Homeಮುಖಪುಟಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? ಇಷ್ಟು ಮಾಡಿದರೆ ಸಾಕು

ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ? ಇಷ್ಟು ಮಾಡಿದರೆ ಸಾಕು

- Advertisement -
- Advertisement -

ಇಂದು ಸುಳ್ಳು ಸುದ್ದಿಗಳ ಹಾವಳಿ ಮಿತಿಮೀರಿದೆ. ಸರ್ಕಾರಗಳೇ ಹಲವು ಆಪ್‌ಗಳು ಮತ್ತು ವೆಬ್‌ಸೈಟ್‌ಗಳ ಮೂಲಕ ಸುಳ್ಳು ಸುದ್ದಿಗಳನ್ನು ಹರಡುವುದನ್ನು ತಡೆಯಲು ಹೆಣಗಾಡುತ್ತಿವೆ. ಆದರೆ ಇದೇ ಸರ್ಕಾರಗಳು ಕೆಲ ವರ್ಷಗಳಿಂದ ತಮ್ಮದೇ ಪಕ್ಷದ ಕಾರ್ಯಕರ್ತರು ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾಗ ನೋಡಿಕೊಂಡು ಸುಮ್ಮನಿದ್ದಿದ್ದನ್ನು ನಾವು ಮರೆಯಬಾರದು. ಆದರೂ ಸಹ ಸುಳ್ಳು ಸುದ್ದಿಗಳಿಂದ ಅತಿ ಹೆಚ್ಚು ಹಾನಿಗೊಳಗಾಗುವುದು ಅಮಾಯಕ ಬಡವರಾಗಿದ್ದಾರೆ. ಹಾಗಾಗಿ ಯಾವುದೇ ಸುದ್ದಿಯನ್ನು ನಂಬುವ ಮೊದಲು ಅದು ಸತ್ಯವೇ ಎಂದು ಪರಿಶೀಲಿಸಬೇಕು. ಅದು ಹೇಗೆ? ಇಲ್ಲಿವೆ ನೋಡಿ ಕೆಲವು ಸೂಚನೆಗಳು.

ಕಾನೂನಿನ ವ್ಯಾಪ್ತಿಯಲ್ಲಿ ಪೋಲಿಸ್ ಮತ್ತು ಇತರ ತನಿಖಾ ಏಜೆನ್ಸಿಗಳು ಇದರ ಸತ್ಯಾಸತ್ಯತೆ ಪತ್ತೆಹಚ್ಚುವ ಕೆಲಸ ಮಾಡುತ್ತಿರುತ್ತವೆ. ಜನ ಸಾಮಾನ್ಯರು ಮಾಡಬೇಕಾಗಿರುವುದು ಇಷ್ಟೇ:

ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ.

ಸುದ್ದಿಯಾಗಿದ್ದರೆ ಗೂಗಲ್‌ನಲ್ಲಿ ಹುಡುಕಿ. ಅದಕ್ಕೆ ಸಂಬಂಧಿಸಿದ ಬೇರೆ ಲಿಂಕ್‌ಗಳತ್ತ ಕಣ್ಣಾಡಿಸಿ. ಚಿತ್ರವಾಗಿದ್ದರೆ ರಿವರ್ಸ್‌ ಇಮೇಜ್‌ ಸರ್ಚ್‌ ಮಾಡಿ. ವಿಡಿಯೋವಾಗಿದ್ದರು ಸಹ ಅದರ ದಿನಾಂಕ ಮತ್ತು ಮೂಲವನ್ನು ಪತ್ತೆ ಹಚ್ಚಿ.

ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಂಖ್ಯೆ ಇದೆಯೇ ನೋಡಿ.

ಕೇವಲ ಸುದ್ದಿಯ ತಲೆಬರಹ ಓದಬೇಡಿ. ಅವು ರೋಚಕವಾಗಿರುತ್ತವೆ. ಇಡೀ ಸುದ್ದಿ ಓದಿ ನೋಡಿ. ಅದು ಸುಳ್ಳಾಗಿದ್ದರೆ ಮೂಲಾಜಿಲ್ಲದೇ ತಿಳಿಸಿ, ಸಾಧ್ಯವಾದರೆ ದೂರು ನೀಡಿ.

ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹಪೀಡಿತರಾಗಿರಬಹುದು. ಹಾಗಿದ್ದಲ್ಲಿ ಎಚ್ಚರವಹಿಸಿ.

ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.

ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮೆಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.

ಸುದ್ದಿಯ, ವಿಡಿಯೋಗಳ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.

ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಕೆಲವರು ವಿಡಂಬನೆ ಮಾಡಿರುತ್ತಾರೆ ಹಾಗಾಗಿ ನಿಧಾನವಾಗಿ ಗಮನಿಸಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.

ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ. ಮರುಪಶೀಲಿಸುವುದನ್ನು ಮರೆಯಬೇಡಿ. ಸಾಮಾನ್ಯ ಜ್ಞಾನ ಬಳಸಿ.

ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಬೂಮ್‌ಲೈವ್‌, ಕ್ವಿಂಟ್‌ ವೆಬ್‌ಖೂಫ್‌, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.

ಕೆಲವು ಉದಾಹರಣೆಗಳನ್ನು ನೋಡಲು ಇಲ್ಲಿ ಕ್ಲಿಕ್‌ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...