿದ್ದು ಅದರಲ್ಲಿ ಮೂವರು ಸಚಿವರಾಗಿದ್ದಾರೆ. ಆದರೂ ಖಂಡ್ರೆ ಸೋತಿದ್ದು ವಿಪರ್ಯಾಸವೇ ಸರಿ.

ರಾಯಚೂರು-ಕೊಪ್ಪಳ : ಕಳೆದ ಬಾರಿ ಕೇವಲ ಒಂದೂವರೆ ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಬಿ.ವಿ.ನಾಯಕ ತನ್ನ ಸೋಮಾರಿತನದಿಂದಲೇ ಈ ಬಾರಿ ಸೋಲತ್ತಾರೆನ್ನುವುದು  ಹೆಚ್ಚು ಕಡಿಮೆ ಖಚಿತವಾಗಿತ್ತು. ಅದೇ ರೀತಿ ಆಗಿದೆ. ಇತ್ತ ಕೊಪ್ಪಳದಲ್ಲಿ ರಾಯರೆಡ್ಡಿ ಅಥವಾ ಬಸವನಗೌಡ ಬಾದರ್ಲಿ ಯವರಿಗೆ ಟಿಕೆಟ್ ಕೊಟ್ಟಿದ್ದರ ಕಾಂಗ್ರೆಸ್ ಗೆಲ್ಲಬಹುದಾಗಿತ್ತು. ಆದರೆ ಸಿದ್ಧರಾಮಯಯ್ಯನವರ ಹಠಮಾರಿತನದಿಂದಾಗಿ ಸ್ವಜಾತಿಯ ರಾಜಶೇಖರ ಹಿಟ್ನಾಳರು ಸ್ಪರ್ಧಿಸಿ ಕೇವಲ ಕುರುಬರ ಹಾಗೂ ಮುಸ್ಲಿಮರ ಮತ ಪಡೆದು ಸೋಲಬೇಕಾಯಿತು.

ಬಳ್ಳಾರಿ:  ಗಣಿನಾಡು ಬಳ್ಳಾರಿಯಲ್ಲಿ ಕಳೆದ ಆರು ತಿಂಗಳ ಹಿಂದಷ್ಟೇ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಉಗ್ರಪ್ಪ ಗೆದ್ದಿದ್ದರು.ಆದರೆ ನಂತರದ ದಿನಗಳಲ್ಲಿ ನಡೆದಿದ್ದ ಆನಂದ್‌ಸಿಂಗ್, ಕಂಪ್ಲಿ ಗಣೇಶ್ ಹಾಗೂ ಭೀಮಾನಾಯ್ಕ್ ಮಧ್ಯೆ ನಡೆದಿದ್ದ ಮಾರಾಮಾರಿ, ಅತಿಥಿ ಉಸ್ತುವಾರಿ ಸಚಿವ ಡಿ.ಕೆ‌.ಶಿವಕುಮಾರ್‌ರವರ ಅತಿಯಾದ ಆತ್ಮವಿಶ್ವಾಸಗಳು ಈಗಾಗಲೇ ಉಗ್ರಪ್ಪನವರ ಸೋಲಿಗೆ ಮುನ್ನುಡಿ ಬರೆದಿದ್ದವು. ಹೀಗಾಗಿ ಕ್ಷೇತ್ರದಲ್ಲಿ ಐವರು ಶಾಸಕರು, ಅದರಲ್ಲಿ ಇಬ್ಬರು ಸಚಿವರಾಗಿದ್ದರೂ ಕೂಡಾ ಉಗ್ರಪ್ಪನವರು ಐವತ್ತಾರು ಸಾವಿರ ಮತಗಳ ಅಂತರದಿಂದ ಸೋಲಬೇಕಾಯಿತು. ಒಟ್ಟಿನಲ್ಲಿ ಹೇಳುವುದಾದರೆ ಕಲ್ಯಾಣದ ನಾಡಿನಲ್ಲಿ ಕೋಮುವಾದದ ಕಮಲ ಸಂಪೂರ್ಣ ಅರಳಿದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....