Homeಕರ್ನಾಟಕ"ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ": ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

“ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ”: ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

- Advertisement -
- Advertisement -

| ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕೊನೆಗೂ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿವೆ. ಹೈದರಾಬಾದ್ ಕರ್ನಾಟಕದಲ್ಲಿ 5ಕ್ಕೆ 5 ಸ್ಥಾನಗಳನ್ನೂ ಬಿಜೆಪಿ ಗೆದ್ದುಕೊಂಡು ಈ ಭಾಗದಲ್ಲಿ ಹೊಸ ದಾಖಲೆ ಮಾಡಿದೆ. ಈ ಐದರಲ್ಲಿ ಎರಡು ಕ್ಷೇತ್ರಗಳು ( ಬಳ್ಳಾರಿ, ರಾಯಚೂರು) ಪರಿಶಿಷ್ಟ ಪಂಗಡದವರಿಗೆ ಮೀಸಲಾಗಿದ್ದು, ಒಂದು ( ಕಲ್ಬುರ್ಗಿ) ಕ್ಷೇತ್ರ ಪರಿಶಿಷ್ಟ ಜಾತಿಯವರಿಗೆ ಮೀಸಲಿದೆ.

ಎರಡು ಕ್ಷೇತ್ರಗಳು ಸಾಮಾನ್ಯ ವರ್ಗಕ್ಕೆ ಸೇರಿವೆ. 2009 ಹಾಗೂ2014ರಲ್ಲಿ ಕಾಂಗ್ರೆಸ್ 2 ಮತ್ತು ಬಿಜೆಪಿ 3 ಸ್ಥಾನಗಳಲ್ಲಿ ಜಯಗಳಿಸಿದ್ದವು. ಆದರೆ ಈ ಬಾರಿ ಮಾತ್ರ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿಬಿಟ್ಟಿತು. ಮಲ್ಲಿಕಾರ್ಜುನ ಖರ್ಗೆ, ಈಶ್ವರ ಖಂಡ್ರೆ ಹಾಗೂ ವಿ.ಎಸ್.ಉಗ್ರಪ್ಪ ನಂತಹ ದಿಗ್ಗಜರು ಸೋಲಿನ ರುಚಿ ನೋಡಬೇಕಾಯಿತು.

ಖರ್ಗೆಗೆ ಮುಳುವಾದ ಪುತ್ರ ವ್ಯಾಮೋಹ:
ಪುರಾಣದಲ್ಲಿನ ಯಯಾತಿಯ ಕಥೆ ಖರ್ಗೆ ವಿಷಯದಲ್ಲಿ ತಿರುವು ಮುರುವಾಗಿದೆ. ಆ ಕತೆಯಲ್ಲಿ ತಂದೆ ಯಯಾತಿ ಮಗ ಪುರುವಿನ ಯೌವ್ವನವನ್ನು ಕಡವಾಗಿ ಪಡೆದರೆ, ಇಲ್ಲಿ ಪ್ರಿಯಾಂಕ ಖರ್ಗೆ ತಂದೆಯ ರಾಜಕೀಯ ಆಯುಷ್ಯವನ್ನೇ ಎರವಲು ಪಡೆದುಬಿಟ್ಟ. ಕಳೆದ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಮಗನನ್ನು ಮಂತ್ರಿಯನ್ನಾಗಿ ಮಾಡುವ ಹಟಕ್ಕೆ ಬಿದ್ದ ಖರ್ಗೆಯವರು ಕಮರುಲ್ ಇಸ್ಲಾಂ, ಬಾಬುರಾವ್ ಚಿಂಚನಸೂರ್ ಹಾಗು ಮಾಲಿಕಯ್ಯ ಗುತ್ತೇದಾರ್‌ರಂತಹ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿ ಅವರ ವಿರೋಧ ಕಟ್ಟಿಕೊಳ್ಳಬೇಕಾಯಿತು.

ಮಾಲಿಕಯ್ಯ, ಬಾಬುರಾವ್‌ರಂತಹ ಹಿಂದುಳಿದ ವರ್ಗಗಳ ಪ್ರಬಲ ನಾಯಕರು ಬಿಜೆಪಿ ಸೇರಿ ಖರ್ಗೆ ಸೋಲಿಸಲು ಟೊಂಕ ಕಟ್ಟಿ ನಿಂತುಬಿಟ್ಟರು. ಒಂದು ರೀತಿಯಲ್ಲಿ ಹೇಳುವುದಾದರೆ ಖರ್ಗೆಯವರನ್ನು ಸೋಲಿಸುವ ಸಂಚು ಒಂದು ವರ್ಷದ ಹಿಂದೆಯೇ ರೂಪುಗೊಂಡಿತ್ತು. ಅಸ್ಪೃಶ್ಯ ದಲಿತ ಸಮುದಾಯದ ಖರ್ಗೆ ವಿರುದ್ಧ, ಅಸ್ಪೃಶ್ಯೇತರ ದಲಿತರಾದ ಉಮೇಶ್ ಜಾಧವ್‌ರನ್ನು ಆಪರೇಷನ್ ಕಮಲದ ಮೂಲಕ ಸೆಳೆದು ಅಭ್ಯರ್ಥಿಯಾಗಿಸುವ ಮೂಲಕ ಬಿಜೆಪಿ ತನ್ನ ಜಾತಿ ರಾಜಕಾರಣದ ಅಸ್ತ್ರ ಪ್ರಯೋಗ ಮಾಡಿತು.

ಇದನ್ನು ಓದಿ: ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಳೆದೆರೆಡು ಚುನಾವಣೆಯಲ್ಲಿ ಅದೇ ಲಂಬಾಣಿ ಸಮುದಾಯದ ರೇವುನಾಯಕ್ ಬೆಳಮಗಿ ವಿರುದ್ದ ಒಮ್ಮೆ14 ಸಾವಿರ, ಮತ್ತೊಮ್ಮೆ 75 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಖರ್ಗೆಯವರು ಈ ಬಾರಿ ಜಾಧವ್ ಎದುರು 85 ಸಾವಿರ ಮತಗಳಿಂದ ಸೋಲುಣಬೇಕಾಯಿತು. ತಮ್ಮ ಮಗನಿಗಾಗಿ ನಮ್ಮ ಕೋಲಿ ಸಮಾಜಕ್ಕೆ ದೊರಕಿದ್ದ ಏಕೈಕ ಮಂತ್ರಿಸ್ಥಾನವನ್ನೂ ಕಿತ್ತುಕೊಂಡರೆಂದು ಖರ್ಗೆ ವಿರುದ್ಧ ಅಸಮಧಾನಗೊಂಡಿದ್ದ ಆ ಸಮಾಜದವರನ್ನು ಬಾಬುರಾವ್ ಚಿಂಚನಸೂರ್ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಸಂಘಟಿಸಿದ್ದೇ ಸಂಘ ಪರಿವಾರ.

ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 3 ಲಕ್ಷದಷ್ಟಿರುವ ಈ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಹುಸಿ ಭರವಸೆ ನೀಡುವ ಮೂಲಕ ಸಾರಾಸಗಟಾಗಿ ಬಿಜೆಪಿಗೆ ಮತ ಚಲಾಯಿಸುವಂತೆ ನೋಡಿಕೊಳ್ಳಲಾಯಿತು. ಕೊನೆಗೆ 371j ಹಾಗು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳು ಕೂಡಾ ಖರ್ಗೆಯವರ ಕೈ ಹಿಡಿಯಲಿಲ್ಲ.

ಖಂಡ್ರೆ

ಇನ್ನು ಬೀದರ್‌ನಲ್ಲಿ ಗೆಲ್ಲಲು ವಿಫುಲ ಅವಕಾಶಗಳಿದ್ದ ಈಶ್ವರ ಖಂಡ್ರೆಯವರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ. ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಹೊಂದಿದ ಲಿಂಗಾಯತ ಹಾಗೂ ದಲಿತರು ಬಿಜೆಪಿಗೆ ಹೆಚ್ಚು ಒಲವು ತೋರಿದ್ದಾರೆನ್ನಲಾಗಿದೆ. ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಐವರು ಮೈತ್ರಿಕೂಟದ ಶಾಸಕರಿದ್ದು ಅದರಲ್ಲಿ ಮೂವರು ಸಚಿವರಾಗಿದ್ದಾರೆ. ಆದರೂ ಖಂಡ್ರೆ ಸೋತಿದ್ದು ವಿಪರ್ಯಾಸವೇ ಸರಿ.

ರಾಯಚೂರು-ಕೊಪ್ಪಳ : ಕಳೆದ ಬಾರಿ ಕೇವಲ ಒಂದೂವರೆ ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಬಿ.ವಿ.ನಾಯಕ ತನ್ನ ಸೋಮಾರಿತನದಿಂದಲೇ ಈ ಬಾರಿ ಸೋಲತ್ತಾರೆನ್ನುವುದು  ಹೆಚ್ಚು ಕಡಿಮೆ ಖಚಿತವಾಗಿತ್ತು. ಅದೇ ರೀತಿ ಆಗಿದೆ. ಇತ್ತ ಕೊಪ್ಪಳದಲ್ಲಿ ರಾಯರೆಡ್ಡಿ ಅಥವಾ ಬಸವನಗೌಡ ಬಾದರ್ಲಿ ಯವರಿಗೆ ಟಿಕೆಟ್ ಕೊಟ್ಟಿದ್ದರ ಕಾಂಗ್ರೆಸ್ ಗೆಲ್ಲಬಹುದಾಗಿತ್ತು. ಆದರೆ ಸಿದ್ಧರಾಮಯಯ್ಯನವರ ಹಠಮಾರಿತನದಿಂದಾಗಿ ಸ್ವಜಾತಿಯ ರಾಜಶೇಖರ ಹಿಟ್ನಾಳರು ಸ್ಪರ್ಧಿಸಿ ಕೇವಲ ಕುರುಬರ ಹಾಗೂ ಮುಸ್ಲಿಮರ ಮತ ಪಡೆದು ಸೋಲಬೇಕಾಯಿತು.

ಬಳ್ಳಾರಿ:  ಗಣಿನಾಡು ಬಳ್ಳಾರಿಯಲ್ಲಿ ಕಳೆದ ಆರು ತಿಂಗಳ ಹಿಂದಷ್ಟೇ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಉಗ್ರಪ್ಪ ಗೆದ್ದಿದ್ದರು.ಆದರೆ ನಂತರದ ದಿನಗಳಲ್ಲಿ ನಡೆದಿದ್ದ ಆನಂದ್‌ಸಿಂಗ್, ಕಂಪ್ಲಿ ಗಣೇಶ್ ಹಾಗೂ ಭೀಮಾನಾಯ್ಕ್ ಮಧ್ಯೆ ನಡೆದಿದ್ದ ಮಾರಾಮಾರಿ, ಅತಿಥಿ ಉಸ್ತುವಾರಿ ಸಚಿವ ಡಿ.ಕೆ‌.ಶಿವಕುಮಾರ್‌ರವರ ಅತಿಯಾದ ಆತ್ಮವಿಶ್ವಾಸಗಳು ಈಗಾಗಲೇ ಉಗ್ರಪ್ಪನವರ ಸೋಲಿಗೆ ಮುನ್ನುಡಿ ಬರೆದಿದ್ದವು. ಹೀಗಾಗಿ ಕ್ಷೇತ್ರದಲ್ಲಿ ಐವರು ಶಾಸಕರು, ಅದರಲ್ಲಿ ಇಬ್ಬರು ಸಚಿವರಾಗಿದ್ದರೂ ಕೂಡಾ ಉಗ್ರಪ್ಪನವರು ಐವತ್ತಾರು ಸಾವಿರ ಮತಗಳ ಅಂತರದಿಂದ ಸೋಲಬೇಕಾಯಿತು. ಒಟ್ಟಿನಲ್ಲಿ ಹೇಳುವುದಾದರೆ ಕಲ್ಯಾಣದ ನಾಡಿನಲ್ಲಿ ಕೋಮುವಾದದ ಕಮಲ ಸಂಪೂರ್ಣ ಅರಳಿದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...