Homeಕರ್ನಾಟಕ"ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ": ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

“ಕಲ್ಯಾಣ ನಾಡಿನಲ್ಲಿ ಕೋಮುವಾದಕ್ಕೆ ಮಣೆ”: ಹೈ.ಕ ಚುನಾವಣಾ ಫಲಿತಾಂಶ ವಿಶ್ಲೇಷಣೆ

- Advertisement -
- Advertisement -

| ಭೀಮನಗೌಡ ಕಾಶಿರೆಡ್ಡಿ, ಕಂಪ್ಲಿ |

ಕೊನೆಗೂ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿವೆ. ಹೈದರಾಬಾದ್ ಕರ್ನಾಟಕದಲ್ಲಿ 5ಕ್ಕೆ 5 ಸ್ಥಾನಗಳನ್ನೂ ಬಿಜೆಪಿ ಗೆದ್ದುಕೊಂಡು ಈ ಭಾಗದಲ್ಲಿ ಹೊಸ ದಾಖಲೆ ಮಾಡಿದೆ. ಈ ಐದರಲ್ಲಿ ಎರಡು ಕ್ಷೇತ್ರಗಳು ( ಬಳ್ಳಾರಿ, ರಾಯಚೂರು) ಪರಿಶಿಷ್ಟ ಪಂಗಡದವರಿಗೆ ಮೀಸಲಾಗಿದ್ದು, ಒಂದು ( ಕಲ್ಬುರ್ಗಿ) ಕ್ಷೇತ್ರ ಪರಿಶಿಷ್ಟ ಜಾತಿಯವರಿಗೆ ಮೀಸಲಿದೆ.

ಎರಡು ಕ್ಷೇತ್ರಗಳು ಸಾಮಾನ್ಯ ವರ್ಗಕ್ಕೆ ಸೇರಿವೆ. 2009 ಹಾಗೂ2014ರಲ್ಲಿ ಕಾಂಗ್ರೆಸ್ 2 ಮತ್ತು ಬಿಜೆಪಿ 3 ಸ್ಥಾನಗಳಲ್ಲಿ ಜಯಗಳಿಸಿದ್ದವು. ಆದರೆ ಈ ಬಾರಿ ಮಾತ್ರ ಬಿಜೆಪಿ ಕ್ಲೀನ್ ಸ್ವೀಪ್ ಮಾಡಿಬಿಟ್ಟಿತು. ಮಲ್ಲಿಕಾರ್ಜುನ ಖರ್ಗೆ, ಈಶ್ವರ ಖಂಡ್ರೆ ಹಾಗೂ ವಿ.ಎಸ್.ಉಗ್ರಪ್ಪ ನಂತಹ ದಿಗ್ಗಜರು ಸೋಲಿನ ರುಚಿ ನೋಡಬೇಕಾಯಿತು.

ಖರ್ಗೆಗೆ ಮುಳುವಾದ ಪುತ್ರ ವ್ಯಾಮೋಹ:
ಪುರಾಣದಲ್ಲಿನ ಯಯಾತಿಯ ಕಥೆ ಖರ್ಗೆ ವಿಷಯದಲ್ಲಿ ತಿರುವು ಮುರುವಾಗಿದೆ. ಆ ಕತೆಯಲ್ಲಿ ತಂದೆ ಯಯಾತಿ ಮಗ ಪುರುವಿನ ಯೌವ್ವನವನ್ನು ಕಡವಾಗಿ ಪಡೆದರೆ, ಇಲ್ಲಿ ಪ್ರಿಯಾಂಕ ಖರ್ಗೆ ತಂದೆಯ ರಾಜಕೀಯ ಆಯುಷ್ಯವನ್ನೇ ಎರವಲು ಪಡೆದುಬಿಟ್ಟ. ಕಳೆದ ಸಿದ್ಧರಾಮಯ್ಯನವರ ಸರ್ಕಾರದಲ್ಲಿ ಮಗನನ್ನು ಮಂತ್ರಿಯನ್ನಾಗಿ ಮಾಡುವ ಹಟಕ್ಕೆ ಬಿದ್ದ ಖರ್ಗೆಯವರು ಕಮರುಲ್ ಇಸ್ಲಾಂ, ಬಾಬುರಾವ್ ಚಿಂಚನಸೂರ್ ಹಾಗು ಮಾಲಿಕಯ್ಯ ಗುತ್ತೇದಾರ್‌ರಂತಹ ಹಿರಿಯ ನಾಯಕರನ್ನು ಮೂಲೆಗುಂಪು ಮಾಡಿ ಅವರ ವಿರೋಧ ಕಟ್ಟಿಕೊಳ್ಳಬೇಕಾಯಿತು.

ಮಾಲಿಕಯ್ಯ, ಬಾಬುರಾವ್‌ರಂತಹ ಹಿಂದುಳಿದ ವರ್ಗಗಳ ಪ್ರಬಲ ನಾಯಕರು ಬಿಜೆಪಿ ಸೇರಿ ಖರ್ಗೆ ಸೋಲಿಸಲು ಟೊಂಕ ಕಟ್ಟಿ ನಿಂತುಬಿಟ್ಟರು. ಒಂದು ರೀತಿಯಲ್ಲಿ ಹೇಳುವುದಾದರೆ ಖರ್ಗೆಯವರನ್ನು ಸೋಲಿಸುವ ಸಂಚು ಒಂದು ವರ್ಷದ ಹಿಂದೆಯೇ ರೂಪುಗೊಂಡಿತ್ತು. ಅಸ್ಪೃಶ್ಯ ದಲಿತ ಸಮುದಾಯದ ಖರ್ಗೆ ವಿರುದ್ಧ, ಅಸ್ಪೃಶ್ಯೇತರ ದಲಿತರಾದ ಉಮೇಶ್ ಜಾಧವ್‌ರನ್ನು ಆಪರೇಷನ್ ಕಮಲದ ಮೂಲಕ ಸೆಳೆದು ಅಭ್ಯರ್ಥಿಯಾಗಿಸುವ ಮೂಲಕ ಬಿಜೆಪಿ ತನ್ನ ಜಾತಿ ರಾಜಕಾರಣದ ಅಸ್ತ್ರ ಪ್ರಯೋಗ ಮಾಡಿತು.

ಇದನ್ನು ಓದಿ: ಕಲಬುರ್ಗಿ: ‘ಈ ಸಲ ಖರ್ಗೆಯವರಿಗೆ ಟಫ್ ಇದೆ’

ಕಳೆದೆರೆಡು ಚುನಾವಣೆಯಲ್ಲಿ ಅದೇ ಲಂಬಾಣಿ ಸಮುದಾಯದ ರೇವುನಾಯಕ್ ಬೆಳಮಗಿ ವಿರುದ್ದ ಒಮ್ಮೆ14 ಸಾವಿರ, ಮತ್ತೊಮ್ಮೆ 75 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಖರ್ಗೆಯವರು ಈ ಬಾರಿ ಜಾಧವ್ ಎದುರು 85 ಸಾವಿರ ಮತಗಳಿಂದ ಸೋಲುಣಬೇಕಾಯಿತು. ತಮ್ಮ ಮಗನಿಗಾಗಿ ನಮ್ಮ ಕೋಲಿ ಸಮಾಜಕ್ಕೆ ದೊರಕಿದ್ದ ಏಕೈಕ ಮಂತ್ರಿಸ್ಥಾನವನ್ನೂ ಕಿತ್ತುಕೊಂಡರೆಂದು ಖರ್ಗೆ ವಿರುದ್ಧ ಅಸಮಧಾನಗೊಂಡಿದ್ದ ಆ ಸಮಾಜದವರನ್ನು ಬಾಬುರಾವ್ ಚಿಂಚನಸೂರ್ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಸಂಘಟಿಸಿದ್ದೇ ಸಂಘ ಪರಿವಾರ.

ಕಲ್ಬುರ್ಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು 3 ಲಕ್ಷದಷ್ಟಿರುವ ಈ ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಹುಸಿ ಭರವಸೆ ನೀಡುವ ಮೂಲಕ ಸಾರಾಸಗಟಾಗಿ ಬಿಜೆಪಿಗೆ ಮತ ಚಲಾಯಿಸುವಂತೆ ನೋಡಿಕೊಳ್ಳಲಾಯಿತು. ಕೊನೆಗೆ 371j ಹಾಗು ತಾವು ಮಾಡಿದ ಅಭಿವೃದ್ಧಿ ಕಾರ್ಯಗಳು ಕೂಡಾ ಖರ್ಗೆಯವರ ಕೈ ಹಿಡಿಯಲಿಲ್ಲ.

ಖಂಡ್ರೆ

ಇನ್ನು ಬೀದರ್‌ನಲ್ಲಿ ಗೆಲ್ಲಲು ವಿಫುಲ ಅವಕಾಶಗಳಿದ್ದ ಈಶ್ವರ ಖಂಡ್ರೆಯವರು 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಸೋತಿದ್ದಾರೆ. ಈ ಕ್ಷೇತ್ರದಲ್ಲಿ ಅತಿ ಹೆಚ್ಚು ಮತಗಳನ್ನು ಹೊಂದಿದ ಲಿಂಗಾಯತ ಹಾಗೂ ದಲಿತರು ಬಿಜೆಪಿಗೆ ಹೆಚ್ಚು ಒಲವು ತೋರಿದ್ದಾರೆನ್ನಲಾಗಿದೆ. ಈ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಐವರು ಮೈತ್ರಿಕೂಟದ ಶಾಸಕರಿದ್ದು ಅದರಲ್ಲಿ ಮೂವರು ಸಚಿವರಾಗಿದ್ದಾರೆ. ಆದರೂ ಖಂಡ್ರೆ ಸೋತಿದ್ದು ವಿಪರ್ಯಾಸವೇ ಸರಿ.

ರಾಯಚೂರು-ಕೊಪ್ಪಳ : ಕಳೆದ ಬಾರಿ ಕೇವಲ ಒಂದೂವರೆ ಸಾವಿರ ಮತಗಳ ಅಂತರದಿಂದ ಗೆದ್ದಿದ್ದ ಬಿ.ವಿ.ನಾಯಕ ತನ್ನ ಸೋಮಾರಿತನದಿಂದಲೇ ಈ ಬಾರಿ ಸೋಲತ್ತಾರೆನ್ನುವುದು  ಹೆಚ್ಚು ಕಡಿಮೆ ಖಚಿತವಾಗಿತ್ತು. ಅದೇ ರೀತಿ ಆಗಿದೆ. ಇತ್ತ ಕೊಪ್ಪಳದಲ್ಲಿ ರಾಯರೆಡ್ಡಿ ಅಥವಾ ಬಸವನಗೌಡ ಬಾದರ್ಲಿ ಯವರಿಗೆ ಟಿಕೆಟ್ ಕೊಟ್ಟಿದ್ದರ ಕಾಂಗ್ರೆಸ್ ಗೆಲ್ಲಬಹುದಾಗಿತ್ತು. ಆದರೆ ಸಿದ್ಧರಾಮಯಯ್ಯನವರ ಹಠಮಾರಿತನದಿಂದಾಗಿ ಸ್ವಜಾತಿಯ ರಾಜಶೇಖರ ಹಿಟ್ನಾಳರು ಸ್ಪರ್ಧಿಸಿ ಕೇವಲ ಕುರುಬರ ಹಾಗೂ ಮುಸ್ಲಿಮರ ಮತ ಪಡೆದು ಸೋಲಬೇಕಾಯಿತು.

ಬಳ್ಳಾರಿ:  ಗಣಿನಾಡು ಬಳ್ಳಾರಿಯಲ್ಲಿ ಕಳೆದ ಆರು ತಿಂಗಳ ಹಿಂದಷ್ಟೇ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನ ಉಗ್ರಪ್ಪ ಗೆದ್ದಿದ್ದರು.ಆದರೆ ನಂತರದ ದಿನಗಳಲ್ಲಿ ನಡೆದಿದ್ದ ಆನಂದ್‌ಸಿಂಗ್, ಕಂಪ್ಲಿ ಗಣೇಶ್ ಹಾಗೂ ಭೀಮಾನಾಯ್ಕ್ ಮಧ್ಯೆ ನಡೆದಿದ್ದ ಮಾರಾಮಾರಿ, ಅತಿಥಿ ಉಸ್ತುವಾರಿ ಸಚಿವ ಡಿ.ಕೆ‌.ಶಿವಕುಮಾರ್‌ರವರ ಅತಿಯಾದ ಆತ್ಮವಿಶ್ವಾಸಗಳು ಈಗಾಗಲೇ ಉಗ್ರಪ್ಪನವರ ಸೋಲಿಗೆ ಮುನ್ನುಡಿ ಬರೆದಿದ್ದವು. ಹೀಗಾಗಿ ಕ್ಷೇತ್ರದಲ್ಲಿ ಐವರು ಶಾಸಕರು, ಅದರಲ್ಲಿ ಇಬ್ಬರು ಸಚಿವರಾಗಿದ್ದರೂ ಕೂಡಾ ಉಗ್ರಪ್ಪನವರು ಐವತ್ತಾರು ಸಾವಿರ ಮತಗಳ ಅಂತರದಿಂದ ಸೋಲಬೇಕಾಯಿತು. ಒಟ್ಟಿನಲ್ಲಿ ಹೇಳುವುದಾದರೆ ಕಲ್ಯಾಣದ ನಾಡಿನಲ್ಲಿ ಕೋಮುವಾದದ ಕಮಲ ಸಂಪೂರ್ಣ ಅರಳಿದಂತಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...