Homeನಿಜವೋ ಸುಳ್ಳೋಸುಳ್ಳು ಸುದ್ದಿ (ಫೇಕ್ ನ್ಯೂಸ್) ಪತ್ತೆ ಹಚ್ಚುವುದು ಹೇಗೆ? ಇಲ್ಲಿವೆ ನೊಡಿ ಸರಳ ಮಾರ್ಗಗಳು

ಸುಳ್ಳು ಸುದ್ದಿ (ಫೇಕ್ ನ್ಯೂಸ್) ಪತ್ತೆ ಹಚ್ಚುವುದು ಹೇಗೆ? ಇಲ್ಲಿವೆ ನೊಡಿ ಸರಳ ಮಾರ್ಗಗಳು

ದೇಶದ ಪ್ರಧಾನಮಂತ್ರಿಯವರ ಸಹೋದರ ರಿಕ್ಷಾ ನಡೆಸಿ ಕುಟುಂಬ ಸಾಕುತ್ತಿದ್ದಾರೆ, ನಮ್ಮ ಪ್ರಧಾನಿ ನಿಜವಾಗಿ ಧನ್ಯ! ಎಂಬ ಸುದ್ದಿ ಸಂಪೂರ್ಣ ಸುಳ್ಳು

- Advertisement -
- Advertisement -

| ಜಿ.ಆರ್. ವಿದ್ಯಾರಣ್ಯ |

ಸಂತಸದ ಸುದ್ದಿ” ಪ್ರಧಾನ ಮಂತ್ರಿ ಮೋದಿಯವರು ಘೋಷಣೆ ಮಾಡಿದಂತೆ –ನಿಮ್ಮ ಮನೆಯಲ್ಲಿ ಯಾವುದೇ ಸಮಾರಂಭ ಅಥವಾ ಪಾರ್ಟಿ ನಡೆದಿದ್ದು, ತುಂಬಾ ಆಹಾರ ಮಿಕ್ಕಿದ್ದಲ್ಲಿ ಸಂಕೋಚವಿಲ್ಲದೇ 1098 ಗೆ ಕರೆ ಮಾಡಿ (ಭಾರತದ ಎಲ್ಲೆಡೆಯಿಂದಲೂ) – ಮಕ್ಕಳ ಸಹಾಯವಾಣಿ. ಅವರು ಬಂದು ಮಿಕ್ಕ ಆಹಾರವನ್ನು ಕೊಂಡೊಯ್ಯುತ್ತಾರೆ.  ಪ್ರಾರ್ಥಿಸುವ ತುಟಿಗಳಿಗಿಂತ ಸಹಾಯ ನೀಡುವ ಕೈಗಳು ಉತ್ತಮ” ಎಂಬ ಟ್ವಿಟರ್ ಸಂದೇಶ ಮೋದಿಯವರ ಕೊಡುಗೆ ಎನ್ನುವಂತೆ ಬಿಂಬಿಸಿ ಹಲವಾರು ಗುಂಪುಗಳಲ್ಲಿ ಮತ್ತೆ ಮತ್ತೆ ವೈರಲ್ ಆಗುತ್ತಿದೆ.

ಇದೇನೂ ಹೊಸ ಸಂದೇಶವಲ್ಲ. ಜನವರಿ 30, 2012ರಲ್ಲಿ  ದಿ ಟೆಲೆಗ್ರಾಫ್ ಪತ್ರಿಕೆ ಈ ಸುಳ್ಳು ಸುದ್ದಿಯನ್ನು ಬಹಿರಂಗಗೊಳಿಸಿ ಇಂತಹ ಸುದ್ದಿಯನ್ನು ನಂಬಿ ಜನರು ಹೇಗೆ ಮಕ್ಕಳ ಸಹಾಯವಾಣಿಗೆ ಅನಾವಶ್ಯಕ ಕರೆ ಮಾಡಿ ಸಂಸ್ಥೆಯ ಕೆಲಸಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಖೇದ ವ್ಯಕ್ತಪಡಿಸಿತ್ತು. ಇಂತಹ ದುರುದ್ದೇಶಪೂರಿತ ಹಾಗೂ ತಪ್ಪು ಸುದ್ದಿಗಳಿಂದ ಬೇಸತ್ತ ಮಕ್ಕಳ ಸಹಾಯವಾಣಿಯ ಅಧಿಕೃತ ಅಂತರ್ಜಾಲ ತಾಣ ChildLine India ತನ್ನ ಮುಖಪುಟದಲ್ಲಿ “ನಮ್ಮ ಸಂಸ್ಥೆ ಕೇವಲ ಸಂಕಷ್ಟದಲ್ಲಿರುವ ಮಕ್ಕಳಿಗೆ ಸಹಾಯವಾಣಿಯಾಗಿದ್ದು, ನಾವು ಯಾರಿಂದಲೂ ಆಹಾರ ಸ್ವೀಕರಿಸಿ ವಿತರಿಸುವುದಿಲ್ಲ. ಇಂತಹ ಸುದ್ದಿ ಪಸರಿಸಬೇಡಿ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು” ಎಂಬ ನೋಟಿಸ್ ಒಂದನ್ನು ಜಾರಿಗೊಳಿಸಿತ್ತು. ಆದರೂ ಸಹ ಇಂತಹ ದುಶ್ಪ್ರಚಾರ ಹೊಸ ಹೊಸ ನಾಯಕರ ಭಾವಚಿತ್ರ ಮತ್ತು ಹೆಸರುಗಳನ್ನು ಬಳಸಿಕೊಂಡು ಪದೇ ಪದೇ ವೈರಲ್ ಆಗುತ್ತಿದೆ.

ದೇಶದ ಪ್ರಧಾನಮಂತ್ರಿಯವರ ಸಹೋದರ ರಿಕ್ಷಾ ನಡೆಸಿ ಕುಟುಂಬ ಸಾಕುತ್ತಿದ್ದಾರೆ, ನಮ್ಮ ಪ್ರಧಾನಿ ನಿಜವಾಗಿ ಧನ್ಯ!

ಈ ರೀತಿಯ ಸಂದೇಶವೂ ಬಹಳ ದಿನದಿಂದ ವೈರಲ್ ಆಗುತ್ತಿದೆ. ಆದರೆ ಚಿತ್ರದಲ್ಲಿರುವ ವ್ಯಕ್ತಿ ನಮ್ಮ ಪ್ರಧಾನಮಂತ್ರಿಯವರ ಸಹೋದರನಲ್ಲ. ಅವರನ್ನು ಹೋಲುವಂತಹ ಇನ್ನೋರ್ವ ವ್ಯಕ್ತಿ. ಈ ಸುಳ್ಳು ಸುದ್ದಿಯನ್ನು ಇತ್ತೀಚೆಗೆ ಬಿ.ಜೆ.ಪಿ. ದೆಹಲಿ ಘಟಕ ಪ್ರಕಟಿಸಿತ್ತು ಆದರೆ ಇದೂ ಸಹ 2016ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಚಾಲನೆಯಲ್ಲಿ ಇಲ್ಲದ ಮಹಿಳಾ ಸುರಕ್ಷಾ ದೂರವಾಣಿ ಸಂಖ್ಯೆ ಮೋದಿಯವರ ಹೊಸ ಪ್ರಯತ್ನ ಎಂಬಂತೆ ಸಂದೇಶ

 

ಯೋಗಿ ಆದಿತ್ಯನಾಥ್– ಟ್ರು ಇಂಡಿಯನ್ ಎಂಬ ಹೆಸರಿನ ಫೇಸ್ಬುಕ್ ಪುಟದಿಂದ, 23 ಜುಲೈ 2018ರಿಂದ, ವೈರಲ್ ಆಗಿರುವ ಇನ್ನೊಂದು ಸಂದೇಶದ ಪ್ರಕಾರ “ರಾತ್ರಿ ಸಮಯದಲ್ಲಿ ಒಂಟಿಯಾಗಿ ನಗರದಲ್ಲಿ ಟ್ಯಾಕ್ಸಿ/ಆಟೋಗಳಲ್ಲಿ ಸಂಚಾರ ಮಾಡುತ್ತಿರುವ ಮಹಿಳೆಯರು 9969777888 ಎಂಬ ದೂರವಾಣಿಗೆ ವಾಹನ ಸಂಖ್ಯೆ ಎಸ್.ಎಂ.ಎಸ್. ಸಂದೇಶ ಮೂಲಕ ಕಳುಹಿಸಿದಲ್ಲಿ ಅಂತಹ ವಾಹನವನ್ನು ಪೋಲಿಸ್ ಗಸ್ತು ಪಡೆ ಜಿ.ಪಿ.ಆರ್.ಎಸ್. ಮೂಲಕ ಹಿಂಬಾಲಿಸುತ್ತಾರೆ. ಈ ಸಂದೇಶವನ್ನು ಆದಷ್ಟು ಜನರೊಂದಿಗೆ ಹಂಚಿಕೊಳ್ಳಿ. ಮುಂದಿನ ದುರ್ದೈವಿ ನಿಮ್ಮ ಮನೆಯವರೇ ಏಕೆ ಆಗಿರಬಾರದು?” ಎಂಬ ಸಂದೇಶವೂ ಸಹ ಸಾಕಷ್ಟು ವೈರಲ್ ಆಗಿದೆ. ಇದನ್ನೂ ಸಹ ಪ್ರಧಾನಿ ಮೋದಿ ಸರಕಾರದ  ಹೊಸ ಪ್ರಯತ್ನ ಎಂಬಂತೆ ಬಿಂಬಿಸಿ, ಅವರ ಭಾವಚಿತ್ರ ಲಗತ್ತಿಸಲಾಗಿದೆ. ಇದನ್ನು 3,000ಕ್ಕೂ ಹೆಚ್ಚು ಜನ ಶೇರ್ ಮಾಡಿದ್ದಾರೆ. ಇದು ಭಾರತದ ಹಲವಾರು ಭಾಷೆಗಳಲ್ಲಿಯೂ ಹರಡುತ್ತಿದೆ.

ನಿಜ ಏನು?

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಇಂತಹ ಸುಳ್ಳು ಸುದ್ದಿ/ಅಪ-ಪ್ರಚಾರವನ್ನು ಆಲ್ಟ್-ನ್ಯೂಸ್, ಎಸ್.ಎಂ.ಹೋಕ್ಸ್-ಸ್ಲೇಯರ್, ಫ್ಯಾಕ್ಟ್-ಚೆಕರ್ ಮುಂತಾದ ಅಂತರ್ಜಾಲತಾಣಗಳು ನಿರಂತರವಾಗಿ ಬಹಿರಂಗಗೊಳಿಸುತ್ತಿರುತ್ತವೆ. ಕೆಲವು ಮುಖ್ಯವಾಹಿನಿ ಮಾಧ್ಯಮಗಳೂ ಸಹ ಇಂತಹ ಕೆಲಸ ಆಗ್ಗಾಗ್ಗೆ ಮಾಡುತ್ತಿರುತ್ತವೆ. ಮುಂಬಯಿ ಮತ್ತು ಬೆಂಗಳೂರು ಪೋಲಿಸ್ ಇಲಾಖೆಗಳು ಇಂತಹ ಸುಳ್ಳು ಸುದ್ದಿ ನಂಬಬೇಡಿ ಮತ್ತು ಮುಂದೆ ಪಸರಿಸಬೇಡಿ ಎಂದು ಹಲವಾರು ಬಾರಿ ಮನವಿ ಮಾಡಿದೆ. ಆದರೂ ಪ್ರಯೋಜನವಾಗುತ್ತಿಲ್ಲ. ಮಾಧ್ಯಮದಲ್ಲಿ ಬರುವ ನಿಜವಾದ ಸುದ್ದಿಗಿಂತಲೂ ಹೆಚ್ಚು ಸುಳ್ಳು ಸುದ್ದಿ/ಅಪಪ್ರಚಾರವನ್ನು ಜನರು ನಂಬ ತೊಡಗಿದ್ದಾರೆ. ಇಂತಹ ಅಪಪ್ರಚಾರಕ್ಕೆ ಕೆಲವು ರಾಜಕೀಯ ಪಕ್ಷಗಳ ಐಟಿ ಘಟಕದ ನೇರ ಹಾಗೂ ಪರೋಕ್ಷ ಬೆಂಬಲವೂ ಇದೆ.

ಇದನ್ನು ತಡೆಗಟ್ಟುವುದು ಹೇಗೆ? ಅಂದರೆ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ

ಕಾನೂನಿನ ವ್ಯಾಪ್ತಿಯಲ್ಲಿ ಪೋಲಿಸ್ ಮತ್ತು ಇತರ ತನಿಖಾ ಏಜೆನ್ಸಿಗಳು ಇದರ ಸತ್ಯಾಸತ್ಯತೆ ಪತ್ತೆಹಚ್ಚುವ ಕೆಲಸ ಮಾಡುತ್ತಿರುತ್ತವೆ. ಜನ ಸಾಮಾನ್ಯರು ಮಾಡಬೇಕಾಗಿರುವುದು ಇಷ್ಟೇ:

  1. ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ. ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಖ್ಯೆ ಇದೆಯೇ ನೋಡಿ.
  2. ಕೇವಲ ಸುದ್ದಿಯ ತಲೆಬರಹ ಓದಬೇಡಿ, ಅವು ರೋಚಕವಾಗಿರುತ್ತವೆ, ಇದೀ ಸುದ್ದಿ ಓದಿ ನೋಡಿ.
  3. ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹ ಪೀಡಿತರಾಗಿರಬಹುದು.
  4. ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.
  5. ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮಕ್ಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.
  6. ಸುದ್ದಿಯ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.
  7. ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.
  8. ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ.
  9. ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.


ಇದನ್ನೂ ಓದಿ: ‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...