Homeಮುಖಪುಟಬೆಳ್ಳಿಚುಕ್ಕಿ: ಕಾಲ್ಪನಿಕ ಗಡಿಯಾರದ ಮೂಲಕ ಆಕಾಶಕಾಯಗಳನ್ನು ಗುರುತಿಸುವ ಬಗೆ!

ಬೆಳ್ಳಿಚುಕ್ಕಿ: ಕಾಲ್ಪನಿಕ ಗಡಿಯಾರದ ಮೂಲಕ ಆಕಾಶಕಾಯಗಳನ್ನು ಗುರುತಿಸುವ ಬಗೆ!

- Advertisement -
- Advertisement -

ಚಳಿಗಾಲದ ಶುಭ್ರ ಆಕಾಶದಲ್ಲಿ ಆಕಾಶ ವೀಕ್ಷಣೆ ಮಾರ್ಗದರ್ಶಿಯ ಸಹಾಯದಿಂದ, ಸೌರ ಮಂಡಲದ ಗ್ರಹಗಳು, ಚಂದ್ರನ ಬಿಂಬಾವಸ್ಥೆಗಳು, ನಕ್ಷತ್ರ ಪುಂಜಗಳು, ನಿಹಾರಿಕೆ ಮತ್ತು ನಕ್ಷತ್ರಗಳ ಗೊಂಚಲುಗಳನ್ನು ನೋಡಿದ ಸವಿ ಇನ್ನೂ ಉಳಿದಿರುವಂತೆಯೇ, ಆಕಾಶ ವೀಕ್ಷಣೆಯ ಆಸಕ್ತಿಗಳನ್ನು ಹಾಗೂ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ಇದು ಸಕಾಲ.

ಆಕಾಶ ವೀಕ್ಷಣೆಯ ಹವ್ಯಾಸ ಉನ್ನತಿಯಾದಂತೆ, ಆಗಸದಲ್ಲಿ ಕಾಣುವ ಕಾಯಗಳನ್ನು ಸುಲಭವಾಗಿ ವೀಕ್ಷಿಸಲು ಮತ್ತು ಇತರರಿಗೆ ಸುಲಭವಾಗಿ ತಿಳಿಸಲು ಅನುವಾಗುವಂತೆ ಕೆಲವು ಕಾಲ್ಪನಿಕ ಉಪಕರಣಗಳನ್ನು/ ಮಾರ್ಗಸೂಚಿಯನ್ನು ಖಗೋಳ ವಿಜ್ಞಾನಾಸಕ್ತರು ಜಗತ್ತಿನಾದ್ಯಂತ ಬಳಸುತ್ತಾರೆ. ಅಂತಹ ಒಂದು ಕಾಲ್ಪನಿಕ ಉಪಕರಣದ/ಮಾರ್ಗಸೂಚಿ ಸಹಾಯದಿಂದ ಆಕಾಶ ವೀಕ್ಷಣೆ ಮಾಡುವುದು ಹೇಗೆ ಎಂಬುದನ್ನು ಈ ಸಂಚಿಕೆಯಲ್ಲಿ ತಿಳಿಯೋಣ. ನೆನಪಿರಲಿ, ಇದು ಕಾಲ್ಪನಿಕವಾಗಿ ನಿಮ್ಮ ಮನಸ್ಸಿನಲ್ಲಿ ಕಲ್ಪಿಸಿಕೊಳ್ಳುವ ಉಪಕರಣ! ಬೌತಿಕವಾಗಿ ಖರೀದಿ ಮಾಡುವುದಲ್ಲ.

ಅಂದಹಾಗೆ, ಯಾವುದಪ್ಪಾ ಈ ಉಪಕರಣ ಅಂದರೆ, ದಿನ ನಾವು-ನೀವು ಸಮಯ ನೋಡಲು ಬಳಸುವ ಗಡಿಯಾರವೇ ಆ ಉಪಕರಣ! ಹೌದು ಗಡಿಯಾರವನ್ನು ಆಗಸದಲ್ಲಿ ಕಲ್ಪಿಸಿಕೊಂಡು ಆಕಾಶ ವೀಕ್ಷಣೆ ಮಾಡುವುದು ಹವ್ಯಾಸಿ ಆಕಾಶ ವೀಕ್ಷಕರ ತಂತ್ರಗಾರಿಕೆ. ಆಕಾಶ ವೀಕ್ಷಣೆಯ ಸಂದರ್ಭದಲ್ಲಿ ಅತ್ಯಂತ ಸುಲಭವಾಗಿ ಯಾವ ದಿಕ್ಕಿನಲ್ಲಿ, ಯಾವ ನಕ್ಷತ್ರ ಪುಂಜವಿದೆ, ಗ್ರಹವಿದೆ ಮತ್ತು ನಿಹಾರಿಕೆಗಳಿವೆ ಎಂಬುದನ್ನು ಇತರರಿಗೂ ಸೂಚಿಸಲು ಈ ತಂತ್ರಗಾರಿಕೆಯನ್ನು ಆಕಾಶ ವೀಕ್ಷಕರು ಬಳಸುತ್ತಾರೆ.

ಚಿತ್ರ-1

ಈಗ ಚಿತ್ರ (1)ನ್ನು ಗಮನಿಸಿ, ಈ ಚಿತ್ರದಲ್ಲಿರುವ ಪ್ರಸಿದ್ಧ ನಕ್ಷತ್ರ ಪುಂಜವನ್ನು ನೀವು ಈಗಾಗಲೇ ಆಗಸದಲ್ಲಿ ಕಂಡಿದ್ದೀರಿ ಅಲ್ಲವೆ? ಹೌದು ಆ ನಕ್ಷತ್ರ ಪುಂಜ ಒರಿಯಾನ್ ನಕ್ಷತ್ರ ಪುಂಜ. ಈ ತಿಂಗಳ ಯಾವುದೇ ದಿನರಾತ್ರಿ 7 ಗಂಟೆಯಿಂದ 7.30 ಗಂಟೆಯ ಸಮಯದಲ್ಲಿ, ಪೂರ್ವಕ್ಕೆ ಮುಖಮಾಡಿ ನೆತ್ತಿಯಿಂದ ಪೂರ್ವ ದಿಕ್ಕಿಗೆ ಕಣ್ಣಾಡಿಸಿದರೆ, ಈ ಚಿತ್ರದಲ್ಲಿರುವ ಒರಿಯಾನ್ ಮತ್ತು ಎಲ್ಲಾ ನಕ್ಷತ್ರಗಳು ಹಾಗೂ ನಕ್ಷತ್ರ ಪುಂಜಗಳನ್ನು ಕಾಣಬಹುದು. ಇಲ್ಲಿರುವ ಎಲ್ಲಾ ಚಿತ್ರಗಳಲ್ಲು ನಕ್ಷತ್ರ ಪುಂಜಗಳನ್ನು ಗುರುತಿಸಲು ಕಾಲ್ಪನಿಕ ರೇಖೆಗಳನ್ನು ತಂತ್ರಾಂಶದಿಂದ ಸೃಜಿಸಲಾಗಿದೆ.

ಈಗ ನಾವು ನಮ್ಮ ಗಡಿಯಾರದ ತಂತ್ರಗಾರಿಕೆಗೆ ಬರೋಣ. ಚಿತ್ರ (2)ರಲ್ಲಿ ಒರಿಯಾನ್ ನಕ್ಷತ್ರ ಪುಂಜದ ಬೀಟಲ್‌ಜೂಸ್/ಬಿಟಲ್‌ಗೀಸ್ ನಕ್ಷತ್ರವನ್ನು ಕೇಂದ್ರವಾಗಿಟ್ಟುಕೊಂಡು ಒಂದು ಕಾಲ್ಪನಿಕ ಗಡಿಯಾರವನ್ನು ಊಹಿಸಿಕೊಳ್ಳಬಹುದಾಗಿದೆ. ಈ ಕಾಲ್ಪನಿಕ ಗಡಿಯಾರದಲ್ಲಿನ ಸಂಖ್ಯೆ 6 ಪೂರ್ವ ದಿಕ್ಕಿಗಿದೆ. ಅಂದರೆ, ನೀವು ಪೂರ್ವ ದಿಕ್ಕಿಗೆ ಮುಖ ಮಾಡಿ ಒರಿಯಾನ್ ನಕ್ಷತ್ರ ಪುಂಜವನ್ನು ನೋಡಿ, ಅದರ ನಕ್ಷತ್ರ ಬಿಟಲ್‌ಗೀಸ್‌ಅನ್ನು ನೋಡಿ, ಗಡಿಯಾರದ ಸಂಖ್ಯೆ 06, ಪೂರ್ವ ದಿಕ್ಕಿಗೆ ಬರುವಂತೆ ಕಾಲ್ಪನಿಕವಾಗಿ ಗಡಿಯಾರವನ್ನು ಊಹಿಸಿಕೊಳ್ಳಬೇಕು ಎಂದರ್ಥ. ಹಾಗೆ ಊಹಿಸಿಕೊಂಡಾಗ, ಕಾಲ್ಪನಿಕ ಗಡಿಯಾರದ ಸಂಖ್ಯೆ 09 ಉತ್ತರ ದಿಕ್ಕನ್ನು, ಸಂಖ್ಯೆ 12 ಪಶ್ಚಿಮ ದಿಕ್ಕನ್ನು ಮತ್ತು ಸಂಖ್ಯೆ 03 ದಕ್ಷಿಣ ದಿಕ್ಕನ್ನು ಸೂಚಿಸುತ್ತಿರುತ್ತದೆ. ಇದು ಮೊದಲನೇ ಹಂತ.

ಚಿತ್ರ-2

ಇನ್ನು ಎರಡನೇ ಹಂತಕ್ಕೆ ಬರೋಣ. ಚಿತ್ರ (2)ರಲ್ಲಿ ಊಹಿಸಿಕೊಂಡಿರುವ ಗಡಿಯಾರ ಸಮಯ ತಿಳಿಸುವ ಗಡಿಯಾರ ಅಲ್ಲ, ಬದಲಾಗಿ ದಿಕ್ಕುಗಳನ್ನು ಸುಲಭವಾಗಿ ಗುರುತಿಸುವುದಕ್ಕೆ ಕಲ್ಪಿಸಿಕೊಂಡಿರುವ ಗಡಿಯಾರ. ಈಗ ಈ ಗಡಿಯಾರದಲ್ಲಿ ಗಂಟೆಯನ್ನು ಸೂಚಿಸುವ ಮುಳ್ಳನ್ನು ಮಾತ್ರ ಊಹಿಸಿಕೊಳ್ಳೋಣ.

ಈಗ ಒಂದು ಸನ್ನಿವೇಶವನ್ನು ಕಲ್ಪಿಸಿಕೊಳ್ಳಿ -ಇಲ್ಲಿ ಒಬ್ಬ ಹವ್ಯಾಸಿ ಆಕಾಶ ವೀಕ್ಷಕ, ಹಲವರಿಗೆ ಮಾರ್ಗದರ್ಶನ ನೀಡುತ್ತಿದ್ದಾನೆ..

ಹವ್ಯಾಸಿ ಆಕಾಶ ವೀಕ್ಷಕ: ಎಲ್ಲರೂ ಪೂರ್ವ ದಿಕ್ಕಿಗೆ ತಿರುಗಿ ಒರಿಯಾನ್ ನಕ್ಷತ್ರ ಪುಂಜ ನೋಡಿ, ಒರಿಯಾನ್‌ನ ಬಿಟಲ್‌ಗೀಸ್ ನಕ್ಷತ್ರ ಕೇಂದ್ರದಲ್ಲಿರುವಂತೆ ಒಂದು ಗಡಿಯಾರ ಊಹಿಸಿಕೊಂಡು, ಅದರ 2 ಗಂಟೆಯ ದಿಕ್ಕಿನಲ್ಲಿ ಒಂದು ಕಾಲ್ಪನಿಕ ರೇಖೆ ಎಳೆಯಿರಿ, ಆ ಕಾಲ್ಪನಿಕ ರೇಖೆ ಒಂದು ನಕ್ಷತ್ರದ ಬಳಿ ಬಂದು ತಲುಪುತ್ತದೆ. ಅದೇ, ರೀಗಲ್ ನಕ್ಷತ್ರ!

ವೀಕ್ಷಕರು: [ಸಹಾಯಕ್ಕೆ ಚಿತ್ರ (3)ನ್ನು ಗಮನಿಸಿ] ಮೊದಲು ಪೂರ್ವ ದಿಕ್ಕಿಗೆ ತಿರುಗುತ್ತಾರೆ. ನಂತರ ಒರಿಯಾನ್ ನಕ್ಷತ್ರ ಪುಂಜವನ್ನು ಗುರುತಿಸಿ ಹವ್ಯಾಸಿ ಆಕಾಶ ವೀಕ್ಷಕ ಹೇಳಿದ್ದನ್ನು ಅನುಸರಿಸಿ ರೀಗಲ್ ನಕ್ಷತ್ರವನ್ನು ವೀಕ್ಷಿಸುತ್ತಾರೆ…

ಚಿತ್ರ-3

ಮೇಲಿನ ಸನ್ನಿವೇಶದಲ್ಲಿ, ಗಡಿಯಾರದ ಗಂಟೆ-ಮುಳ್ಳು ತೋರಿಸುವ ದಿಕ್ಕುಗಳಲ್ಲಿ ಕಾಲ್ಪನಿಕ ರೇಖೆಗಳನ್ನು ಉಹಿಸಿಕೊಂಡು, ಆಗಸದಲ್ಲಿ ಒಂದು ನಕ್ಷತ್ರ ಪುಂಜದಿಂದ ಇನ್ನೊಂದು ನಕ್ಷತ್ರ ಪುಂಜಕ್ಕೆ ನೋಟವನ್ನು ಬದಲಿಸಿ, ಆಕಾಶ ಕಾಯಗಳನ್ನು ವೀಕ್ಷಿಸಬೇಕು. ಇಂತಹ ಆಕಾಶ ವೀಕ್ಷಣೆಗೆ ಯಾವುದೇ ಭೌತಿಕ ಉಪಕರಣಗಳು ಬೇಕಿಲ್ಲಾ. ಅಂತೆಯೇ ಈ ಗಡಿಯಾರವನ್ನು ಬಿಟಲ್‌ಗೀಸ್ ನಂತರ ರೀಗಲ್ ನಕ್ಷತ್ರಕ್ಕೂ ಊಹಿಸಿಕೊಂಡು (ಕೇಂದ್ರವಾಗಿಸಿಕೊಂಡು) ಅಲ್ಲಿಂದ ಮುಂದೆ ತೆರಳಬಹುದು.

ಇದು, ಹವ್ಯಾಸಿ ಖಗೋಳ ವಿಜ್ಞಾನಿಗಳು ಯಾವುದೇ ಅನ್ಯ ಉಪಕರಣಗಳಿಲ್ಲದೆ ಆಕಾಶ ವೀಕ್ಷಣೆಯನ್ನು ಮಾಡಲು ಕಂಡುಕೊಂಡ ಮಾರ್ಗ ಮತ್ತು ಇದು ಸುಲಭವಾಗಿ ಆಕಾಶ ವೀಕ್ಷಣೆ ಕಲಿಸುವ ಮಾರ್ಗ. ಇದೊಂದೇ ನಿಯಮ ಅಥವಾ ಅಧಿಕೃತವಾದ ಆಕಾಶ ವೀಕ್ಷಣೆಯ ಮಾರ್ಗವೆಂದೇನಲ್ಲ. ಆಕಾಶ ವೀಕ್ಷಣೆಯು ಅಭ್ಯಾಸವಾದ ಮೇಲೆ, ಎಲ್ಲರೂ ತಮ್ಮತಮ್ಮ ಸೃಜನಶೀಲತೆಯಿಂದ ಇಂತಹ ಇನ್ನೂ ಹತ್ತು ಹಲವು ಮಾರ್ಗಗಳನ್ನು ಕಂಡುಕೊಳ್ಳಬಹುದು.

ಚಿತ್ರ-4

ಚಿತ್ರ (4): ಗಡಿಯಾರದ 11 ಗಂಟೆಯ ಆಸುಪಾಸಿನ ದಿಕ್ಕಿನಲ್ಲಿ, ಒಂದು ಕಾಲ್ಪನಿಕ ರೇಖೆಯನ್ನು ಉಹಿಸಿಕೊಳ್ಳಿ, ಆ ರೇಖೆಯು ಕಿತ್ತಳೆ ಬಣ್ಣದ ನಕ್ಷತ್ರದ ಬಳಿ ಬರುತ್ತದೆ. ಇದೇ ರೋಹಿಣಿ ನಕ್ಷತ್ರ. ಹಿಂದಿನ ಸಂಚಿಕೆಯ ಲೇಖನದಲ್ಲಿ ರೋಹಿಣಿ ನಕ್ಷತ್ರವನ್ನು ಒರಿಯಾನ್ ನಕ್ಷತ್ರ ಪುಂಜದಿಂದ ಹೇಗೆ ಗುರುತಿಸಿದೆವು ಎಂಬುದನ್ನು ನೆನಪಿಸಿಕೊಳ್ಳಿ. ಕಾಲ್ಪನಿಕ ಗಡಿಯಾರದ ಮೂಲಕ ಗುರುತಿಸುವುದು ಸಲಭವೋ ಅಥವಾ ಹಿಂದಿನ ಸಂಚಿಕೆಯ ಮಾರ್ಗಸೂಚಿ ಸುಲಭವೋ ನೀವೇ ಕಂಡುಕೊಳ್ಳಿ. ರೋಹಿಣಿ ನಕ್ಷತ್ರವು ವೃಷಭ ನಕ್ಷತ್ರ ಪುಂಜದಲ್ಲಿದೆ (ಇದು ರಾಶಿಯೂ ಹೌದು). ಈ ರೋಹಿಣಿ ನಕ್ಷತ್ರ ಸೂರ್ಯನಿಗೆ ಹೋಲಿಸಿದರೆ 44 ಪಟ್ಟು ದೊಡ್ಡದಿದೆ ಹಾಗೂ ಸುಮಾರು 65 ಜ್ಯೋತಿರ್ವರ್ಷಗಳ ದೂರವಿದೆ [1 ಜ್ಯೋತಿರ್ವರ್ಷವೆಂದರೆ 9.5 ಟ್ರಿಲಿಯನ್ (1012) ಕಿಲೋಮೀಟರ್]. ನಮ್ಮ ಸೂರ್ಯ 8 ಜ್ಯೋತಿರ್ವರ್ಷಗಳ ದೂರದಲ್ಲಿದ್ದಾನೆ.

ಚಿತ್ರ-5

ಚಿತ್ರ (5): ಈಗ, ಗಡಿಯಾರದ ಒಂಬತ್ತುವರೆ ಗಂಟೆಯ ದಿಕ್ಕನ್ನು ಉಹಿಸಿಕೊಳ್ಳಿ, ಬಿಟಲ್‌ಗೀಸ್ ನಕ್ಷತ್ರದಿಂದ ನೇರವಾಗಿ ಆ ದಿಕ್ಕು ಮತ್ತೊಂದು ಪ್ರಕಾಶಮಾನವಾದ ನಕ್ಷತ್ರಕ್ಕೆ ಬಡಿಯುತ್ತದೆ. ಇದು ಪೆಲ್ಲಾ ನಕ್ಷತ್ರ. ಆರಿಗಾ ನಕ್ಷತ್ರ ಪುಂಜದ ಅತೀ ಹೆಚ್ಚು ಪ್ರಕಾಶಮಾನವಾದ ನಕ್ಷತ್ರ. ಈ ನಕ್ಷತ್ರವನ್ನು ಬ್ರಹ್ಮ ಹೃದಯ ಎಂದೂಕರೆಯುತ್ತಾರೆ. ಈ ನಕ್ಷತ್ರ 42 ಜ್ಯೋತಿರ್ವರ್ಷಗಳ ದೂರವಿದ್ದು, ಸೂರ್ಯನಿಗಿಂತ 12 ಪಟ್ಟು ದೊಡ್ಡದಿದೆ. ಹಾಗೆಯೇ ಚಿತ್ರ (5)ರಲ್ಲಿ ಗುರುತಿಸಿರುವ ಆರಿಗಾ ನಕ್ಷತ್ರ ಪುಂಜದ ಪೆಂಟಗನ್‌ನಲ್ಲಿರುವ ನಕ್ಷತ್ರಗಳನ್ನು ವೀಕ್ಷಿಸಲು ಪ್ರಯತ್ನಿಸಿ.

ಚಿತ್ರ-6

ಚಿತ್ರ (6): ಇದೇ ರೀತಿ, ಗಡಿಯಾರದ 07.30 ದಿಕ್ಕಿನಲ್ಲಿ ನೋಡಿ, ಈ ದಿಕ್ಕಿನಲ್ಲಿ ಕಾಣುವ ಪ್ರಕಾಶಮಾನವಾದ ನಕ್ಷತ್ರ ಪೊಲಾಕ್ಸ್. ಅದರ ಪಕ್ಕದಲ್ಲಿರುವ ಇನ್ನೊಂದು ಪ್ರಕಾಶಮಾನವಾದ ನಕ್ಷತ್ರ ಕ್ಯಾಸ್ಟರ್ ಎಂದು. ಈ ಕ್ಯಾಸ್ಟ್‌ರ್ ಮತ್ತು ಪೊಲಾಕ್ಸ್ ಮಿಥುನ ನಕ್ಷತ್ರ ಪುಂಜದಲ್ಲಿದೆ. ಮಿಥುನ ನಕ್ಷತ್ರ ಪುಂಜ ರಾಶಿಯು ಹೌದು. ನೀವು ಮಿಥುನ ರಾಶಿಯ ಪುನರ್ವಸು ನಕ್ಷತ್ರ ಎಂದು ಕೇಳಿರಬಹುದು. ಈ ಪುನರ್ವಸು ನಕ್ಷತ್ರವೇ ಪೊಲಾಕ್ಸ್ ನಕ್ಷತ್ರ. ಇದು 33 ಜ್ಯೋತಿರ್ವರ್ಷಗಳ ದೂರವಿದ್ದು, ಸೂರ್ಯನಿಗಿಂತ 8 ಪಟ್ಟು ದೊಡ್ಡದಿದೆ.

ಚಿತ್ರ (7): ಗಡಿಯಾರದ ನಾಲ್ಕು ಗಂಟೆಯ ದಿಕ್ಕು. ಈ ದಿಕ್ಕಿನಲ್ಲಿ ಯಾವ ನಕ್ಷತ್ರ ಇದೆ? ಸಿರಿಯಸ್ ನಕ್ಷತ್ರ. ಈ ಸಿರಿಯಸ್ ನಕ್ಷತ್ರ ಆಕಾಶದ ಅತ್ಯಂತ ಪ್ರಕಾಶಮಾನವಾದ ನಕ್ಷತ್ರ. ಇದನ್ನು ಲುಬ್ದಕ ನಕ್ಷತ್ರ ಎಂದೂ ಕರೆಯುತ್ತಾರೆ. ಇದು ಕ್ಯಾನಿಸ್ ಮೇಜರ್ ಎನ್ನುವ ನಕ್ಷತ್ರ ಪುಂಜದಲ್ಲಿದೆ. ಈ ನಕ್ಷತ್ರದ ವಿಶೇಷವೆಂದರೆ, ಸಿರಿಯಸ್ ಮೂರು ನಕ್ಷತ್ರಗಳುಳ್ಳ ಒಂದು ವ್ಯವಸ್ಥೆ ಎಂದು ಗ್ರಹಿಸಿರುವುದು. ಅಂದರೆ, ಮೂರು ನಕ್ಷತ್ರಗಳು ಒಟ್ಟಾಗಿ ತಿರುಗುತ್ತಿರುವಂತೆ. ಬರಿಗಣ್ಣಿಗೆ ಸಿರಿಯಸ್ ಒಂದೇ ನಕ್ಷತ್ರವಾಗಿ ಕಾಣಿಸಿದರೂ, ದೊಡ್ಡ ದೂರದರ್ಶಕದಲ್ಲಿ ಸಿರಿಯಸ್‌ನ ಇತರೆ ನಕ್ಷತ್ರಗಳನ್ನು ಕಾಣಬಹುದಾಗಿದೆ. ಈ ನಕ್ಷತ್ರ ಸುಮಾರು 8.5 ಜ್ಯೋತಿರ್ವರ್ಷಗಳ ದೂರವಿದ್ದು, ಸೂರ್ಯನಿಗಿಂತಲೂ 1.7 ರಷ್ಟು ದೊಡ್ಡದಾಗಿದೆ.

ಚಿತ್ರ-7

ಇಂತಹ ಕಾಲ್ಪನಿಕ ಗಡಿಯಾರವನ್ನು ಊಹಿಸಿಕೊಂಡು ಆಕಾಶ ವೀಕ್ಷಣೆಯು ಅಭ್ಯಾಸವಾದರೆ, ಆಗಸದ ವಿವಿಧ ಭಾಗಗಳಲ್ಲಿರುವ ನಕ್ಷತ್ರ, ನಕ್ಷತ್ರ ಪುಂಜಗಳು ಮತ್ತು ನಿಹಾರಿಕೆಗಳ ಪರಿಚಯ ಬಹಳ ವೇಗವಾಗಿ ಮತ್ತು ಸುಲಭವಾಗಿ ಲಭಿಸುತ್ತದೆ.

ಈ ಕಾಲ್ಪನಿಕ ಗಡಿಯಾರದ ಆಕಾಶ ವೀಕ್ಷಣೆ ಕ್ರಮವನ್ನು ಇನ್ನಷ್ಟು ಅನ್ವೇಷಿಸಿ. ಏನಾದರೂ ಪ್ರಶ್ನೆಗಳಿದ್ದರೆ ಇಲ್ಲಿ ಹಂಚಿಕೊಳ್ಳಿ- [email protected]


ಇದನ್ನೂ ಓದಿ: ಬೆಳ್ಳಿ ಚುಕ್ಕಿ: ರಾತ್ರಿ ಆಕಾಶದಲ್ಲಿ ಒರಿಯಾನ್ ನಿಹಾರಿಕೆ ಮತ್ತು ಕೃತಿಕಾ ನಕ್ಷತ್ರ ಪುಂಜ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...