Homeಮುಖಪುಟಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕುರಿ ರಕ್ತದ ಫ್ರೈ ಲಾಕಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಸಂಗೀತ ದಿಗ್ಗಜ ಹಂಸಲೇಖರವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ “ಪೇಜಾವರ ಸ್ವಾಮಿಗಳು ದಲಿತರ ಕೇರಿಗೆ ಹೋಗಿದ್ದರಿಂದ ಏನೂ ಪ್ರಯೋಜನವಿಲ್ಲ. ಅವರಿಗೆ ಕೋಳಿ ಮಾಂಸ ಕೊಟ್ಟಿದ್ದರೆ ಪೇಜಾವರರು ತಿನ್ನುತ್ತಿದ್ದರೆ? ಹೋಗಲಿ ಕುರಿ ರಕ್ತದ ಫ್ರೈ ಕೊಟ್ಟರೆ ತಿನ್ನುತ್ತಿದ್ದರೆ” ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಯಾರಾದರೂ ಕುರಿ ರಕ್ತ ಕುಡಿಯುತ್ತಾರೆಯೇ? ಫ್ರೈ ಮಾಡುತ್ತಾರೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಒಂದಷ್ಟು ಜನರಿಗೆ ಇದರ ಕುರಿತು ಮಾಹಿತಿಯೇ ಇಲ್ಲ. ಇನ್ನು ಮತ್ತಷ್ಟು ಜನರು ಅದರ ಸ್ವಾದದ ಬಗ್ಗೆ ಬರೆಯುತ್ತಿದ್ದಾರೆ. ಆದರೆ ನಿಜವಾಗಿಯೂ ಕುರಿ ರಕ್ತದ ಫ್ರೈ ಎಂಬುದು ಬಹಳ ವರ್ಷದಿಂದ ಚಾಲ್ತಿಯಲ್ಲಿರುವ ಜನಪ್ರಿಯ ಆಹಾರವಾಗಿದೆ. ಹಾಗಾಗಿ ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಕುರಿ ಅಥವಾ ಮೇಕೆಯನ್ನು ಕೊಯ್ಯುವ ಮೊದಲೇ ಅದರ ರಕ್ತ ಯಾರಿಗೆ ಬೇಕೆಂದು ನಿಗಧಿಯಾಗಿರುತ್ತದೆ. ನಮಗೆ ಬೇಕು, ನಮಗೆ ಬೇಕು ಎಂಬ ಪೈಪೋಟಿ ಸಹ ಇರುತ್ತದೆ. ಕುರಿಯನ್ನು ಕೊಯ್ಯುವಾಗ ಶುಚಿಯಾದ ಒಂದು ದೊಡ್ಡ ಬಟ್ಟಲಿನಲ್ಲಿ ಸ್ವಲ್ಪ ಉಪ್ಪು ಮತ್ತು ಹುಣಿಸೆ ರಸ ಹಾಕಿ ಇಟ್ಟುಕೊಂಡು ಅದಕ್ಕೆ ಪೂರ್ತಿ ರಕ್ತವನ್ನು ಬಸಿದುಕೊಳ್ಳಬೇಕು. ನಂತರ ಸ್ವಲ್ಪ ಹೊತ್ತಿನಲ್ಲೇ ಆ ಬಿಸಿ ರಕ್ತ ತಣಿದು ಹೆಪ್ಪುಗಟ್ಟುತ್ತದೆ, ಅಂದರೆ ಗಟ್ಟಿಯಾಗಿರುತ್ತದೆ. ಸ್ವಲ್ಪ ನೀರು ಸಹ ಬಿಟ್ಟಿಕೊಂಡಿರುತ್ತದೆ. ಆ ನೀರನ್ನು ಚೆಲ್ಲಿ ಬದಲಿಗೆ ಶುದ್ಧ ನೀರು ಹಾಕಿ ಅದನ್ನು ಹದವಾಗಿ ಬೇಯಿಸಿಕೊಳ್ಳಬೇಕು. ಎರಡು ಕಡೆ ತಿರುವಿಹಾಕಿ ಒಂದು ಹದಕ್ಕೆ ಬೆಂದ ನಂತರ ನೀರನ್ನು ಚೆಲ್ಲಿಬಿಡಬೇಕು. ನಂತರ ಅದನ್ನು ಚೆನ್ನಾಗಿ ಸ್ಪೂನ್, ಚಾಕು ಅಥವಾ ಕೈಯಲ್ಲಿ ಪುಡಿ ಮಾಡಿಕೊಳ್ಳಬೇಕು.

ನಂತರ ಈರುಳ್ಳಿ, ಹಸಿರು ಮೆಣಸಿನಕಾಯಿಯನ್ನು ಸಣ್ಣಗೆ ಹಚ್ಚಿಕೊಳ್ಳಬೇಕು. ಜೊತೆಗೆ ಅರ್ಧ ಹೋಳು ತೆಂಗಿನ ಕಾಯಿಯನ್ನು ತುರಿದುಕೊಳ್ಳಬೇಕು. ಸ್ಟೌವ್ ಹಚ್ಚಿ ಬಾಣಲಿಯಿಟ್ಟು ಸ್ವಲ್ಪ ಎಣ್ಣೆ ಹಾಕಿ ಒಗ್ಗರಣೆ ಹಾಕಬೇಕು. ಕರಿಬೇವು ಹಾಕಿ, ಹಸಿರು ಮೆಣಸಿನ ಕಾಯಿ, ಈರುಳ್ಳಿ ಬೆಂದ ನಂತರ ರಕ್ತದ ಪುಡಿಯನ್ನು ಸೇರಿಸಿ ತಿರುಗಿಸಬೇಕು. ತೆಂಗಿನ ತುರಿ ಹಾಕಿ, ಸ್ವಲ್ಪ ಅರಿಶಿಣ ಪುಡಿ ಮತ್ತು ಉಪ್ಪು ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಫ್ರೈ ಮಾಡಬೇಕು. ಖಾರ ಬೇಕೆಂದರೆ ಸ್ವಲ್ಪ ಮೆಣಸಿನಪುಡಿಯನ್ನು ಸೇರಿಸಬಹುದು. ಚೆನ್ನಾಗಿ ಫ್ರೈ ಆದ ನಂತರ ಇಳಿಸಿ ಸೇವಿಸಬಹುದು.

ಇದಕ್ಕೆ ಲಾಕಿ ಎಂದು ಕರೆಯುತ್ತಾರೆ. ಇದರಿಂದ ಎದೆನೋವು ಗುಣವಾಗುತ್ತದೆ, ಬಹಳ ಪೌಷ್ಠಿಕಾಂಶದ ಆಹಾರ ಎಂದು ಹಳ್ಳಿಯ ಕೆಲವರು ಹೇಳುತ್ತಾರೆ. ಎದೆನೋವು ಗುಣದ ಬಗ್ಗೆ ನಮಗೆ ಗೊತ್ತಿಲ್ಲ, ಆದರೆ ಲಾಕಿ ಸಕತ್ ರುಚಿ ಇರುತ್ತದೆ ಎನ್ನುವುದು ಸತ್ಯ.

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ. ಬೆಂಗಳೂರಿನಲ್ಲಿ ‘ವಿದ್ಯಾ ಪೀಠ’ ವೃತ್ತದ ಪಕ್ಕದಲ್ಲೇ ಇರುವ ಶಂಕರ್‌ನಾಗ್ ವೃತ್ತದಲ್ಲಿನ ಹಲವು ಮಾಂಸಹಾರದ ಹೋಟೆಲ್‌ಗಳಲ್ಲಿ ಪ್ರತಿ ಮಧ್ಯಾಹ್ನ ಲಾಕಿ ದೊರೆಯುತ್ತದೆ. ಆಸಕ್ತಿ ಇರುವವರ ಹೋಗಿ ಸವಿಯಬಹುದು.


ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...