Homeಮುಖಪುಟಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? ಇಷ್ಟು ಮಾಡಿದರೆ ಸಾಕು

ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? ಇಷ್ಟು ಮಾಡಿದರೆ ಸಾಕು

- Advertisement -
- Advertisement -

ಇಂದು ಸುಳ್ಳು ಸುದ್ದಿಗಳ ಹಾವಳಿ ಮಿತಿಮೀರಿದೆ. ಸರ್ಕಾರಗಳೇ ಹಲವು ಆಪ್‌ಗಳು ಮತ್ತು ವೆಬ್‌ಸೈಟ್‌ಗಳ ಮೂಲಕ ಸುಳ್ಳು ಸುದ್ದಿಗಳನ್ನು ಹರಡುವುದನ್ನು ತಡೆಯಲು ಹೆಣಗಾಡುತ್ತಿವೆ. ಆದರೆ ಇದೇ ಸರ್ಕಾರಗಳು ಕೆಲ ವರ್ಷಗಳಿಂದ ತಮ್ಮದೇ ಪಕ್ಷದ ಕಾರ್ಯಕರ್ತರು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾಗ ನೋಡಿಕೊಂಡು ಸುಮ್ಮನಿದ್ದಿದ್ದನ್ನು ನಾವು ಮರೆಯಬಾರದು. ಆದರೂ ಸಹ ಸುಳ್ಳು ಸುದ್ದಿಗಳಿಂದ ಅತಿ ಹೆಚ್ಚು ಹಾನಿಗೊಳಗಾಗುವುದು ಅಮಾಯಕ ಬಡವರಾಗಿದ್ದಾರೆ. ಹಾಗಾಗಿ ಯಾವುದೇ ಸುದ್ದಿಯನ್ನು ನಂಬುವ ಮೊದಲು ಅದು ಸತ್ಯವೇ ಎಂದು ಪರಿಶೀಲಿಸಬೇಕು. ಅದು ಹೇಗೆ? ಇಲ್ಲಿವೆ ನೋಡಿ ಕೆಲವು ಸೂಚನೆಗಳು.

ಕಾನೂನಿನ ವ್ಯಾಪ್ತಿಯಲ್ಲಿ ಪೋಲಿಸ್ ಮತ್ತು ಇತರ ತನಿಖಾ ಏಜೆನ್ಸಿಗಳು ಇದರ ಸತ್ಯಾಸತ್ಯತೆ ಪತ್ತೆಹಚ್ಚುವ ಕೆಲಸ ಮಾಡುತ್ತಿರುತ್ತವೆ. ಜನ ಸಾಮಾನ್ಯರು ಮಾಡಬೇಕಾಗಿರುವುದು ಇಷ್ಟೇ:

ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ.

ಸುದ್ದಿಯಾಗಿದ್ದರೆ ಗೂಗಲ್‌ನಲ್ಲಿ ಹುಡುಕಿ. ಅದಕ್ಕೆ ಸಂಬಂಧಿಸಿದ ಬೇರೆ ಲಿಂಕ್‌ಗಳತ್ತ ಕಣ್ಣಾಡಿಸಿ. ಚಿತ್ರವಾಗಿದ್ದರೆ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿ. ವಿಡಿಯೋವಾಗಿದ್ದರು ಸಹ ಅದರ ದಿನಾಂಕ ಮತ್ತು ಮೂಲವನ್ನು ಪತ್ತೆ ಹಚ್ಚಿ.

ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಂಖ್ಯೆ ಇದೆಯೇ ನೋಡಿ.

ಕೇವಲ ಸುದ್ದಿಯ ತಲೆಬರಹ ಓದಬೇಡಿ. ಅವು ರೋಚಕವಾಗಿರುತ್ತವೆ. ಇಡೀ ಸುದ್ದಿ ಓದಿ ನೋಡಿ. ಅದು ಸುಳ್ಳಾಗಿದ್ದರೆ ಮೂಲಾಜಿಲ್ಲದೇ ತಿಳಿಸಿ, ಸಾಧ್ಯವಾದರೆ ದೂರು ನೀಡಿ.

ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹಪೀಡಿತರಾಗಿರಬಹುದು. ಹಾಗಿದ್ದಲ್ಲಿ ಎಚ್ಚರವಹಿಸಿ.

ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.

ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮೆಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.

ಸುದ್ದಿಯ, ವಿಡಿಯೋಗಳ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.

ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಕೆಲವರು ವಿಡಂಬನೆ ಮಾಡಿರುತ್ತಾರೆ ಹಾಗಾಗಿ ನಿಧಾನವಾಗಿ ಗಮನಿಸಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.

ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ. ಮರುಪಶೀಲಿಸುವುದನ್ನು ಮರೆಯಬೇಡಿ. ಸಾಮಾನ್ಯ ಜ್ಞಾನ ಬಳಸಿ.

ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಬೂಮ್‌ಲೈವ್‌, ಕ್ವಿಂಟ್‌ ವೆಬ್‌ಖೂಫ್‌, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.

ಕೆಲವು ಉದಾಹರಣೆಗಳನ್ನು ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...