Homeನಿಜವೋ ಸುಳ್ಳೋಸುಳ್ಳು ಸುದ್ದಿ (ಫೇಕ್ ನ್ಯೂಸ್) ಪತ್ತೆ ಹಚ್ಚುವುದು ಹೇಗೆ? ಇಲ್ಲಿವೆ ನೊಡಿ ಸರಳ ಮಾರ್ಗಗಳು

ಸುಳ್ಳು ಸುದ್ದಿ (ಫೇಕ್ ನ್ಯೂಸ್) ಪತ್ತೆ ಹಚ್ಚುವುದು ಹೇಗೆ? ಇಲ್ಲಿವೆ ನೊಡಿ ಸರಳ ಮಾರ್ಗಗಳು

ದೇಶದ ಪ್ರಧಾನಮಂತ್ರಿಯವರ ಸಹೋದರ ರಿಕ್ಷಾ ನಡೆಸಿ ಕುಟುಂಬ ಸಾಕುತ್ತಿದ್ದಾರೆ, ನಮ್ಮ ಪ್ರಧಾನಿ ನಿಜವಾಗಿ ಧನ್ಯ! ಎಂಬ ಸುದ್ದಿ ಸಂಪೂರ್ಣ ಸುಳ್ಳು

- Advertisement -
- Advertisement -

| ಜಿ.ಆರ್. ವಿದ್ಯಾರಣ್ಯ |

ಸಂತಸದ ಸುದ್ದಿ” ಪ್ರಧಾನ ಮಂತ್ರಿ ಮೋದಿಯವರು ಘೋಷಣೆ ಮಾಡಿದಂತೆ –ನಿಮ್ಮ ಮನೆಯಲ್ಲಿ ಯಾವುದೇ ಸಮಾರಂಭ ಅಥವಾ ಪಾರ್ಟಿ ನಡೆದಿದ್ದು, ತುಂಬಾ ಆಹಾರ ಮಿಕ್ಕಿದ್ದಲ್ಲಿ ಸಂಕೋಚವಿಲ್ಲದೇ 1098 ಗೆ ಕರೆ ಮಾಡಿ (ಭಾರತದ ಎಲ್ಲೆಡೆಯಿಂದಲೂ) – ಮಕ್ಕಳ ಸಹಾಯವಾಣಿ. ಅವರು ಬಂದು ಮಿಕ್ಕ ಆಹಾರವನ್ನು ಕೊಂಡೊಯ್ಯುತ್ತಾರೆ.  ಪ್ರಾರ್ಥಿಸುವ ತುಟಿಗಳಿಗಿಂತ ಸಹಾಯ ನೀಡುವ ಕೈಗಳು ಉತ್ತಮ” ಎಂಬ ಟ್ವಿಟರ್ ಸಂದೇಶ ಮೋದಿಯವರ ಕೊಡುಗೆ ಎನ್ನುವಂತೆ ಬಿಂಬಿಸಿ ಹಲವಾರು ಗುಂಪುಗಳಲ್ಲಿ ಮತ್ತೆ ಮತ್ತೆ ವೈರಲ್ ಆಗುತ್ತಿದೆ.

ಇದೇನೂ ಹೊಸ ಸಂದೇಶವಲ್ಲ. ಜನವರಿ 30, 2012ರಲ್ಲಿ  ದಿ ಟೆಲೆಗ್ರಾಫ್ ಪತ್ರಿಕೆ ಈ ಸುಳ್ಳು ಸುದ್ದಿಯನ್ನು ಬಹಿರಂಗಗೊಳಿಸಿ ಇಂತಹ ಸುದ್ದಿಯನ್ನು ನಂಬಿ ಜನರು ಹೇಗೆ ಮಕ್ಕಳ ಸಹಾಯವಾಣಿಗೆ ಅನಾವಶ್ಯಕ ಕರೆ ಮಾಡಿ ಸಂಸ್ಥೆಯ ಕೆಲಸಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಖೇದ ವ್ಯಕ್ತಪಡಿಸಿತ್ತು. ಇಂತಹ ದುರುದ್ದೇಶಪೂರಿತ ಹಾಗೂ ತಪ್ಪು ಸುದ್ದಿಗಳಿಂದ ಬೇಸತ್ತ ಮಕ್ಕಳ ಸಹಾಯವಾಣಿಯ ಅಧಿಕೃತ ಅಂತರ್ಜಾಲ ತಾಣ ChildLine India ತನ್ನ ಮುಖಪುಟದಲ್ಲಿ “ನಮ್ಮ ಸಂಸ್ಥೆ ಕೇವಲ ಸಂಕಷ್ಟದಲ್ಲಿರುವ ಮಕ್ಕಳಿಗೆ ಸಹಾಯವಾಣಿಯಾಗಿದ್ದು, ನಾವು ಯಾರಿಂದಲೂ ಆಹಾರ ಸ್ವೀಕರಿಸಿ ವಿತರಿಸುವುದಿಲ್ಲ. ಇಂತಹ ಸುದ್ದಿ ಪಸರಿಸಬೇಡಿ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು” ಎಂಬ ನೋಟಿಸ್ ಒಂದನ್ನು ಜಾರಿಗೊಳಿಸಿತ್ತು. ಆದರೂ ಸಹ ಇಂತಹ ದುಶ್ಪ್ರಚಾರ ಹೊಸ ಹೊಸ ನಾಯಕರ ಭಾವಚಿತ್ರ ಮತ್ತು ಹೆಸರುಗಳನ್ನು ಬಳಸಿಕೊಂಡು ಪದೇ ಪದೇ ವೈರಲ್ ಆಗುತ್ತಿದೆ.

ದೇಶದ ಪ್ರಧಾನಮಂತ್ರಿಯವರ ಸಹೋದರ ರಿಕ್ಷಾ ನಡೆಸಿ ಕುಟುಂಬ ಸಾಕುತ್ತಿದ್ದಾರೆ, ನಮ್ಮ ಪ್ರಧಾನಿ ನಿಜವಾಗಿ ಧನ್ಯ!

ಈ ರೀತಿಯ ಸಂದೇಶವೂ ಬಹಳ ದಿನದಿಂದ ವೈರಲ್ ಆಗುತ್ತಿದೆ. ಆದರೆ ಚಿತ್ರದಲ್ಲಿರುವ ವ್ಯಕ್ತಿ ನಮ್ಮ ಪ್ರಧಾನಮಂತ್ರಿಯವರ ಸಹೋದರನಲ್ಲ. ಅವರನ್ನು ಹೋಲುವಂತಹ ಇನ್ನೋರ್ವ ವ್ಯಕ್ತಿ. ಈ ಸುಳ್ಳು ಸುದ್ದಿಯನ್ನು ಇತ್ತೀಚೆಗೆ ಬಿ.ಜೆ.ಪಿ. ದೆಹಲಿ ಘಟಕ ಪ್ರಕಟಿಸಿತ್ತು ಆದರೆ ಇದೂ ಸಹ 2016ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಚಾಲನೆಯಲ್ಲಿ ಇಲ್ಲದ ಮಹಿಳಾ ಸುರಕ್ಷಾ ದೂರವಾಣಿ ಸಂಖ್ಯೆ ಮೋದಿಯವರ ಹೊಸ ಪ್ರಯತ್ನ ಎಂಬಂತೆ ಸಂದೇಶ

 

ಯೋಗಿ ಆದಿತ್ಯನಾಥ್– ಟ್ರು ಇಂಡಿಯನ್ ಎಂಬ ಹೆಸರಿನ ಫೇಸ್ಬುಕ್ ಪುಟದಿಂದ, 23 ಜುಲೈ 2018ರಿಂದ, ವೈರಲ್ ಆಗಿರುವ ಇನ್ನೊಂದು ಸಂದೇಶದ ಪ್ರಕಾರ “ರಾತ್ರಿ ಸಮಯದಲ್ಲಿ ಒಂಟಿಯಾಗಿ ನಗರದಲ್ಲಿ ಟ್ಯಾಕ್ಸಿ/ಆಟೋಗಳಲ್ಲಿ ಸಂಚಾರ ಮಾಡುತ್ತಿರುವ ಮಹಿಳೆಯರು 9969777888 ಎಂಬ ದೂರವಾಣಿಗೆ ವಾಹನ ಸಂಖ್ಯೆ ಎಸ್.ಎಂ.ಎಸ್. ಸಂದೇಶ ಮೂಲಕ ಕಳುಹಿಸಿದಲ್ಲಿ ಅಂತಹ ವಾಹನವನ್ನು ಪೋಲಿಸ್ ಗಸ್ತು ಪಡೆ ಜಿ.ಪಿ.ಆರ್.ಎಸ್. ಮೂಲಕ ಹಿಂಬಾಲಿಸುತ್ತಾರೆ. ಈ ಸಂದೇಶವನ್ನು ಆದಷ್ಟು ಜನರೊಂದಿಗೆ ಹಂಚಿಕೊಳ್ಳಿ. ಮುಂದಿನ ದುರ್ದೈವಿ ನಿಮ್ಮ ಮನೆಯವರೇ ಏಕೆ ಆಗಿರಬಾರದು?” ಎಂಬ ಸಂದೇಶವೂ ಸಹ ಸಾಕಷ್ಟು ವೈರಲ್ ಆಗಿದೆ. ಇದನ್ನೂ ಸಹ ಪ್ರಧಾನಿ ಮೋದಿ ಸರಕಾರದ  ಹೊಸ ಪ್ರಯತ್ನ ಎಂಬಂತೆ ಬಿಂಬಿಸಿ, ಅವರ ಭಾವಚಿತ್ರ ಲಗತ್ತಿಸಲಾಗಿದೆ. ಇದನ್ನು 3,000ಕ್ಕೂ ಹೆಚ್ಚು ಜನ ಶೇರ್ ಮಾಡಿದ್ದಾರೆ. ಇದು ಭಾರತದ ಹಲವಾರು ಭಾಷೆಗಳಲ್ಲಿಯೂ ಹರಡುತ್ತಿದೆ.

ನಿಜ ಏನು?

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಇಂತಹ ಸುಳ್ಳು ಸುದ್ದಿ/ಅಪ-ಪ್ರಚಾರವನ್ನು ಆಲ್ಟ್-ನ್ಯೂಸ್, ಎಸ್.ಎಂ.ಹೋಕ್ಸ್-ಸ್ಲೇಯರ್, ಫ್ಯಾಕ್ಟ್-ಚೆಕರ್ ಮುಂತಾದ ಅಂತರ್ಜಾಲತಾಣಗಳು ನಿರಂತರವಾಗಿ ಬಹಿರಂಗಗೊಳಿಸುತ್ತಿರುತ್ತವೆ. ಕೆಲವು ಮುಖ್ಯವಾಹಿನಿ ಮಾಧ್ಯಮಗಳೂ ಸಹ ಇಂತಹ ಕೆಲಸ ಆಗ್ಗಾಗ್ಗೆ ಮಾಡುತ್ತಿರುತ್ತವೆ. ಮುಂಬಯಿ ಮತ್ತು ಬೆಂಗಳೂರು ಪೋಲಿಸ್ ಇಲಾಖೆಗಳು ಇಂತಹ ಸುಳ್ಳು ಸುದ್ದಿ ನಂಬಬೇಡಿ ಮತ್ತು ಮುಂದೆ ಪಸರಿಸಬೇಡಿ ಎಂದು ಹಲವಾರು ಬಾರಿ ಮನವಿ ಮಾಡಿದೆ. ಆದರೂ ಪ್ರಯೋಜನವಾಗುತ್ತಿಲ್ಲ. ಮಾಧ್ಯಮದಲ್ಲಿ ಬರುವ ನಿಜವಾದ ಸುದ್ದಿಗಿಂತಲೂ ಹೆಚ್ಚು ಸುಳ್ಳು ಸುದ್ದಿ/ಅಪಪ್ರಚಾರವನ್ನು ಜನರು ನಂಬ ತೊಡಗಿದ್ದಾರೆ. ಇಂತಹ ಅಪಪ್ರಚಾರಕ್ಕೆ ಕೆಲವು ರಾಜಕೀಯ ಪಕ್ಷಗಳ ಐಟಿ ಘಟಕದ ನೇರ ಹಾಗೂ ಪರೋಕ್ಷ ಬೆಂಬಲವೂ ಇದೆ.

ಇದನ್ನು ತಡೆಗಟ್ಟುವುದು ಹೇಗೆ? ಅಂದರೆ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ

ಕಾನೂನಿನ ವ್ಯಾಪ್ತಿಯಲ್ಲಿ ಪೋಲಿಸ್ ಮತ್ತು ಇತರ ತನಿಖಾ ಏಜೆನ್ಸಿಗಳು ಇದರ ಸತ್ಯಾಸತ್ಯತೆ ಪತ್ತೆಹಚ್ಚುವ ಕೆಲಸ ಮಾಡುತ್ತಿರುತ್ತವೆ. ಜನ ಸಾಮಾನ್ಯರು ಮಾಡಬೇಕಾಗಿರುವುದು ಇಷ್ಟೇ:

  1. ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ. ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಖ್ಯೆ ಇದೆಯೇ ನೋಡಿ.
  2. ಕೇವಲ ಸುದ್ದಿಯ ತಲೆಬರಹ ಓದಬೇಡಿ, ಅವು ರೋಚಕವಾಗಿರುತ್ತವೆ, ಇದೀ ಸುದ್ದಿ ಓದಿ ನೋಡಿ.
  3. ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹ ಪೀಡಿತರಾಗಿರಬಹುದು.
  4. ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.
  5. ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮಕ್ಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.
  6. ಸುದ್ದಿಯ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.
  7. ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.
  8. ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ.
  9. ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.


ಇದನ್ನೂ ಓದಿ: ‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...