Homeಮುಖಪುಟಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ?: ಇಲ್ಲಿದೆ ಬೊಂಬಾಟ್ ರೆಸಿಪಿ

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಕುರಿ ರಕ್ತದ ಫ್ರೈ ಲಾಕಿ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿವೆ. ಸಂಗೀತ ದಿಗ್ಗಜ ಹಂಸಲೇಖರವರು ಮೈಸೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ “ಪೇಜಾವರ ಸ್ವಾಮಿಗಳು ದಲಿತರ ಕೇರಿಗೆ ಹೋಗಿದ್ದರಿಂದ ಏನೂ ಪ್ರಯೋಜನವಿಲ್ಲ. ಅವರಿಗೆ ಕೋಳಿ ಮಾಂಸ ಕೊಟ್ಟಿದ್ದರೆ ಪೇಜಾವರರು ತಿನ್ನುತ್ತಿದ್ದರೆ? ಹೋಗಲಿ ಕುರಿ ರಕ್ತದ ಫ್ರೈ ಕೊಟ್ಟರೆ ತಿನ್ನುತ್ತಿದ್ದರೆ” ಎಂದು ಪ್ರಶ್ನಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಯಾರಾದರೂ ಕುರಿ ರಕ್ತ ಕುಡಿಯುತ್ತಾರೆಯೇ? ಫ್ರೈ ಮಾಡುತ್ತಾರೆಯೇ ಎಂದು ಪ್ರಶ್ನಿಸುತ್ತಿದ್ದಾರೆ. ಒಂದಷ್ಟು ಜನರಿಗೆ ಇದರ ಕುರಿತು ಮಾಹಿತಿಯೇ ಇಲ್ಲ. ಇನ್ನು ಮತ್ತಷ್ಟು ಜನರು ಅದರ ಸ್ವಾದದ ಬಗ್ಗೆ ಬರೆಯುತ್ತಿದ್ದಾರೆ. ಆದರೆ ನಿಜವಾಗಿಯೂ ಕುರಿ ರಕ್ತದ ಫ್ರೈ ಎಂಬುದು ಬಹಳ ವರ್ಷದಿಂದ ಚಾಲ್ತಿಯಲ್ಲಿರುವ ಜನಪ್ರಿಯ ಆಹಾರವಾಗಿದೆ. ಹಾಗಾಗಿ ಕುರಿ-ಆಡು ರಕ್ತದ ಫ್ರೈ ಲಾಕಿ ಮಾಡುವುದು ಹೇಗೆ ಎಂಬುದರ ಮಾಹಿತಿ ಇಲ್ಲಿದೆ.

ಕುರಿ ಅಥವಾ ಮೇಕೆಯನ್ನು ಕೊಯ್ಯುವ ಮೊದಲೇ ಅದರ ರಕ್ತ ಯಾರಿಗೆ ಬೇಕೆಂದು ನಿಗಧಿಯಾಗಿರುತ್ತದೆ. ನಮಗೆ ಬೇಕು, ನಮಗೆ ಬೇಕು ಎಂಬ ಪೈಪೋಟಿ ಸಹ ಇರುತ್ತದೆ. ಕುರಿಯನ್ನು ಕೊಯ್ಯುವಾಗ ಶುಚಿಯಾದ ಒಂದು ದೊಡ್ಡ ಬಟ್ಟಲಿನಲ್ಲಿ ಸ್ವಲ್ಪ ಉಪ್ಪು ಮತ್ತು ಹುಣಿಸೆ ರಸ ಹಾಕಿ ಇಟ್ಟುಕೊಂಡು ಅದಕ್ಕೆ ಪೂರ್ತಿ ರಕ್ತವನ್ನು ಬಸಿದುಕೊಳ್ಳಬೇಕು. ನಂತರ ಸ್ವಲ್ಪ ಹೊತ್ತಿನಲ್ಲೇ ಆ ಬಿಸಿ ರಕ್ತ ತಣಿದು ಹೆಪ್ಪುಗಟ್ಟುತ್ತದೆ, ಅಂದರೆ ಗಟ್ಟಿಯಾಗಿರುತ್ತದೆ. ಸ್ವಲ್ಪ ನೀರು ಸಹ ಬಿಟ್ಟಿಕೊಂಡಿರುತ್ತದೆ. ಆ ನೀರನ್ನು ಚೆಲ್ಲಿ ಬದಲಿಗೆ ಶುದ್ಧ ನೀರು ಹಾಕಿ ಅದನ್ನು ಹದವಾಗಿ ಬೇಯಿಸಿಕೊಳ್ಳಬೇಕು. ಎರಡು ಕಡೆ ತಿರುವಿಹಾಕಿ ಒಂದು ಹದಕ್ಕೆ ಬೆಂದ ನಂತರ ನೀರನ್ನು ಚೆಲ್ಲಿಬಿಡಬೇಕು. ನಂತರ ಅದನ್ನು ಚೆನ್ನಾಗಿ ಸ್ಪೂನ್, ಚಾಕು ಅಥವಾ ಕೈಯಲ್ಲಿ ಪುಡಿ ಮಾಡಿಕೊಳ್ಳಬೇಕು.

ನಂತರ ಈರುಳ್ಳಿ, ಹಸಿರು ಮೆಣಸಿನಕಾಯಿಯನ್ನು ಸಣ್ಣಗೆ ಹಚ್ಚಿಕೊಳ್ಳಬೇಕು. ಜೊತೆಗೆ ಅರ್ಧ ಹೋಳು ತೆಂಗಿನ ಕಾಯಿಯನ್ನು ತುರಿದುಕೊಳ್ಳಬೇಕು. ಸ್ಟೌವ್ ಹಚ್ಚಿ ಬಾಣಲಿಯಿಟ್ಟು ಸ್ವಲ್ಪ ಎಣ್ಣೆ ಹಾಕಿ ಒಗ್ಗರಣೆ ಹಾಕಬೇಕು. ಕರಿಬೇವು ಹಾಕಿ, ಹಸಿರು ಮೆಣಸಿನ ಕಾಯಿ, ಈರುಳ್ಳಿ ಬೆಂದ ನಂತರ ರಕ್ತದ ಪುಡಿಯನ್ನು ಸೇರಿಸಿ ತಿರುಗಿಸಬೇಕು. ತೆಂಗಿನ ತುರಿ ಹಾಕಿ, ಸ್ವಲ್ಪ ಅರಿಶಿಣ ಪುಡಿ ಮತ್ತು ಉಪ್ಪು ಹಾಕಿ ಸಣ್ಣ ಉರಿಯಲ್ಲಿ ಚೆನ್ನಾಗಿ ಫ್ರೈ ಮಾಡಬೇಕು. ಖಾರ ಬೇಕೆಂದರೆ ಸ್ವಲ್ಪ ಮೆಣಸಿನಪುಡಿಯನ್ನು ಸೇರಿಸಬಹುದು. ಚೆನ್ನಾಗಿ ಫ್ರೈ ಆದ ನಂತರ ಇಳಿಸಿ ಸೇವಿಸಬಹುದು.

ಇದಕ್ಕೆ ಲಾಕಿ ಎಂದು ಕರೆಯುತ್ತಾರೆ. ಇದರಿಂದ ಎದೆನೋವು ಗುಣವಾಗುತ್ತದೆ, ಬಹಳ ಪೌಷ್ಠಿಕಾಂಶದ ಆಹಾರ ಎಂದು ಹಳ್ಳಿಯ ಕೆಲವರು ಹೇಳುತ್ತಾರೆ. ಎದೆನೋವು ಗುಣದ ಬಗ್ಗೆ ನಮಗೆ ಗೊತ್ತಿಲ್ಲ, ಆದರೆ ಲಾಕಿ ಸಕತ್ ರುಚಿ ಇರುತ್ತದೆ ಎನ್ನುವುದು ಸತ್ಯ.

ಹಳ್ಳಿಯ ಕಡೆ ಒಂದು ಮೇಕೆ ಅಥವಾ ಕುರಿ ರಕ್ತಕ್ಕೆ 50 ರೂ ನಿಂದ 100 ರೂ ವರೆಗೆ ಬೆಲೆ ಇರುತ್ತದೆ. ಲಾಕಿಯನ್ನು ಹಲವು ಹೋಟೆಲ್‌ಗಳಲ್ಲಿ ಸಹ ಮಾಡುತ್ತಾರೆ. ಬೆಂಗಳೂರಿನಲ್ಲಿ ‘ವಿದ್ಯಾ ಪೀಠ’ ವೃತ್ತದ ಪಕ್ಕದಲ್ಲೇ ಇರುವ ಶಂಕರ್‌ನಾಗ್ ವೃತ್ತದಲ್ಲಿನ ಹಲವು ಮಾಂಸಹಾರದ ಹೋಟೆಲ್‌ಗಳಲ್ಲಿ ಪ್ರತಿ ಮಧ್ಯಾಹ್ನ ಲಾಕಿ ದೊರೆಯುತ್ತದೆ. ಆಸಕ್ತಿ ಇರುವವರ ಹೋಗಿ ಸವಿಯಬಹುದು.


ಇದನ್ನೂ ಓದಿ: ತಾತಾ, ನೀವು ಎಂದಾದರೂ ಮಾಂಸ ತಿಂದಿದ್ದೀರಾ ಎಂಬ ಪ್ರಶ್ನೆಗೆ ದೊರೆಸ್ವಾಮಿಯವರ ಉತ್ತರವೇನು ಗೊತ್ತೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...