Homeಮುಖಪುಟಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕುರಿ ರಕ್ತದ ಫ್ರೈ ಲಾಕಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಸಂಗೀತ ದಿಗ್ಗಜ ಹಂಸಲೇಖರವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ “ಪೇಜಾವರ ಸ್ವಾಮಿಗಳು ದಲಿತರ ಕೇರಿಗೆ ಹೋಗಿದ್ದರಿಂದ ಏನೂ ಪ್ರಯೋಜನವಿಲ್ಲ. ಅವರಿಗೆ ಕೋಳಿ ಮಾಂಸ ಕೊಟ್ಟಿದ್ದರೆ ಪೇಜಾವರರು ತಿನ್ನುತ್ತಿದ್ದರೆ? ಹೋಗಲಿ ಕುರಿ ರಕ್ತದ ಫ್ರೈ ಕೊಟ್ಟರೆ ತಿನ್ನುತ್ತಿದ್ದರೆ” ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಯಾರಾದರೂ ಕುರಿ ರಕ್ತ ಕುಡಿಯುತ್ತಾರೆಯೇ? ಫ್ರೈ ಮಾಡುತ್ತಾರೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಒಂದಷ್ಟು ಜನರಿಗೆ ಇದರ ಕುರಿತು ಮಾಹಿತಿಯೇ ಇಲ್ಲ. ಇನ್ನು ಮತ್ತಷ್ಟು ಜನರು ಅದರ ಸ್ವಾದದ ಬಗ್ಗೆ ಬರೆಯುತ್ತಿದ್ದಾರೆ. ಆದರೆ ನಿಜವಾಗಿಯೂ ಕುರಿ ರಕ್ತದ ಫ್ರೈ ಎಂಬುದು ಬಹಳ ವರ್ಷದಿಂದ ಚಾಲ್ತಿಯಲ್ಲಿರುವ ಜನಪ್ರಿಯ ಆಹಾರವಾಗಿದೆ. ಹಾಗಾಗಿ ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಕುರಿ ಅಥವಾ ಮೇಕೆಯನ್ನು ಕೊಯ್ಯುವ ಮೊದಲೇ ಅದರ ರಕ್ತ ಯಾರಿಗೆ ಬೇಕೆಂದು ನಿಗಧಿಯಾಗಿರುತ್ತದೆ. ನಮಗೆ ಬೇಕು, ನಮಗೆ ಬೇಕು ಎಂಬ ಪೈಪೋಟಿ ಸಹ ಇರುತ್ತದೆ. ಕುರಿಯನ್ನು ಕೊಯ್ಯುವಾಗ ಶುಚಿಯಾದ ಒಂದು ದೊಡ್ಡ ಬಟ್ಟಲಿನಲ್ಲಿ ಸ್ವಲ್ಪ ಉಪ್ಪು ಮತ್ತು ಹುಣಿಸೆ ರಸ ಹಾಕಿ ಇಟ್ಟುಕೊಂಡು ಅದಕ್ಕೆ ಪೂರ್ತಿ ರಕ್ತವನ್ನು ಬಸಿದುಕೊಳ್ಳಬೇಕು. ನಂತರ ಸ್ವಲ್ಪ ಹೊತ್ತಿನಲ್ಲೇ ಆ ಬಿಸಿ ರಕ್ತ ತಣಿದು ಹೆಪ್ಪುಗಟ್ಟುತ್ತದೆ, ಅಂದರೆ ಗಟ್ಟಿಯಾಗಿರುತ್ತದೆ. ಸ್ವಲ್ಪ ನೀರು ಸಹ ಬಿಟ್ಟಿಕೊಂಡಿರುತ್ತದೆ. ಆ ನೀರನ್ನು ಚೆಲ್ಲಿ ಬದಲಿಗೆ ಶುದ್ಧ ನೀರು ಹಾಕಿ ಅದನ್ನು ಹದವಾಗಿ ಬೇಯಿಸಿಕೊಳ್ಳಬೇಕು. ಎರಡು ಕಡೆ ತಿರುವಿಹಾಕಿ ಒಂದು ಹದಕ್ಕೆ ಬೆಂದ ನಂತರ ನೀರನ್ನು ಚೆಲ್ಲಿಬಿಡಬೇಕು. ನಂತರ ಅದನ್ನು ಚೆನ್ನಾಗಿ ಸ್ಪೂನ್, ಚಾಕು ಅಥವಾ ಕೈಯಲ್ಲಿ ಪುಡಿ ಮಾಡಿಕೊಳ್ಳಬೇಕು.

ನಂತರ ಈರುಳ್ಳಿ, ಹಸಿರು ಮೆಣಸಿನಕಾಯಿಯನ್ನು ಸಣ್ಣಗೆ ಹಚ್ಚಿಕೊಳ್ಳಬೇಕು. ಜೊತೆಗೆ ಅರ್ಧ ಹೋಳು ತೆಂಗಿನ ಕಾಯಿಯನ್ನು ತುರಿದುಕೊಳ್ಳಬೇಕು. ಸ್ಟೌವ್ ಹಚ್ಚಿ ಬಾಣಲಿಯಿಟ್ಟು ಸ್ವಲ್ಪ ಎಣ್ಣೆ ಹಾಕಿ ಒಗ್ಗರಣೆ ಹಾಕಬೇಕು. ಕರಿಬೇವು ಹಾಕಿ, ಹಸಿರು ಮೆಣಸಿನ ಕಾಯಿ, ಈರುಳ್ಳಿ ಬೆಂದ ನಂತರ ರಕ್ತದ ಪುಡಿಯನ್ನು ಸೇರಿಸಿ ತಿರುಗಿಸಬೇಕು. ತೆಂಗಿನ ತುರಿ ಹಾಕಿ, ಸ್ವಲ್ಪ ಅರಿಶಿಣ ಪುಡಿ ಮತ್ತು ಉಪ್ಪು ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಫ್ರೈ ಮಾಡಬೇಕು. ಖಾರ ಬೇಕೆಂದರೆ ಸ್ವಲ್ಪ ಮೆಣಸಿನಪುಡಿಯನ್ನು ಸೇರಿಸಬಹುದು. ಚೆನ್ನಾಗಿ ಫ್ರೈ ಆದ ನಂತರ ಇಳಿಸಿ ಸೇವಿಸಬಹುದು.

ಇದಕ್ಕೆ ಲಾಕಿ ಎಂದು ಕರೆಯುತ್ತಾರೆ. ಇದರಿಂದ ಎದೆನೋವು ಗುಣವಾಗುತ್ತದೆ, ಬಹಳ ಪೌಷ್ಠಿಕಾಂಶದ ಆಹಾರ ಎಂದು ಹಳ್ಳಿಯ ಕೆಲವರು ಹೇಳುತ್ತಾರೆ. ಎದೆನೋವು ಗುಣದ ಬಗ್ಗೆ ನಮಗೆ ಗೊತ್ತಿಲ್ಲ, ಆದರೆ ಲಾಕಿ ಸಕತ್ ರುಚಿ ಇರುತ್ತದೆ ಎನ್ನುವುದು ಸತ್ಯ.

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ. ಬೆಂಗಳೂರಿನಲ್ಲಿ ‘ವಿದ್ಯಾ ಪೀಠ’ ವೃತ್ತದ ಪಕ್ಕದಲ್ಲೇ ಇರುವ ಶಂಕರ್‌ನಾಗ್ ವೃತ್ತದಲ್ಲಿನ ಹಲವು ಮಾಂಸಹಾರದ ಹೋಟೆಲ್‌ಗಳಲ್ಲಿ ಪ್ರತಿ ಮಧ್ಯಾಹ್ನ ಲಾಕಿ ದೊರೆಯುತ್ತದೆ. ಆಸಕ್ತಿ ಇರುವವರ ಹೋಗಿ ಸವಿಯಬಹುದು.


ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....