Homeಮುಖಪುಟಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕುರಿ ರಕ್ತದ ಫ್ರೈ ಲಾಕಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಸಂಗೀತ ದಿಗ್ಗಜ ಹಂಸಲೇಖರವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ “ಪೇಜಾವರ ಸ್ವಾಮಿಗಳು ದಲಿತರ ಕೇರಿಗೆ ಹೋಗಿದ್ದರಿಂದ ಏನೂ ಪ್ರಯೋಜನವಿಲ್ಲ. ಅವರಿಗೆ ಕೋಳಿ ಮಾಂಸ ಕೊಟ್ಟಿದ್ದರೆ ಪೇಜಾವರರು ತಿನ್ನುತ್ತಿದ್ದರೆ? ಹೋಗಲಿ ಕುರಿ ರಕ್ತದ ಫ್ರೈ ಕೊಟ್ಟರೆ ತಿನ್ನುತ್ತಿದ್ದರೆ” ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಯಾರಾದರೂ ಕುರಿ ರಕ್ತ ಕುಡಿಯುತ್ತಾರೆಯೇ? ಫ್ರೈ ಮಾಡುತ್ತಾರೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಒಂದಷ್ಟು ಜನರಿಗೆ ಇದರ ಕುರಿತು ಮಾಹಿತಿಯೇ ಇಲ್ಲ. ಇನ್ನು ಮತ್ತಷ್ಟು ಜನರು ಅದರ ಸ್ವಾದದ ಬಗ್ಗೆ ಬರೆಯುತ್ತಿದ್ದಾರೆ. ಆದರೆ ನಿಜವಾಗಿಯೂ ಕುರಿ ರಕ್ತದ ಫ್ರೈ ಎಂಬುದು ಬಹಳ ವರ್ಷದಿಂದ ಚಾಲ್ತಿಯಲ್ಲಿರುವ ಜನಪ್ರಿಯ ಆಹಾರವಾಗಿದೆ. ಹಾಗಾಗಿ ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಕುರಿ ಅಥವಾ ಮೇಕೆಯನ್ನು ಕೊಯ್ಯುವ ಮೊದಲೇ ಅದರ ರಕ್ತ ಯಾರಿಗೆ ಬೇಕೆಂದು ನಿಗಧಿಯಾಗಿರುತ್ತದೆ. ನಮಗೆ ಬೇಕು, ನಮಗೆ ಬೇಕು ಎಂಬ ಪೈಪೋಟಿ ಸಹ ಇರುತ್ತದೆ. ಕುರಿಯನ್ನು ಕೊಯ್ಯುವಾಗ ಶುಚಿಯಾದ ಒಂದು ದೊಡ್ಡ ಬಟ್ಟಲಿನಲ್ಲಿ ಸ್ವಲ್ಪ ಉಪ್ಪು ಮತ್ತು ಹುಣಿಸೆ ರಸ ಹಾಕಿ ಇಟ್ಟುಕೊಂಡು ಅದಕ್ಕೆ ಪೂರ್ತಿ ರಕ್ತವನ್ನು ಬಸಿದುಕೊಳ್ಳಬೇಕು. ನಂತರ ಸ್ವಲ್ಪ ಹೊತ್ತಿನಲ್ಲೇ ಆ ಬಿಸಿ ರಕ್ತ ತಣಿದು ಹೆಪ್ಪುಗಟ್ಟುತ್ತದೆ, ಅಂದರೆ ಗಟ್ಟಿಯಾಗಿರುತ್ತದೆ. ಸ್ವಲ್ಪ ನೀರು ಸಹ ಬಿಟ್ಟಿಕೊಂಡಿರುತ್ತದೆ. ಆ ನೀರನ್ನು ಚೆಲ್ಲಿ ಬದಲಿಗೆ ಶುದ್ಧ ನೀರು ಹಾಕಿ ಅದನ್ನು ಹದವಾಗಿ ಬೇಯಿಸಿಕೊಳ್ಳಬೇಕು. ಎರಡು ಕಡೆ ತಿರುವಿಹಾಕಿ ಒಂದು ಹದಕ್ಕೆ ಬೆಂದ ನಂತರ ನೀರನ್ನು ಚೆಲ್ಲಿಬಿಡಬೇಕು. ನಂತರ ಅದನ್ನು ಚೆನ್ನಾಗಿ ಸ್ಪೂನ್, ಚಾಕು ಅಥವಾ ಕೈಯಲ್ಲಿ ಪುಡಿ ಮಾಡಿಕೊಳ್ಳಬೇಕು.

ನಂತರ ಈರುಳ್ಳಿ, ಹಸಿರು ಮೆಣಸಿನಕಾಯಿಯನ್ನು ಸಣ್ಣಗೆ ಹಚ್ಚಿಕೊಳ್ಳಬೇಕು. ಜೊತೆಗೆ ಅರ್ಧ ಹೋಳು ತೆಂಗಿನ ಕಾಯಿಯನ್ನು ತುರಿದುಕೊಳ್ಳಬೇಕು. ಸ್ಟೌವ್ ಹಚ್ಚಿ ಬಾಣಲಿಯಿಟ್ಟು ಸ್ವಲ್ಪ ಎಣ್ಣೆ ಹಾಕಿ ಒಗ್ಗರಣೆ ಹಾಕಬೇಕು. ಕರಿಬೇವು ಹಾಕಿ, ಹಸಿರು ಮೆಣಸಿನ ಕಾಯಿ, ಈರುಳ್ಳಿ ಬೆಂದ ನಂತರ ರಕ್ತದ ಪುಡಿಯನ್ನು ಸೇರಿಸಿ ತಿರುಗಿಸಬೇಕು. ತೆಂಗಿನ ತುರಿ ಹಾಕಿ, ಸ್ವಲ್ಪ ಅರಿಶಿಣ ಪುಡಿ ಮತ್ತು ಉಪ್ಪು ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಫ್ರೈ ಮಾಡಬೇಕು. ಖಾರ ಬೇಕೆಂದರೆ ಸ್ವಲ್ಪ ಮೆಣಸಿನಪುಡಿಯನ್ನು ಸೇರಿಸಬಹುದು. ಚೆನ್ನಾಗಿ ಫ್ರೈ ಆದ ನಂತರ ಇಳಿಸಿ ಸೇವಿಸಬಹುದು.

ಇದಕ್ಕೆ ಲಾಕಿ ಎಂದು ಕರೆಯುತ್ತಾರೆ. ಇದರಿಂದ ಎದೆನೋವು ಗುಣವಾಗುತ್ತದೆ, ಬಹಳ ಪೌಷ್ಠಿಕಾಂಶದ ಆಹಾರ ಎಂದು ಹಳ್ಳಿಯ ಕೆಲವರು ಹೇಳುತ್ತಾರೆ. ಎದೆನೋವು ಗುಣದ ಬಗ್ಗೆ ನಮಗೆ ಗೊತ್ತಿಲ್ಲ, ಆದರೆ ಲಾಕಿ ಸಕತ್ ರುಚಿ ಇರುತ್ತದೆ ಎನ್ನುವುದು ಸತ್ಯ.

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ. ಬೆಂಗಳೂರಿನಲ್ಲಿ ‘ವಿದ್ಯಾ ಪೀಠ’ ವೃತ್ತದ ಪಕ್ಕದಲ್ಲೇ ಇರುವ ಶಂಕರ್‌ನಾಗ್ ವೃತ್ತದಲ್ಲಿನ ಹಲವು ಮಾಂಸಹಾರದ ಹೋಟೆಲ್‌ಗಳಲ್ಲಿ ಪ್ರತಿ ಮಧ್ಯಾಹ್ನ ಲಾಕಿ ದೊರೆಯುತ್ತದೆ. ಆಸಕ್ತಿ ಇರುವವರ ಹೋಗಿ ಸವಿಯಬಹುದು.


ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...