Homeನಿಜವೋ ಸುಳ್ಳೋಸುಳ್ಳು ಸುದ್ದಿ (ಫೇಕ್ ನ್ಯೂಸ್) ಪತ್ತೆ ಹಚ್ಚುವುದು ಹೇಗೆ? ಇಲ್ಲಿವೆ ನೊಡಿ ಸರಳ ಮಾರ್ಗಗಳು

ಸುಳ್ಳು ಸುದ್ದಿ (ಫೇಕ್ ನ್ಯೂಸ್) ಪತ್ತೆ ಹಚ್ಚುವುದು ಹೇಗೆ? ಇಲ್ಲಿವೆ ನೊಡಿ ಸರಳ ಮಾರ್ಗಗಳು

ದೇಶದ ಪ್ರಧಾನಮಂತ್ರಿಯವರ ಸಹೋದರ ರಿಕ್ಷಾ ನಡೆಸಿ ಕುಟುಂಬ ಸಾಕುತ್ತಿದ್ದಾರೆ, ನಮ್ಮ ಪ್ರಧಾನಿ ನಿಜವಾಗಿ ಧನ್ಯ! ಎಂಬ ಸುದ್ದಿ ಸಂಪೂರ್ಣ ಸುಳ್ಳು

- Advertisement -
- Advertisement -

| ಜಿ.ಆರ್. ವಿದ್ಯಾರಣ್ಯ |

ಸಂತಸದ ಸುದ್ದಿ” ಪ್ರಧಾನ ಮಂತ್ರಿ ಮೋದಿಯವರು ಘೋಷಣೆ ಮಾಡಿದಂತೆ –ನಿಮ್ಮ ಮನೆಯಲ್ಲಿ ಯಾವುದೇ ಸಮಾರಂಭ ಅಥವಾ ಪಾರ್ಟಿ ನಡೆದಿದ್ದು, ತುಂಬಾ ಆಹಾರ ಮಿಕ್ಕಿದ್ದಲ್ಲಿ ಸಂಕೋಚವಿಲ್ಲದೇ 1098 ಗೆ ಕರೆ ಮಾಡಿ (ಭಾರತದ ಎಲ್ಲೆಡೆಯಿಂದಲೂ) – ಮಕ್ಕಳ ಸಹಾಯವಾಣಿ. ಅವರು ಬಂದು ಮಿಕ್ಕ ಆಹಾರವನ್ನು ಕೊಂಡೊಯ್ಯುತ್ತಾರೆ.  ಪ್ರಾರ್ಥಿಸುವ ತುಟಿಗಳಿಗಿಂತ ಸಹಾಯ ನೀಡುವ ಕೈಗಳು ಉತ್ತಮ” ಎಂಬ ಟ್ವಿಟರ್ ಸಂದೇಶ ಮೋದಿಯವರ ಕೊಡುಗೆ ಎನ್ನುವಂತೆ ಬಿಂಬಿಸಿ ಹಲವಾರು ಗುಂಪುಗಳಲ್ಲಿ ಮತ್ತೆ ಮತ್ತೆ ವೈರಲ್ ಆಗುತ್ತಿದೆ.

ಇದೇನೂ ಹೊಸ ಸಂದೇಶವಲ್ಲ. ಜನವರಿ 30, 2012ರಲ್ಲಿ  ದಿ ಟೆಲೆಗ್ರಾಫ್ ಪತ್ರಿಕೆ ಈ ಸುಳ್ಳು ಸುದ್ದಿಯನ್ನು ಬಹಿರಂಗಗೊಳಿಸಿ ಇಂತಹ ಸುದ್ದಿಯನ್ನು ನಂಬಿ ಜನರು ಹೇಗೆ ಮಕ್ಕಳ ಸಹಾಯವಾಣಿಗೆ ಅನಾವಶ್ಯಕ ಕರೆ ಮಾಡಿ ಸಂಸ್ಥೆಯ ಕೆಲಸಕ್ಕೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಖೇದ ವ್ಯಕ್ತಪಡಿಸಿತ್ತು. ಇಂತಹ ದುರುದ್ದೇಶಪೂರಿತ ಹಾಗೂ ತಪ್ಪು ಸುದ್ದಿಗಳಿಂದ ಬೇಸತ್ತ ಮಕ್ಕಳ ಸಹಾಯವಾಣಿಯ ಅಧಿಕೃತ ಅಂತರ್ಜಾಲ ತಾಣ ChildLine India ತನ್ನ ಮುಖಪುಟದಲ್ಲಿ “ನಮ್ಮ ಸಂಸ್ಥೆ ಕೇವಲ ಸಂಕಷ್ಟದಲ್ಲಿರುವ ಮಕ್ಕಳಿಗೆ ಸಹಾಯವಾಣಿಯಾಗಿದ್ದು, ನಾವು ಯಾರಿಂದಲೂ ಆಹಾರ ಸ್ವೀಕರಿಸಿ ವಿತರಿಸುವುದಿಲ್ಲ. ಇಂತಹ ಸುದ್ದಿ ಪಸರಿಸಬೇಡಿ. ನಿಮ್ಮ ಸಹಕಾರಕ್ಕೆ ಧನ್ಯವಾದಗಳು” ಎಂಬ ನೋಟಿಸ್ ಒಂದನ್ನು ಜಾರಿಗೊಳಿಸಿತ್ತು. ಆದರೂ ಸಹ ಇಂತಹ ದುಶ್ಪ್ರಚಾರ ಹೊಸ ಹೊಸ ನಾಯಕರ ಭಾವಚಿತ್ರ ಮತ್ತು ಹೆಸರುಗಳನ್ನು ಬಳಸಿಕೊಂಡು ಪದೇ ಪದೇ ವೈರಲ್ ಆಗುತ್ತಿದೆ.

ದೇಶದ ಪ್ರಧಾನಮಂತ್ರಿಯವರ ಸಹೋದರ ರಿಕ್ಷಾ ನಡೆಸಿ ಕುಟುಂಬ ಸಾಕುತ್ತಿದ್ದಾರೆ, ನಮ್ಮ ಪ್ರಧಾನಿ ನಿಜವಾಗಿ ಧನ್ಯ!

ಈ ರೀತಿಯ ಸಂದೇಶವೂ ಬಹಳ ದಿನದಿಂದ ವೈರಲ್ ಆಗುತ್ತಿದೆ. ಆದರೆ ಚಿತ್ರದಲ್ಲಿರುವ ವ್ಯಕ್ತಿ ನಮ್ಮ ಪ್ರಧಾನಮಂತ್ರಿಯವರ ಸಹೋದರನಲ್ಲ. ಅವರನ್ನು ಹೋಲುವಂತಹ ಇನ್ನೋರ್ವ ವ್ಯಕ್ತಿ. ಈ ಸುಳ್ಳು ಸುದ್ದಿಯನ್ನು ಇತ್ತೀಚೆಗೆ ಬಿ.ಜೆ.ಪಿ. ದೆಹಲಿ ಘಟಕ ಪ್ರಕಟಿಸಿತ್ತು ಆದರೆ ಇದೂ ಸಹ 2016ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಚಾಲನೆಯಲ್ಲಿ ಇಲ್ಲದ ಮಹಿಳಾ ಸುರಕ್ಷಾ ದೂರವಾಣಿ ಸಂಖ್ಯೆ ಮೋದಿಯವರ ಹೊಸ ಪ್ರಯತ್ನ ಎಂಬಂತೆ ಸಂದೇಶ

 

ಯೋಗಿ ಆದಿತ್ಯನಾಥ್– ಟ್ರು ಇಂಡಿಯನ್ ಎಂಬ ಹೆಸರಿನ ಫೇಸ್ಬುಕ್ ಪುಟದಿಂದ, 23 ಜುಲೈ 2018ರಿಂದ, ವೈರಲ್ ಆಗಿರುವ ಇನ್ನೊಂದು ಸಂದೇಶದ ಪ್ರಕಾರ “ರಾತ್ರಿ ಸಮಯದಲ್ಲಿ ಒಂಟಿಯಾಗಿ ನಗರದಲ್ಲಿ ಟ್ಯಾಕ್ಸಿ/ಆಟೋಗಳಲ್ಲಿ ಸಂಚಾರ ಮಾಡುತ್ತಿರುವ ಮಹಿಳೆಯರು 9969777888 ಎಂಬ ದೂರವಾಣಿಗೆ ವಾಹನ ಸಂಖ್ಯೆ ಎಸ್.ಎಂ.ಎಸ್. ಸಂದೇಶ ಮೂಲಕ ಕಳುಹಿಸಿದಲ್ಲಿ ಅಂತಹ ವಾಹನವನ್ನು ಪೋಲಿಸ್ ಗಸ್ತು ಪಡೆ ಜಿ.ಪಿ.ಆರ್.ಎಸ್. ಮೂಲಕ ಹಿಂಬಾಲಿಸುತ್ತಾರೆ. ಈ ಸಂದೇಶವನ್ನು ಆದಷ್ಟು ಜನರೊಂದಿಗೆ ಹಂಚಿಕೊಳ್ಳಿ. ಮುಂದಿನ ದುರ್ದೈವಿ ನಿಮ್ಮ ಮನೆಯವರೇ ಏಕೆ ಆಗಿರಬಾರದು?” ಎಂಬ ಸಂದೇಶವೂ ಸಹ ಸಾಕಷ್ಟು ವೈರಲ್ ಆಗಿದೆ. ಇದನ್ನೂ ಸಹ ಪ್ರಧಾನಿ ಮೋದಿ ಸರಕಾರದ  ಹೊಸ ಪ್ರಯತ್ನ ಎಂಬಂತೆ ಬಿಂಬಿಸಿ, ಅವರ ಭಾವಚಿತ್ರ ಲಗತ್ತಿಸಲಾಗಿದೆ. ಇದನ್ನು 3,000ಕ್ಕೂ ಹೆಚ್ಚು ಜನ ಶೇರ್ ಮಾಡಿದ್ದಾರೆ. ಇದು ಭಾರತದ ಹಲವಾರು ಭಾಷೆಗಳಲ್ಲಿಯೂ ಹರಡುತ್ತಿದೆ.

ನಿಜ ಏನು?

ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಇಂತಹ ಸುಳ್ಳು ಸುದ್ದಿ/ಅಪ-ಪ್ರಚಾರವನ್ನು ಆಲ್ಟ್-ನ್ಯೂಸ್, ಎಸ್.ಎಂ.ಹೋಕ್ಸ್-ಸ್ಲೇಯರ್, ಫ್ಯಾಕ್ಟ್-ಚೆಕರ್ ಮುಂತಾದ ಅಂತರ್ಜಾಲತಾಣಗಳು ನಿರಂತರವಾಗಿ ಬಹಿರಂಗಗೊಳಿಸುತ್ತಿರುತ್ತವೆ. ಕೆಲವು ಮುಖ್ಯವಾಹಿನಿ ಮಾಧ್ಯಮಗಳೂ ಸಹ ಇಂತಹ ಕೆಲಸ ಆಗ್ಗಾಗ್ಗೆ ಮಾಡುತ್ತಿರುತ್ತವೆ. ಮುಂಬಯಿ ಮತ್ತು ಬೆಂಗಳೂರು ಪೋಲಿಸ್ ಇಲಾಖೆಗಳು ಇಂತಹ ಸುಳ್ಳು ಸುದ್ದಿ ನಂಬಬೇಡಿ ಮತ್ತು ಮುಂದೆ ಪಸರಿಸಬೇಡಿ ಎಂದು ಹಲವಾರು ಬಾರಿ ಮನವಿ ಮಾಡಿದೆ. ಆದರೂ ಪ್ರಯೋಜನವಾಗುತ್ತಿಲ್ಲ. ಮಾಧ್ಯಮದಲ್ಲಿ ಬರುವ ನಿಜವಾದ ಸುದ್ದಿಗಿಂತಲೂ ಹೆಚ್ಚು ಸುಳ್ಳು ಸುದ್ದಿ/ಅಪಪ್ರಚಾರವನ್ನು ಜನರು ನಂಬ ತೊಡಗಿದ್ದಾರೆ. ಇಂತಹ ಅಪಪ್ರಚಾರಕ್ಕೆ ಕೆಲವು ರಾಜಕೀಯ ಪಕ್ಷಗಳ ಐಟಿ ಘಟಕದ ನೇರ ಹಾಗೂ ಪರೋಕ್ಷ ಬೆಂಬಲವೂ ಇದೆ.

ಇದನ್ನು ತಡೆಗಟ್ಟುವುದು ಹೇಗೆ? ಅಂದರೆ ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚುವುದು ಹೇಗೆ

ಕಾನೂನಿನ ವ್ಯಾಪ್ತಿಯಲ್ಲಿ ಪೋಲಿಸ್ ಮತ್ತು ಇತರ ತನಿಖಾ ಏಜೆನ್ಸಿಗಳು ಇದರ ಸತ್ಯಾಸತ್ಯತೆ ಪತ್ತೆಹಚ್ಚುವ ಕೆಲಸ ಮಾಡುತ್ತಿರುತ್ತವೆ. ಜನ ಸಾಮಾನ್ಯರು ಮಾಡಬೇಕಾಗಿರುವುದು ಇಷ್ಟೇ:

  1. ಸುದ್ದಿ ಮೂಲ ಪರೀಕ್ಷಿಸಿ. ಸಂದೇಶವನ್ನು ಬಿಟ್ಟು ಅದರ ಮೂಲದ ಬಗ್ಗೆ ಹುಡುಕಿ. ಯಾರು ಇದನ್ನು ನಿಮಗೆ ಕಳುಹಿಸಿದ್ದಾರೆ ಅವರು ಕೇವಲ ಸ್ನೇಹಿತರೇ, ಯಾವುದೋ ಗುಂಪಿನ ಸದಸ್ಯರೇ, ನಂಬಿಕಸ್ಥರೇ ತಿಳಿಯಿರಿ. ಜಾಲತಾಣದ ಉದ್ದೇಶವೇನು, ಅವರ ಸಂಪರ್ಕ ವಿಳಾಸ ದೂರವಾಣಿ ಸಖ್ಯೆ ಇದೆಯೇ ನೋಡಿ.
  2. ಕೇವಲ ಸುದ್ದಿಯ ತಲೆಬರಹ ಓದಬೇಡಿ, ಅವು ರೋಚಕವಾಗಿರುತ್ತವೆ, ಇದೀ ಸುದ್ದಿ ಓದಿ ನೋಡಿ.
  3. ಸುದ್ದಿಯ ಲೇಖಕರ/ಪ್ರಕಾಶಕರ ಬಗ್ಗೆ ಸ್ವಲ್ಪ ಹುಡುಕಿ, ಅವರು ಪೂರ್ವಗ್ರಹ ಪೀಡಿತರಾಗಿರಬಹುದು.
  4. ಸುದ್ದಿಗೆ ಏನಾದರೂ ಬೆಂಬಲಿಸುವಂತಹ ಮೂಲದ ಲಿಂಕ್ ಇದ್ದರೆ ಅದನ್ನು ಜಾಲಿಸಿ ನೋಡಿ. ಪೂರಕವಾಗಿದೆಯೇ ಇಲ್ಲವೇ ಎಂದು. ಎಷ್ಟೋ ಬಾರಿ ಅಂತಹ ಜಾಲತಾಣವೇ ಇರುವುದಿಲ್ಲ.
  5. ಕೇವಲ ಒರ್ವ ದೊಡ್ಡ ವ್ಯಕ್ತಿಯ ಭಾವಚಿತ್ರವಿದೆ ಮತ್ತು ಅದರೊಂದಿಗೆ ಏನೋ ಹೇಳಿಕೆ ಇದೆ ಎಂದ ಮಾತ್ರಕ್ಕೆ ಅದು ನಿಜವಾಗುವುದಿಲ್ಲ. ಚಾಣಕ್ಯ, ನಾಟ್ರಡ್ಯಾಮಸ್, ಚರ್ಚಿಲ್, ಮಕ್ಕಾಲೆ ಮುಂತಾದವರ ಭಾವಚಿತ್ರದ ಜೊತೆ ಏನೇನೋ ಸಂದೇಶಗಳು ಹರಿದಾಡುತ್ತಿವೆ.
  6. ಸುದ್ದಿಯ ದಿನಾಂಕ ನೋಡಿ. ಹಳೆಯ ಸುದ್ದಿಗಳು ಹೊಸ ತಲೆಬರಹದೊಂದಿಗೆ ಮತ್ತೆ ಮತ್ತೆ ಕಾಣಸಿಗುತ್ತವೆ.
  7. ಸುದ್ದಿಯೋ ಕೇವಲ ತಮಾಷೆಯೋ ಸರಿಯಾಗಿ ನೋಡಿ. ಏಪ್ರಿಲ್ 1ರ ಸಂದೇಶಗಳು ವರ್ಷವಿಡೀ ಸುತ್ತುತ್ತಿರುತ್ತವೆ.
  8. ನಿಮ್ಮ ಸ್ವಂತ ಪೂರ್ವನಿರ್ಧಾರಿತ ನಂಬಿಕೆಗಳು ಸುಳ್ಳನ್ನೇ ನಿಜ ಎಂದು ನಂಬುವಂತೆ ಮಾಡಬಹುದು. ಅದನ್ನು ಸರಿಪಡಿಸಿಕೊಳ್ಳಿ.
  9. ತಜ್ಞರನ್ನು ಸಂಪರ್ಕಿಸಿ. ಸಂದೇಶ ನಿಜವೋ ಸುಳ್ಳೋ ಎಂದು ಸಂದೇಹವಿದ್ದಲ್ಲಿ ಅದನ್ನು ಮುಂದಕ್ಕೆ ಪಸರಿಸದೇ ಅದನ್ನು ನಂಬಿಕಸ್ಥ ಸತ್ಯಾಸತ್ಯತೆ ಪರಿಶೀಲಿಸುವ ಜಾಲತಾಣಗಳಿಗೆ ಕಳುಹಿಸಿ (ಆಲ್ಟ್-ನ್ಯೂಸ್, ಫ್ಯಾಕ್ಟ್-ಚೆಕರ್, ಎಸ್.ಎಂ.ಹೋಕ್ಸ್ ಸ್ಲೇಯರ್ ಇತ್ಯಾದಿ). ಸತ್ಯವನ್ನು ಬೆಂಬಲಿಸುವ ಜಾಲತಾಣಗಳನ್ನು ಬೆಂಬಲಿಸಿ.

ಸುಳ್ಳು ಸುದ್ದಿ/ಅಪಪ್ರಚಾರ ಪಸರಿಸಬೇಡಿ. ಇದರಿಂದ ದೇಶಕ್ಕೆ ಯಾವ ಪ್ರಯೋಜನವೂ ಇಲ್ಲ.


ಇದನ್ನೂ ಓದಿ: ‘ಅಪೋಫಿಸ್’ ಧರೆಗೆ ಅಪ್ಪಳಿಸುವ ಮುನ್ನ ನಿಮ್ಮ ಎಲ್ಲಾ ಆಸೆಗಳನ್ನು ಆದಷ್ಟು ಬೇಗ ಪೂರೈಸಿಕೊಳ್ಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...