Homeಕರ್ನಾಟಕಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ? 

ಹೀಗೆ ಮಾಡಿದರೆ ಸರ್ಕಾರಿ ಶಾಲೆಗಳು ಉತ್ತಮವಾಗಬಹುದಲ್ಲವೇ? 

46,000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೇವಲ 2,05,000 ಜನ ಶಿಕ್ಷಕರಿದ್ದರೆ, ಕೇವಲ 17,000 ಇರುವ ಖಾಸಗಿ ಪ್ರಾಥಮಿಕ ಶಾಲೆಗಳಲ್ಲಿ 2,40,000 ಶಿಕ್ಷಕರಿದ್ದಾರೆ!

- Advertisement -
- Advertisement -

| ಮುತ್ತುರಾಜು |

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುತ್ತೇವೆ ಎಂದು ಕರ್ನಾಟಕ ಸರ್ಕಾರ ಘೋಷಿಸಿತು. ಈ ವಿಚಾರದಲ್ಲಿ ಸಕಾರಣವಾಗಿಯೇ ಇಂಗ್ಲಿಷ್ ಮಾಧ್ಯಮ ಬೇಕು ಮತ್ತು ಬೇಡ ಎಂದು ದೊಡ್ಡ ಚರ್ಚೆಗಳು ನಡೆದವು. ಈಗ ಶಾಲೆಗಳನ್ನು ಗುರುತಿಸುವ ಕೆಲಸ ನಡೆಯುತ್ತಿದೆ. ಆದರೆ ಈ ಮಾಧ್ಯಮದ ಕುರಿತ ನಮ್ಮ ಭಾವನಾತ್ಮಕ ಚರ್ಚೆಯ ಭರಾಟೆಯಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಲು ಸರ್ಕಾರ ನಿಜವಾಗಿಯೂ ಮಾಡಬೇಕಾದ ಕೆಲಸಗಳನ್ನು ಮಾಡದೇ ಕೈ ತೊಳೆದುಕೊಳ್ಳುವುದಕ್ಕೆ ಬಿಡಬಾರದು. ಹಾಗಾಗಿ ಮಾಡಬೇಕಾದುದೇನು ಎಂಬುದುರ ಬಗ್ಗೆ ನಾವು ಮಾತಾಡಬೇಕಿದೆ.

ಮೊದಲನೇದಾಗಿ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಎದ್ದು ಕಾಣುತ್ತಿದೆ. 46,000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೇವಲ 2,05,000 ಜನ ಶಿಕ್ಷಕರಿದ್ದರೆ, ಕೇವಲ 17,000 ಇರುವ ಖಾಸಗಿ ಪ್ರಾಥಮಿಕ ಶಾಲೆಗಳಲ್ಲಿ 2,40,000 ಶಿಕ್ಷಕರಿದ್ದಾರೆ. ಅಂದರೆ ಖಾಸಗಿಯಲ್ಲಿ ತರಗತಿಗೊಬ್ಬರು, ವಿಷಯಕ್ಕೊಬ್ಬರು ಶಿಕ್ಷಕರಿದ್ದಾರೆ. ಈ ಬಹುದೊಡ್ಡ ವ್ಯತ್ಯಾಸವನ್ನು ಸರಿತೂಗಿಸಬೇಕಲ್ಲವೆ? ಸರ್ಕಾರಿ ಶಾಳೆಗಳಲ್ಲಿ ಮೊದಲು ಕಡ್ಡಾಯವಾಗಿ ತರಗತಿಗೊಬ್ಬರು, ವಿಷಯಕ್ಕೊಬ್ಬರು ಶಿಕ್ಷಕರು ಬೇಕು, ಎಲ್ಲಕ್ಕಿಂತ ಮಿಗಿಲಾಗಿ ಉತ್ತಮ ತರಬೇತಿ ಪಡೆದ ಇಂಗ್ಲಿಷ್ ಶಿಕ್ಷಕರು ಬೇಕೆ ಬೇಕು. ಯಾವ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಿನ ಶಿಕ್ಷಕರಿದ್ದಾರೋ ಅಲ್ಲೆಲ್ಲಾ ಮಕ್ಕಳ ಸಂಖ್ಯೆ ಜಾಸ್ತಿ ಇದೆ ಎಂಬುದನ್ನು ನಾವು ಮರೆಯಬಾರದು.

ಎರಡನೇಯದಾಗಿ ಬಹುತೇಕ ಖಾಸಗಿ ಶಾಲೆಗಳು ನರ್ಸರಿಯಿಂದಲೇ ಆರಂಭವಾಗುತ್ತವೆ. ಮಗುವಿಗೆ ಎರಡೂವರೆ ವರ್ಷ ತುಂಬಿದೊಡನೆಯೆ ಪ್ರಿ ನರ್ಸರಿ, ನಂತರ ಎಲ್.ಕೆ.ಜಿ, ಯು.ಕೆಜಿ ಮುಗಿಸಿ ಒಂದನೇ ತರಗತಿಗೆ ಬಹುಪಾಲು ಅದೇ ಖಾಸಗಿ ಶಾಲೆಗೆ ದಾಖಲಾಗುತ್ತದೆ. ಆದರೆ ಸರ್ಕಾರಿ ಶಾಲೆಗೆ ಮಗು ದಾಖಲಾಗಬೇಕಾದರೆ ಕಡ್ಡಾಯವಾಗಿ 5ವರ್ಷ 10 ತಿಂಗಳು ತುಂಬಿರಲೇಬೇಕೆಂಬ ಕಠಿಣ ನಿಯಮವಿದೆ. ಇಷ್ಟು ವರ್ಷ ಯಾವ ಪೋಷಕರು ಕಾಯುತ್ತಾರೆ? ಅದೂ ಕೂಡ ನೇರವಾಗಿ ಒಂದನೇ ತರಗತಿಗೆ ದಾಖಲಾಗಬೇಕು. ಇಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣದ ಸೌಲಭ್ಯವಿಲ್ಲ. ಅದನ್ನು ಅಂಗನವಾಡಿ, ಶಿಶುವಿಹಾರಗಳಿಗೆ ವಹಿಸಿದರೂ ಕೂಡ ಅದರ ಮೇಲೆ ಪೋಷಕರಿಗೆ ನಂಬಿಕೆ ಇಲ್ಲದ್ದರಿಂದ ಬಹುಪಾಲು ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ನರ್ಸರಿ ಹಂತಕ್ಕೆ ಸೇರಿಸುತ್ತಿದ್ದಾರೆ.

ಸರ್ಕಾರ ಏಕೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ನರ್ಸರಿ ( ಪೂರ್ವ ಪ್ರಾಥಮಿಕ ) ಶಾಲೆಗಳನ್ನು ಆರಂಭಿಸಬಾರದು? ರಾಜ್ಯದಲ್ಲಿ ಸುಮಾರು 500 ಸರ್ಕಾರಿ ಶಾಲೆಗಳಲ್ಲಿ ಶಾಲಾ ಸಮುದಾಯಗಳೆ (ಪೋಷಕರು, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಸದಸ್ಯರು) ಜವಾಬ್ದಾರಿ ತೆಗೆದುಕೊಂಡು ತಮ್ಮ ಕೈಯಿಂದ ಹಣ ಹಾಕಿ ‘ಮಕ್ಕಳ ಮನೆ’ ಹೆಸರಿನಲ್ಲಿ ನರ್ಸರಿ ಶಾಲೆಗಳನ್ನು ತೆರೆದಿದ್ದಾರೆ. ಈ ಎಲ್ಲಾ ಶಾಲೆಗಳಲ್ಲಿಯೂ ಕೂಡ ಮಕ್ಕಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಮುಚ್ಚಿಹೊಗುತ್ತಿದ್ದ ಶಾಲೆಗಳು ಈಗ ಮಕ್ಕಳಿಂದ ತುಂಬಿ ನಳನಳಿಸುತ್ತಿವೆ. ಇದೇ ಮಾದರಿಯಲ್ಲಿ ಕೂಡಲೇ ಸರ್ಕಾರ ಕಾರ್ಯಪ್ರವೃತ್ತರಾಗಬೇಕು.

ಮೂರನೇಯದಾಗಿ ಶಿಕ್ಷಕರ ಕೆಲಸ ಮತ್ತು ಬೋಧಾನ ವಿಧಾನ. ಸರ್ಕಾರಿ ಶಾಲಾ ಶಿಕ್ಷಕರು ಮೆರಿಟ್ ಆಧಾರದಲ್ಲೇ ಆಯ್ಕೆಯಾಗಿರುತ್ತಾದರೂ ಅವರಿಗೆ ಕಾಲಕಾಲಕ್ಕೆ ನೈಜ ವೈಜ್ಞಾನಿಕ ತರಬೇತಿಗಳು ಬೇಕಿವೆ. ಇರುವ ಕಡಿಮೆ ಶಿಕ್ಷಕರ ಮೇಲೆ ಶಿಕ್ಷಣೇತರ ಹೊರೆಗಳು ಸೇರಿ ನೂರೆಂಟು ಕೆಲಸಗಳನ್ನು ಸರ್ಕಾರ, ಶಿಕ್ಷಣ ಇಲಾಖೆ ವಹಿಸಿದೆ. ಇದು ತಪ್ಪಬೇಕು. ತುರ್ತು ಪರಿಸ್ಥಿತಿ, ಚುನಾವಣೆಯಂತಹ ಗಂಭೀರ ಕೆಲಸಗಳನ್ನು ಬಿಟ್ಟು ಜಾತಿಗಣತಿ, ಜಾನುವಾರು ಗಣತಿಯಂತಹ ಕೆಲಸಗಳಿಗೆ ಅವರನ್ನು ನಿಯೋಜಿಸಬಾರದು. ಅವರು ಸಂಪೂರ್ಣ ಪಾಠ ಮಾಡಲು ಮತ್ತು ಮಕ್ಕಳೊಂದಿಗೆ ಬೆರೆತು ಅವರ ಮನಸ್ಸನ್ನು ಅರ್ಥಮಾಡಿಕೊಳ್ಳಲು ಬಿಡಬೇಕು.

ಅದೇ ಸಂದರ್ಭದಲ್ಲಿ ಶಿಕ್ಷಕರು ಸರಿಯಾಗಿ ಶಾಲೆಗಳಿಗೆ ಹೋಗುತ್ತರಿದ್ದಾರೆಯೇ? ಪಾಠ ಮಾಡುತ್ತಿದ್ದಾರೆಯೇ? ಎಂಬುದರ ನಿಖರ ಮೇಲ್ವಿಚಾರಣೆ ಮಾಡಬೇಕಿದೆ. ಖಾಸಗಿ ಶಾಲೆಗಳಲ್ಲಿ ಅಲ್ಲಿನ ಆಡಳಿತ ಮಂಡಳಿಗಳು ಶಿಕ್ಷಕರ ಮೇಲೆ ಸದಾ ಹದ್ದಿನ ಕಣ್ಣು ಇಟ್ಟಿರುತ್ತಾರೆ. ಪ್ರತಿನಿತ್ಯ 7-8 ಅವಧಿ ಪಾಠ ಮಾಡಿಸುವ ಮೂಲಕ ಒಂದು ರೀತಿ ಜೀತದ ರೀತಿಯಲ್ಲಿಯೇ ಅವರಿಂದ ದುಡಿಸಿಕೊಳ್ಳುತ್ತಾರೆ. ಅಲ್ಲಿನ ಶಿಕ್ಷಕರು ಸಹ ತಾವು ಉರು ಹೊಡೆದು ಬಂದಿದ್ದನ್ನು ಆ ಮಕ್ಕಳ ಮೇಲೆ ಹೇರಿ ಉರು ಹೊಡೆಸುತ್ತಾರೆ. ಇಲ್ಲಿ ಸೃಜನಾತ್ಮಕ ಶಿಕ್ಷಣಕ್ಕೆ ಅವಕಾಶವೂ ಇಲ್ಲ ವ್ಯವಧಾನವೂ ಇಲ್ಲ. ಅದು ನಮ್ಮ ಪೋಷಕರಿಗೂ ಬೇಕಾಗಿಲ್ಲ.

ಇದಕ್ಕೆ ವ್ಯತಿರಿಕ್ತವಾಗಿ ಸರ್ಕಾರಿ ಶಾಲೆಗಳಲ್ಲಿ ಆರಾಮಾದಾಯಕ ಕಲಿಕೆ ಇದ್ದರೂ ಕೂಡ ಕೆಲ ಶಿಕ್ಷಕರು ಪಾಠ ಮಾಡದೇ ತಪ್ಪಿಸಿಕೊಳ್ಳುತ್ತಿದ್ದಾರೆ. ಮೇಲ್ವಿಚಾರಣೆಗಾಗಿಯೇ ಇರುವ ಬಿ.ಇ.ಓ ಮತ್ತು ಡಿ.ಡಿ.ಪಿ.ಐ ರವರು ಹೆಚ್ಚಿನ ಪಾಲು ಖಾಸಗಿ ಶಾಲೆಗಳಿಂದ ಬರುವ ಕಮಾಯಿ ಹಣ ಹೇಗೆ ಉಪಯೋಗಿಸಬೇಕೆಂಬುದರಲ್ಲೇ ಸಮಯ ಕಳೆದುಬಿಡುತ್ತಾರೆ. ಇವರು ಖಾಸಗಿ ಶಾಲೆಗಳು ನಿಯಮ ಮೀರಿ ವರ್ತಿಸುವುದಕ್ಕೆ ಕಡಿವಾಣ ಹಾಕುವುದಿಲ್ಲ ಮಾತ್ರವಲ್ಲ ಸರ್ಕಾರಿ ಶಿಕ್ಷಕರು ಪಾಠ ಮಾಡುತ್ತಿರುವುದುನ್ನು ನೋಡುವುದಿಲ್ಲ.

ಅಪರೂಪಕ್ಕೆಂಬಂತೆ ಕೆಲ ಪ್ರಾಮಾಣಿಕ ಅಧಿಕಾರಿಗಳು ಶಿಕ್ಷಕರ ಮೇಲೆ ಕ್ರಮ ಕೈಗೊಳ್ಳಲು ಹೊರಟರೆ ಶಿಕ್ಷಕರ ಸಂಘ ಅವರ ಮೇಲೆ ಗಧಾಪ್ರಹಾರ ಮಾಡುತ್ತದೆ. ಕೆಲವು ಕಡೆ ಸರ್ಕಾರಿ ಶಿಕ್ಷಕರು ಪಾಠ ಮಾಡುವುದು ಬಿಟ್ಟು ಸ್ಥಳೀಯ ಶಾಸಕರ ಚೇಲಾ ಆಗಿಬಿಟ್ಟಿರುತ್ತಾರೆ, ಇವರಿಗೆ ಯಾರ ಭಯವೂ ಇರುವುದಿಲ್ಲ. ಇದು ಸರ್ಕಾರಕ್ಕೆ ಗೊತ್ತಿಲ್ಲವೇ? ಇದನ್ನು ಸರಿ ಪಡಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸಿದೆಯೇ? ಮಾಡಲು ಸಾಧ್ಯವಿದೆ, ಸರ್ಕಾರಿ ಶಾಲೆಗಳ ನಮ್ಮ ಮಕ್ಕಳ ದೃಷ್ಟಿಯಿಂದ ಮಾಡಬೇಕು ಅಷ್ಟೇ.

ನಾಲ್ಕನೇಯದಾಗಿ ಸರ್ಕಾರಿ ಶಾಲೆಗಳಲ್ಲಿ ಎಷ್ಟು ಸುಸಜ್ಜಿತ ಕಟ್ಟಡಗಳಿವೆ? ಎಷ್ಟು ಶೌಚಾಲಯಗಳಿವೆ ಮತ್ತು ಅದರಲ್ಲಿ ಎಷ್ಟರಲ್ಲಿ ನೀರು ಬರುತ್ತವೆ? ಎಷ್ಟು ಜನ ದೈಹಿಕ ಶಿಕ್ಷಕರು, ರಂಗಶಿಕ್ಷಕರು, ಸಂಗೀತಾ ಶಿಕ್ಷಕರು ಇತ್ಯಾದಿ ಸಹಪಠ್ಯ ಶಿಕ್ಷಕರಿದ್ದಾರೆ? ಮಕ್ಕಳನ್ನು ಮತ್ತು ಶಾಲಾ ಪರಿಸರವನ್ನು ಶುಚಿಯಾಗಿಡಲು ಎಷ್ಟು ಜನ ಆಯಾಗಳಿದ್ದಾರೆ? ಸರ್ಕಾರಿ ವ್ಯವಸ್ಥೆ ಸರಿಯಿಲ್ಲ ಎಂದು ಹೇಳಲು ನಾನಿದನ್ನು ಹೇಳುತ್ತಿಲ್ಲ ಬದಲಿಗೆ ಇದನ್ನು ಬದಲಾಯಿಸಲು ಮೊದಲು ಸರ್ಕಾರ ಗಮನಿಸಬೇಕು.

ಇದನ್ನು ಓದಿ: ದೆಹಲಿಯ ಸರ್ಕಾರೀ ಶಾಲೆ ಮಕ್ಕಳು ಖಾಸಗಿ ಶಾಲೆಗಳನ್ನು ಹಿಂದಿಕ್ಕಿದ್ದು ಹೇಗೆ?

ಐದನೇಯದಾಗಿ ಎಷ್ಟು ಖಾಸಗಿ ಶಾಲೆಗಳು ಅನಮತಿ ಮತ್ತು ಮಾನ್ಯತೆ ಪಡೆದಿವೆ? ಎಷ್ಟು ಶಾಲೆಗಳಿಗೆ ಆಟದ ಮೈದಾನ, ಕಟ್ಟಡ, ಶೌಚಾಲಯ ಸೇರಿದಂತೆ ಇನ್ನಿತರ ಸೌಲಭ್ಯಗಳಿವೆ? ಸಾವಿರಾರು ಖಾಸಗಿ ಶಾಲೆಗಳು ಕೆಟ್ಟ ಪರಿಸ್ಥಿತಿಯಲ್ಲಿವೆ, ಕನ್ನಡ ಮಾಧ್ಯಮದ ಅನುಮತಿ ಪಡೆದು ಸರಿಯಾದ ಶಿಕ್ಷಕರಿಲ್ಲದೆ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಸುತ್ತಿದ್ದಾರೆ. ಸರ್ಕಾರಿ ಶಾಲೆಗಳ ಒಂದೂ ಕಿ.ಮೀ ವ್ಯಾಪ್ತಿಯಲ್ಲಿ ಮತ್ತೊಂದು ಖಾಸಗಿ ಶಾಲೆ ಇರಬಾರದೆಂಬ 1982ರ ಕರ್ನಾಟಕ ಶಿಕ್ಷಣ ಕಾಯ್ದೆಯ ನಿಯಮಗಳು ಪಾಲನೆಯಾಗುತ್ತಿವೆಯೇ? ಇದನ್ನೆಲ್ಲ ನಿಯಂತ್ರಿಸಬೇಕಾದುದು ಸರ್ಕಾರವಲ್ಲದೇ ಮತ್ತೆ ಇನ್ಯಾರು? ಇದರಿಂದ ಆ ಖಾಸಗಿ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳ ಹಕ್ಕುಗಳು ಸಹ ಉಲ್ಲಂಘನೆಯಾಗುತ್ತಿವೆ.

ಆರನೇಯದಾಗಿ ಆರ್.ಟಿ.ಇ ಜಾರಿಗೆ ತಂದು ಶೇ.25% ದುರ್ಬಲ ವರ್ಗದ ಮಕ್ಕಳು ಖಾಸಗಿ ಶಾಲೆಗಳಲ್ಲಿ ಓದುತ್ತಿರುವುದು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಸರಿಯಾದುದು. ಆದರೆ ಆ ಖಾಸಗಿ ಶಾಲೆಗಳಿಗೆ ಒಂದು ಮಗುವಿಗೆ 14,000 ರೂಗಳಂತೆ ಸರ್ಕಾರ ನೀಡುತ್ತಿರುವುದು ಮಾತ್ರ ಅನ್ಯಾಯ. ಈ ಕೂಡಲೇ ಹಣ ನೀಡುವುದನ್ನು ನಿಲ್ಲಿಸಬೇಕು. ಆ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುವುದು ಆ ಖಾಸಗಿ ಶಾಲೆಗಳ ಸಾಮಾಜಿಕ ಜವಾಬ್ದಾರಿ. ಸರ್ಕಾರದಿಂದ ಹಲವು ಸೌಲಭ್ಯಗಳನ್ನು ಪಡೆಯುವ ಆ ಶಾಲೆಗಳು ಅಷ್ಟನ್ನೂ ಮಾಡದಿದ್ದರೆ ಹೇಗೆ? ಅದೇ ಹಣವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ವ್ಯಯಿಸಬೇಕು.

ಏಳನೇಯದಾಗಿ ಆರ್.ಟಿ.ಇ ಜಾರಿಗೆ ಬಂದ ಆರಂಭದಲ್ಲಿ ದೆಹಲಿಯಲ್ಲಿ ನಡೆದ ಸಮೀಕ್ಷೆಯಂತೆ ಶೇ.25%ರ ಅಡಿಯಲ್ಲಿ ಖಾಸಗಿ ಶಾಲೆಗಳಿಗೆ ದಾಖಲಾಗಿದ್ದ ಅರ್ಧದಷ್ಟು ಮಕ್ಕಳು ಅಲ್ಲಿನ ವಾತವರಣ ಮತ್ತು ಮಾಧ್ಯಮದ ಗೊಂದಲದಿಂದ ಅರ್ಧದಲ್ಲೇ ಶಾಲೆ ಬಿಟ್ಟು ಡ್ರಾಪ್‍ಔಟ್ ಆಗಿದ್ದರು ಎಂದು ತಿಳಿದಿದೆ. ನಮ್ಮ ದಲಿತ, ಹಿಂದುಳಿದ ಮಕ್ಕಳಿಗೆ ನಿಜವಾಗಿಯೂ ಇಂಗ್ಲಿಷ್ ಬೇಕು. ಆದರೆ ಮನೆಯಲ್ಲಿ ಇಂಗ್ಲಿಷ್ ವಾತವರಣವಿಲ್ಲದೆ ಕೇವಲ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮವಿದ್ದಾಗ ಆ ಮಗುವಿಗೆ ಕಲಿಕೆ ನಿಜಕ್ಕೂ ತ್ರಾಸದಾಯಕವಾಗುತ್ತದೆ. ಈಗ ಖಾಸಗಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಸುತ್ತಿರುವ ಬಹಳಷ್ಟು ಪೋಷಕರು ಶಾಲಾ ಅವಧಿ ನಂತರದಲ್ಲಿ ತಮ್ಮ ಮಕ್ಕಳನ್ನು ಟ್ಯೂಷನ್‍ಗೂ ಕೂಡ ಕಳಿಸುತ್ತಿರುವುದನ್ನು ನೀವು ಗಮನಿಸಿರಬಹುದು. ಇದೇ ರೀತಿ ಎಷ್ಟು ಕುಟುಂಬಗಳು ಮಾಡಲು ಸಾಧ್ಯ? ಇದಕ್ಕಾಗಿ ಸರ್ಕಾರ ಗ್ರಾಮೀಣ ಭಾಗದ ಜನರ ಆದಾಯ ಏರಿಕೆಗೆ ಕ್ರಮಗಳನ್ನು ಕೈಗೊಳ್ಳಬೇಕು.

ಪಕ್ಕದ ಆಂದ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಇದೇ ರೀತಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಆಂಗ್ಲ ಮಾಧ್ಯಮ ಶಾಲೆಗಳನ್ನು ಐದಾರು ವರ್ಷಗಳ ಹಿಂದೆಯೇ ಆರಭಿಸಲಾಗಿದೆ. ಪರಿಸ್ಥಿತಿ ಏನಾಗಿದೆ ಎಂಬುದುನ್ನು ಪಕ್ಕದಲ್ಲೇ ಇರುವುದರಿಂದ ನೀವು ಹೋಗಿ ನೋಡುವುದೆ ಲೇಸು. ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸಲು ಶಿಕ್ಷಕರಿಗೆ ಸಮಗ್ರ ತರಬೇತಿ ಬೇಕು. ಈ ವಿಚಾರದಲ್ಲಿ ನಾವು ತೀರಾ ಹಿಂದುಳಿದಿದ್ದೇವೆ. ಇದರಿಂದಾಗಿ ಅಲ್ಲಿ ಅತ್ತ ತೆಲುಗು ಭಾಷೆಯಲ್ಲಿಯೂ ಸರಿಯಾಗಿ ಕಲಿಯದೆ, ಇಂಗ್ಲಿಷ್ ಅನ್ನು ಕಲಿಯದೇ ಮಕ್ಕಳು ಒದ್ದಾಡುತ್ತಿದ್ದಾರೆ ಮತ್ತು ಡ್ರಾಪ್‍ಔಟ್ ಪ್ರಮಾಣ ಹೆಚ್ಚಾಗುತ್ತಿದೆ. ಆಂಗ್ಲ ಮಾಧ್ಯಮ ಶಾಲೆಗಳ ಆರಂಭದ ನಂತರ ಸರ್ಕಾರಿ ಶಾಲೆಗಳ ಮುಚ್ಚುವಿಕೆ ವೇಗ ಪಡೆದುಕೊಂಡಿದೆ. ಇದರ ವಿರುದ್ಧ ಹಲವಾರು ಶಿಕ್ಷಕ ಸಂಘಟನೆಗಳು ಬೀದಿಗಿಳಿದು ಹೋರಾಡುತ್ತಿದ್ದಾರೆ. ಗುಣಮಟ್ಟದಲ್ಲಿ ಅಲ್ಲಿನ ಶಾಲೆಗಳಿಗಿಂತ ಕರ್ನಾಟಕ ಹಲವು ಪಟ್ಟು ಮುಂದಿದ್ದು ಇನ್ನೂ ಸಾಧಿಸಬೇಕಿದೆ.

ಹಾಗಾಗಿ ಸರ್ಕಾರ ಮೊದಲು ಇಂಗ್ಲಿಷ್ ಮಾಧ್ಯಮದಲ್ಲಿ ಪರಿಣಾಮಕಾರಿಯಾಗಿ ಬೋಧಿಸಬಲ್ಲ ಶಿಕ್ಷಕರನ್ನು ತಯಾರು ಮಾಡಬೇಕಿದೆ. ಅದಕ್ಕಾಗಿ ಸಂಪನ್ಮೂಲ ಮತ್ತು ವ್ಯವಸ್ಥೆ ಮಾಡಲು ಶುರುಮಾಡಬೇಕು. ಅದಕ್ಕಿಂತ ಮೊದಲು ಶಿಕ್ಷಣವೆಂಬುದು ರಾಷ್ಟ್ರ ನಿರ್ಮಾಣದ ಮಹಾನ್ ಕೆಲಸ ಎಂಬುದನ್ನು ಅರಿತುಕೊಳ್ಳಬೇಕು. ಇದರಲ್ಲಿ ಹಣಕಾಸಿನ ಲಾಭ ನಷ್ಟ ಯೋಚಿಸದೇ ಬಜೆಟ್‍ನಲ್ಲಿ ಬಿಡಿಗಾಸು ಕೊಡುವುದನ್ನು ಬಿಟ್ಟು ಹೆಚ್ಚಿನ ಹಣ ಮತ್ತು ತನ್ಮಯತೆ ತೊಡಗಿಸಬೇಕು. ಕೇಂದ್ರ ಸರ್ಕಾರದ ಅಡಿಯಲ್ಲಿಯೇ ನಡೆಯುತ್ತಿರುವ ಕೇಂದ್ರೀಯ ವಿದ್ಯಾಲಯಗಳು ಮತ್ತು ನವೋದಯ ಶಾಲೆಗಲೇ ಏಕೆ ಪ್ರತಿವರ್ಷವೂ ಖಾಸಗಿ ಶಾಲೆಗಳಿಗಿಂತ ಅತ್ಯುತ್ತಮ ಸಾಧನೆ ತೋರಿಸುತ್ತಿವೆ? ಆ ಶಾಲೆಗಳಲ್ಲಿ ಏನೇನು ಸೌಲಭ್ಯಗಳಿಗೆ ಎಂದು ಯೋಚಿಸಿದರೆ ಸಾಕು ಈ ಹೊತ್ತಿಗೆ ನಮ್ಮ ಸರ್ಕಾರಿ ಶಾಲೆಗಳಿಗೆ ಏನು ಬೇಕು ಎಂಬುದು ತಟ್ಟನೇ ಅರ್ಥವಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...