Homeಮುಖಪುಟಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕುರಿ ರಕ್ತದ ಫ್ರೈ ಲಾಕಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಸಂಗೀತ ದಿಗ್ಗಜ ಹಂಸಲೇಖರವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ “ಪೇಜಾವರ ಸ್ವಾಮಿಗಳು ದಲಿತರ ಕೇರಿಗೆ ಹೋಗಿದ್ದರಿಂದ ಏನೂ ಪ್ರಯೋಜನವಿಲ್ಲ. ಅವರಿಗೆ ಕೋಳಿ ಮಾಂಸ ಕೊಟ್ಟಿದ್ದರೆ ಪೇಜಾವರರು ತಿನ್ನುತ್ತಿದ್ದರೆ? ಹೋಗಲಿ ಕುರಿ ರಕ್ತದ ಫ್ರೈ ಕೊಟ್ಟರೆ ತಿನ್ನುತ್ತಿದ್ದರೆ” ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಯಾರಾದರೂ ಕುರಿ ರಕ್ತ ಕುಡಿಯುತ್ತಾರೆಯೇ? ಫ್ರೈ ಮಾಡುತ್ತಾರೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಒಂದಷ್ಟು ಜನರಿಗೆ ಇದರ ಕುರಿತು ಮಾಹಿತಿಯೇ ಇಲ್ಲ. ಇನ್ನು ಮತ್ತಷ್ಟು ಜನರು ಅದರ ಸ್ವಾದದ ಬಗ್ಗೆ ಬರೆಯುತ್ತಿದ್ದಾರೆ. ಆದರೆ ನಿಜವಾಗಿಯೂ ಕುರಿ ರಕ್ತದ ಫ್ರೈ ಎಂಬುದು ಬಹಳ ವರ್ಷದಿಂದ ಚಾಲ್ತಿಯಲ್ಲಿರುವ ಜನಪ್ರಿಯ ಆಹಾರವಾಗಿದೆ. ಹಾಗಾಗಿ ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಕುರಿ ಅಥವಾ ಮೇಕೆಯನ್ನು ಕೊಯ್ಯುವ ಮೊದಲೇ ಅದರ ರಕ್ತ ಯಾರಿಗೆ ಬೇಕೆಂದು ನಿಗಧಿಯಾಗಿರುತ್ತದೆ. ನಮಗೆ ಬೇಕು, ನಮಗೆ ಬೇಕು ಎಂಬ ಪೈಪೋಟಿ ಸಹ ಇರುತ್ತದೆ. ಕುರಿಯನ್ನು ಕೊಯ್ಯುವಾಗ ಶುಚಿಯಾದ ಒಂದು ದೊಡ್ಡ ಬಟ್ಟಲಿನಲ್ಲಿ ಸ್ವಲ್ಪ ಉಪ್ಪು ಮತ್ತು ಹುಣಿಸೆ ರಸ ಹಾಕಿ ಇಟ್ಟುಕೊಂಡು ಅದಕ್ಕೆ ಪೂರ್ತಿ ರಕ್ತವನ್ನು ಬಸಿದುಕೊಳ್ಳಬೇಕು. ನಂತರ ಸ್ವಲ್ಪ ಹೊತ್ತಿನಲ್ಲೇ ಆ ಬಿಸಿ ರಕ್ತ ತಣಿದು ಹೆಪ್ಪುಗಟ್ಟುತ್ತದೆ, ಅಂದರೆ ಗಟ್ಟಿಯಾಗಿರುತ್ತದೆ. ಸ್ವಲ್ಪ ನೀರು ಸಹ ಬಿಟ್ಟಿಕೊಂಡಿರುತ್ತದೆ. ಆ ನೀರನ್ನು ಚೆಲ್ಲಿ ಬದಲಿಗೆ ಶುದ್ಧ ನೀರು ಹಾಕಿ ಅದನ್ನು ಹದವಾಗಿ ಬೇಯಿಸಿಕೊಳ್ಳಬೇಕು. ಎರಡು ಕಡೆ ತಿರುವಿಹಾಕಿ ಒಂದು ಹದಕ್ಕೆ ಬೆಂದ ನಂತರ ನೀರನ್ನು ಚೆಲ್ಲಿಬಿಡಬೇಕು. ನಂತರ ಅದನ್ನು ಚೆನ್ನಾಗಿ ಸ್ಪೂನ್, ಚಾಕು ಅಥವಾ ಕೈಯಲ್ಲಿ ಪುಡಿ ಮಾಡಿಕೊಳ್ಳಬೇಕು.

ನಂತರ ಈರುಳ್ಳಿ, ಹಸಿರು ಮೆಣಸಿನಕಾಯಿಯನ್ನು ಸಣ್ಣಗೆ ಹಚ್ಚಿಕೊಳ್ಳಬೇಕು. ಜೊತೆಗೆ ಅರ್ಧ ಹೋಳು ತೆಂಗಿನ ಕಾಯಿಯನ್ನು ತುರಿದುಕೊಳ್ಳಬೇಕು. ಸ್ಟೌವ್ ಹಚ್ಚಿ ಬಾಣಲಿಯಿಟ್ಟು ಸ್ವಲ್ಪ ಎಣ್ಣೆ ಹಾಕಿ ಒಗ್ಗರಣೆ ಹಾಕಬೇಕು. ಕರಿಬೇವು ಹಾಕಿ, ಹಸಿರು ಮೆಣಸಿನ ಕಾಯಿ, ಈರುಳ್ಳಿ ಬೆಂದ ನಂತರ ರಕ್ತದ ಪುಡಿಯನ್ನು ಸೇರಿಸಿ ತಿರುಗಿಸಬೇಕು. ತೆಂಗಿನ ತುರಿ ಹಾಕಿ, ಸ್ವಲ್ಪ ಅರಿಶಿಣ ಪುಡಿ ಮತ್ತು ಉಪ್ಪು ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಫ್ರೈ ಮಾಡಬೇಕು. ಖಾರ ಬೇಕೆಂದರೆ ಸ್ವಲ್ಪ ಮೆಣಸಿನಪುಡಿಯನ್ನು ಸೇರಿಸಬಹುದು. ಚೆನ್ನಾಗಿ ಫ್ರೈ ಆದ ನಂತರ ಇಳಿಸಿ ಸೇವಿಸಬಹುದು.

ಇದಕ್ಕೆ ಲಾಕಿ ಎಂದು ಕರೆಯುತ್ತಾರೆ. ಇದರಿಂದ ಎದೆನೋವು ಗುಣವಾಗುತ್ತದೆ, ಬಹಳ ಪೌಷ್ಠಿಕಾಂಶದ ಆಹಾರ ಎಂದು ಹಳ್ಳಿಯ ಕೆಲವರು ಹೇಳುತ್ತಾರೆ. ಎದೆನೋವು ಗುಣದ ಬಗ್ಗೆ ನಮಗೆ ಗೊತ್ತಿಲ್ಲ, ಆದರೆ ಲಾಕಿ ಸಕತ್ ರುಚಿ ಇರುತ್ತದೆ ಎನ್ನುವುದು ಸತ್ಯ.

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ. ಬೆಂಗಳೂರಿನಲ್ಲಿ ‘ವಿದ್ಯಾ ಪೀಠ’ ವೃತ್ತದ ಪಕ್ಕದಲ್ಲೇ ಇರುವ ಶಂಕರ್‌ನಾಗ್ ವೃತ್ತದಲ್ಲಿನ ಹಲವು ಮಾಂಸಹಾರದ ಹೋಟೆಲ್‌ಗಳಲ್ಲಿ ಪ್ರತಿ ಮಧ್ಯಾಹ್ನ ಲಾಕಿ ದೊರೆಯುತ್ತದೆ. ಆಸಕ್ತಿ ಇರುವವರ ಹೋಗಿ ಸವಿಯಬಹುದು.


ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...